ಕರಾವಳಿ

ಶಿವಾರ್ಜುನರು ವರಾಹನಿಗಾಗಿ ಕಾದಾಡಿದ ಪುಣ್ಯ ತಾಣ…. ಮಲ್ಲಿಯ ಕುಡುಗೋಲಿನ ಏಟಿಗೆ ಕಣ್ವರು ತೇಯ್ದ ಶ್ರೀಗಂಧವೇ ಮದ್ದಾಯಿತು.. ಶ್ರೀಕ್ಷೇತ್ರ ತೊಡಿಕಾನದ ಸಂಪೂರ್ಣ ಮಾಹಿತಿ

ದಕ್ಷಿಣ ಕನ್ನಡದ ಸುಳ್ಯದಿಂದ ಮಡಿಕೇರಿ ಮಾರ್ಗದಲ್ಲಿ “ಅರಂತೋಡು”ಎಂಬಲ್ಲಿ ಬಲಕ್ಕೆ ತಿರುಗಿ ಆರೇಳು ಕಿಲೋಮೀಟರ್ ಕ್ರಮಿಸಿದರೆ ಸಿಗುವ ಹಸಿರು ಪ್ರಕೃತಿಯ ಸುಂದರ ತಾಣವೇ ತೊಡಿಕಾನ. ಜುಳು ಜುಳು ಹರಿಯುವ ತೊರೆಯ ತಟದಲ್ಲಿ ಕಂಗೊಳಿಸುವುದೇ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಾಲಯ. ಇದು 3000 ವರ್ಷಗಳಷ್ಟು ಹಳೆಯ ದೇವಸ್ಥಾನವೆಂದು ಸಾಮಾನ್ಯವಾಗಿ ಹೇಳಿದರೂ ಮಹಾಭಾರತ ಕಾಲದಲ್ಲಿ ಇತ್ತೆಂಬುದಕ್ಕೆ ಇತಿಹಾಸಕಾರರು ದಾಖಲೆ ಕೊಡುವ ಕಾರಣ 5000 ವರ್ಷದ ಮೇಲ್ಪಟ್ಟದ್ದೆಂದು‌ ಹೇಳಲಾಗುತ್ತದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ “ತುದಿ” ಯ ಕಾನನ(ಕಾಡು) ಆದ ಕಾರಣ” […]

ಶಿವಾರ್ಜುನರು ವರಾಹನಿಗಾಗಿ ಕಾದಾಡಿದ ಪುಣ್ಯ ತಾಣ…. ಮಲ್ಲಿಯ ಕುಡುಗೋಲಿನ ಏಟಿಗೆ ಕಣ್ವರು ತೇಯ್ದ ಶ್ರೀಗಂಧವೇ ಮದ್ದಾಯಿತು.. ಶ್ರೀಕ್ಷೇತ್ರ ತೊಡಿಕಾನದ ಸಂಪೂರ್ಣ ಮಾಹಿತಿ Read More »

ಕೆಡ್ಡಸ: ಇದು ಭೂಮಿತಾಯಿಗೆ ನಮಿಸುವ ದಿವಸ

ಸಮಗ್ರ ವಿಶೇಷ: ಭಾರತ ಧಾರ್ಮಿಕ ನಂಬಿಕೆಗಳ ಆವಾಸ ಸ್ಥಾನ. ಇಲ್ಲಿನ ಜನರ ಪ್ರತೀ ದಿನಚರಿಯಲ್ಲೂ, ಆಚರಣೆಯಲ್ಲೂ ನಂಬಿಕೆಗಳು ಪ್ರಧಾನ ಪಾತ್ರ ವಹಿಸುತ್ತವೆ. ಬೆಳಿಗ್ಗೆ ಹಾಸಿಗೆ ಬಿಡುವಲ್ಲಿಂದ ಹಿಡಿದು, ರಾತ್ರಿ ನಿದ್ರಾದೇವಿಗೆ ಶರಣಾಗುವಲ್ಲಿಯವರೆಗೆ ಪ್ರತೀ ಕ್ಷಣವೂ ಒಂದೊಂದು ಪದ್ದತಿ, ಸಂಪ್ರದಾಯ ಭಾರತೀಯರನ್ನು ನಂಬಿಕೆಯೊಳಗೆ ಬಂಧಿಸುತ್ತದೆ. ಜನರ ಪ್ರತೀ ಆಚರಣೆಗಳೂ ನಂಬಿಕೆಯ ನೆಲೆಗಟ್ಟಿನಲ್ಲಿಯೇ ರಚನೆಗೊಳ್ಳುತ್ತವೆ. ಭಾರತೀಯರು ಪ್ರಕೃತಿಯ ಆರಾಧಕರು ಎಂಬುದು ವೇದ ಪುರಾಣಗಳ ಕಾಲದಿಂದಲೇ ನಡೆದು ಬಂದ ಸಂಗತಿ. ಪುರಾಣ ಕಥನಗಳಲ್ಲಿ, ವೇದ ಶಾಸ್ತ್ರಗಳಲ್ಲಿ ಪ್ರಕೃತಿಗೆ ವಿಶೇಷ ಸ್ಥಾನವಿದೆ. ಅದರಲ್ಲೂ

ಕೆಡ್ಡಸ: ಇದು ಭೂಮಿತಾಯಿಗೆ ನಮಿಸುವ ದಿವಸ Read More »

ಚಾರಣಕ್ಕೊಂದು ಸೂಕ್ತ ತಾಣ ಪುಷ್ಪಗಿರಿ-ಕುಮಾರಪರ್ವತ

ನೀವೇನಾದ್ರೂ ಚಾರಣ ಪ್ರೀಯರಾದ್ರೆ ಈ ತಾಣಕ್ಕೊಮ್ಮೆ ಭೇಟಿ‌ ನೀಡ್ಲೇ ಬೇಕು. ಭಾರತದಲ್ಲಿ ಅತೀ ಕಷ್ಟಕರವಾದ ಹಾಗೆಯೇ ಅತ್ಯಂತ ಮನಸ್ಸಿಗೆ ಮುದ ನೀಡುವ ಕೆಲವೇ ಕೆಲವು ಚಾರಣ ತಾಣಗಳ ಪೈಕಿ ಚಾರಣಿಗರ ಸ್ವರ್ಗ ಅಂತನೇ ಕರೆಸಿಕೊಳ್ಳುವ ಪುಷ್ಪಗಿರಿ ಕುಮಾರ ಪರ್ವತ ಶ್ರೇಣಿ ನಿಜಕ್ಕೂ ಅಧ್ಬುತ ಮತ್ತು ಅಷ್ಟೇ ರೋಮಾಂಚಕಾರಿ ಅನುಭವ ನೀಡುವ ಪ್ರಕೃತಿಯ ಸೃಷ್ಟಿ. ದಕ್ಷಿಣ ಕನ್ನಡ ಮತ್ತು‌ ಕೊಡಗು ಜಿಲ್ಲೆಗಳ ನಡುವೆ.ಸಮುದ್ರ ಮಟ್ಟದಿಂದ 1712 ಮೀಟರ್‌ ಎತ್ತರದಲ್ಲಿರುವ ಪುಷ್ಪಗಿರಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಕಣ್ಣುಗಳೇ ಸಾಲದು. ಈ ಶಿಖರಕ್ಕೆ

ಚಾರಣಕ್ಕೊಂದು ಸೂಕ್ತ ತಾಣ ಪುಷ್ಪಗಿರಿ-ಕುಮಾರಪರ್ವತ Read More »