ಕರಾವಳಿ

ದ.ಕ. ಜಿಲ್ಲಾಡಳಿತದಿಂದ ಹೊಸ ಮಾರ್ಗಸೂಚಿ ಪ್ರಕಟ | ಬಸ್ ಸಂಚಾರಕ್ಕೆ ಅನುಮತಿ | 18 ವರ್ಷಕ್ಕಿಂತ ಕೆಳಗಿನ ಮಕ್ಕಳು ಹೊರ ಬರುವಂತಿಲ್ಲ

ಮಂಗಳೂರು: ದ.ಕ. ಜಿಲ್ಲಾಡಳಿತವು ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ್ದು ಜಿಲ್ಲೆಯಲ್ಲಿ ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಉಸ್ತುವಾರಿ ಸಚಿವರು ಇಂದು ಬೆಳಿಗ್ಗೆ ತಿಳಿಸಿದ್ದರುರು. ಇದೀಗ ಜಿಲ್ಲಾಧಿಕಾರಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆಯಿಂದ ಶುಕ್ರವಾರದವರೆಗೆ ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶೇಕಡಾ 50ಕ್ಕಿಂತ ಹೆಚ್ಚು ಜನರನ್ನು ಬಸ್ಸಿಗೆ ಹತ್ತಿಸುವಂತಿಲ್ಲ. ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಿಗ್ಗೆ 7:00 ವರೆಗೆ ವಾರಂತ್ಯ […]

ದ.ಕ. ಜಿಲ್ಲಾಡಳಿತದಿಂದ ಹೊಸ ಮಾರ್ಗಸೂಚಿ ಪ್ರಕಟ | ಬಸ್ ಸಂಚಾರಕ್ಕೆ ಅನುಮತಿ | 18 ವರ್ಷಕ್ಕಿಂತ ಕೆಳಗಿನ ಮಕ್ಕಳು ಹೊರ ಬರುವಂತಿಲ್ಲ Read More »

ಮಂಗಳೂರಿನ ವ್ಯಕ್ತಿಗೆ ಫೇಸ್ಬುಕ್ ಗೆಳೆಯನಿಂದ 1.15 ಲಕ್ಷ ರೂ. ಪಂಗನಾಮ

ಮಂಗಳೂರು: ವಿದ್ಯಾವಂತರೇ ದಿನೇದಿನೇ ಆನ್ಲೈನ್ ವಂಚನೆಗೊಳಗಾಗುತ್ತಿರುವ ಘಟನೆಗಳು ನಮ್ಮೂರಲ್ಲಿ ನಡೆಯುತ್ತಿದ್ದರು ವಂಚನೆಗೊಳಗಾದವರು ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ. ಇದೀಗ ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಅವರ ಫೇಸ್ಬುಕ್ ಗೆಳೆಯನೊಬ್ಬ 1.5 ಲಕ್ಷ ರೂ ಪಂಗನಾಮ ಹಾಕಿದ ಘಟನೆ ನಡೆದಿದೆ. ಮಂಗಳೂರಿನ ವ್ಯಕ್ತಿಯೊಬ್ಬರಿಗೆ ನೆಲ್ಸನ್ ಮಾರ್ಕ್ ಎಂಬಾತ ಫೇಸ್ಬುಕ್ನಲ್ಲಿ ಪರಿಚಿತನಾಗಿದ್ದಾನೆ. ಕೆಲವೇ ದಿನಗಳಲ್ಲಿ ಇವರಿಬ್ಬರು ಸ್ನೇಹಿತರಾಗಿದ್ದು ವಾಟ್ಸಪ್ ನಂಬರ್ ವಿನಿಮಯ ಮಾಡಿಕೊಂಡಿದ್ದಾರೆ. ದಿನದಿಂದ ದಿನಕ್ಕೆ ಸ್ನೇಹ ಬೆಳೆಸಿದ್ದ ವ್ಯಕ್ತಿ ಮಂಗಳೂರಿನ ವ್ಯಕ್ತಿಯನ್ನು ಯಾಮಾರಿಸಿ ಬ್ಯಾಂಕ್ ಖಾತೆಯ ಮಾಹಿತಿ ಪಡೆದುಕೊಂಡಿದ್ದಾನೆ. ಆ ಖಾತೆಗೆ

ಮಂಗಳೂರಿನ ವ್ಯಕ್ತಿಗೆ ಫೇಸ್ಬುಕ್ ಗೆಳೆಯನಿಂದ 1.15 ಲಕ್ಷ ರೂ. ಪಂಗನಾಮ Read More »

ಮಂಗಳೂರು: ಆಟೋಗೆ ಕಾಯುತಿದ್ದ ವೃದ್ದ ದಂಪತಿಗೆ ನೆರವಾದ ಕ ಮಿಷನರ್, ಡಿಸಿಪಿ

ಮಂಗಳೂರು : ಲಾಕ್ ಡೌನ್ ನಿಂದಾಗಿ ವಾಹನ ಇಲ್ಲದೆ ಮನೆ ತಲುಪಲು ಪರದಾಟುತ್ತಿದ್ದ ವೃದ್ಧ ದಂಪತಿಗಳಿಗೆ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಮತ್ತು ಡಿಸಿಪಿ ಹರಿರಾಮ್ ಶಂಕರ್ ಸಹಾಯ ಮಾಡಿ ಮಾನವಿಯತೆ ಮೆರೆದಿದ್ದಾರೆ. ಜೂ. 22 ರ ಮಂಗಳವಾರ ಕುಲಶೇಖರದ ಇಬ್ಬರು ಹಿರಿಯ ನಾಗರಿಕರು ಬ್ಯಾಂಕ್‌ಗೆ ಬಂದು ಕ್ಲಾಕ್ ಟವರ್ ಬಳಿ ಒಂದು ಗಂಟೆಗೂ ಹೆಚ್ಚು ಕಾಲ ಆಟೋ ರಿಕ್ಷಕ್ಕಾಗಿ ಕಾಯುತ್ತಿದ್ದರು. ಹಿರಿಯ ದಂಪತಿಯನ್ನು ಗಮನಿಸಿದ ಪೊಲೀಸ್ ಕಮಿಷನರ್ ಅವರನ್ನು ತಮ್ಮ ನಿವಾಸಕ್ಕೆ ತಲುಪಿಸಲು ಪೊಲೀಸ್ ವಾಹನದಲ್ಲೇ

ಮಂಗಳೂರು: ಆಟೋಗೆ ಕಾಯುತಿದ್ದ ವೃದ್ದ ದಂಪತಿಗೆ ನೆರವಾದ ಕ ಮಿಷನರ್, ಡಿಸಿಪಿ Read More »

ಮಂಗಳೂರು : ದಿಢೀರ್ ಫೀಲ್ಡ್ ‘ಗಿಳಿದ ಕಮಿಷನರ್ | ನಿಷೇಧಿತ ಟಿಂಟ್‌ ಅಳವಡಿಸಿದವರಿಗೆ ಹಾಗೂ ಅನಗತ್ಯ ತಿರುಗಾಡಿದವರಿಗೆ ದಂಡ

ಮಂಗಳೂರು : ಮಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್‌ಡೌನ್ ವಿನಾಯಿತಿ ಅವಧಿಯಲ್ಲಿ ವಾಹನಗಳ ದಟ್ಟಣೆ ಕಂಡುಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು. ಮಧ್ಯಾಹ್ನ 2 ಗಂಟೆಯವರೆಗೆ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸಲಾಗಿದ್ದು, ಈ ಸಮಯದಲ್ಲಿಯೂ ನಗರಾದ್ಯಂತ ವಾಹನಗಳ ಓಡಾಟ ಹೆಚ್ಚಾಗಿತ್ತು. ಇದರಿಂದಾಗಿ ಇಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಎಸಿಪಿಗಳಾದ ರಂಜಿತ್ ಕುಮಾರ್ ಹಾಗೂ ನಟರಾಜ್ ಅವರ ನೇತೃತ್ವದಲ್ಲಿ ನಗರದಲ್ಲಿ ವಾಹನಗಳನ್ನು ತಡೆದು ತಪಾಸಣೆ

ಮಂಗಳೂರು : ದಿಢೀರ್ ಫೀಲ್ಡ್ ‘ಗಿಳಿದ ಕಮಿಷನರ್ | ನಿಷೇಧಿತ ಟಿಂಟ್‌ ಅಳವಡಿಸಿದವರಿಗೆ ಹಾಗೂ ಅನಗತ್ಯ ತಿರುಗಾಡಿದವರಿಗೆ ದಂಡ Read More »

ಕಾರ್ಕಳ ಎಪಿಎಂಸಿ ಅಧ್ಯಕ್ಷ ಕೊರೊನಾಗೆ ಬಲಿ

ಕಾರ್ಕಳ: ಕಾರ್ಕಳದ ಎಪಿಎಂಸಿ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ (65) ಅವರು ಕೋವಿಡ್ ಗೆ ಬಲಿಯಾಗಿದ್ದಾರೆ. ಬೆಳ್ಮಣ್ಣ್ ಶಾಲೆ ಬಳಿಯ ನಿವಾಸಿ ಯಾಗಿದ್ದ ಇವರಿಗೆ ಕೆಲ ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಬಂದಿತ್ತು. ಆ ಬಳಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇ ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಳ್ಮಣ್ ರೋಟರಿ ಕ್ಲಬ್ ನ ಕ್ರಿಯಾಶೀಲ ಸದಸ್ಯರಾಗಿದ್ದ ಇವರು, ನಂದಳಿಕೆ ಬೋರ್ಡ್ ಶಾಲೆ, ಬೆಳ್ಮಣ್ ಸರಕಾರಿ ಪ್ರೌಢಶಾಲೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಪ್ರಸ್ತುತ

ಕಾರ್ಕಳ ಎಪಿಎಂಸಿ ಅಧ್ಯಕ್ಷ ಕೊರೊನಾಗೆ ಬಲಿ Read More »

ದಕ ಜಿಲ್ಲೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು ಮದ್ಯಾಹ್ನ 2 ರವರೆಗೆ ಓಪನ್: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳಿಗೆ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ ಮಾಡಿಕೊಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಜಿಲ್ಲೆಯ ಅಂಗಡಿ ಮಾಲಕರು ವ್ಯವಹಾರ ಇಲ್ಲದೆ ಭಾರಿ ನಷ್ಟ ಅನುಭವಿಸುತ್ತಿದ್ದು, ಅಂಗಡಿ ತೆರೆಯಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಾಳೆಯಿಂದ ಜಿಲ್ಲೆಯ ಎಲ್ಲ ಅಂಗಡಿಗಳು ಬೆಳಿಗ್ಗೆ ಆರರಿಂದ ಮಧ್ಯಾಹ್ನ ಎರಡು

ದಕ ಜಿಲ್ಲೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು ಮದ್ಯಾಹ್ನ 2 ರವರೆಗೆ ಓಪನ್: ಕೋಟ ಶ್ರೀನಿವಾಸ ಪೂಜಾರಿ Read More »

ಸಾಂಕ್ರಾಮಿಕ ರೋಗಗಳ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ದ.ಕ ಡಿಸಿ ರಾಜೇಂದ್ರ

ಮಂಗಳೂರು : ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ, ಸೇರಿದಂತೆ ಮತ್ತಿತರ ರೋಗಗಳ ನಿಯಂತ್ರಣ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ಸೂಚನೆ ನೀಡಿದ್ದಾರೆ. ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಮಲೇರಿಯಾ, ಡೆಂಗ್ಯೂ ನಿಯಂತ್ರಣದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು, ಮಳೆ ನೀರು ಎಲ್ಲೆಂದರಲ್ಲಿ ನಿಂತು ಅದರಲ್ಲಿ ಸೊಳ್ಳೆ ಉತ್ಪತ್ತಿ ಹೆಚ್ಚಾಗಿ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ ಸೇರಿದಂತೆ ಮತ್ತಿತರ ರೋಗಗಳು

ಸಾಂಕ್ರಾಮಿಕ ರೋಗಗಳ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ದ.ಕ ಡಿಸಿ ರಾಜೇಂದ್ರ Read More »

ಮಂಗಳೂರು: ಟಿಪ್ಪರ್ ಸಹಿತ ಸಮುದ್ರ ಪಾಲಾದವರ ಶವಗಳು ಹೊರಕ್ಕೆ

ಮಂಗಳೂರು: ಪಣಂಬೂರು ಎನ್‌ಎಂಪಿಟಿ ಬಂದರಿನಲ್ಲಿ ಹಡಗಿನಿಂದ ಅದಿರು ಹೊತ್ತೊಯ್ಯಲು ಬಂದಿದ್ದ ಟಿಪ್ಪರ್ ಸಹಿತ ಚಾಲಕ ಮತ್ತು ನಿರ್ವಹಾಕ ಸಮುದ್ರಪಾಲದ ಘಟನೆಯಲ್ಲಿ ಚಾಲಕನ ಶವ ನಿನ್ನೆ ರಾತ್ರಿ ಪತ್ತೆಯಾದರೆ ನಿರ್ವಾಹಕನ ಶವ ಇಂದು ಸಂಜೆ ಪತ್ತೆಯಾಗಿದೆ. ಡೆಲ್ಟಾ ಕಂಪನಿಗೆ ಸೇರಿದ ಟ್ರಕ್ ಜೂ.20 ರ ರಾತ್ರಿ 10:30 ರ ಸುಮಾರಿಗೆ ಹಡಗಿನಿಂದ ಕಬ್ಬಿಣದ ಅದಿರು ಅನ್ಲೋಡ್ ಮಾಡಿ ತುಂಬಿಸಿಕೊಳ್ಳಲು 14ನೇ ಬರ್ತ್ ಗೆ ಬಂದಿತ್ತು. ಆದರೆ ಖಾಲಿಯಿದ್ದ ಟ್ರಕ್ ಅಕಸ್ಮಾತ್ ಸಮುದ್ರಕ್ಕೆ ಬಿದ್ದು ಮುಳುಗಿದ್ದು ಅದರಲ್ಲಿದ್ದ ಚಾಲಕ ಮತ್ತು

ಮಂಗಳೂರು: ಟಿಪ್ಪರ್ ಸಹಿತ ಸಮುದ್ರ ಪಾಲಾದವರ ಶವಗಳು ಹೊರಕ್ಕೆ Read More »

ಕುಂದಾಪುರ: ವಿವಾಹಿತನೊಂದಿಗೆ ಯುವತಿ ಪರಾರಿ

ಕುಂದಾಪುರ: ವಿವಾಹಿತನೊಂದಿಗೆ ಯುವತಿಯೋರ್ವಳು ಪರಾರಿಯಾದ ಘಟನೆ ತಾಲೂಕಿನ ಆಲೂರು ಗ್ರಾಮದಲ್ಲಿ ನಡೆದಿದೆ. ಆಲೂರು ಗ್ರಾಮದ ಹಳ್ಳಿ ಹೆಬ್ಬಾಗಿಲು ನಿವಾಸಿ ಚಂದ್ರ (೪೨) ಹಾಗೂ ನೆರೆಮನೆಯಲ್ಲಿ ವಾಸಿಸುತ್ತಿದ್ದ ವನಜಾ (೨೯) ಎಂಬವರು ಒಂದ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಜೂನ್ ೭ರಂದು ಚಂದ್ರ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆ ಬಿಟ್ಟು ನಾಪತ್ತೆಯಾಗಿದ್ದಾರೆ. ಅದೇ ದಿನ ವನಜಾ ಕೂಡಾ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದು, ಇಬ್ಬರೂ ಕೂಡಾ ಇಲ್ಲಿಯವರೆಗೆ ಮನೆಗೆ ವಾಪಾಸ್ಸಾಗದೇ ನಾಪಾತ್ತೆಯಾಗಿದ್ದಾರೆ ಎಂದು

ಕುಂದಾಪುರ: ವಿವಾಹಿತನೊಂದಿಗೆ ಯುವತಿ ಪರಾರಿ Read More »

ಮಗನ ಕೇಶ ಅರ್ಪಿಸಿ ಕೊಲ್ಲೂರು ದೇವಿಯ ಹರಕೆ ತೀರಿಸಿದ ರಿಷಬ್ ಶೆಟ್ಟಿ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ಮಗನ ತಲೆ ಕೂದಲು ತೆಗೆಸಿ ಹರಕೆಯನ್ನು ತೀರಿಸಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರಾದ ರಿಷಬ್ ಶೆಟ್ಟಿಯವರು, ಪತ್ನಿ ಪ್ರಗತಿ ಹಾಗೂ ಮಗ ರನ್ವಿತ್ ಸಮೇತ ಕೊಲ್ಲೂರಿಗೆ ಭೇಟಿ ನೀಡಿ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಅನ್‌ಲಾಕ್ ಆರಂಭವಾದ ಮೊದಲ ದಿನವೇ ದೇವಾಲಯಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ ಅವರು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ರಿಷಬ್ ಶೆಟ್ಟಿ ಫಿಲ್ಮ್ಸ್

ಮಗನ ಕೇಶ ಅರ್ಪಿಸಿ ಕೊಲ್ಲೂರು ದೇವಿಯ ಹರಕೆ ತೀರಿಸಿದ ರಿಷಬ್ ಶೆಟ್ಟಿ Read More »