ದ.ಕ: ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಜೂ. 30 ಕಡೇ ದಿನ |ತಪ್ಪಿದಲ್ಲಿ ಕಠಿಣ ಕ್ರಮ: ಡಿ.ಸಿ
ಮಂಗಳೂರು: ಸಾರ್ವಜನಿಕ ವಿತರಣಾ ಪದ್ಧತಿಯಡಿ ಅಂತ್ಯೋದಯ(ಎಎವೈ) ಅನ್ನ ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಹೊಂದಿರುವ ಅನರ್ಹ ಕುಟುಂಬಗಳು ಪಡಿತರ ಚೀಟಿಗಳನ್ನು ದಂಡ ರಹಿತವಾಗಿ ಜೂ. 30ರೊಳಗೆ ಹಿಂದುರಿಗಿಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ಸರಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ(ಎಎವೈ) ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಪಡೆದುಕೊಂಡವರು ಆಯಾ ತಾಲೂಕಿನ ತಹಶೀಲ್ದಾರರು/ ಸಹಾಯಕ ನಿರ್ದೇಶಕರು ಇವರಿಗೆ ಪಡಿತರ ಚೀಟಿಗಳನ್ನು ಹಿಂದಿರುಗಿಸಬೇಕು. ಅನರ್ಹರು ಹೊಂದಿರುವ ಎಎವೈ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ಸ್ವಯಂ ಪ್ರೇರಿತರಾಗಿ ಇಲಾಖೆಗೆ ಹಿಂದಿರುಗಿಸಬೇಕು. ಅಂತಹವರ ವಿರುದ್ಧ ಯಾವುದೇ […]










