ಕರಾವಳಿ

ಜೂ.14 ರಿಂದ 21 ರವರೆಗೆ ದ.ಕ ಜಿಲ್ಲೆಯ 17 ಗ್ರಾ.ಪಂ ಸೀಲ್ ಡೌನ್

ಮಂಗಳೂರು: ಕೋವಿಡ್ ಸೋಕಿನ ಪ್ರಮಾಣ ಕಡಿಮೆಗೊಳಿಸುವ ಸಲುವಾಗಿ ದ.ಕ. ಜಿಲ್ಲೆಯ 17 ಗ್ರಾಪಂಗಳನ್ನು ಜೂ.14ರಿಂದ ಬೆಳಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ದ.ಕ.ಜಿ.ಪಂ ಸಿಇಒ ಅವರ ವರದಿ ಆಧರಿಸಿ 50ಕ್ಕಿಂತ ಅಧಿಕ ಕೋವಿಡ್ ಸಕ್ರಿಯ ಪ್ರಕರಣಗಳು ಇರುವ ಗ್ರಾಪಂಗಳನ್ನು ಸೀಲ್ಡೌನ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, […]

ಜೂ.14 ರಿಂದ 21 ರವರೆಗೆ ದ.ಕ ಜಿಲ್ಲೆಯ 17 ಗ್ರಾ.ಪಂ ಸೀಲ್ ಡೌನ್ Read More »

ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು ಒತ್ತಾಯ | ಇಂದು ಟ್ವೀಟ್ ಅಭಿಯಾನದಲ್ಲಿ ಕೈಜೋಡಿಸಲು ತುಳು ಸಂಘಟನೆಗಳ ಕರೆ

ಮಂಗಳೂರು: ತುಳುಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಅಧಿಕೃತ ಭಾಷೆಯಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ತುಳು ಸಂಘಟನೆಗಳು ಇಂದು ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿವೆ. ಉತ್ತರ ಕೇರಳ ಮತ್ತು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ತುಳು ಮಾತನಾಡುವ ಜನರು ಅಧಿಕವಾಗಿದ್ದಾರೆ. ರಾಜ್ಯ ಸರ್ಕಾರಗಳು ಇದುವರೆಗೂ ತುಳುಭಾಷೆಗೆ ಯಾವುದೇ ಸ್ಥಾನಮಾನ ನೀಡಿಲ್ಲ. ಆದ್ದರಿಂದ ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ಒದಗಿಸಿಕೊಡುವಲ್ಲಿ ಸರಕಾರವನ್ನು ಒತ್ತಾಯಿಸಲು ಇಂದು, ಜೂ.13ರಂದು ನಡೆಯುವ ಟ್ವಿಟರ್ ಅಭಿಯಾನದಲ್ಲಿ ಕೈಜೋಡಿಸುವಂತೆ ತುಳುನಾಡ ಜನತೆಗೆ ತುಳು ಸಂಘಟನೆಗಳು ಕರೆ ನೀಡಿವೆ. ಇಂದು ದಿನಪೂರ್ತಿ

ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು ಒತ್ತಾಯ | ಇಂದು ಟ್ವೀಟ್ ಅಭಿಯಾನದಲ್ಲಿ ಕೈಜೋಡಿಸಲು ತುಳು ಸಂಘಟನೆಗಳ ಕರೆ Read More »

ಮಂಗಳೂರು ವಿಶ್ವವಿದ್ಯಾನಿಲಯ: ಸಾಹಿತಿ ಡಾ. ಸಿದ್ದಲಿಂಗಯ್ಯರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಮಂಗಳಗಂಗೋತ್ರಿ: ಕಳೆದ ಎರಡು ದಿನಗಳ ಹಿಂದೆ ನಿಧನಹೊಂದಿದ ಪ್ರಸಿದ್ಧ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಶ್ರದ್ಧಾಂಜಲಿ ಕೋರಲಾಯಿತು. ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದ ಅವರಣದಲ್ಲಿ ಶನಿವಾರ ಕಾರ್ಯಕ್ರಮ ನಡೆಯಿತು. ಸಿದ್ದಲಿಂಗಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ, ‘ಡಾ. ಸಿದ್ದಲಿಂಗಯ್ಯ ಅವರು ಲೇಖನಿ ಮೂಲಕವೇ ಸಮಾಜದಲ್ಲಿನ ಅನ್ಯಾಯ ಹಾಗೂ ಅಸಮಾನತೆಯ ವಿರುದ್ಧ ಹೋರಾಡಿ ಸಮಾಜವನ್ನು ತಿದ್ದುವಲ್ಲಿ ಸಫಲರಾಗಿದ್ದರು. ಅವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ’ ಎಂದರು. ವಿಶ್ವವಿದ್ಯಾನಿಲಯದ

ಮಂಗಳೂರು ವಿಶ್ವವಿದ್ಯಾನಿಲಯ: ಸಾಹಿತಿ ಡಾ. ಸಿದ್ದಲಿಂಗಯ್ಯರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ Read More »

ಹರೀಶ್ ಪೂಂಜಾರನ್ನು ಹೊಗಳಿದ ಕಾಂಗ್ರೆಸ್ ನಾಯಕರಿಗೆ ಸ್ವಪಕ್ಷದಿಂದ ತೆಗಳಿಕೆ

ಬೆಳ್ತಂಗಡಿ: ಬೆಳ್ತಂಗಡಿ ಯ ಶಾಸಕ ಹರೀಶ್ ಪೂಂಜಾ ಅವರನ್ನು ಹೊಗಳಿದ ಕಾರಣಕ್ಕೆ, ತನ್ನ 8 ಜನ ನಾಯಕರುಗಳಿಗೆ ಕಾಂಗ್ರೆಸ್ ಪಕ್ಷ ಬಿಸಿ ಮುಟ್ಟಿಸಿದೆ. ಪಕ್ಷದಲ್ಲಿ ಶಿಸ್ತು ಉಲ್ಲಂಘಿಸಿದ ವಿಚಾರ ಸ್ಪಷ್ಟನೆ ಕೋರಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನೋಟೀಸು ಜಾರಿ ಮಾಡಲಾಗಿದೆ. ಜೂನ್ 3 ರಂದು ಬಿಡುಗಡೆಯಾದ ಸ್ಥಳೀಯ ವಾರ ಪತ್ರಿಕೆಯೊಂದರಲ್ಲಿ ಬಿಜೆಪಿ ಯ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರ ಶಾಸಕತ್ವಕ್ಕೆ ಮೂರು ವರ್ಷ ಪೂರೈಸಿರುವ ಪ್ರಯುಕ್ತ ಕಾಂಗ್ರೆಸ್ ನಾಯಕರು ಶುಭಕೋರಿದ್ದರು. ನಿವೃತ್ತ ಪೊಲೀಸ್

ಹರೀಶ್ ಪೂಂಜಾರನ್ನು ಹೊಗಳಿದ ಕಾಂಗ್ರೆಸ್ ನಾಯಕರಿಗೆ ಸ್ವಪಕ್ಷದಿಂದ ತೆಗಳಿಕೆ Read More »

ಜಿಲ್ಲೆಯಲ್ಲಿ ಈ ವಾರದ ವೀಕೆಂಡ್ ಕರ್ಫ್ಯೂ ಇಲ್ಲ : ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈ ವಾರದ ವಾರಾಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಕೆವಿ ಹೇಳಿದ್ದಾರೆ. ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಹಿಂದೆ ಇದ್ದ ಲಾಕ್ಡೌನ್ ನಿಯಮಗಳನ್ನು ಜೂನ್ 21 ರವರೆಗೆ ಮುಂದುವರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಿಂದಿನಂತೆಯೇ ವಾರದ ಎಲ್ಲಾ ದಿನ ನಿರ್ಬಂಧಗಳು ಮುಂದುವರೆಯಲಿದೆ. ಪ್ರತ್ಯೇಕವಾಗಿ ಈ ವಾರದ ಶನಿವಾರ ಮತ್ತು ಆದಿತ್ಯವಾರ (ಜೂ. 13 ಮತ್ತು 14) ದಂದು ವಾರಂತ್ಯ

ಜಿಲ್ಲೆಯಲ್ಲಿ ಈ ವಾರದ ವೀಕೆಂಡ್ ಕರ್ಫ್ಯೂ ಇಲ್ಲ : ಜಿಲ್ಲಾಧಿಕಾರಿ ಡಾ. ರಾಜೇಂದ್ರ Read More »

ಪೂರ್ಣಾಹುತಿಯಾದ ಭಾಸ್ಕರ ಶೆಟ್ಟಿ ಕೊಲೆ‌ ಪ್ರಕರಣ | ಬಹುಕೋಟಿ ಆಸ್ತಿಯ ವಾರಸ್ದಾರ ಯಾರು…?

ಉಡುಪಿ: 2016ರ ಬಹುಕೋಟಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಅಂತಿಮ ತೀರ್ಪು ಕಳೆದವಾರ ಹೊರಬಂದಿತ್ತು. ಉಡುಪಿಯ ಜಿಲ್ಲಾ ನ್ಯಾಯಾಲಯ ಪತ್ನಿ ಪುತ್ರ ಹಾಗೂ ಓರ್ವ ಜ್ಯೋತಿಷಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. ಇನ್ನು ಭಾಸ್ಕರ ಶೆಟ್ಟಿ ತನ್ನ ಬಹುಕೋಟಿ ಆಸ್ತಿಗೆ ಬರೆದಿದ್ದ ವೀಲುನಾಮೆ ಬಹಿರಂಗಗೊಂಡಿದೆ. ಇನ್ನು, ತನ್ನ ಪತ್ನಿ ಒಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು ಅವನು ನನ್ನ ಆಸ್ತಿಯನ್ನು ಲಪಟಾಯಿಸುವ ಉದ್ದೇಶದಿಂದ ತನ್ನ ಪುತ್ರ ಹಾಗೂ ಪತ್ನಿಯ ಸ್ನೇಹ ಬೆಳೆಸಿ, ನನ್ನನ್ನು ಮುಗಿಸಲು ಯೋಜನೆ

ಪೂರ್ಣಾಹುತಿಯಾದ ಭಾಸ್ಕರ ಶೆಟ್ಟಿ ಕೊಲೆ‌ ಪ್ರಕರಣ | ಬಹುಕೋಟಿ ಆಸ್ತಿಯ ವಾರಸ್ದಾರ ಯಾರು…? Read More »

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಲಂಕಾ ಪ್ರಜೆಗಳ ಬಂಧನ

ಮಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಶ್ರೀಲಂಕಾ ದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಲಾಡ್ಜ್ ಗಳಲ್ಲಿ ಮತ್ತು ನಗರದ ಕೆಲವು ಮನೆಗಳಲ್ಲಿ ಅವರು ವಾಸಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಲಂಕಾ ಪ್ರಜೆಗಳು ಕಳೆದ ಮಾರ್ಚ್ ತಿಂಗಳಿನಲ್ಲಿ ತಮಿಳುನಾಡಿನ ತೂತುಕುಡಿಗೆ ಆಗಮಿಸಿದ್ದರು. ಅಲ್ಲಿಂದ ಉದ್ಯೋಗಕ್ಕಾಗಿ ಕೆನಡಾಗೆ ಹೋಗುವವರಿದ್ದರು. ತಮಿಳುನಾಡಿನಲ್ಲಿ ಲಂಕನ್ನರಿಗೆ ಕೆನಡಾದಲ್ಲಿ ಕೆಲಸ ಕೊಡಿಸುವ ಏಜೆಂಟ್ ಳಿದ್ದರು. ಆ ಸಮಯದಲ್ಲಿ ತಮಿಳುನಾಡಿನಲ್ಲಿ ಚುನಾವಣೆ ಇದ್ದುದರಿಂದ ಅವರಿಗೆ ಕೆನಡಾಗೆ

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಲಂಕಾ ಪ್ರಜೆಗಳ ಬಂಧನ Read More »

ದ ಕ: ಕಪ್ಪು ಶಿಲೀಂದ್ರ ಕ್ಕೆ ಮತ್ತೆರಡು ಬಲಿ

ಮಂಗಳೂರು: ಮಾರಕ ಕಪ್ಪು ಶಿಲೀಂದ್ರ ಸೊಂಕಿಗೆ ಜಿಲ್ಲೆಯಲ್ಲಿ ಮತ್ತೆರಡು ಸಾವು ಸಂಭವಿಸಿದ್ದು ಮೂರು ಹೊಸ ಪ್ರಕರಣಗಳು ವರದಿಯಾಗಿದೆ. ಮೃತಪಟ್ಟವರು ಮತ್ತು ಹೊಸದಾಗಿ ಸೋಂಕಿಗೊಳಗಾದ ವರು ಎಲ್ಲರೂ ಹೊರಜಿಲ್ಲೆಯವರಗಿದ್ದಾರೆ. ಪತ್ತೆಯಾದ ಮೂರು ಹೊಸ ಪ್ರಕರಣಗಳು ಉತ್ತರ ಕನ್ನಡ, ಚಿಕ್ಕಮಗಳೂರು, ಹಾವೇರಿ ಜಿಲ್ಲೆಗೆ ಸಂಬಂಧಿಸಿದ್ದಾಗಿವೆ. ಎಲ್ಲರನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇನ್ನು ಈ ಹಿಂದೆ ಸೊಂಕಿಗೊಳಗಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ನಿನ್ನೆ ಮೃತಪಟ್ಟಿದ್ದಾರೆ. ಅವರಲ್ಲಿ ಒಬ್ಬರು ಚಿಕ್ಕಮಗಳೂರು ಮತ್ತು ಇನ್ನೊಬ್ಬರು ಉತ್ತರ ಕನ್ನಡ ಜಿಲ್ಲೆಗೆ ಸೇರಿದವರಾಗಿದ್ದಾರೆ.

ದ ಕ: ಕಪ್ಪು ಶಿಲೀಂದ್ರ ಕ್ಕೆ ಮತ್ತೆರಡು ಬಲಿ Read More »

ಕರಾವಳಿಯಲ್ಲಿ ಅಕ್ರಮವಾಗಿ ನೆಲೆಸಿದ್ದಳು ಪಾಕಿಸ್ತಾನಿ ಮಹಿಳೆ…! | ಪೊಲೀಸರಿಂದ ತನಿಖೆ ಚುರುಕು

ಭಟ್ಕಳ: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನ ಮೂಲದ ಖತೀಜಾ ಮೆಹರಿನ್ ಎಂಬಾಕೆ ಇಲ್ಲಿ ನೆಲೆಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭಟ್ಕಳ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.‌ ಕಳೆದ ಎಂಟು ವರ್ಷಗಳ ಹಿಂದೆ ಈಕೆಯನ್ನು ಸ್ಥಳೀಯ ನಿವಾಸಿ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್‌ ಎಂಬಾತ ದುಬೈನಲ್ಲಿ ವಿವಾಹವಾಗಿದ್ದ. ಈಕೆ ಮದುವೆ ನಂತರ 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ಸಾಗಿದ್ದಳು. ಆ ಬಳಿಕ 2015ರಲ್ಲಿ ಅಕ್ರಮವಾಗಿ ಭಾರತ ಪ್ರವೇಶ

ಕರಾವಳಿಯಲ್ಲಿ ಅಕ್ರಮವಾಗಿ ನೆಲೆಸಿದ್ದಳು ಪಾಕಿಸ್ತಾನಿ ಮಹಿಳೆ…! | ಪೊಲೀಸರಿಂದ ತನಿಖೆ ಚುರುಕು Read More »

ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಉಡುಪಿ ಮೂಲದ ಪದ್ದು ಬಂಗೇರ ವಿಧಿವಶ

ಉಡುಪಿ: 80ರ ದಶಕದಲ್ಲಿ ಭಾರತ ಫುಟ್ಬಾಲ್ ತಂಡವನ್ನೂ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದ ಶೇಖರ್ ಪದ್ದು ಬಂಗೇರ (75ವ.) ಇಂದು ಮೃತಪಟ್ಟಿದ್ದಾರೆ. ಜಿಲ್ಲೆಯ ಬಡಾನಿಡಿಯೂರು ಮೂಲದವರಾದ ಅವರಿಗೆ ಕೆಲ ದಿನಗಳ ಹಿಂದೆ ಅವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭಾರತ ತಂಡದಲ್ಲಿ ಗೋಲ್ಕೀಪರ್ ಹಾಗೂ ನಾಯಕನಾಗಿದ್ದ ಇವರು ದೇಶಕ್ಕೆ ಹಲವಾರು ಪಂದ್ಯಗಳನ್ನು ಗೆಲ್ಲಿಸಿ ಕೊಟ್ಟಿದ್ದಾರೆ. ಹಾಗೂ ಹಲವಾರು ಪ್ರತಿಷ್ಠಿತ

ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಉಡುಪಿ ಮೂಲದ ಪದ್ದು ಬಂಗೇರ ವಿಧಿವಶ Read More »