ಕರಾವಳಿ

ಬಂಟ್ವಾಳ: ಲಾರಿ ಅಪಘಾತ | ಚಾಲಕ, ಕ್ಲೀನರ್ ಗೆ ಗಾಯ

ಬಂಟ್ವಾಳ: ಲಾರಿಯೊಂದು ಧರೆಗೆ ಡಿಕ್ಕಿ ಹೊಡೆದ ಪರಿಣಾಮಚಾಲಕ ಹಾಗೂ ನಿರ್ವಾಹಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮುಂಜಾನೆ ಬಂಟ್ವಾಳದಲ್ಲಿ ನಡೆದಿದೆ. ಲಾರಿ ಶಿವಮೊಗ್ಗದಿಂದ ಪುತ್ತೂರಿಗೆ ಅಕ್ಕಿ ಹೇರಿಕೊಂಡು ಕೊಂಡು ಬರುತ್ತಿತ್ತು. ಬಂಟ್ವಾಳದ ಎಸ್ ವಿ‌ಎಸ್ ಶಾಲೆ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿ ರಸ್ತೆ ಬದಿಗೆ ಚಲಿಸಿ ಧರೆಗೆ ಡಿಕ್ಕಿ ಹೊಡೆದಿದೆ. ಲಾರಿ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಚಾಲಕ ಹಾಗೂ ನಿರ್ವಾಹಕನಿಗೆ ಗಾಯಗಳಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು […]

ಬಂಟ್ವಾಳ: ಲಾರಿ ಅಪಘಾತ | ಚಾಲಕ, ಕ್ಲೀನರ್ ಗೆ ಗಾಯ Read More »

ಸುಳ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ

ಸುಳ್ಯ: ಮನೆಯ ಕೊಟ್ಟಿಗೆಯಲ್ಲಿ ಯುವಕರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೋಡಿಕಾನದಲ್ಲಿ ನಡೆದಿದೆ. ತೋಡಿಕಾನ ಗ್ರಾಮದ ದೇವರಗುಂಡಿ ಬಳಿಯ ನಿವಾಸಿ ಕೇಪಣ್ಣ ನಾಯ್ಕ್ ರ ಪುತ್ರ ಜಯರಾಮ ನೇಣಿಗೆ ಶರಣಾದವರು. ಅವರಿಗೆ 34 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿದ್ದ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸುಳ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಸುಳ್ಯ : ಹಲವು ವರ್ಷದಿಂದ ಕಾಡುತ್ತಿರುವ ನೆಟ್ವರ್ಕ್ ಸಮಸ್ಯೆ | ಕೊಡೆ ಹಿಡಿದು ತಂದೆಯೊಂದಿಗೆ ವಿದ್ಯಾರ್ಥಿನಿ ನೆಟ್ವರ್ಕ್ ಹುಡುಕಾಟ | ಜನಪ್ರತಿನಿಧಿಗಳು ವ್ಯಾಪ್ತಿ ಪ್ರದೇಶದಿಂದ ಹೊರಗೆ

ಸುಳ್ಯ : ನೆಟ್ವರ್ಕ್‌ ಸಮಸ್ಯೆಯಿಂದ ಗುತ್ತಿಗಾರು ಗ್ರಾಮದ ಮೊಗ್ರ, ಬಳ್ಳಕ್ಕ ಪ್ರದೇಶದ ವಿದ್ಯಾರ್ಥಿನಿಯೊಬ್ಬಳು ಮಳೆಯ ನಡುವೆಯೇ ರಸ್ತೆ ಬದಿಗೆ ತಂದೆಯ ಜೊತೆಗೆ ಬಂದು ಕೊಡೆ ಹಿಡಿದು ಆನ್‌ ಲೈನ್‌ ಕ್ಲಾಸ್‌ ಗೆ ಹಾಜರಾಗುತ್ತಿರುವುದು ಹಲವು ದಿನಗಳಿಂದ ನಡೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ನೆಟ್ವರ್ಕ್ ಸಮಸ್ಯೆಗೆ ಹಿಡಿದ ಕೈಗನ್ನಡಿ. ಎಸ್‌ ಎಸ್‌ ಎಲ್‌ ಸಿ. ವಿದ್ಯಾರ್ಥಿನಿಯಾಗಿರುವ ಈಕೆ ನೆಟ್ವರ್ಕ್‌ ಇಲ್ಲ, ಸಿಗ್ನಲ್‌ ಇಲ್ಲ ಎಂದು ಕೂತರೆ ಈಡೀ ಭವಿಷ್ಯವೇ ಹಾಳಾಗುತ್ತದೆ ಎಂದು ರಸ್ತೆ ಬದಿ ನೆಟ್ವರ್ಕ್ ಹುಡುಕಿ‌ ಆನ್ ಲೈನ್

ಸುಳ್ಯ : ಹಲವು ವರ್ಷದಿಂದ ಕಾಡುತ್ತಿರುವ ನೆಟ್ವರ್ಕ್ ಸಮಸ್ಯೆ | ಕೊಡೆ ಹಿಡಿದು ತಂದೆಯೊಂದಿಗೆ ವಿದ್ಯಾರ್ಥಿನಿ ನೆಟ್ವರ್ಕ್ ಹುಡುಕಾಟ | ಜನಪ್ರತಿನಿಧಿಗಳು ವ್ಯಾಪ್ತಿ ಪ್ರದೇಶದಿಂದ ಹೊರಗೆ Read More »

ಸುಳ್ಯ: ಕೋವಿಡ್ ಸೋಂಕಿತನಿಂದ ಪಿಡಿಒ ಗೆ ಜೀವ ಬೆದರಿಕೆ, ದೂರು | ಲಕ್ಷ ವ್ಯವಹಾರಕ್ಕೆ ನಷ್ಟವಾಯಿತೆಂದ ಸೋಂಕಿತ

ಸುಳ್ಯ: ಕೋವಿಡ್ ಸೋಂಕಿತನೋರ್ವ ತನ್ನನ್ನು ವಿಚಾರಿಸಲು ಬಂದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಧಮ್ಕಿ ಹಾಕಿದ್ದು, ಜೀವ ಬೆದರಿಕೆ ಒಡ್ಡಿದ ಘಟನೆ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನಡೆದಿದೆ.ದೇವಚಳ್ಳ ಗ್ರಾ.ಪಂ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಸೊಂಕಿತರನನ್ನು ಪಂಜ ಕೋವಿಡ್ ಸೆಂಟರ್ ಗೆ ಸೇರಿಸಲಾಗಿದೆ. ಕೆಲವರನ್ನು ಹೋಂ ಐಸೋಲೇಶನ್ ನಲ್ಲಿ ಇರಿಸಲಾಗಿದ್ದು, ಈ ಪೈಕಿ ಕಂದ್ರಪ್ಪಾಡಿಯ ಸೋಂಕಿತನೋರ್ವ ಹೋಂ ಐಸೋಲೇಶನ್ ನಿಂದ ಹೊರಗಿದ್ದು, ಊರಿಡೀ ಸುತ್ತಾಡಿಕೊಂಡಿದ್ದ ಬಗ್ಗೆ ಸಾರ್ವಜನಿಕರು ಪಂಚಾಯತ್ ಗೆ ದೂರು ಸಲ್ಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ

ಸುಳ್ಯ: ಕೋವಿಡ್ ಸೋಂಕಿತನಿಂದ ಪಿಡಿಒ ಗೆ ಜೀವ ಬೆದರಿಕೆ, ದೂರು | ಲಕ್ಷ ವ್ಯವಹಾರಕ್ಕೆ ನಷ್ಟವಾಯಿತೆಂದ ಸೋಂಕಿತ Read More »

ಕಡೆಶಿವಾಲಯ: ಮಳೆಯಬ್ಬರಕ್ಕೆ ಬೃಹತ್ ಮರದ ಜೊತೆ ಧರೆಗುರುಳಿದ ವಿದ್ಯುತ್ ಕಂಬಗಳು

ಬಂಟ್ವಾಳ : ಕರಾವಳಿಯಲ್ಲಿ ಮಳೆಯಬ್ಬರ ಮುಂದುವರಿದಿದೆ. ಬುಧವಾರ ಮಧ್ಯಾಹ್ನ ಸುರಿದ ಭಾರಿ ಗಾಳಿಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡೇಶಿವಾಲಯ ಗ್ರಾಮದ ಸಂಪೋಳಿಯಲ್ಲಿ ಬೃಹತ್‌ ಗಾತ್ರದ ಗೋಳಿ ಮರವೊಂದು ಧರೆಗುರುಳಿದೆ. ಸಂಜೆ 4 ಗಂಟೆಯ ವೇಳೆಗೆ ಬೀಸಿದ ಗಾಳಿಗೆ ಬೃಹತ್‌ ಮರ ರಸ್ತೆಗೆ ಉರುಳಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮರ ಉರುಳಿ ಬಿದ್ದ ಪರಿಣಾಮ ಸಮೀಪದಲ್ಲೇ ಇದ್ದ ಐದಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ಕೂಡ ಧರೆಗುರುಳಿವೆ. ಇಲ್ಲಿನ ನಾಗೇಶ್‌ ಸಂಪೋಳಿ ಅವರ ಜಮೀನಿನಲ್ಲಿ ಇದ್ದ ಈ ಮರದ ಪಕ್ಕದಲ್ಲೇ

ಕಡೆಶಿವಾಲಯ: ಮಳೆಯಬ್ಬರಕ್ಕೆ ಬೃಹತ್ ಮರದ ಜೊತೆ ಧರೆಗುರುಳಿದ ವಿದ್ಯುತ್ ಕಂಬಗಳು Read More »

ಕಾರ್ಕಳ: ಮೀನು ಹಿಡಿಯಲು ಹೋದ ಬಾಲಕ ನೀರು ಪಾಲು

ಕಾರ್ಕಳ: ಮೀನು ಹಿಡಿಯುಲು ಹೋದ ಬಾಲಕನೊರ್ವ ಆಕಸ್ಮಿಕವಾಗಿ ಮದಗಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಘಟನೆ ಅಜೆಕಾರು ಠಾಣಾ ವ್ಯಾಪ್ತಿಯ ಎಳ್ಳಾರೆ ಎಂಬಲ್ಲಿ ಸಂಭವಿಸಿದೆ. ಎಳ್ಳಾರೆಯ ಸೋಮನಾಥ ಶೇರಿಗಾರ ಎಂಬವರ ಮಗ ಆದಿತ್ಯ (14) ಮೃತಪಟ್ಟ ಬಾಲಕ. ಈತ ತನ್ನ ಗೆಳೆಯರೊಂದಿಗೆ ಮೀನು ಹಿಡಿಯಲೆಂದು ಮನೆಯಿಂದ ಮನೆ ಸಮೀಪದ ಮದಗಕ್ಕೆ ಹೋಗಿದ್ದ. ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಮೀನು ಹಿಡಿಯುತ್ತಿದ್ದಾಗ ಆಯ ತಪ್ಪಿ ನೀರಿಗೆ ಬಿದ್ದಿದ್ದಾನೆ.ಘಟನೆಯ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಮೀನು ಹಿಡಿಯಲು ಹೋದ ಬಾಲಕ ನೀರು ಪಾಲು Read More »

ಪುತ್ತೂರು: ಗಂಟಲಲ್ಲಿ ಆಹಾರ ಸಿಲುಕಿ ವ್ಯಕ್ತಿ ಮೃತ್ಯು

ಪುತ್ತೂರು: ಊಟ ಮಾಡುತ್ತಿದ್ದಾಗ ಗಂಟಲಲ್ಲಿ ಆಹಾರ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಸಮೀಪದ ನಿಡ್ಪಳ್ಳಿ ಗ್ರಾಮದ ಕ್ಕುಕ್ಕುಪುಣಿ ಎಂಬಲ್ಲಿ ನಡೆದಿದೆ. ಕುಕ್ಕುಪುಣಿ ನಿವಾಸಿ ಕೊರಗಪ್ಪ ನಲಿಕೆ ಎಂಬವರು ನಿನ್ನೆ ಮದ್ಯಾಹ್ನ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಆಹಾರದ ತುಡೊಂದು ಗಂಟಲಿನಲ್ಲಿ ಸಿಲುಕಿಕೊಂಡಿದೆ. ತಕ್ಷಣ ಮನೆಯವರು ಪ್ರಥಮ ಚಿಕಿತ್ಸೆ ನೀಡಿದರು ಫಲಕಾರಿಯಾಗಲಿಲ್ಲ. ಅವರಿಗೆ ಸ್ವಲ್ಪ ಸಮಯದಲ್ಲೇ ಉಸಿರಾಟದ ಸಮಸ್ಯೆ ಎದುರಾಗಿದೆ. ಬಳಿಕ ಮನೆಯವರು ಮುಡಿಪಿನಡ್ಕದ ಕ್ಲಿನಿಕ್ ಒಂದಕ್ಕೆ ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದ್ದಾರೆ. ಪುತ್ತೂರು

ಪುತ್ತೂರು: ಗಂಟಲಲ್ಲಿ ಆಹಾರ ಸಿಲುಕಿ ವ್ಯಕ್ತಿ ಮೃತ್ಯು Read More »

ದ.ಕ: ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಜೂ. 30 ಕಡೇ ದಿನ |ತಪ್ಪಿದಲ್ಲಿ ಕಠಿಣ ಕ್ರಮ: ಡಿ.ಸಿ

ಮಂಗಳೂರು: ಸಾರ್ವಜನಿಕ ವಿತರಣಾ ಪದ್ಧತಿಯಡಿ ಅಂತ್ಯೋದಯ(ಎಎವೈ) ಅನ್ನ ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಹೊಂದಿರುವ ಅನರ್ಹ ಕುಟುಂಬಗಳು ಪಡಿತರ ಚೀಟಿಗಳನ್ನು ದಂಡ ರಹಿತವಾಗಿ ಜೂ. 30ರೊಳಗೆ ಹಿಂದುರಿಗಿಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ಸರಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ(ಎಎವೈ) ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಪಡೆದುಕೊಂಡವರು ಆಯಾ ತಾಲೂಕಿನ ತಹಶೀಲ್ದಾರರು/ ಸಹಾಯಕ ನಿರ್ದೇಶಕರು ಇವರಿಗೆ ಪಡಿತರ ಚೀಟಿಗಳನ್ನು ಹಿಂದಿರುಗಿಸಬೇಕು. ಅನರ್ಹರು ಹೊಂದಿರುವ ಎಎವೈ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ಸ್ವಯಂ ಪ್ರೇರಿತರಾಗಿ ಇಲಾಖೆಗೆ ಹಿಂದಿರುಗಿಸಬೇಕು. ಅಂತಹವರ ವಿರುದ್ಧ ಯಾವುದೇ

ದ.ಕ: ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಜೂ. 30 ಕಡೇ ದಿನ |ತಪ್ಪಿದಲ್ಲಿ ಕಠಿಣ ಕ್ರಮ: ಡಿ.ಸಿ Read More »

ಬಂಟ್ವಾಳ: ಸ್ಮಶಾನದಲ್ಲಿ ಟೆಂಟ್ ಹಾಕಿ ವಿಧವೆ ವಾಸ್ತವ್ಯ | ಗ್ರಾ.ಪಂ. ನಿಂದ ಪೊಲೀಸ್ ದೂರು

ಬಂಟ್ವಾಳ: ಗ್ರಾಮ ಪಂಚಾಯತ್ ವತಿಯಿಂದ ಕುಟುಂಬಕ್ಕೆ ಮನೆ ನಿರ್ಮಿಸಿಕೊಡಲಿಲ್ಲವೆಂದು ವಿಧವೆ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಸ್ಮಶಾನದಲ್ಲಿ ಮನೆ ಕಟ್ಟಿ ಕುಳಿತ ಘಟನೆ ಅನಂತಾಡಿ ಗ್ರಾಮದ ಬಂಟ್ರಿಂಜೆಯಲ್ಲಿ ನಡೆದಿದೆ. ಇದೀಗ ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಗ್ರಾಮ ಪಂಚಾಯತ್ ದೂರು ದಾಖಲಿಸಿದೆ. ಹಲವಾರು ಭಾರಿ ಅರ್ಜಿ ಸಲ್ಲಿಸಿದರು ಗ್ರಾಮ ಪಂಚಾಯತ್ ನಮಗೆ ಮನೆ ನಿವೇಶನ ಮಂಜೂರು ಮಾಡಿಲ್ಲವೆಂದು ಮಹಿಳೆ ಆರೋಪಿಸಿದ್ದಾರೆ. ದಿ. ರಾಮಚಂದ್ರ ದಾಸ್ ಎಂಬವರ ಪತ್ನಿ, ಜಯಂತಿ ಇದುವರೆಗೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ

ಬಂಟ್ವಾಳ: ಸ್ಮಶಾನದಲ್ಲಿ ಟೆಂಟ್ ಹಾಕಿ ವಿಧವೆ ವಾಸ್ತವ್ಯ | ಗ್ರಾ.ಪಂ. ನಿಂದ ಪೊಲೀಸ್ ದೂರು Read More »

ಸೀಲ್ ಡೌನ್ ಇದ್ದರೂ ಸುಬ್ರಹ್ಮಣ್ಯಕ್ಕೆ ಭಕ್ತರ ದಂಡು | ದಂಡ ವಿಧಿಸಿ ಎಚ್ಚರಿಕೆ ನೀಡುತ್ತಿರುವ ಪೊಲೀಸರು

ಸುಬ್ರಹ್ಮಣ್ಯ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆಯಾದ ಕಾರಣ ಭಕ್ತರು ತೀರ್ಥಯಾತ್ರೆ ಆರಂಭಿಸಿದ್ದು, ಕುಕ್ಕೆಗೆ ಭಕ್ತರ ದಂಡು ಹರಿದುಬರುತ್ತಿದೆ. ಸುಬ್ರಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೀಲ್ ಡೌನ್ ಹೆರಲಾಗಿದ್ದು, ಆಗಮಿಸಿದ ಭಕ್ತರಿಗೆ ದಂಡ ವಿಧಿಸಲಾಗುತ್ತಿದೆ. ಜೂ.14 ರಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ದ.ಕ. ಸೇರಿದಂತೆ ಉಳಿದ 11 ಜಿಲ್ಲೆಗಳಲ್ಲಿ ಲಾಕ್ಡೌನ್ ನಿಯಮಗಳನ್ನು ಜೂ. 21 ರವರೆಗೆ ಮುಂದುವರೆಸಲಾಗಿದೆ. ಇನ್ನು ಜಿಲ್ಲೆಯಲ್ಲಿ ದಿನಕ್ಕೆ 50 ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದ ಗ್ರಾಮಪಂಚಾಯಿತ್ ಗಳನ್ನು

ಸೀಲ್ ಡೌನ್ ಇದ್ದರೂ ಸುಬ್ರಹ್ಮಣ್ಯಕ್ಕೆ ಭಕ್ತರ ದಂಡು | ದಂಡ ವಿಧಿಸಿ ಎಚ್ಚರಿಕೆ ನೀಡುತ್ತಿರುವ ಪೊಲೀಸರು Read More »