ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ವ್ಯಕ್ತಿ ಬಲಿ
ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ವ್ಯಕ್ತಿಯೊಬ್ಬರು ಶನಿವಾರ ಮೃತಪಟ್ಟಿದ್ದಾರೆ. ಇದರಿಂದ ಡೆಂಗ್ಯೂಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಸಾವಾಗಿದೆ. ಪುತ್ತೂರು ತಾಲೂಕು ಪಡ್ನೂರಿನ ಯತೀಶ್ (50) ಮೃತರು. ಮೂಲತಃ ಬಂಟ್ವಾಳ ತಾಲೂಕಿನ ಶಂಭೂರು ನಿವಾಸಿಯಾದ ಯತೀಶ್ ಅವರಿಗೆ ಜುಲೈ 10ರಂದು ಜ್ವರ ಕಾಣಿಸಿಕೊಂಡಿತು. ವಿಪರೀತ ಜ್ವರದ ಹಿನ್ನೆಲೆಯಲ್ಲಿ ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ವ್ಯಕ್ತಿ ಬಲಿ Read More »









