ಕರಾವಳಿ

ಉಪ್ಪಿನಂಗಡಿ: 108ರಲ್ಲಿ ಹೆಣ್ಮಗುವಿಗೆ ಜನ್ಮ ನೀಡಿದ ಮಹಿಳೆ

ಸಮಗ್ರ ನ್ಯೂಸ್: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು 108 ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಜೂ.27ರ ರಾತ್ರಿ ಉಪ್ಪಿನಂಗಡಿಯಲ್ಲಿ ನಡೆದಿದೆ. ಬಂಟ್ವಾಳ ತಾಲ್ಲೂಕು ಕಕ್ಕೆಪದವು ಪರಿಸರದ ಉಮೇಶ್ ಎಂಬುವರ ಪತ್ನಿ ಪವಿತ್ರಾ ಅವರು ಹೆರಿಗೆ ನೋವಿನಿಂದ ಬಳಲುತ್ತಿದ್ದಾಗ ಆಸ್ಪತ್ರೆಗೆ ಹೋಗಲು 108 ಆಂಬುಲೆನ್ಸ್ ಸೇವೆಗಾಗಿ ಕರೆ ಮಾಡಿದ್ದರು. ಈ ವೇಳೆ ಪರಿಸರದ ಎರಡೂ ಆಂಬುಲೆನ್ಸ್‌ಗಳು ಬೇರೆಡೆ ಇದ್ದ ಕಾರಣ, ಉಪ್ಪಿನಂಗಡಿಯಲ್ಲಿದ್ದ ಆಂಬುಲೆನ್ಸ್ ಅನ್ನು ಸೇವೆಗೆ ಕರೆಸಲಾಗಿತ್ತು. ಉಪ್ಪಿನಂಗಡಿಯಿಂದ ಕಕ್ಕೆಪದವಿಗೆ ಹೋಗಿ ಗರ್ಭಿಣಿಯನ್ನು […]

ಉಪ್ಪಿನಂಗಡಿ: 108ರಲ್ಲಿ ಹೆಣ್ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ಸುಳ್ಯ: ಮುಖ ತೊಳೆಯಲು ಹೋದಾತ ಹೊಳೆಗೆ ಬಿದ್ದು ಸಾವು

ಸಮಗ್ರ ನ್ಯೂಸ್: ಮುಖ ತೊಳೆಯಲು ಮನೆ ಸಮೀಪದ ಹೊಳೆ ಬದಿಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅರಂತೋಡು ಎಂಬಲ್ಲಿಂದ ವರದಿಯಾಗಿದೆ. ಗ್ರಾಮದ ಬಾಜಿನಡ್ಕದ ಚನಿಯ(50) ಮೃತಪಟ್ಟ ದುರ್ದೈವಿ. ಶುಕ್ರವಾರ ಮುಂಜಾನೆ ಮನೆ ಸಮೀಪದ ಹೊಳೆ ಸಮೀಪ ಹೋಗಿದ್ದು ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನು ಗಮನಿಸಿ ಹತ್ತಿರದ ಮನೆಯವರು ಬೊಬ್ಬೆ ಹಾಕಿದ ವೇಳೆ ಸ್ಥಳೀಯರೊಬ್ಬರು ಓಡಿಬಂದು ನೀರಿಗಿಳಿದು ಮೇಲೆತ್ತಿದ್ದರಾದರೂ ಆಗಲೇ

ಸುಳ್ಯ: ಮುಖ ತೊಳೆಯಲು ಹೋದಾತ ಹೊಳೆಗೆ ಬಿದ್ದು ಸಾವು Read More »

ಬೆಳ್ತಂಗಡಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ| ಶಾಸಕ‌ ಹರೀಶ್ ಪೂಂಜಾ ಮತ್ತು 65 ಮಂದಿಗೆ ಸಮನ್ಸ್ ಜಾರಿ

ಸಮಗ್ರ ನ್ಯೂಸ್: ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧಪಟ್ಟಂತೆ ಶಾಸಕ ಹರೀಶ್‌ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್‌ ಧರ್ಮಸ್ಥಳ ಸೇರಿದಂತೆ 65 ಮಂದಿ ವಿರುದ್ಧ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. ಪ್ರಥಮ ಕೇಸ್‌ನಲ್ಲಿ 28 ಮಂದಿ ಮತ್ತು 2ನೇ ಕೇಸ್‌ನಲ್ಲಿ 37 ಮಂದಿಗೆ ಸಮನ್ಸ್‌ ಜಾರಿ ಮಾಡಲಾಗಿದ್ದು,

ಬೆಳ್ತಂಗಡಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ| ಶಾಸಕ‌ ಹರೀಶ್ ಪೂಂಜಾ ಮತ್ತು 65 ಮಂದಿಗೆ ಸಮನ್ಸ್ ಜಾರಿ Read More »

ಭಾರೀ ಮಳೆಗೆ ತತ್ತರಿಸಿದ ಕರಾವಳಿ, ಮಲೆನಾಡು| ಮಳೆ ಅನಾಹುತಕ್ಕೆ ಎರಡು ದಿನಗಳಲ್ಲಿ 7 ಮಂದಿ ಬಲಿ| ದ.ಕ ದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ಜೀವಗಳು ಅಪಾಯದಲ್ಲಿ ಸಿಲುಕುತ್ತಿದ್ದು ಜನರು ತತ್ತರಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಅನಾಹುತಗಳಿಂದ ಎರಡೇ ದಿನಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ಕುತ್ತಾರುವಿನ ಮದನಿನಗರದಲ್ಲಿ ಮನೆ ಕುಸಿದು ನಾಲ್ವರು ಮೃತಪಟ್ಟಿದ್ದರೆ, ಮಂಗಳೂರು ನಗರದ ರೋಸಾರಿಯೊ ಶಾಲೆ ಹಿಂಭಾಗದಲ್ಲಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ

ಭಾರೀ ಮಳೆಗೆ ತತ್ತರಿಸಿದ ಕರಾವಳಿ, ಮಲೆನಾಡು| ಮಳೆ ಅನಾಹುತಕ್ಕೆ ಎರಡು ದಿನಗಳಲ್ಲಿ 7 ಮಂದಿ ಬಲಿ| ದ.ಕ ದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ನಿಲ್ಲದ ವರುಣಾರ್ಭಟ| ಜೂ. 28ರಂದು ದ.ಕ‌ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆ‌ ಹಾಗೂ ಪ.ಪೂ ತರಗತಿಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಮಾಹಿತಿ ನೀಡಲಾಗಿದೆ. ದ.ಕ ಜಿಲ್ಲೆಗೆ ಹವಾಮಾನ ಇಲಾಖೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ.

ನಿಲ್ಲದ ವರುಣಾರ್ಭಟ| ಜೂ. 28ರಂದು ದ.ಕ‌ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಕುಕ್ಕೆ ಸುಬ್ರಹ್ಮಣ್ಯ: ಭಾರೀ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸ್ನಾನ ಘಟ್ಟ ಮುಳುಗಡೆಯಾಗಿದೆ. ನಿರಂತರ ಮಳೆಗೆ ನದಿಯಲ್ಲಿ ನೀರಿ ಮಟ್ಟ ಏರಿಕೆಯಾಗಿ ಇದೀಗ ಸ್ನಾನ ಘಟ್ಟ ಮುಳುಗಡೆಯಾಗಿದ್ದು, ನದಿಗಿಳಿಯದಂತೆ ಭಕ್ತರಿಗೆ ಸೂಚಿಸಲಾಗಿದೆ. ಭಕ್ತರು ನದಿ ದಡದಲ್ಲೇ ತೀರ್ಥ ಸ್ನಾನ ಮಾಡುತ್ತಿದ್ದಾರೆ. ಕುಮಾರಧಾರ ಉಪನದಿ ದರ್ಪಣತೀರ್ಥ ಕೂಡ ತುಂಬಿ ಹರಿಯುತ್ತಿದೆ. ಕುಮಾರಧಾರ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿಗಳು, ಗೃಹ ರಕ್ಷಕ ದಳ

ಕುಕ್ಕೆ ಸುಬ್ರಹ್ಮಣ್ಯ: ಭಾರೀ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ Read More »

ಮಂಗಳೂರು: ವಿದ್ಯುತ್ ತಂತಿ‌ ಸ್ಪರ್ಶಿಸಿ ಇಬ್ಬರು‌ ಆಟೋ‌ ಚಾಲಕರು ಸಾವು

ಸಮಗ್ರ ನ್ಯೂಸ್: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಮಂಗಳೂರು ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು. ಇಂದು ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ

ಮಂಗಳೂರು: ವಿದ್ಯುತ್ ತಂತಿ‌ ಸ್ಪರ್ಶಿಸಿ ಇಬ್ಬರು‌ ಆಟೋ‌ ಚಾಲಕರು ಸಾವು Read More »

ಸುರತ್ಕಲ್: ರಾ.ಹೆದ್ದಾರಿ ದುರವಸ್ಥೆಗೆ ಪಲ್ಟಿ ಹೊಡೆದ ಸ್ಕೂಟರ್| ಗುಂಡಿಯಲ್ಲೇ‌ ಸ್ಕೂಟರ್ ಬಿಟ್ಟು ಪ್ರತಿಭಟನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಬಳಿ ಅರೆಬರೆ ಕಾಂಕ್ರೀಟ್ ಹಾಗೂ ಡಾಂಬರು ಹಾಕಿದ್ದು, ಭಾರಿ ಮಳೆಗೆ ಹೆದ್ದಾರಿ ಹೊಂಡಮಯವಾಗಿದೆ. ಸ್ಕೂಟರ್ ಸವಾರರೊಬ್ಬರು ಬುಧವಾರ ಬೆಳಿಗ್ಗೆ ಹೆದ್ದಾರಿಯ ಗುಂಡಿಗೆ ಬಿದ್ದು ಗಾಯಗೊಂಡರು. ಇದರಿಂದ ಬೇಸತ್ತ ಅವರು, ತಾವು ಬಿದ್ದ ಹೊಂಡದಲ್ಲೇ ತಮ್ಮ ಸ್ಕೂಟರ್ ನಿಲ್ಲಿಸಿ, ತಾವೂ ಅದರ ಪಕ್ಕದಲ್ಲೇ ನಿಂತು ಈ ದುರವಸ್ಥೆಯ ಬಗ್ಗೆ ಪ್ರತಿಭಟನೆ ನಡೆಸಿದರು. ಅಲ್ಲದೇ, ಹೆದ್ದಾರಿಯಲ್ಲಿ ಸಾಗುತ್ತಿದ್ದ ಇತರ ವಾಹನ ಸವಾರರಿಗೂ ಗುಂಡಿಗಳ ಕುರಿತು ಎಚ್ಚರಿಸುವ ಮೂಲಕ ಗಮನ ಸೆಳೆದರು. ಇಷ್ಟೆಲ್ಲ‌

ಸುರತ್ಕಲ್: ರಾ.ಹೆದ್ದಾರಿ ದುರವಸ್ಥೆಗೆ ಪಲ್ಟಿ ಹೊಡೆದ ಸ್ಕೂಟರ್| ಗುಂಡಿಯಲ್ಲೇ‌ ಸ್ಕೂಟರ್ ಬಿಟ್ಟು ಪ್ರತಿಭಟನೆ Read More »

ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ‌ ಕುಸಿದು‌ ಮಣ್ಣಿನಡಿ ಸಿಲುಕಿದ ಮಕ್ಕಳು| ಪವಾಡ ಸದೃಶ ತಪ್ಪಿದ ಭಾರೀ ದುರಂತ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮತ್ತೊಂದು ಅವಘಡ ಸಂಭವಿಸಿದೆ. ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದ ಪರಿಣಾಮ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ ಘಟನೆ ಇಂದು(ಗುರುವಾರ) ಬೆಳಗಿನ ಜಾವ ನಡೆದಿದೆ. ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಘಟನೆ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿದಿದೆ. ಅದೃಷ್ಟವಶಾತ್ ಮಣ್ಣಿನಡಿ ಸಿಲುಕಿದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋಡೆ ಕುಸಿದ

ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ‌ ಕುಸಿದು‌ ಮಣ್ಣಿನಡಿ ಸಿಲುಕಿದ ಮಕ್ಕಳು| ಪವಾಡ ಸದೃಶ ತಪ್ಪಿದ ಭಾರೀ ದುರಂತ Read More »

ಕರಾವಳಿಯಲ್ಲಿ ಭಾರೀ ಮಳೆ‌ ಮುನ್ಸೂಚನೆ| ಜೂ.27ರಂದು ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ನಾಳೆ ಭಾರೀ ಪ್ರಮಾಣದ ಮಳೆ ಬೀಳುವ ಸಾಧ್ಯತೆ ಇದೆ. ನಾಳೆ(ಜೂ. ೨೭) ಮಾತ್ರವಲ್ಲದೆ ಶುಕ್ರವಾರಕ್ಕೂ ಮಳೆ ಮುಂದುವರೆಯಲಿದೆ. ಸುಮಾರು 30 ತಾಸಿನ ಭಾರೀ ಮಳೆಗೆ ತಯಾರಾಗಲು ಈ ಜಿಲ್ಲೆಗಳ ಜನರಿಗೆ ಸೂಚಿಸಲಾಗಿದೆ. ನಡುವೆ ದಕ್ಷಿಣ ಒಳನಾಡಿನಲ್ಲೂ ಮುಂಗಾರು

ಕರಾವಳಿಯಲ್ಲಿ ಭಾರೀ ಮಳೆ‌ ಮುನ್ಸೂಚನೆ| ಜೂ.27ರಂದು ರೆಡ್ ಅಲರ್ಟ್ ಘೋಷಣೆ Read More »