ಕರಾವಳಿ

ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಚಾಂದಿನಿ| ‘ನೆರವಾಗಿ ಇಲ್ಲ ದಯಾಮರಣ ಕರುಣಿಸಿ’ ಎಂದು ಈಮೇಲ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ನಾವೂರು ಗ್ರಾಮದ ಬಡ ಕುಟುಂಬದ ಚಾಂದಿನಿ ಜಿ.ಡಿ. (33) ಎಂಬುವರು ‘ಹೈಪರ್‌ ಐಜಿಇ ಸಿಂಡ್ರೋಮ್‌’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ವೆಚ್ಚ ಭರಿಸಲು ಸರ್ಕಾರದ ನೆರವು ಕೋರಿದ್ದಾರೆ. ‘ಚಿಕಿತ್ಸೆಗೆ ನೆರವು ನೀಡಲು ಸಾಧ್ಯವಾಗದಿದ್ದರೆ ದಯಾಮರಣವನ್ನಾದರೂ ನೀಡಿ’ ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರಿಗೆ ಇ- ಮೇಲ್‌ ಕಳುಹಿಸಿದ್ದಾರೆ. ‘ನನ್ನ ಕಾಯಿಲೆಗೆ ಊರಿನಲ್ಲಿ ಚಿಕಿತ್ಸೆ ಪಡೆದರೂ ಪ್ರಯೋಜನವಾಗಿರಲಿಲ್ಲ. ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‌ನ

ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಚಾಂದಿನಿ| ‘ನೆರವಾಗಿ ಇಲ್ಲ ದಯಾಮರಣ ಕರುಣಿಸಿ’ ಎಂದು ಈಮೇಲ್ Read More »

ರೆಡ್ ಅಲರ್ಟ್ ಹಿನ್ನೆಲೆ|ಜುಲೈ 9ರಂದು ದ.ಕ ಜಿಲ್ಲೆಯಲ್ಲಿ ಶಾಲೆ-ಪಿಯು ಕಾಲೇಜಿಗೆ ರಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ಜು. 9ರಂದು ರೆಡ್ ಅಲರ್ಟ್ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಮುಲ್ಲೈ‌ ಮುಗಿಲನ್ ಆದೇಶಿಸಿದ್ದಾರೆ. ಮಳೆಯಿಂದಾಗಿ ತಗ್ಗುಪ್ರದೇಶಗಳು ಜಲಾವೃತವಾಗಿದ್ದು, ಅಲ್ಲಲ್ಲಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೇಂದ್ರಸ್ಥಾನ ಬಿಡದಂತೆ ಆದೇಶಿಸಲಾಗಿದ್ದು, ನಾಗರಿಕರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.

ರೆಡ್ ಅಲರ್ಟ್ ಹಿನ್ನೆಲೆ|ಜುಲೈ 9ರಂದು ದ.ಕ ಜಿಲ್ಲೆಯಲ್ಲಿ ಶಾಲೆ-ಪಿಯು ಕಾಲೇಜಿಗೆ ರಜೆ Read More »

ಮತ್ತೆ ಭಾರೀ ಮಳೆ‌ ಸಾಧ್ಯತೆ|ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ| ಮಲೆನಾಡಿನಲ್ಲಿ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಈಗಾಗಲೇ ಶಾಲೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ. ಅಷ್ಟೆ ಅಲ್ಲದೆ ದಕ್ಷಿಣ ಒಳನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಯಲ್ಲಿ ಜು.9 ರಿಂದ 12 ರವರೆಗೆ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ ಏಳು ದಿನಗಳ ಕಾಲ

ಮತ್ತೆ ಭಾರೀ ಮಳೆ‌ ಸಾಧ್ಯತೆ|ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ| ಮಲೆನಾಡಿನಲ್ಲಿ ಆರೆಂಜ್ ಅಲರ್ಟ್ Read More »

ಮಂಗಳೂರು: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಞಳ್ ಇನ್ನಿಲ್ಲ

ಸಮಗ್ರ ನ್ಯೂಸ್: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನರಾಗಿದ್ದಾರೆ. ಉಳ್ಳಾಲ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಫಝಲ್ ಕೋಯಮ್ಮ ತಂಙಲ್ ಉಳ್ಳಾಲ ಖಾಝಿಯಾಗಿದ್ದರು. ಕೇರಳದ ಎಟ್ಟಿಕುಳಂನಲ್ಲಿರುವ ಅವರು ರಾತ್ರಿ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಈಗ ಕೂರತ್ ತಂಙಳ್ ರ ಜನಾಝ ಎಟ್ಟಿಕ್ಕುಳಂ ಸ್ವಂತ ಮನೆಯಲ್ಲಿದ್ದು, ಸಂಜೆ 5 ಗಂಟೆಗೆ ಶೈಖುನಾ ಸುಲ್ತಾನುಲ್ ಉಲಮಾರ ನೇತೃತ್ವದಲ್ಲಿ ಪುತ್ತೂರಿನ ಕೂರತ್ ನಲ್ಲಿ ಜನಾಝ ನಮಾಝ್ ನಡೆಯಲಿದೆ.

ಮಂಗಳೂರು: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಞಳ್ ಇನ್ನಿಲ್ಲ Read More »

ಪಂಜ: ಕಲಾಮಂದಿರ್ ಡಾನ್ಸ್ ಕ್ರಿವ್ ಬೆಳ್ಳಾರೆ ‘ಪಂಜದಲ್ಲಿ ನೃತ್ಯ ತರಗತಿ ಪ್ರಾರಂಭ

ಸಮಗ್ರ ನ್ಯೂಸ್: ಕಲಾ ಮಂದಿರ್ ಡಾನ್ಸ್ ಕ್ರಿವ್ ಬೆಳ್ಳಾರೆ ಇದರ ವತಿಯಿಂದ ಪಂಜ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನೃತ್ಯ ತರಗತಿಗಳನ್ನು ಉದ್ಘಾಟಿಸಿದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಇವರು “ಮಾನಸಿಕ ಮತ್ತು ಶಾರೀರಿಕ ಆರೋಗ್ಯಕ್ಕೆ ಪೂರಕವಾದ ನೃತ್ಯ ತರಬೇತಿ ತರಗತಿಯಿಂದ ಮಕ್ಕಳಿಗೆ ಪ್ರಯೋಜನವಾಗಲಿ” ಎಂದರು. ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ಸಭಾಧ್ಯಕ್ಷತೆ ವಹಿಸಿ “ನೃತ್ಯ ತರಬೇತಿ ಪಡೆದ ನಮ್ಮೂರಿನ ಮಕ್ಕಳು ರಾಜ್ಯ ರಾಷ್ಟ್ರ ಮಟ್ಟದಲ್ಲಿ

ಪಂಜ: ಕಲಾಮಂದಿರ್ ಡಾನ್ಸ್ ಕ್ರಿವ್ ಬೆಳ್ಳಾರೆ ‘ಪಂಜದಲ್ಲಿ ನೃತ್ಯ ತರಗತಿ ಪ್ರಾರಂಭ Read More »

ಕಡಬ: ಪುಳಿಕುಕ್ಕು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿದ ಯುವಕನ ರಕ್ಷಣೆ| ತುಂಬಿ ಹರಿಯುತ್ತಿದ್ದ ನದಿಯಿಂದ ಬಚಾವಾಗಿದ್ದು ಹೇಗೆ?

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ಕುಮಾರಧಾರ ನದಿಯ ಮದ್ಯ ಭಾಗದ ಪೊದೆಯೊಂದರಲ್ಲಿ ಸಿಲುಕಿಕೊಂಡಿದ್ದು ಆಗ್ನಿ ಶಾಮಕ ದಳ ಮತ್ತು ಪೊಲೀಸರ ಕಾರ್ಯಾಚರಣೆಯಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಜುಲೈ 8 ರ ಮುಂಜಾನೆ ನಡೆದಿದೆ. ನಿರಂತರ ಮಳೆಗೆ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು ಪುಳಿಕುಕ್ಕು ಸೇತುವೆ ಮತ್ತು ರೈಲು ಸೇತುವೆ ಮದ್ಯ ಭಾಗದಲ್ಲಿರುವ ಪೊದೆಯೊಂದರಲ್ಲಿ ಯುವಕನೋರ್ವ ಸಿಲುಕಿಕೊಂಡು ರಕ್ಷಣೆಗಾಗಿ ಕೂಗಾಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ರಾತ್ರಿಯಿಂದಲೇ ಕೂಗಾಡುವ ಧ್ವನಿ ಕೇಳುತ್ತಿತ್ತು ಎಂದು

ಕಡಬ: ಪುಳಿಕುಕ್ಕು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿದ ಯುವಕನ ರಕ್ಷಣೆ| ತುಂಬಿ ಹರಿಯುತ್ತಿದ್ದ ನದಿಯಿಂದ ಬಚಾವಾಗಿದ್ದು ಹೇಗೆ? Read More »

ಸುರತ್ಕಲ್: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ| 16 ಜಾನುವಾರುಗಳ ರಕ್ಷಣೆ| ಗೋಮಾಂಸ, ವಾಹನ ವಶ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕೃಷ್ಣಾಪುರ 8ನೇ ಬ್ಲಾಕ್ ಬಳಿ ಮನೆಯಲ್ಲೇ ಭಾರಿ ಅಕ್ರಮ ಕಸಾಯಿಖಾನೆಯನ್ನು ನಡೆಸುತ್ತಿರುವುದು ಭಾನುವಾರ ಪತ್ತೆಯಾಗಿದೆ. ಸ್ಥಳದಲ್ಲಿದ್ದ 16 ಜಾನುವಾರುಗಳನ್ನು ರಕ್ಷಿಸಿರುವ ಪೊಲೀಸರು, ಗೋಮಾಂಸ ಹಾಗೂ ಅದರ ಸಾಗಣೆಗೆ ಬಳಸುತ್ತಿದ್ದ ಆಟೊರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ. ಸುಸಜ್ಜಿತ ಕಾಂಕ್ರಿಟ್ ಮನೆಯೊಂದರಲ್ಲಿ ಜಾನುವಾರುಗಳನ್ನು ಕಡಿದು ಮಾಂಸ ತಯಾರಿಸಿ ಸ್ಥಳೀಯ ಹೋಟೆಲ್‌ಗಳೂ ಸೇರಿದಂತೆ ವಿವಿಧೆಡೆ ಸರಬರಾಜು ಮಾಡಲಾಗುತ್ತಿತ್ತು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರಮುಖರು ನೀಡಿದ ಮಾಹಿತಿ

ಸುರತ್ಕಲ್: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ| 16 ಜಾನುವಾರುಗಳ ರಕ್ಷಣೆ| ಗೋಮಾಂಸ, ವಾಹನ ವಶ Read More »

ಭಾರೀ ಮಳೆ ಹಿನ್ನೆಲೆ; ಇಂದು(ಜು.8) ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಮಂಗಳೂರು ತಾಲೂಕಿನ ಶಾಲಾ, ಪಿಯು ಕಾಲೇಜಿಗೆ ಜುಲೈ 08ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 08/07/224 ರಂದು ರಜೆಯನ್ನು ಘೋಷಿಸಲಾಗಿದೆ.

ಭಾರೀ ಮಳೆ ಹಿನ್ನೆಲೆ; ಇಂದು(ಜು.8) ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಪುತ್ತೂರು: ಒಂಟಿಯಾಗಿ ವಾಸಿಸುತ್ತಿದ್ದ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ(ಜು.7) ಬೆಳಗ್ಗೆ ಪುತ್ತೂರು ತಾಲೂಕಿನ ಆರ್ಯಾಪು ಎಂಬಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಪಂಜಳ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿಶ್ವನಾಥ (32) ಆತ್ಮಹತ್ಯೆ ಮಾಡಿಕೊಂಡಾತ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಿಸಿದ್ದಾರೆ.

ಪುತ್ತೂರು: ಒಂಟಿಯಾಗಿ ವಾಸಿಸುತ್ತಿದ್ದ ಯುವಕ ಆತ್ಮಹತ್ಯೆ Read More »

ಸುಳ್ಯ: ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ

ಸಮಗ್ರ ನ್ಯೂಸ್: ರಾಜಕೀಯ, ಸಾಮಾಜಿಕ ಕ್ಷೇತ್ರದ ಮುಖಂಡ, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭವು ಜುಲೈ 6 ರಂದು ಕೇರ್ಪಳಧ ಬಂಟರ ಭವನದಲ್ಲಿ ನಡೆಯಿತು. ವಿಶೇಷವಾಗಿ ಕೆ.ಆ‌ರ್.ಗೋಪಾಲಕೃಷ್ಣ ಹಾಗೂ ತಂಡದಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಟಿ.ಎಂ.ಶಹೀದ್ ತೆಕ್ಕಿಲ್ ಅವರು ಅಡಿಕೆ ಗಿಡಕ್ಕೆ ನೀರೆರೆದು ಉದ್ಘಾಟಿಸಿ ಮಾತನಾಡಿದರು. ಸುಳ್ಯ ಭಾಗದಲ್ಲಿ ವ್ಯಾಪಕವಾಗಿರುವ ಅಡಿಕೆ ಹಳದಿ ರೋಗದ ಕುರಿತು ಸಮಗ್ರ ಸಂಶೋಧನೆ ಅಗತ್ಯ ಈ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು

ಸುಳ್ಯ: ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ Read More »