ಕರಾವಳಿ

ಭಾರಿ ಮಳೆ ಹಿನ್ನೆಲೆ| ನಾಳೆ(ಜೂ.27)ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ‌ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.27) ಗುರುವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿಗೆ ಆದೇಶ ಹೊರಡಿಸಿದ್ದಾರೆ. ರಜೆ ಪ್ರೌಢಶಾಲೆವರೆಗಿನ ತರಗತಿಗಳಿಗೆ ಮಾತ್ರ ಅನ್ವಯವಾಗಲಿದೆ.

ಭಾರಿ ಮಳೆ ಹಿನ್ನೆಲೆ| ನಾಳೆ(ಜೂ.27)ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ Read More »

ಕುಕ್ಕೆ ಸುಬ್ರಹ್ಮಣ್ಯ: ಮದ್ಯಪಾನ ಮಾಡಿದ್ದ ವ್ಯಕ್ತಿಯ ತಳ್ಳಿದ‌ ಆನೆ ‘ಯಶಸ್ವಿ’

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿಗೆ ಕೆಲವೇ ಸಮಯದ ಮೊದಲು ಈ ಘಟನೆ ನಡೆದಿದೆ. ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿ.ಕೆ.ಶಿ ಯವರನ್ನು ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು. ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಪೋಟೋ ತೆಗೆಯಲು ಬಂದಿದ್ದರು. ಇದೇ ವೇಳೆಗೆ ಸುಬ್ರಹ್ಮಣ್ಯದ ಲಾಡ್ಜ್ ಒಂದರ

ಕುಕ್ಕೆ ಸುಬ್ರಹ್ಮಣ್ಯ: ಮದ್ಯಪಾನ ಮಾಡಿದ್ದ ವ್ಯಕ್ತಿಯ ತಳ್ಳಿದ‌ ಆನೆ ‘ಯಶಸ್ವಿ’ Read More »

ಸುಬ್ರಹ್ಮಣ್ಯ: 9/11A, ಬೆಳೆವಿಮೆ ಸಮಸ್ಯೆ ಪರಿಹರಿಸಲು ಡಿಸಿಎಂ ಗೆ ಮನವಿ

ಸಮಗ್ರ ನ್ಯೂಸ್: ಸಾರ್ವಜನಿಕರು ಹಾಗೂ ರೈತರು ಇದೀಗ 9/11A ಮಾಡಿಸಲು ಮೂಡಾ ಕ್ಕೆ ಹೋಗಬೇಕಾದ ಪರಿಸ್ಥಿತಿ ಬಂದಿದ್ದು ಇದನ್ನು ಮತ್ತೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ತರಬೇಕೆಂದು ಹಾಗೂ ಹವಾಮಾನ ಆಧಾರಿತ ಬೆಲೆ ವಿಮೆ ಇನ್ನೂ ಆದೇಶ ಬರದೆ ಕೃಷಿಕರು ಕಂಗಾಲಾಗಿದ್ದು ಈ ಬಗ್ಗೆ ಕ್ರಮ ವಹಿಸುವಂತೆ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಸುಧಿರ್ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರನ್ನು ಭೇಟಿ ಆಗಿ ಮನವಿ ನೀಡಲಾಯಿತು ಇದಕ್ಕೆ ಸ್ಪಂದಿಸಿದ ಡಿಸಿಎಂ ನಂತರ ಪತ್ರಿಕಾಗೋಷ್ಠಿಯಲ್ಲಿ

ಸುಬ್ರಹ್ಮಣ್ಯ: 9/11A, ಬೆಳೆವಿಮೆ ಸಮಸ್ಯೆ ಪರಿಹರಿಸಲು ಡಿಸಿಎಂ ಗೆ ಮನವಿ Read More »

ಹವಾಮಾನ ವರದಿ| ಕರಾವಳಿಯಲ್ಲಿ ನಿರಂತರ‌ ವರ್ಷಧಾರೆ| ಜೂ.30ರವರೆಗೆ‌ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದ್ದು ರಾಜ್ಯಾದ್ಯಂತ ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದ ಎಲ್ಲಾ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಅನ್ನು ರಾಜ್ಯ ಹವಾಮಾನ ಇಲಾಖೆ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಇನ್ನು ಕೋಟೆ,

ಹವಾಮಾನ ವರದಿ| ಕರಾವಳಿಯಲ್ಲಿ ನಿರಂತರ‌ ವರ್ಷಧಾರೆ| ಜೂ.30ರವರೆಗೆ‌ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ Read More »

ಮಂಗಳೂರು: ಕಾಂಪೌಂಡ್ ಕುಸಿದು ನಾಲ್ವರು ದುರ್ಮರಣ

ಸಮಗ್ರ ನ್ಯೂಸ್: ಮಂಗಳೂರಿನ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮನೆಯೊಳಗೆ ವಾಸ್ತವ್ಯವಿದ್ದ ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತ ದುರ್ದೈವಿಗಳು. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಇಬ್ಬರ ಶವಗಳನ್ನು ಹೊರ ತೆಗೆಯಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ. ಅಬೂಬಕ್ಕರ್

ಮಂಗಳೂರು: ಕಾಂಪೌಂಡ್ ಕುಸಿದು ನಾಲ್ವರು ದುರ್ಮರಣ Read More »

ಬೆಳ್ಳಾರೆ ವಲಯದ ಅಮರ ಪಡ್ನೂರು ದೀಪಶ್ರೀ ಸಂಘದ ಸವಿತಾರವರಿಗೆ ಸುರಕ್ಷಾದ ಚೆಕ್ ಹಸ್ತಾಂತರ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು ಬೆಳ್ಳಾರೆ ವಲಯದ ಅಮರ ಪಡ್ನೂರು ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಸಂಘದ ಸವಿತಾರವರಿಗೆ ಸುರಕ್ಷಾದ ಚೆಕ್ ನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ ಉಪಾಧ್ಯಕ್ಷ ಭುವನೇಶ್ವರಿ ತಾಲೂಕಿನ ಯೋಜನಾಧಿಕಾರಿ ಮಾಧವ, ಬೆಳ್ಳಾರೆ ವಲಯದ ಮೇಲ್ವಿಚಾರಕ ವಿಶಾಲ ಅಮರ ಪಡ್ನೂರು ಒಕ್ಕೂಟದ ಅಧ್ಯಕ್ಷ ವೀಣಾರವರು ಜೊತೆ ಕಾರ್ಯದರ್ಶಿ ಶ್ರೀವಸಂತವರು ಹಾಗೂ ಸೇವಾ ಪ್ರತಿನಿಧಿ ದಿವ್ಯ ರವರು ಪದಾಧಿಕಾರಿ ಶಾಂತಲಾ, ಲಲಿತ, ಚಿತ್ರಕಲಾ, ಶೇಷಮ್ಮ,

ಬೆಳ್ಳಾರೆ ವಲಯದ ಅಮರ ಪಡ್ನೂರು ದೀಪಶ್ರೀ ಸಂಘದ ಸವಿತಾರವರಿಗೆ ಸುರಕ್ಷಾದ ಚೆಕ್ ಹಸ್ತಾಂತರ Read More »

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ಪೂಜೆ ನೆರವೇರಿಸಿದ ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಕುಟುಂಬ ಸಮೇತ ಭೇಟಿ ನೀಡಿ ಮಹಾಪೂಜೆ, ಆಶ್ಲೇಷ ಬಲಿ ಪೂಜೆಯಲ್ಲಿ ಭಾಗಿಯಾದರು. ಕುಟುಂಬ ಸಮೇತರಾಗಿ ಆಗಮಿಸಿದ ಡಿಕೆ ಶಿವಕುಮಾರ್ ಅವರು ಆನೆ ಬಳಿ ಆಶೀರ್ವಾದ ಪಡೆದರು. ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವಾದ್ಯ ಮೇಳ ಕುಂಬ ಕಳಶದೊಂದಿಗೆ ಡಿಕೆಶಿಯನ್ನ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ನಾವು ಹಿಂದೂ ಧರ್ಮದವರು. ನಮ್ಮ ರಾಜ್ಯದಲ್ಲಿ ಎಲ್ಲಾ‌ ಸಂಸ್ಕೃತಿಗಳನ್ನು‌

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ಪೂಜೆ ನೆರವೇರಿಸಿದ ಡಿಸಿಎಂ ಡಿ.ಕೆ ಶಿವಕುಮಾರ್ Read More »

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ನಾಪತ್ತೆಯಾದ ವ್ಯಕ್ತಿಯೊಬ್ಬರ ಶವ ಪಯಸ್ವಿನಿ ನದಿಯಲ್ಲಿ ಪತ್ತೆಯಾದ ಘಟನೆ ಸುಳ್ಯ ಸಮೀಪದ ಭಸ್ಮಡ್ಕ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಕುರುಂಜಿಗುಡ್ಡೆ ನಿವಾಸಿ ಕುಮಾರ್ ಎಂದು ಗುರುತಿಸಲಾಗಿದೆ. ವಿಶೇಷ ಚೇತನರಾದ ಕುಮಾರ್ ಅವರು ಭಾನುವಾರ(ಜೂ.23) ಮಧ್ಯಾಹ್ನದ ನಂತರ ನಾಪತ್ತೆಯಾಗಿದ್ದರು. ಎಲ್ಲಾ ಕಡೆ ಹುಡುಕಾಡಿದರೂ ಅವರ ಸುಳಿವು ಲಭ್ಯವಾಗಿರಲಿಲ್ಲ. ಬಳಿಕ ಭಸ್ಮಡ್ಕ ಎಂಬಲ್ಲಿ ಪಯಸ್ವಿನಿ ನದಿಯ ದಡದಲ್ಲಿ ಅವರ ಚಪ್ಪಲಿ ಪತ್ತೆಯಾಗಿತ್ತು. ಹೀಗಾಗಿ ಸೋಮವಾರ ಬೆಳಗ್ಗಿನಿಂದಲೇ ಅಗ್ನಿಶಾಮಕ ಸಿಬ್ಬಂದಿ, ಮುಳುಗು ತಜ್ಞರ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು.

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ Read More »

ಸುಳ್ಯ:ಎನ್ನೆಂಸಿಯ ಕಾಲೇಜು ವಾರ್ತಾಪತ್ರ “ವಿದ್ಯಾಚೇತನ” ದ ಅನಾವರಣ

ಸಮಗ್ರ ನ್ಯೂಸ್:ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾರ್ತಾಪತ್ರ “ವಿದ್ಯಾಚೇತನ”ದ ಅನಾವರಣ ಕಾರ್ಯಕ್ರಮವು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ವಾರ್ತಾಪತ್ರವನ್ನು ಅನಾವರಣಗೊಳಿಸಿ ಮಾತನಾಡಿ, ಕಾಲೇಜಿನಲ್ಲಿ ಹಮ್ಮಿಕೊಳ್ಳುವ ಕಾರ್ಯಚಟುವಟಿಕೆಗಳ ದಾಖಲೆಯ ದೃಷ್ಟಿಯಲ್ಲಿ ವಾರ್ತಾಪತ್ರ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿ ಇದು ಹೊರಬರಲು ಶ್ರಮಿಸಿದ ಸಂಪಾದಕ ಮಂಡಳಿಯನ್ನು ಶ್ಲಾಘಿಸಿದರು. ವಾರ್ತಾಪತ್ರದ ಕಾರ್ಯನಿರ್ವಾಹಕ ಸಂಪಾದಕಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿ ವಾರ್ತಾಪತ್ರ ಹೊರಬರುವಲ್ಲಿ ಸಹಕರಿಸಿದ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಹೋದ್ಯೋಗಿ ಮಿತ್ರರು ಹಾಗೂ ಸಂಪಾದಕ

ಸುಳ್ಯ:ಎನ್ನೆಂಸಿಯ ಕಾಲೇಜು ವಾರ್ತಾಪತ್ರ “ವಿದ್ಯಾಚೇತನ” ದ ಅನಾವರಣ Read More »

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ| ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ತೀರ್ಮಾನ

ಸಮಗ್ರ ನ್ಯೂಸ್: ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ರಾಜ್ಯ ಧಾರ್ಮಿಕ ಪರಿಷತ್‌ ಸಭೆಯಲ್ಲಿ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಾಧಿಕಾರ ರಚನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅವಧಿ ಮಾರ್ಚ್‌ಗೆ ಕೊನೆಗೊಂಡಿದ್ದು, ಸದ್ಯ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಸಭೆಯಲ್ಲಿ ವ್ಯವಸ್ಥಾಪನ ಸಮಿತಿ ರಚನೆಗೆ ಅಧಿಸೂಚನೆ ಹೊರಡಿಸುವ ನಿರ್ಧಾರ ನಿರೀಕ್ಷೆಯಲ್ಲಿತ್ತು. ಆದರೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ 100 ಕೋಟಿಗೂ ಅಧಿಕ ಆದಾಯ ಬರುವ ಕ್ಷೇತ್ರವಾಗಿರುವುದರಿಂದ ಅಭಿವೃದ್ಧಿ ಪ್ರಾಧಿಕಾರ ಮಾಡುವ

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ| ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ತೀರ್ಮಾನ Read More »