ಕರಾವಳಿ

ಉಪ್ಪಿನಂಗಡಿ: ಮಹಿಳೆ ಕೊಲೆ ಪ್ರಕರಣದಲ್ಲಿ ಹತ್ತನೇ ತರಗತಿ ಬಾಲಕ‌ ಸೆರೆ| ನಡುರಾತ್ರಿಯಲ್ಲಿ ಚಿಕ್ಕಮ್ಮನ ಬಯಸಿ ಬಂದಿದ್ದ ಅಪ್ರಾಪ್ತ!!

ಸಮಗ್ರ ನ್ಯೂಸ್: ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡ ರಾತ್ರಿ ಮೃತಪಟ್ಟಿದ್ದು, ಇದೊಂದು ಕೊಲೆ ಕೃತ್ಯ ಎಂದು ತೀರ್ಮಾನಕ್ಕೆ ಬಂದಿರುವ ಪೊಲೀಸರು ಆರೋಪಿ ಬಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಹೇಮಾವತಿ ಅವರ ಮನೆಯಲ್ಲಿ ರಾತ್ರಿ ತಂಗಿದ್ದ ಅವರ ಅಕ್ಕನ ಮಗ, ಹತ್ತನೇ ತರಗತಿಯ ವಿದ್ಯಾರ್ಥಿ, ಅಪ್ರಾಪ್ತ ಬಾಲಕ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿ ಪ್ರತಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಆರೋಪಿ ಬಾಲಕ […]

ಉಪ್ಪಿನಂಗಡಿ: ಮಹಿಳೆ ಕೊಲೆ ಪ್ರಕರಣದಲ್ಲಿ ಹತ್ತನೇ ತರಗತಿ ಬಾಲಕ‌ ಸೆರೆ| ನಡುರಾತ್ರಿಯಲ್ಲಿ ಚಿಕ್ಕಮ್ಮನ ಬಯಸಿ ಬಂದಿದ್ದ ಅಪ್ರಾಪ್ತ!! Read More »

ಕಾಸರಗೋಡು: ಕ್ವಾರಿ ಹೊಂಡದಲ್ಲಿ ಮುಳುಗಿ‌ ಅವಳಿ ಬಾಲಕರು ದುರ್ಮರಣ

ಸಮಗ್ರ ನ್ಯೂಸ್: 11 ವರ್ಷದ ಅವಳಿ ಸಹೋದರರು ಕ್ವಾರಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಾಸರಗೋಡು ಜಿಲ್ಲೆಯ ಇಲ್ಲಿನ ಚೀಮೇನಿಯ ಕಣಿಯಾಂತೋಳ್ ಎಂಬಲ್ಲಿ ನಡೆದಿದೆ. ಮೃತರನ್ನು ಚೀಮೇನಿಯ ರಾಧಾಕೃಷ್ಣನ್ ಮತ್ತು ಪುಷ್ಪಾ ದಂಪತಿಯ ಅವಳಿ ಮಕ್ಕಳಾದ ಸುದೇವ್ ಮತ್ತು ಶ್ರೀದೇವ್ ಎಂದು ಗುರುತಿಸಲಾಗಿದೆ.‌‌ ಇಬ್ಬರೂ ಚೀಮೇನಿ ಹೈಯರ್ ಸೆಕೆಂಡರಿ ಶಾಲೆಯ ಐದನೇ ತರಗತಿ ವಿದ್ಯಾರ್ಥಿಗಳು. ಸೋಮವಾರ ಮಧ್ಯಾಹ್ನ ಮಕ್ಕಳು ಸೈಕಲ್ ಸಮೇತ ಹೊರಗೆ ಆಟವಾಡಲು ಮನೆಯಿಂದ ಹೊರಟಿದ್ದರು. ಸಂಜೆಯಾದರೂ ಇಬ್ಬರೂ ಮನೆಗೆ ಬಾರದೆ ಇದ್ದಾಗ ಅವರ

ಕಾಸರಗೋಡು: ಕ್ವಾರಿ ಹೊಂಡದಲ್ಲಿ ಮುಳುಗಿ‌ ಅವಳಿ ಬಾಲಕರು ದುರ್ಮರಣ Read More »

ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ bc ಟ್ರಸ್ಟ್ ಪಾಲೇಪ್ಪಾಡಿ ಒಕ್ಕೂಟದ ವತಿಯಿಂದ ಐವರ್ನಾಡು ಸ.ಹಿ.ಪ್ರಾ.ಶಾಲೆಯಲ್ಲಿ ಪರಿಸರ ದಿನಾಚರಣೆ

ಸಮಗ್ರ ನ್ಯೂಸ್: ಶಾಲಾ ವಿದ್ಯಾರ್ಥಿಗಳಿಗೆ ಪರಿಸರಕ್ಕೆ ಸಂಬಂಧಿಸಿದ ಸ್ಪರ್ಧೆ, ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ bc ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯ ಪಾಲೇಪ್ಪಾಡಿ ಒಕ್ಕೂಟದ ವತಿಯಿಂದ ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದಿನ ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಸ್ಪರ್ಧೆ ನಡೆಸಿ ಬಹುಮಾನ ವಿತರಣೆ ಮತ್ತು ಶಾಲೆಯಲ್ಲಿ ಗಿಡ ನಾಟಿ ಮಕ್ಕಳಿಗೆ ಗಿಡವಿತರಣೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕಿನ ಮಾನ್ಯ ಯೋಜನಾಧಿಕಾರಿ ಮಾಧವ ಗೌಡ

ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ bc ಟ್ರಸ್ಟ್ ಪಾಲೇಪ್ಪಾಡಿ ಒಕ್ಕೂಟದ ವತಿಯಿಂದ ಐವರ್ನಾಡು ಸ.ಹಿ.ಪ್ರಾ.ಶಾಲೆಯಲ್ಲಿ ಪರಿಸರ ದಿನಾಚರಣೆ Read More »

ಸುಳ್ಯ: ಕಾರಿನಲ್ಲಿ ಹಿಂದೂ ಹುಡುಗಿ ಜೊತೆ‌ ಮುಸ್ಲಿಂ ಯುವಕ| ಪೊಲೀಸ್ ವಿಚಾರಣೆ ವೇಳೆ ಬಯಲಾಯ್ತು ಅಸಲಿ ಸತ್ಯ!!

ಸಮಗ್ರ ನ್ಯೂಸ್: ಕೇರಳ ಮೂಲದ ಅನ್ಯಕೋಮಿನ ಜೋಡಿಯೊಂದು ಸುಳ್ಯ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸುತ್ತಿರುವ ವೇಳೆ ಹಿಂದೂ ಕಾರ್ಯಕರ್ತರು ಸುಳ್ಯದಲ್ಲಿ ತಡೆದು ನಿಲ್ಲಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಜೂ. 18 ರಂದು ಸಂಜೆ ನಡೆದಿದೆ. ಕೇರಳ ಮೂಲದ ಹಿಂದೂ ಹುಡುಗಿಯೊಬ್ಬಳು ಮನೆಯಲ್ಲಿ ಪೋಷಕರ ಜೊತೆ ಜಗಳವಾಡಿಕೊಂಡು ಅನ್ಯಕೋಮಿನ ಯುವಕನೊಂದಿಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನತ್ತ ತೆರಳುತ್ತಿದ್ದಳು ಎಂದು ಭಾವಿಸಿ ಹಿಂದೂ ಕಾರ್ಯಕರ್ತರು ಸುಳ್ಯದಲ್ಲಿ ‌ತಡೆದು ಆ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದರು. ಪೊಲೀಸ್ ವಿಚಾರಣೆ ವೇಳೆ ಆ ಜೋಡಿ ಈ

ಸುಳ್ಯ: ಕಾರಿನಲ್ಲಿ ಹಿಂದೂ ಹುಡುಗಿ ಜೊತೆ‌ ಮುಸ್ಲಿಂ ಯುವಕ| ಪೊಲೀಸ್ ವಿಚಾರಣೆ ವೇಳೆ ಬಯಲಾಯ್ತು ಅಸಲಿ ಸತ್ಯ!! Read More »

ತಿರುವನಂತಪುರಂ ಅನಂತ ಪದ್ಮನಾಭ ದೇವಾಲಯದ ಮುಖ್ಯ ಅರ್ಚಕರಾಗಿ ಕನ್ನಡಿಗ ನೇಮಕ| ಬೆಳ್ತಂಗಡಿಯ ಕೊಕ್ಕಡ ಗ್ರಾಮದ ನಾಗೇಶರಿಗೆ ಒಲಿದ ಭಾಗ್ಯ

ಸಮಗ್ರ ನ್ಯೂಸ್: ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ. ಇವರು ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿದ್ದು, ದಿ. ಸುಬ್ರಾಯ ತೋಡ್ತಿಲ್ಲಾಯ ಮತ್ತು ದಿ.ಯಶೋಧ ದಂಪತಿಗಳ ಪುತ್ರರಾಗಿದ್ದಾರೆ. ಹಿಂದೆ ಸುಬ್ರಾಯ ತೋಡ್ತಿಲ್ಲಾಯರು ಕೂಡ ಇದೇ ದೇವಸ್ಥಾನದಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರ ಅಜ್ಜ ದಿ.ನಾರಾಯಣ ತೋಡ್ತಿಲ್ಲಾಯರು

ತಿರುವನಂತಪುರಂ ಅನಂತ ಪದ್ಮನಾಭ ದೇವಾಲಯದ ಮುಖ್ಯ ಅರ್ಚಕರಾಗಿ ಕನ್ನಡಿಗ ನೇಮಕ| ಬೆಳ್ತಂಗಡಿಯ ಕೊಕ್ಕಡ ಗ್ರಾಮದ ನಾಗೇಶರಿಗೆ ಒಲಿದ ಭಾಗ್ಯ Read More »

ಸುಳ್ಯ: ಬೈಕ್ – ಇನ್ನೋವಾ ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಬೈಕ್ ಮತ್ತು ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸುಳ್ಯದ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಜೂ.17ರಂದು ಸಂಜೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಅಲ್ಪ ಸ್ಪಲ್ಪ ಗಾಯಗಳಾಗಿದ್ದು, ಇನ್ನೋವಾ ಮತ್ತು ಬೈಕ್ ಜಖಂಗೊಂಡಿದೆ.

ಸುಳ್ಯ: ಬೈಕ್ – ಇನ್ನೋವಾ ನಡುವೆ ಮುಖಾಮುಖಿ ಡಿಕ್ಕಿ Read More »

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗಿಲ್ಲ‌ ಸೂಕ್ತ ರಕ್ಷಣೆ| ಒಳರೋಗಿಯಾಗಿ ದಾಖಲಾದವರು ಹೊರಗೆ!!

ಸಮಗ್ರ ನ್ಯೂಸ್: ಇದೊಂದು ನಿಜಕ್ಕೂ ಶಾಕ್ ತರಿಸುವ ಸಂಗತಿ. ಈ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದವರು ಯಾವಾಗ ಬೇಕಾದರೂ, ಎಲ್ಲಿಗೆ ಬೇಕಾದರೂ ಹೋಗಿ ಬರಬಹುದು! ಇಂಥದ್ದೊಂದು ಪರಿಸ್ಥಿತಿ ಇರುವುದು ಸುಳ್ಯ ತಾಲೂಕಿನ ಸುಳ್ಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಂದರೆ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ..! ಹೌದು, ಇಲ್ಲಿ ದಾಖಲಾದ ರೋಗಿಗಳು ಯಾವೂದೇ ಸುರಕ್ಷತೆಯಿಲ್ಲ. ರೋಗಿಯ ಸಹಾಯಕರು ಆತನನ್ನು ಬಿಟ್ಟು ಆಚೀಚೆ ಹೋದರೆ ರೋಗಿಗಳು ಎದ್ದು ಹೊರಗಡೆ ಹೋಗಬಹುದು. ಕೈಯಲ್ಲಿರುವ ಡ್ರಿಪ್ಸ್ ಪೈಪ್ ಸಹಿತ ಪೇಟೆಗೂ ಹೋಗಿ ಬರಬಹುದು. ಇದನ್ನು ಇಲ್ಲಿ

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗಿಲ್ಲ‌ ಸೂಕ್ತ ರಕ್ಷಣೆ| ಒಳರೋಗಿಯಾಗಿ ದಾಖಲಾದವರು ಹೊರಗೆ!! Read More »

ಕೊರಗಜ್ಜನ ಹೆಸರಲ್ಲಿ ವಂಚನೆ; ನಕಲಿ‌ ಖಾತೆ ಸೃಷ್ಟಿಸಿ ದೇಣಿಗೆ ಸಂಗ್ರಹ

ಸಮಗ್ರ ನ್ಯೂಸ್: ತುಳುನಾಡಿನ ಆರಾಧನ ದೈವ ಕೊರಗಜ್ಜ ಅಂದರೆ ಅಷ್ಟು ನಂಬಿಕೆ. ಏನೇ ಕಷ್ಟ ಬಂದರು ಅಜ್ಜನನ್ನು ನೆನೆದರೆ ಪರಿಹಾರವಾಗುತ್ತದೆ. ಆದ್ರೆ, ಇದೀಗ ಕೆಲ ವಂಚಕರು ಇದೇ ಕೊರಗಜ್ಜನ ಹೆಸರಿನಲ್ಲಿ ಭಕ್ತರನ್ನು ವಂಚನೆ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ‘ಡಿವೊಟೀಸ್ ಆಫ್ ಕುತ್ತಾರು ಕೊರಗಜ್ಜ’ ಎಂಬ ಖಾತೆ ತೆರದು ಅದರಲ್ಲಿ ಅನ್ನದಾನ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಮಂಗಳೂರು ತಾಲೂಕಿನ ಆದಿಸ್ಥಳ ಕುತ್ತಾರು ಕೊರಗಜ್ಜ ಸನ್ನಿಧಾನ. ಇಲ್ಲಿನ ಫೋಟೋ ಮತ್ತು ಹೆಸರನ್ನು ಬಳಸಿಕೊಂಡು ದೈವಸ್ಥಾನದ ವೆಬ್

ಕೊರಗಜ್ಜನ ಹೆಸರಲ್ಲಿ ವಂಚನೆ; ನಕಲಿ‌ ಖಾತೆ ಸೃಷ್ಟಿಸಿ ದೇಣಿಗೆ ಸಂಗ್ರಹ Read More »

ವಿದ್ಯಾಮಾತಾ ಅಕಾಡೆಮಿ ಸುಳ್ಯ ಶಾಖೆಯಲ್ಲಿ ಕಂಪ್ಯೂಟರ್ ತರಗತಿ ಪ್ರಾರಂಭ| ಗ್ರಾಮೀಣ ಸರಕಾರಿ ಅಧಿಕಾರಿಗಳ ಬರವನ್ನು ವಿ. ಅಕಾಡೆಮಿ ನೀಗಿಸುತ್ತಿದೆ; ಲ.ವೀರಪ್ಪ ಕಣ್ಕಲ್

ಸಮಗ್ರ ನ್ಯೂಸ್: ಇಂದಿನ ಯುವ ಪೀಳಿಗೆಯ ಜೀವನದ ಆಶಾಕಿರಣವಾಗಿ 130ಕ್ಕೂ ಅಧಿಕ ಸ್ಪರ್ಧಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಿ ಸರಕಾರಿ ಉದ್ಯೋಗ ಲಭಿಸುವಂತೆ ಮಾಡಿದ ವಿದ್ಯಾಮಾತಾ ಅಕಾಡೆಮಿಯು ಕಳೆದ ಕೆಲವು ತಿಂಗಳುಗಳ ಹಿಂದೆ ತನ್ನ ಶಾಖೆಯನ್ನು ಸುಳ್ಯಕ್ಕೆ ವಿಸ್ತರಿಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಗೆ ಸಂಬಂಧಿಸಿದಂತೆ ತರಬೇತಿಯನ್ನು ನೀಡುತ್ತಾ ಸುಳ್ಯದ ಹೃದಯ ಭಾಗದಲ್ಲಿ ಕಾರ್ಯಾಚರಿಸುತಿದ್ದು, ಇದೀಗ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಜೊತೆಗೆ ಕೌಶಲ್ಯಯುಕ್ತ ಉದ್ಯೋಗಾಧರಿತವಾದ ಕಂಪ್ಯೂಟರ್ ಶಿಕ್ಷಣವನ್ನು ಪ್ರಾರಂಭಿಸಿದೆ. ಜೂನ್ 10ರಂದು ಸರಳವಾಗಿ ನಡೆದ ಕಂಪ್ಯೂಟರ್ ತರಗತಿಗಳ

ವಿದ್ಯಾಮಾತಾ ಅಕಾಡೆಮಿ ಸುಳ್ಯ ಶಾಖೆಯಲ್ಲಿ ಕಂಪ್ಯೂಟರ್ ತರಗತಿ ಪ್ರಾರಂಭ| ಗ್ರಾಮೀಣ ಸರಕಾರಿ ಅಧಿಕಾರಿಗಳ ಬರವನ್ನು ವಿ. ಅಕಾಡೆಮಿ ನೀಗಿಸುತ್ತಿದೆ; ಲ.ವೀರಪ್ಪ ಕಣ್ಕಲ್ Read More »

ಮರಕಡಿಯುವ ವೇಳೆ‌ ಬಿದ್ದು ಗಾಯಗೊಂಡ ಗಾಯಾಳುವಿನ ಚಿಕಿತ್ಸೆಗೆ ನೆರವಾಗುವಿರಾ?

ಸಮಗ್ರ ನ್ಯೂಸ್: ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಯ ಪುಚ್ಚೆಹಿತ್ಲು ನಿವಾಸಿ ವೃತ್ತಿಪರ ಆಟೋ ಚಾಲಕ ವಿಶ್ವನಾಥ್ ಗೌಡ ಪುಚ್ಚೆಹಿತ್ತಿಲುರವರ ಚಿಕಿತ್ಸೆಗೆ ನೆರವಾಗಲು ಅವರ ಹಿತೈಷಿಗಳು ಮನವಿ ಮಾಡಿದ್ದಾರೆ. ದಿನಗೂಲಿ ಕಾರ್ಮಿಕನಾಗಿ ದುಡಿಯುತ್ತಾ ಕುಟುಂಬಕ್ಕೆ ಆಸರೆಯಾಗಿದ್ದ ಇವರ ಚಿಕಿತ್ಸಾ ವೆಚ್ಚ 5 ಲಕ್ಷ ರೂಪಾಯಿಯಷ್ಟಾಗಿದೆ. ದುಬಾರಿ ವೆಚ್ಚವನ್ನು ಕುಟುಂಬಕ್ಕೆ ಭರಿಸಲು ತುಂಬಾ ಕಷ್ಟಕರವಾದ ಈ ಸಂದರ್ಭದಲ್ಲಿ ದಾನಿಗಳು ಕೈ ಜೋಡಿಸುವಂತೆ ವಿನಂತಿಸಿದ್ದಾರೆ. ಹೃದಯವಂತ ಓದುಗರು ಸಹಾಯಹಸ್ತ

ಮರಕಡಿಯುವ ವೇಳೆ‌ ಬಿದ್ದು ಗಾಯಗೊಂಡ ಗಾಯಾಳುವಿನ ಚಿಕಿತ್ಸೆಗೆ ನೆರವಾಗುವಿರಾ? Read More »