ಬೋಳಿಯಾರ್ ಘಟನೆ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ ಎಸ್ಡಿಪಿಐ ನಾಯಕರ ನಿಯೋಗ
ಸಮಗ್ರ ನ್ಯೂಸ್: ವಿಜಯೋತ್ಸವ ಹೆಸರಿನಲ್ಲಿ ಇತ್ತೀಚಿಗೆ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಉಳ್ಳಾಲ ತಾಲೂಕಿನ ಬೋಳಿಯಾರ್ ಮಸೀದಿಯ ಮುಂಭಾಗದಲ್ಲಿ ಅಕ್ರಮ ಕೂಟ ಕಟ್ಟಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಪರಿಣಾಮ ಉಂಟಾದ ಅಹಿತಕರ ಘಟನೆಯ ಹೆಸರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಹಲವಾರು ಮಂದಿ ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ನೆಪದಲ್ಲಿ ಮನೆಗಳಿಗೆ ದಾಳಿ ನಡೆಸಿದ ಪೊಲೀಸರು ಹಲವಾರು ಯುವಕರನ್ನು, ಮಹಿಳೆಯರನ್ನು ಠಾಣೆಗೆ ಕರೆದೊಯ್ದು ಎರಡು, ಮೂರು ದಿನಗಳ ಕಾಲ ಠಾಣೆಯಲ್ಲಿ ಕೂಡಿಹಾಕಿ ಮಾನಸಿಕ ಹಿಂಸೆ ನೀಡಿದ್ದಾರೆ. ಈ […]









