ಕರಾವಳಿ

ಬೋಳಿಯಾರ್ ಘಟನೆ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ ಎಸ್‌ಡಿಪಿಐ ನಾಯಕರ ನಿಯೋಗ

ಸಮಗ್ರ ನ್ಯೂಸ್: ವಿಜಯೋತ್ಸವ ಹೆಸರಿನಲ್ಲಿ ಇತ್ತೀಚಿಗೆ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಉಳ್ಳಾಲ ತಾಲೂಕಿನ ಬೋಳಿಯಾರ್ ಮಸೀದಿಯ ಮುಂಭಾಗದಲ್ಲಿ ಅಕ್ರಮ ಕೂಟ ಕಟ್ಟಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಪರಿಣಾಮ ಉಂಟಾದ ಅಹಿತಕರ ಘಟನೆಯ ಹೆಸರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಹಲವಾರು ಮಂದಿ ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ನೆಪದಲ್ಲಿ ಮನೆಗಳಿಗೆ ದಾಳಿ ನಡೆಸಿದ ಪೊಲೀಸರು ಹಲವಾರು ಯುವಕರನ್ನು, ಮಹಿಳೆಯರನ್ನು ಠಾಣೆಗೆ ಕರೆದೊಯ್ದು ಎರಡು, ಮೂರು ದಿನಗಳ ಕಾಲ ಠಾಣೆಯಲ್ಲಿ ಕೂಡಿಹಾಕಿ ಮಾನಸಿಕ ಹಿಂಸೆ ನೀಡಿದ್ದಾರೆ. ಈ […]

ಬೋಳಿಯಾರ್ ಘಟನೆ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ ಎಸ್‌ಡಿಪಿಐ ನಾಯಕರ ನಿಯೋಗ Read More »

ಹೊರಗಿನವರು ಬಾಯಿ ಮುಚ್ಕೊಂಡಿದ್ರೆ ಒಳ್ಳೇದು| ನಮ್ಮೂರ ಸಮಸ್ಯೆ ನಾವೇ ಸರಿ ಮಾಡ್ಕೊಳ್ತೇವೆ| ಬೊಳಿಯಾರ್ ಘಟನೆ ಬಗ್ಗೆ ಸ್ಪೀಕರ್ ಖಾದರ್‌ ಖಡಕ್ ಎಚ್ಚರಿಕೆ

ಸಮಗ್ರ ನ್ಯೂಸ್: ಬೋಳಿಯಾರ್​​ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಈ ಪ್ರಕರಣವನ್ನು ದೊಡ್ಡದು ಮಾಡುವವರೇ ದೇಶದ್ರೋಹಿಗಳು ಎಂದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಬೋಳಿಯಾರ್ ಎಂಬುದು ಸಹೋದರತೆ ಇರುವ ಊರು. ಕೆಲವೇ ಕೆಲವು ಯುವಕರಿಂದ ಅಲ್ಲಿ ಕೆಟ್ಟ ಹೆಸರು ಬಂದಿದೆ. ಅದನ್ನು ಅಲ್ಲಿನವರು, ಊರಿನವರೇ ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ. ದಯವಿಟ್ಟು ಹೊರಗಿನವರು ಯಾರೂ ಶಾಂತಿ‌ ಕೆಡಿಸಬೇಡಿ. ಹೊರಗಿನವರು ಬಾಯಿ ಮುಚ್ಚಿ ಕೂರುವುದೇ ದೇಶ ಪ್ರೇಮ. ಹೊರಗಿನ ಎಲ್ಲರೂ

ಹೊರಗಿನವರು ಬಾಯಿ ಮುಚ್ಕೊಂಡಿದ್ರೆ ಒಳ್ಳೇದು| ನಮ್ಮೂರ ಸಮಸ್ಯೆ ನಾವೇ ಸರಿ ಮಾಡ್ಕೊಳ್ತೇವೆ| ಬೊಳಿಯಾರ್ ಘಟನೆ ಬಗ್ಗೆ ಸ್ಪೀಕರ್ ಖಾದರ್‌ ಖಡಕ್ ಎಚ್ಚರಿಕೆ Read More »

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ| ಜೈಲುಪಾಲಾಗಿದ್ದ ಆರೋಪಿಗಳಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆರೋಪಿ ಶಶಿರಾಜ್ ಶೆಟ್ಟಿ ಗೆ 25 ದಿನಗಳ ಬಳಿಕ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅದರಂತೆ ನಾಪತ್ತೆಯಾಗಿದ್ದ ಮತ್ತೊಬ್ಬ ಆರೋಪಿ ಪ್ರಮೋದ್ ದಿಡುಪೆಗೂ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮೇ.18 ರಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರಕರಣದ ಆರೋಪಿಯಾದ ಶಶಿರಾಜ್ ಶೆಟ್ಟಿಯನ್ನು ಮೇ.18

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ| ಜೈಲುಪಾಲಾಗಿದ್ದ ಆರೋಪಿಗಳಿಗೆ ಜಾಮೀನು ಮಂಜೂರು Read More »

ಪುತ್ತೂರು: ಹಾಡುಹಗಲೇ ವ್ಯಕ್ತಿ ಮೇಲೆ ಚೂರಿ ಇರಿತ| ಗಾಯಾಳು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಹಾಡುಹಗಲೇ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಜೂ.13ರಂದು ಪುತ್ತೂರು ಕೋರ್ಟ್ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಗುಣಕರ ಶೆಟ್ಟಿ ಮತ್ತು ಸದಾಶಿವ ಪೈ ಎಂಬ ಇಬ್ಬರ ನಡುವೆ ಗಲಾಟೆ ನಡೆದಿದ್ದು, ನಗರದ ದರ್ಬೆ ನಿವಾಸಿ ಸದಾಶಿವ ಪೈ ಚೂರಿ ಇರಿತಕ್ಕೊಳಗಾಗಿದ್ದಾರೆ. ಚೂರಿ ಇರಿತದಿಂದ ಗಾಯಗೊಂಡ ಸದಾಶಿವ ಅವರನ್ನು ಪುತ್ತೂರು‌ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನ ಪಾರ್ಕಿಂಗ್ ವಿಚಾರದಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಪುತ್ತೂರು: ಹಾಡುಹಗಲೇ ವ್ಯಕ್ತಿ ಮೇಲೆ ಚೂರಿ ಇರಿತ| ಗಾಯಾಳು ಆಸ್ಪತ್ರೆಗೆ ದಾಖಲು Read More »

ಕುಕ್ಕೆ ಸುಬ್ರಹ್ಮಣ್ಯ: ಹೊರಾಂಗಣ ಉತ್ಸವಾದಿಗಳು ಸಮಾಪ್ತಿ| ಒಳಾಂಗಣ ಪ್ರವೇಶಿಸಿದ ಕುಕ್ಕೆ ಪುರಾಧೀಶ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀ ದೇವರ ಹೊರಾಂಗಣ ಉತ್ಸವಾದಿಗಳು ಬುಧವಾರ ತೆರೆಕಂಡವು. ಜೇಷ್ಠ ಶುದ್ಧ ಷಷ್ಠಿಯ ದಿನ ಹೊರಾಂಗಣದಲ್ಲಿ ಪಾಲಕಿ ಮತ್ತು ಬಂಡಿ ಉತ್ಸವ ನೆರವೇರಿದ ಬಳಿಕ ದೇವರು ಒಳಾಂಗಣ ಪ್ರವೇಶಿಸುವುದರೊಂದಿಗೆ ನಿತ್ಯೋತ್ಸವ ಸಂಪನ್ನವಾಯಿತು. ಬಳಿಕ ಒಳಾಂಗಣದ ಕಟ್ಟೆಯಲ್ಲಿ ಪೂಜೆ ಮತ್ತು ವಸಂತ ಪೂಜೆ, ಪಂಚಾಂಗ ಶ್ರವಣ ನೆರವೇರಿತು. ತದನಂತರ ಫಲವಸ್ತುಗಳನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ವಿತರಿಸಲಾಯಿತು. ಊರ ಮತ್ತು ಪರವೂರ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಇನ್ನು ದೀಪಾವಳಿ ಅಮಾವಾಸ್ಯೆಯ ತನಕ ದೇವಸ್ಥಾನದಲ್ಲಿ ಹರಕೆ ಉತ್ಸವ

ಕುಕ್ಕೆ ಸುಬ್ರಹ್ಮಣ್ಯ: ಹೊರಾಂಗಣ ಉತ್ಸವಾದಿಗಳು ಸಮಾಪ್ತಿ| ಒಳಾಂಗಣ ಪ್ರವೇಶಿಸಿದ ಕುಕ್ಕೆ ಪುರಾಧೀಶ Read More »

ಮಂಗಳೂರಿನ ಮುಕ್ಕದಲ್ಲಿ ಮುಸ್ಲಿಂ ಯುವಕರೊಂದಿಗೆ ಸಿಕ್ಕಿಬಿದ್ದ ಹಿಂದೂ ಯುವತಿ!!

ಸಮಗ್ರ ನ್ಯೂಸ್: ಇಬ್ಬರು ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಸದ್ಯ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ಮುಕ್ಕದಲ್ಲಿ ನಡೆದಿದೆ. ಮುಕ್ಕ ಸಮೀಪ ಒಂದು ಕಾರಿನಲ್ಲಿ ಇಬ್ಬರು ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸ್ಕೂಲ್ ಬಸ್ ಡ್ರೈವರ್ ಜೊತೆ ಜಗಳವಾಡುತ್ತ ಹಿಗ್ಗಾಮುಗ್ಗಾ ಬೈದಾಡುತ್ತಿದ್ದು, ಘಟನೆ ನಡೆಯುತ್ತಿದ್ದಂತೆ ಸ್ಥಳದಿಂದ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಈ ವೇಳೆ ಕಾರು ಕೈ ಕೊಟ್ಟಿದೆ. ಸ್ಥಳದಲ್ಲಿ ಜನ ಸೇರುತ್ತಿದ್ದಂತೆ ಇದು ಅನ್ಯಕೋಮಿನ ಜೋಡಿ ಎಂಬುದು

ಮಂಗಳೂರಿನ ಮುಕ್ಕದಲ್ಲಿ ಮುಸ್ಲಿಂ ಯುವಕರೊಂದಿಗೆ ಸಿಕ್ಕಿಬಿದ್ದ ಹಿಂದೂ ಯುವತಿ!! Read More »

ಬೆಳ್ಳಾರೆ: ಮಹಿಳೆಯ ತಲೆಗೆ ಕಲ್ಲೆತ್ತಿ‌ ಹಾಕಿ ಕೊಲೆಗೈದ ಪ್ರಕರಣ| ಮದ್ಯದ ಅಮಲಲ್ಲಿ ನಡೆದಿತ್ತು ಹತ್ಯೆ!!

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯ ಎಪಿಎಂಸಿ ಮಾರುಕಟ್ಟೆಯಲ್ಲಿ ಮಹಿಳೆಯ ಕೊಲೆಗೈದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬೆಳ್ಳಾರೆಯ ಪಾಟಾಜೆಯ ನಳಿನಿ ಅವರನ್ನು ರವಿವಾರ ರಾತ್ರಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಲೆ ಆರೋಪಿ ಕಲ್ಮಡ್ಕದ ಜೋಗಿಯಡ್ಕದ ವೆಂಕಪ್ಪ ಅವರ ಪುತ್ರ ಜಯರಾಮ ನಾಯ್ಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ:ಬೆಳ್ಳಾರೆ ಗ್ರಾಮದ ಪಾಟಾಜೆ ನಿವಾಸಿ ಸುಂದರ ಅವರ ಪತ್ನಿ ನಳಿನಿ (55) ಅವರನ್ನು

ಬೆಳ್ಳಾರೆ: ಮಹಿಳೆಯ ತಲೆಗೆ ಕಲ್ಲೆತ್ತಿ‌ ಹಾಕಿ ಕೊಲೆಗೈದ ಪ್ರಕರಣ| ಮದ್ಯದ ಅಮಲಲ್ಲಿ ನಡೆದಿತ್ತು ಹತ್ಯೆ!! Read More »

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಡಾ. ಎಸ್.ಪಿ. ಬಾಲಸುಬ್ರಮಣ್ಯಂ ಸಂಗೀತ ಸಂಭ್ರಮ

ಸಮಗ್ರ ನ್ಯೂಸ್: ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಸ್ವರ ಮಾಂತ್ರಿಕ, ಗಾನಗಂಧರ್ವ, ಪದ್ಮಭೂಷಣ ಡಾ. ಎಸ್.ಪಿ. ಬಾಲಸುಬ್ರಮಣ್ಯಂ ಅವರ 78ನೇ ಜನ್ಮದಿನಾಚರಣೆಯ ಪ್ರಯುಕ್ತ ಎಸ್.ಪಿ.ಬಿ. ಸಂಗೀತ ಸಂಭ್ರಮ ಕಾರ್ಯಕ್ರಮವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದ ವೇದಿಕೆಯಲ್ಲಿ ಜೂನ್ 9ರಂದು ನಡೆಸಲಾಯಿತು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷರು, ಗಾಯಕರು ಮತ್ತು ಚಿತ್ರ ನಿರ್ದೇಶಕ ಹೆಚ್. ಭೀಮರಾವ್ ವಾಷ್ಠರ್ ರವರು ವಹಿಸಿ, ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸಾಧನೆ, ವ್ಯಕ್ತಿತ್ವದ ಗುಣಗಾನ ಮಾಡಿದರು.

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಡಾ. ಎಸ್.ಪಿ. ಬಾಲಸುಬ್ರಮಣ್ಯಂ ಸಂಗೀತ ಸಂಭ್ರಮ Read More »

ಬಂಟ್ವಾಳ: ವಿಜಯೋತ್ಸವದ ವೇಳೆ ಚೂರಿ ಇರಿತ ಪ್ರಕರಣ| ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಕೊಣಾಜೆ ಠಾಣಾ ವ್ಯಾಪ್ತಿಯ ಬೊಳಿಯಾರ್ ನಲ್ಲಿ ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣದಲ್ಲಿ ಆರೋಪಿಗಳನ್ನ ಬಂಧಿಸಲಾಗಿದೆ. ಜೊತೆಗೆ ಪ್ರಚೋದನಾಕಾರಿ ಘೋಷಣೆ ಕೂಗಿದ ಆರೋಪದಡಿ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಘಟನೆ ಬಗ್ಗೆ ಬಿಜೆಪಿ ಕಾರ್ಯಕರ್ತರ ವಿರುದ್ಧವೂ ದೂರು ನೀಡಿರುವ ಬೋಳಿಯಾರ್ ಜುಮ್ಮಾ ಮಸೀದಿ ಅಧ್ಯಕ್ಷ ಪಿ.ಕೆ.ಅಬ್ದುಲ್ಲ, ನಿನ್ನೆ ರಾತ್ರಿ 8.50

ಬಂಟ್ವಾಳ: ವಿಜಯೋತ್ಸವದ ವೇಳೆ ಚೂರಿ ಇರಿತ ಪ್ರಕರಣ| ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ Read More »

ಎಸ್ಡಿಪಿಐ ಕಡಬ ಬ್ಲಾಕ್ ನ ಕಡಬ ಪಟ್ಟಣ ಪಂಚಾಯತ್ ಸಮಿತಿಯ ಸಭೆ| ನೂತನ ಪದಾಧಿಕಾರಿಗಳ ಆಯ್ಕೆ

ಸಮಗ್ರ ನ್ಯೂಸ್: ಎಸ್ಡಿಪಿಐ (SDPI) ಕಡಬ ಬ್ಲಾಕ್ ನ ಕಡಬ ಪಟ್ಟಣ ಪಂಚಾಯತ್ ಸಮಿತಿಯ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಬ್ಲಾಕ್ ಸಮಿತಿಯ ಅಧ್ಯಕ್ಷ ಹಾರೀಸ್ ಕಡಬ ರವರ ನೇತೃತ್ವದಲ್ಲಿ ಜೂನ್ 8ರಂದು ಕಲಾರದಲ್ಲಿ ನಡೆಯಿತು. ಸಭೆಯಲ್ಲಿ ಕಡಬ ಪಟ್ಟಣ ಪಂಚಾಯತ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಅಧ್ಯಕ್ಷರಾಗಿ ನವಾಜ್ ಕಡಬ, ಕಾರ್ಯದರ್ಶಿಯಾಗಿ ಶಕೀಲ್ ರಹೀಮನ್ ಕಳಾರ, ಕೋಶಾಧಿಕಾರಿಯಾಗಿ ಕಮರುದ್ದಿನ್ ಅಲೆಕ್ಕಾಡಿ,ಉಪಾಧ್ಯಕ್ಷರಾಗಿ ರಫೀಕ್ ಕಳಾರ, ಜೊತೆ ಕಾರ್ಯದರ್ಶಿ ಯಾಗಿ ಆಶೀಕ್ ಕಡಬಇವರನ್ನು ಆರಿಸಲಾಯಿತು. ಸಭೆಯಲ್ಲಿ

ಎಸ್ಡಿಪಿಐ ಕಡಬ ಬ್ಲಾಕ್ ನ ಕಡಬ ಪಟ್ಟಣ ಪಂಚಾಯತ್ ಸಮಿತಿಯ ಸಭೆ| ನೂತನ ಪದಾಧಿಕಾರಿಗಳ ಆಯ್ಕೆ Read More »