ಕರಾವಳಿ

ನೆಲ್ಯಾಡಿ: ಕಾರು ಮತ್ತು ಬೈಕ್‌ ನಡುವೆ ಅಪಘಾತ| ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೈಕ್ ಹಾಗೂ ಮಹೀಂದ್ರಾ ಎಕ್ಸ್’ಯುವಿ 700 ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ಉದನೆ ಸಮೀಪದ ನೇಲ್ಯಡ್ಕ ನಾಳಾಲು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಹೀಂದ್ರಾ ಎಕ್ಸ್’ಯುವಿ 700 ಕಾರು ಹಾಗೂ ಬೈಕ್ ನಡುವೆ ನೇಲ್ಯಡ್ಕ ಸಮೀಪ ಅಪಘಾತ ಸಂಭವಿಸಿದೆ.

ನೆಲ್ಯಾಡಿ: ಕಾರು ಮತ್ತು ಬೈಕ್‌ ನಡುವೆ ಅಪಘಾತ| ಸವಾರ ಸ್ಥಳದಲ್ಲೇ ಸಾವು Read More »

ನೀಟ್ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ಮಂಗಳೂರಿನ ಅರ್ಜುನ್

ಸಮಗ್ರ ನ್ಯೂಸ್: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್-ಯುಜಿ) ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್ (720ಕ್ಕೆ 720 ಅಂಕ) ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ದೆಹಲಿಯ ಏಮ್ಸ್‌ನಲ್ಲಿ ವೈದ್ಯಕೀಯ ಶಿಕ್ಷಣ ಓದುವುದು ನನ್ನ ಕನಸಾಗಿತ್ತು. ಕಾಲೇಜು ವೇಳಾಪಟ್ಟಿಯನ್ನು ಚಾಚೂತಪ್ಪದೆಅನುಸರಿಸುತ್ತಿದ್ದೆ. ಯಾವುದೇ ಅನುಮಾನ ಇದ್ದರೂ ಉಪನ್ಯಾಸಕರು ಪರಿಹರಿಸುತ್ತಿದ್ದರು. ಕಠಿಣ ಪರಿಶ್ರಮ ಮತ್ತು ಏಕಾಗ್ರತೆಯ ಓದು ಗುರಿ ಸಾಧನೆಗೆ ಸಹಕಾರಿಯಾಯಿತು’ ಎಂದು ಅರ್ಜುನ್ ಪ್ರತಿಕ್ರಿಯಿಸಿದ್ದಾರೆ. ಅರ್ಜುನ್ ತಂದೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ

ನೀಟ್ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ಮಂಗಳೂರಿನ ಅರ್ಜುನ್ Read More »

ಪಟಾಕಿ ಸಿಡಿಸಿದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತಲ್ವಾರ್ ನಿಂದ ಹಲ್ಲೆ ನಡೆಸಿದ ಘಟನೆ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಳದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ(33) ಹಲ್ಲೆಗೊಳಾಗಾದವರು. ಕಳೆಂಜದ ಕುಶಲಪ್ಪ ಗೌಡ ಕಜೆ ಹಲ್ಲೆ ಆರೋಪಿ. ಈತ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ. ರಾಜೇಶ್‌ಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಪಟಾಕಿ ಸಿಡಿಸಿದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೊಬ್ಬ ಆರೋಪಿ ಮುಂಬೈನಲ್ಲಿ ಬಂಧನ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಕ್ಕೆ ಹಾರಲು ಯತ್ನಿಸುತ್ತಿದ್ದ ಮತ್ತೊಬ್ಬ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಲಾಗಿದೆ. ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಬಂಧಿತ ಆರೋಪಿ. ರಿಯಾಜ್ ಯೂಸಫ್ ಹಾರಳ್ಳಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಮಂಗಳವಾರ ಬಂಧಿಸಿದೆ. ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಕಳೆದ ತಿಂಗಳು ಮನ್ಸೂರ್ ಪಾಷಾ ಜತೆಗೆ ತಲೆಮರೆಸಿಕೊಂಡಿದ್ದ ಮುಸ್ತಫಾ ಪೈಚಾರ್ ನನ್ನು ಬಂಧಿಸಿದ ಒಂದು ತಿಂಗಳ ನಂತರ ಈ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೊಬ್ಬ ಆರೋಪಿ ಮುಂಬೈನಲ್ಲಿ ಬಂಧನ Read More »

ದ.ಕ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಗೆ ತಿರುವಳ್ಳೂರ್ ನಲ್ಲಿ ಭರ್ಜರಿ ಜಯ

ಸಮಗ್ರ ನ್ಯೂಸ್: ಐಎಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿ ಬಳಿಕ ರಾಜಕೀಯ ರಂಗವನ್ನು ಪ್ರವೇಶಿಸಿದ್ದ ಸಸಿಕಾಂತ್ ಸೆಂಥಿಲ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಸಸಿಕಾಂತ್ ಸೆಂಥಿಲ್, ಜಯಭೇರಿ ಬಾರಿಸಿದ್ದಾರೆ.ಸಸಿಕಾಂತ್ ಸೆಂಥಿಲ್ ಕರ್ನಾಟಕದ ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಹೆಸರುವಾಸಿಯಾಗಿದ್ದರು.

ದ.ಕ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಗೆ ತಿರುವಳ್ಳೂರ್ ನಲ್ಲಿ ಭರ್ಜರಿ ಜಯ Read More »

ದ.ಕ ಲೋಕಸಭಾ ಕ್ಷೇತ್ರದಲ್ಲಿ ದಿ. ಸೌಜನ್ಯಾಳಿಗೆ 20 ಸಾವಿರಕ್ಕೂ ಅಧಿಕ ಮತ!! ನ್ಯಾಯಯುತ ಹೋರಾಟಕ್ಕೆ ಅಭೂತಪೂರ್ವ ಬೆಂಬಲ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಪಕ್ಷಗಳ ಮತಬೇಟೆಯ ಜೊತೆ ಧರ್ಮಸ್ಥಳದಲ್ಲಿ ಕೊಲೆಯಾದ ದಿ.ಸೌಜನ್ಯಾ ಪರವಾದ ಕ್ಯಾಂಪೇನ್‌ ಕೂಡಾ ಜೋರಾಗಿ ನಡೆದಿತ್ತು. ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯುವುದಕ್ಕಾಗಿ ನೋಟಾಗೆ ಮತ ಹಾಕುವಂತೆ ಕ್ಯಾಂಪೇನ್‌ ಮಾಡಲಾಗಿತ್ತು. ಬೆಳ್ತಂಗಡಿ ತಾಲ್ಲೂಕಿನಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ನೋಟಾಗೆ ಮತ ಹಾಕುವಂತೆ ಕ್ಯಾಂಪೇನ್‌ ಮಾಡಲಾಗಿತ್ತು. ಇದಕ್ಕೆ ಮತದಾರರು ದೊಡ್ಡ ಮಟ್ಟದಲ್ಲಿ ಸ್ಪಂದಿಸಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ನೋಟಾ

ದ.ಕ ಲೋಕಸಭಾ ಕ್ಷೇತ್ರದಲ್ಲಿ ದಿ. ಸೌಜನ್ಯಾಳಿಗೆ 20 ಸಾವಿರಕ್ಕೂ ಅಧಿಕ ಮತ!! ನ್ಯಾಯಯುತ ಹೋರಾಟಕ್ಕೆ ಅಭೂತಪೂರ್ವ ಬೆಂಬಲ Read More »

ದ.ಕನ್ನಡದಲ್ಲಿ ಬಿಜೆಪಿಗೆ ಭರ್ಜರಿ ಜಯ| ಕ್ಯಾಪ್ಟನ್ ಬ್ರಿಜೇಶ್ ಚೌಟಾ ಇನ್ಮುಂದೆ ಮಂಗಳೂರು ಎಂಪಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಅಪಾರ ಅಭಿಮಾನಿಗಳನ್ನು ಹೊಂದಿರುವ ಕರ್ನಾಟಕದ ಬಲಿಷ್ಠ ಲೋಕ ಸಭಾ ಕ್ಷೇತ್ರವಾಗಿರುವ ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಬ್ರಿಜೇಶ್​ ಚೌಟ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪದ್ಮರಾಜ್​ ವಿರುದ್ಧ ಭರ್ಜರಿ ಮತಗಳ ಅಂತರದ ವಿಜಯ ಸಾಧಿಸಿದ್ದಾರೆ. ಈ ಮೂಲಕ ಕೇಸರಿ ಪಕ್ಷ ಪಾರಮ್ಯ ಇಲ್ಲಿ ಮುಂದುವರಿದಿದೆ. ಆಡಳಿತ ವಿರೋಧಿ ಅಲೆಯನ್ನು ಮೀರುವ ಬಿಜೆಪಿಯ ತಂತ್ರ ಫಲಿಸಿದ್ದು, ಹೊಸ ಮುಖವೊಂದು ಪಾರ್ಲಿಮೆಂಟ್​ಗೆ ಏರಿದೆ. ಬಿಜೆಪಿ, ವಿಶೇಷವಾಗಿ ನರೇಂದ್ರ ಮೋದಿ ಕರ್ನಾಟಕದ

ದ.ಕನ್ನಡದಲ್ಲಿ ಬಿಜೆಪಿಗೆ ಭರ್ಜರಿ ಜಯ| ಕ್ಯಾಪ್ಟನ್ ಬ್ರಿಜೇಶ್ ಚೌಟಾ ಇನ್ಮುಂದೆ ಮಂಗಳೂರು ಎಂಪಿ Read More »

ಉಡುಪಿ- ಚಿಕ್ಕಮಗಳೂರು ಕ್ಷೇತ್ರ| ಬಿಜೆಪಿ‌ ಕೈಹಿಡಿದ ಮತದಾರ| ಕೋಟಾಗೆ ಭರ್ಜರಿ‌ ಗೆಲುವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಿರುದ್ಧ ಗೆಲುವು ಸಾಧಿಸಿದ್ದು, ಮತ ಎಣಿಕೆ ಕೇಂದ್ರ ಸಮೀಪ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಅವರು ಗೆಲುವಿನ ನಗೆ ಬೀರಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಅವರನ್ನು ಮೇಲಕ್ಕೆತ್ತಿ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಈ ಸಂದರ್ಭ ಶಾಸಕರಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ,

ಉಡುಪಿ- ಚಿಕ್ಕಮಗಳೂರು ಕ್ಷೇತ್ರ| ಬಿಜೆಪಿ‌ ಕೈಹಿಡಿದ ಮತದಾರ| ಕೋಟಾಗೆ ಭರ್ಜರಿ‌ ಗೆಲುವು Read More »

ಕುಂಭದ್ರೋಣ ಮಳೆಗೆ ತತ್ತರಿಸಿದ ಕರಾವಳಿ| ಪುತ್ತೂರು ಜಲಾವೃತ; ಬಂಟ್ವಾಳದಲ್ಲಿ ಸಿಡಿಲ ಹೊಡೆತಕ್ಕೆ ಮಹಿಳೆಯರಿಬ್ಬರು ಗಂಭೀರ

ಸಮಗ್ರ ನ್ಯೂಸ್: ಸೋಮವಾರ ಸಂಜೆ(ಜೂ. ೩) ಗುಡುಗು ಸಹಿತ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಜಲಾವೃತಗೊಂಡಿದೆ. ಮಳೆಯ ಆರ್ಭಟಕ್ಕೆ ಪುತ್ತೂರಿನ ದರ್ಬೆಯಲ್ಲಿ ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಅಲ್ಲದೇ ಕೋರ್ಟ್ ರೋಡ್ ಬಳಿಯ ಜ್ಯುವೆಲ್ಲರಿ ಅಂಗಡಿಯೊಂದು ಜಲಾವೃತಗೊಂಡಿದೆ. ಇನ್ನು ಭಾರೀ ಮಳೆಗೆ ರಸ್ತೆಗಳು ನದಿಯಂತಾದವು. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಯಲ್ಲೇ ನೀರು ನಿಂತಿದೆ. ಹೀಗಾಗಿ ರಸ್ತೆಯಲ್ಲಿ ನೀರು ಹೆಚ್ಚಾಗಿ ಪಕ್ಕದ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಬಂಟ್ವಾಳದ

ಕುಂಭದ್ರೋಣ ಮಳೆಗೆ ತತ್ತರಿಸಿದ ಕರಾವಳಿ| ಪುತ್ತೂರು ಜಲಾವೃತ; ಬಂಟ್ವಾಳದಲ್ಲಿ ಸಿಡಿಲ ಹೊಡೆತಕ್ಕೆ ಮಹಿಳೆಯರಿಬ್ಬರು ಗಂಭೀರ Read More »

ಮಂಗಳೂರು: ಕಮಾಲ್ ಮಾಡದ ನೋಟಾ| ಲೀಡ್ ಹೆಚ್ಚಿಸಿಕೊಂಡ ಬ್ರಿಜೇಶ್ ‌ಚೌಟಾ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಈಗಾಗಲೇ ಎರಡು ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ತನ್ನ ಹತಿರದ ಸ್ಪರ್ಧಿ ಕಾಂಗ್ರೆಸ್‌ ನ ಪದ್ಮರಾಜ್‌ ಆರ್‌ ಪೂಜಾರಿ ಗಿಂತ 20 ಸಾವಿರ ಮತಗಳಿಂದ ಮುಂದಿದ್ದಾರೆ. ಕ್ಷೇತ್ರದಲ್ಲಿ ನೋಟಾ ಮತಗಳು ಹೆಚ್ಚಾಗುತ್ತವೆ ಎಂಬ ನಿರೀಕ್ಷೆಯಿದ್ದರೂ ಅದು ಸುಳ್ಳಾಗಿದೆ. ನೋಟಾ ಗೆ ಸದ್ಯ 4134 ಮತ ಬಿದ್ದಿದೆ. ಚೌಟಾ 20 ಸಾವಿರ ಮತಗಳ ಲೀಡ್ ನಲ್ಲಿದ್ದಾರೆ.

ಮಂಗಳೂರು: ಕಮಾಲ್ ಮಾಡದ ನೋಟಾ| ಲೀಡ್ ಹೆಚ್ಚಿಸಿಕೊಂಡ ಬ್ರಿಜೇಶ್ ‌ಚೌಟಾ Read More »