ಕರಾವಳಿ

SDPI ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ

ಸಮಗ್ರ ನ್ಯೂಸ್: ಜೂನ್ 21, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಸುಳ್ಯ ವಿಧಾನಸಭಾ ಕ್ಷೇತ್ರ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವೂ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ರವರ ಅಧ್ಯಕ್ಷತೆಯಲ್ಲಿ ಗ್ರೀನ್ ಲ್ಯಾಂಡ್ ಅರೇನಾ ಫುಟ್ಬಾಲ್ ಟರ್ಫ್ ಕೊಟ್ಯಾಡಿ ಪಳ್ಳತ್ತೂರು ಮೈದಾನದಲ್ಲಿ ನಡೆಯಿತು. ಎಸ್‌ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಪಕ್ಷದ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್

SDPI ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ Read More »

ಸಂಪಾಜೆಯಲ್ಲಿ ಭೀಕರ ಕಾರು ಅಪಘಾತ| ಮಂಡ್ಯ ಮೂಲದ‌ ಯುವಕರು ಗಂಭೀರ

ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಗು ಸಂಪಾಜೆಯ ಬಳಿ ತಡರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದ ಮಂಡ್ಯ ಮೂಲದ ಯುವಕರು ಗಂಭೀರ ಗಾಯಗೊಂಡಿದ್ದಾರೆ. ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್‌ ಮಂಡ್ಯಕ್ಕೆ ಹೊರಟಿದ್ದರು. ರಾತ್ರಿ ಮೂರು ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ವೋಕ್ಸ್‌ವ್ಯಾಗನ್ ಕಾರು ರಸ್ತೆಯ ರಕ್ಷಣಾ ಗೋಡೆಗೆ

ಸಂಪಾಜೆಯಲ್ಲಿ ಭೀಕರ ಕಾರು ಅಪಘಾತ| ಮಂಡ್ಯ ಮೂಲದ‌ ಯುವಕರು ಗಂಭೀರ Read More »

ಕಾರ್ಕಳ: ಪರಶುರಾಮ ಮೂರ್ತಿ ಸ್ಥಾಪನೆಯಲ್ಲಿ ವಂಚನೆ ಆರೋಪ| ಪೊಲೀಸ್ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ಕಂಚಿನ ಮೂರ್ತಿ ಬದಲು ಪರಶುರಾಮನ ನಕಲಿ ಮೂರ್ತಿಯನ್ನು ಸ್ಥಾಪಿಸಿ ಸರಕಾರಕ್ಕೆ ಕೋಟ್ಯಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಷ್ ಆರ್ಟ್ ವರ್ಲ್ಡ್ ಎಂಬ ಸಂಸ್ಥೆಯ ಮೂಲಕ ಕೃಷ್ಣ ಎಂಬಾತ ಕಾರ್ಕಳ ತಾಲೂಕಿನ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1,25,50,000 ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ನಂತರ ಆರೋಪಿ

ಕಾರ್ಕಳ: ಪರಶುರಾಮ ಮೂರ್ತಿ ಸ್ಥಾಪನೆಯಲ್ಲಿ ವಂಚನೆ ಆರೋಪ| ಪೊಲೀಸ್ ಪ್ರಕರಣ ದಾಖಲು Read More »

ಸುಳ್ಯ: ಮಗ ಮತ್ತು ಸೊಸೆ ವಿರುದ್ಧ ಮತ್ತೆ ದೂರು ನೀಡಿದ ವೃದ್ಧೆ| ಎಸಿ ಜುಬಿನ್ ಮೊಹಪಾತ್ರ ಮಾತುಕತೆ

ಸಮಗ್ರ ನ್ಯೂಸ್: ಮಗ ಮತ್ತು ಸೊಸೆ ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ವೃದ್ಧೆಯೋರ್ವರು ತನ್ನ ಪುತ್ರಿಯರ ಜತೆಗೆ ಸುಳ್ಯ ತಾಲೂಕು ಕಚೇರಿಗೆ ಆಗಮಿಸಿ ಧರಣಿ ಕುಳಿತ ಘಟನೆ ಸುಳ್ಯದಲ್ಲಿ ನಡೆದಿದೆ. ಮಂಡೆಕೋಲು ಗ್ರಾಮದ ಕಲ್ಲಡ್ಕದ ಪೆರಾಜೆಯ ಶೇಷಮ್ಮ ಅವರು ಕೆಲವು ವಾರಗಳ ಹಿಂದೆ ಸುಳ್ಯ ತಹಶೀಲ್ದಾರ್‌ಗೆ ಮಗನ ವಿರುದ್ಧ ದೂರು ನೀಡಿದ್ದರು. ಅಂದು ತಹಶೀಲ್ದಾರ್‌ ನೇತೃತ್ವದಲ್ಲಿ ಅಧಿಕಾರಿಗಳು ಸಮಾಲೋಚಿಸಿ ಮಗನಿಗೆ ಹಿತವಚನ ನೀಡಿ ಮಂಡೆಕೋಲಿನ ಮನೆಗೆ ಬಿಟ್ಟು ಬಂದಿದ್ದರು. ಅಂದಿನಿಂದ ವೃದ್ಧೆ ಅದೇ ಮನೆಯಲ್ಲಿದ್ದು, ಮದುವೆ ಮಾಡಲಾಗಿರುವ

ಸುಳ್ಯ: ಮಗ ಮತ್ತು ಸೊಸೆ ವಿರುದ್ಧ ಮತ್ತೆ ದೂರು ನೀಡಿದ ವೃದ್ಧೆ| ಎಸಿ ಜುಬಿನ್ ಮೊಹಪಾತ್ರ ಮಾತುಕತೆ Read More »

ಉಪ್ಪಿನಂಗಡಿ: ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಭಾರೀ ಅಗ್ನಿ ಅವಘಡ| ಹಲವು ಮಳಿಗೆಗಳು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಮುಖ್ಯ ಪೇಟೆಯಲ್ಲಿರುವ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿನ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಮಾಹಿತಿ ಲಭಿಸಿದೆ. ನೂರಾರು ನಾಗರಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿಯ ಕೆನ್ನಾಲಗೆಗೆ ಹಲವು ಅಂಗಡಿಗಳು ಆಹುತಿಯಾಗಿವೆ. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಅಂಗಡಿಯವರು ಬೆಂಕಿಯನ್ನು ಆರಿಸಲು ಯತ್ನಿಸಿದರಾದರೂ ಅದಾಗಲೇ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿತ್ತು. ಬೆಂಕಿ ನಂದಿಸುವ ಕಾರ್ಯ ಬರದಿಂದ ನಡೆಯುತ್ತಿದ್ದು, ಇನ್ನೂ ಹತೋಟಿಗೆ ಬಂದಿಲ್ಲ ಎಂದು ತಿಳಿದುಬಂದಿದೆ.

ಉಪ್ಪಿನಂಗಡಿ: ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಭಾರೀ ಅಗ್ನಿ ಅವಘಡ| ಹಲವು ಮಳಿಗೆಗಳು ಬೆಂಕಿಗಾಹುತಿ Read More »

ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಮೇಲೆ ಗುಳಿಗ ದೃಷ್ಟಿ| ಎಷ್ಟು ಪ್ರಯತ್ನಿಸಿದ್ರೂ ಕೆಲಸ ಮುಗೀತಿಲ್ವಂತೆ!!

ಸಮಗ್ರ ನ್ಯೂಸ್: ದೈವಗಳ ನೆಲೆವೀಡು ಕರಾವಳಿ ಒಂದಲ್ಲ ಒಂದು ದೈವ ಕಾರ್ಣಿಕಕ್ಕೆ ಸಾಕ್ಷಿಯಾಗುತ್ತಾ ಇರುತ್ತದೆ. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ದೈವ ಮುನಿಸಿಕೊಂಡ ಪರಿಣಾಮ ಒಂದಲ್ಲ ಒಂದು ಅವಾಂತರಗಳು ಸಂಭವಿಸುತ್ತಿದೆ ಎಂದು ಜನ ಆತಂಕಕ್ಕೀಡಾಗಿದ್ದಾರೆ ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆಯುತ್ತಿದೆ. ಆದರೆ ಮಂಗಳೂರಿನ ಹಳೆ ಬಸ್ ನಿಲ್ದಾಣದ ಬಳಿ ಮೂರು ವರ್ಷದಿಂದ ಕಾಮಗಾರಿಯೊಂದು ನೆನೆಗುದಿಗೆ ಬಿದ್ದಿದೆ. ಇದಕ್ಕೆ ಕಾರಣ ಗುಳಿಗೆ ದೈವದ ಮುನಿಸಂತೆ!! ಬಹು ಅಂತಸ್ಥಿನ ಕಾರ್ ಪಾರ್ಕಿಂಗ್ ಕಾಮಗಾರಿಯ

ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಮೇಲೆ ಗುಳಿಗ ದೃಷ್ಟಿ| ಎಷ್ಟು ಪ್ರಯತ್ನಿಸಿದ್ರೂ ಕೆಲಸ ಮುಗೀತಿಲ್ವಂತೆ!! Read More »

ಬೆಳ್ಳಾರೆ: ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ 16ನೇ ಸಂಸ್ಥಾಪನಾ ದಿನದ ಅಂಗವಾಗಿ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಎಸ್ ಡಿ ಪಿ ಐ ಗ್ರಾಮ ಸಮಿತಿ ಅಧ್ಯಕ್ಷ ತಾಜುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಸಮಿತಿ ಅಧ್ಯಕ್ಷರೂ ಸವಣೂರು ಗ್ರಾಮ ಪಂಚಾಯಿತಿ ಸದಸ್ಯರೂ ಆದ ರಝಾಕ್ ಕೆನರಾ ಧ್ವಜಾರೋಹಣ ನೆರವೇರಿಸಿದರು.ವಿಧಾನಸಭಾ ಸಮಿತಿ ಸಂಘಟಣಾ ಕಾರ್ಯದರ್ಶಿ ಸಿದ್ದೀಕ್ ಸವಣೂರು ಪ್ರಾಸ್ತಾವಿಕ ಮಾತನಾಡಿದರು. ಸಭೆಯಲ್ಲಿ

ಬೆಳ್ಳಾರೆ: ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆ Read More »

ಪುತ್ತೂರು: “ಬ್ರೈಟ್ ಭಾರತ್” ಸಂಸ್ಥೆ ಇದೀಗ ಪ್ರಪ್ರಥಮ ಬಾರಿಗೆ ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ|ಇದರ ಸದಸ್ಯರಾಗುವುದು ಹೇಗೆ!? ಇಲ್ಲಿದೆ ಈ ಬಗ್ಗೆ ಮಾಹಿತಿ

ಸಮಗ್ರ ನ್ಯೂಸ್: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್

ಪುತ್ತೂರು: “ಬ್ರೈಟ್ ಭಾರತ್” ಸಂಸ್ಥೆ ಇದೀಗ ಪ್ರಪ್ರಥಮ ಬಾರಿಗೆ ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ|ಇದರ ಸದಸ್ಯರಾಗುವುದು ಹೇಗೆ!? ಇಲ್ಲಿದೆ ಈ ಬಗ್ಗೆ ಮಾಹಿತಿ Read More »

ಯಕ್ಷಗಾನಕ್ಕೂ ಎಂಟ್ರಿಕೊಟ್ಟ ದರ್ಶನ್ – ಪವಿತ್ರಾಗೌಡ ಪ್ರಕರಣ| ವೈರಲ್ ಆಗ್ತಿದೆ ಸ್ವಾರಸ್ಯಕರ ವಿಡಿಯೋ

ಸಮಗ್ರ ನ್ಯೂಸ್: ನಟಿ ಪವಿತ್ರ ಗೌಡಅವರಿಗೆ ಅಶ್ಲೀಲ ಮೆಸೇಜ್‌ ಮಾಡಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರ ಗೌಡ ಸೇರಿದಂತೆ 10 ಜನರನ್ನು ಬಂಧಿಸಲಾಗಿದೆ. ಈ ಕೊಲೆ ಕೇಸ್‌ ಸದ್ಯ ಸಂಚಲನ ಸೃಷ್ಟಿಸಿದ್ದು, ಸುದ್ದಿ ಮಾಧ್ಯಮ, ಟ್ರೋಲ್‌ ಪೇಜ್‌, ಸೋಷಿಯಲ್‌ ಮೀಡಿಯಾಗಳಲ್ಲಿ ಈ ಕೊಲೆ ಪ್ರಕರಣ ಸುದ್ದಿಯದ್ದೇ ಚರ್ಚೆ ನಡೆಯುತ್ತಿದೆ. ಇದೀಗ ನಟ ದರ್ಶನ್‌ ಮತ್ತು ಪವಿತ್ರಾ ಮ್ಯಾಟರ್ ಯಕ್ಷಗಾನ ಪ್ರಸಂಗಕ್ಕೂ ಎಂಟ್ರಿ ಕೊಟ್ಟಿದ್ದು, ಈ ಕುರಿತ ವಿಡಿಯೋವೊಂದು ಇದೀಗ

ಯಕ್ಷಗಾನಕ್ಕೂ ಎಂಟ್ರಿಕೊಟ್ಟ ದರ್ಶನ್ – ಪವಿತ್ರಾಗೌಡ ಪ್ರಕರಣ| ವೈರಲ್ ಆಗ್ತಿದೆ ಸ್ವಾರಸ್ಯಕರ ವಿಡಿಯೋ Read More »

ದ.ಕ‌ ದಲಿತ ಚಳವಳಿಯ ‌ನಾಯಕ‌ ಚಂದು ಎಲ್‌. ಇನ್ನಿಲ್ಲ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ (52) ಅವರು ಅಲ್ಪ ಕಾಲದ‌ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜೂ.19 ರಂದು ರಾತ್ರಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಡಿ.ಸಿ. ಮನ್ನಾ ಜಮೀನಿಗಾಗಿನ ಹೋರಾಟ, ನಿಡ್ಲೆ ದೈವಸ್ಥಾನದ ಸಾರ್ವಜನಿಕ ಊಟದ ಪಂಕ್ತಿಯಿಂದ ದಲಿತ ಯುವತಿಯನ್ನು ಬಲಾತ್ಕಾರವಾಗಿ ಎಬ್ಬಿಸಿದ ಘಟನೆ ಮುಂದಿಟ್ಟು ನಡೆದ ಹೋರಾಟಗಳ ನೇತೃತ್ವವನ್ನು ವಹಿಸಿದ್ದರು. ಜತೆಗೆ ತಾಲೂಕಿನಲ್ಲಿ ಹಾಗೂ ಜಿಲ್ಲೆಯಲ್ಲಿ

ದ.ಕ‌ ದಲಿತ ಚಳವಳಿಯ ‌ನಾಯಕ‌ ಚಂದು ಎಲ್‌. ಇನ್ನಿಲ್ಲ Read More »