ಕರಾವಳಿ

ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ಗುಡುಗು, ಮಳೆ ಸಾಧ್ಯತೆ| 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಿಸಿ ಗಾಳಿಯ ವಾತಾವರಣದ ನಡುವೆಯೇ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ 2-3 ದಿನಗಳ ಕಾಲ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ […]

ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ಗುಡುಗು, ಮಳೆ ಸಾಧ್ಯತೆ| 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ Read More »

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಸಾವು

ಸಮಗ್ರ ನ್ಯೂಸ್: ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.ಮೃತ ಯುವಕನನ್ನು ಮಂಜು ಎಂಬುವವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಐತ್ತೂರು ಗ್ರಾಮದ ಅರಬ್ಬಿ ತೋಡು ಎಂಬಲ್ಲಿ ರಕ್ಷಿತ್ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ರಕ್ಷಿತ್ ಅವರು ನದಿಯ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ನಡೆದ ತಕ್ಷಣ ಸ್ನೇಹಿತರು ಮತ್ತು ಸ್ಥಳೀಯರು

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಸಾವು Read More »

ಎ.29: ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಏ.29ರಂದು ಬುಧವಾರ ಸಂಜೆ 6.40ರ ಗೋದೂಳಿ ಲಗ್ನದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ. ಈಗಾಗಲೇ 105 ಜೋಡಿಗಳು ಹೆಸರು ನೋಂದಾಯಿಸಿದ್ದು, ಅವರು ಕೊಟ್ಟ ದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಸಾಮೂಹಿಕ ವಿವಾಹದಲ್ಲಿ ಅವಕಾಶ ನೀಡಲಾಗುವುದು. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಮತ್ತು ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲ ವೆಚ್ಚವನ್ನು ಧರ್ಮಾ ಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷರಾಗಿರುವ ಶ್ರೀಧರ್ಮಸ್ಥಳ ಮಂಜು

ಎ.29: ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ Read More »

ಪುತ್ತೂರು: ಇಂದು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ, ‘ಪುತ್ತೂರು ಬೆಡಿ’

ಸಮಗ್ರ ನ್ಯೂಸ್: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಪುತ್ತೂರು ಬೆಡಿ’ ಎಂದೇ ಖ್ಯಾತಿಯಾದ ಸಿಡಿಮದ್ದು ಪ್ರದರ್ಶನ, ವಿಜೃಂಭಣೆಯ ಬ್ರಹ್ಮರಥೋತ್ಸವ ಏ.17ರಂದು ರಾತ್ರಿ ನಡೆಯಲಿದೆ. 17ರಂದು ಬೆಳಿಗ್ಗೆ ಉತ್ಸವ, ವಸಂತಕಟ್ಟೆ ಪೂಜೆ, ಬಳಿಕ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಲಿದೆ. ಸಂಜೆ 7.30ಕ್ಕೆ ಉತ್ಸವ ನಡೆದು, ಬಳಿಕ ದೇವರ ರಥಾರೂಢ ಕಾರ್ಯಕ್ರಮ ನಡೆಯಲಿದೆ. ಬಳಿಕ ಪುತ್ತೂರು ಬೆಡಿ ನಡೆಯಲಿದೆ. ಈ ಬಾರಿ ಕಳೆದ ವರ್ಷದಂತೆ ಭಕ್ತರಿಂದಲೇ ಸಿಡಿಮದ್ದು ಪ್ರದರ್ಶನ ನಡೆಯಲಿದ್ದು, ಬಾನಂಗಳದಲ್ಲಿ ಬಣ್ಣದ ಚಿತ್ತಾರ ಮೂಡಿಸುವ ಹಲವು ಬಗೆಯ

ಪುತ್ತೂರು: ಇಂದು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ, ‘ಪುತ್ತೂರು ಬೆಡಿ’ Read More »

ಪುತ್ತೂರು: ಮಹಾಲಿಂಗೇಶ್ವರ ಜಾತ್ರಾ ಹಿನ್ನಲೆ| ಎ.17ರಂದು ಮದ್ಯ ಮಾರಾಟ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಪ್ರಯುಕ್ತ ಇದೇ 16ರಂದು ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪ್ಪೋತ್ಸವ ಹಾಗೂ ಇದೇ 17 ರಂದು ಬ್ರಹ್ಮರಥೋತ್ಸವ ಮತ್ತು ಇದೇ 18ರಂದು ಅವಭೃತ ಸ್ನಾನಕ್ಕಾಗಿ ದೇವರು ವೀರಮಂಗಲಕ್ಕೆ ತೆರಳುವ ಸಂಪ್ರದಾಯಗಳು ನಡೆಯಲಿವೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಅವಧಿಯಲ್ಲಿ ಮದ್ಯ ಮಾರಾಟವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಮತ್ತು ವೈನ್ ಶಾಪ್‍ಗಳನ್ನು 17ರಂದು ಬೆಳಿಗ್ಗೆ 6ರಿಂದ

ಪುತ್ತೂರು: ಮಹಾಲಿಂಗೇಶ್ವರ ಜಾತ್ರಾ ಹಿನ್ನಲೆ| ಎ.17ರಂದು ಮದ್ಯ ಮಾರಾಟ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಆದೇಶ Read More »

24 ಗಂಟೆಗಳ ನಿರಂತರ ಕೂಚುಪುಡಿ ನೃತ್ಯ| ಗೋಲ್ಡನ್ ಬುಕ್ ನಲ್ಲಿ ದಾಖಲೆ ಬರೆದ ಸುಳ್ಯದ ಅಭಿಷೇಕ್

ಸುಳ್ಯ: ಇಲ್ಲಿನ ನೆಹರೂ ಸ್ಮಾರಕ ಮಹಾವಿದ್ಯಾಲಯದ ಎರಡನೇ ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಮಂಡೆಕೋಲಿನ ಅಭಿಷೇಕ್ ಕಣೆಮರಡ್ಕ ನಿರಂತರ 24 ಗಂಟೆಗಳ ಕಾಲ ಕೂಚುಪುಡಿ ನೃತ್ಯ ಪ್ರದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ದಾಖಲೆ ಬರೆದಿದ್ದಾರೆ. ನೆಹರೂ‌‌ ಸ್ಮಾರಕ ಕಾಲೇಜಿನ ಸಭಾಂಗಣದಲ್ಲಿ ಏ.11ರಂದು ಸಂಜೆ 6.30ರಿಂದ ಆರಂಭಗೊಂಡು ಏ.12ರ ಸಂಜೆ 6.30ರ ತನಕ ನಿರಂತರ 24 ಗಂಟೆ ಕುಚ್ಚುಪುಡಿ ನೃತ್ಯ ಮಾಡಿದರು. ಗೋಲ್ಡನ್ ಬುಕ್ ಆಪ್ ವಲ್ಡ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದು ದಾಖಲೆ ನಿರ್ಮಿಸಬೇಕೆಂಬ ಹಂಬಲದಿಂದ ಅಭಿಷೇಕ್ ಕುಚುಪುಡಿ

24 ಗಂಟೆಗಳ ನಿರಂತರ ಕೂಚುಪುಡಿ ನೃತ್ಯ| ಗೋಲ್ಡನ್ ಬುಕ್ ನಲ್ಲಿ ದಾಖಲೆ ಬರೆದ ಸುಳ್ಯದ ಅಭಿಷೇಕ್ Read More »

ಪುತ್ತೂರು: ಜಾತ್ರೋತ್ಸವದ ಧ್ವಜಾರೋಹಣ ಅರ್ಹತೆ ಇಲ್ಲದ ಜಗನ್ನಿವಾಸ ರಾವ್ ನಡೆಸಿದರೆ ದೇಗುಲಕ್ಕೆ ಕಪ್ಪುಚುಕ್ಕೆ – ಶೈವಕ್ಷೇತ್ರ ಸಂರಕ್ಷಣಾ ವೇದಿಕೆ

ಸಮಗ್ರ ನ್ಯೂಸ್: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಜಾತ್ರೋತ್ಸವದ ಧ್ವಜಾರೋಹಣ ಪ್ರಕ್ರಿಯೆಯಲ್ಲಿ ಯಾವುದೇ ಅಧಿಕೃತ ಅರ್ಹತೆ ಇಲ್ಲದ ಪಿ.ಜಿ. ಜಗನ್ನಿವಾಸ ರಾವ್ ಅವರು ಭಾಗವಹಿಸುವುದು ದೇವಸ್ಥಾನದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಲಿದೆ ಎಂದು ಶೈವಕ್ಷೇತ್ರ ಸಂರಕ್ಷಣಾ ವೇದಿಕೆಯ ಸಂಸ್ಥಾಪಕ ಶ್ರೀನಾಥ್ ಟಿ.ಎಸ್. ಸುಬ್ರಹ್ಮಣ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದ ಪಾವಿತ್ರ್ಯತೆ ಮತ್ತು ಸಂಪ್ರದಾಯಗಳ ಉಲ್ಲಂಘನೆಯಾಗುತ್ತಿರುವ ಕುರಿತು ಹಲವು ಗಂಭೀರ ಆರೋಪಗಳನ್ನು ಮಾಡಿದರು. “ದೇವಸ್ಥಾನದ ನಿಯಮದಂತೆ ಧ್ವಜಾರೋಹಣ ಮತ್ತು ಅವರೋಹಣ ಮಾಡುವ ಜವಾಬ್ದಾರಿ ಕೇವಲ ಖಾಯಂ

ಪುತ್ತೂರು: ಜಾತ್ರೋತ್ಸವದ ಧ್ವಜಾರೋಹಣ ಅರ್ಹತೆ ಇಲ್ಲದ ಜಗನ್ನಿವಾಸ ರಾವ್ ನಡೆಸಿದರೆ ದೇಗುಲಕ್ಕೆ ಕಪ್ಪುಚುಕ್ಕೆ – ಶೈವಕ್ಷೇತ್ರ ಸಂರಕ್ಷಣಾ ವೇದಿಕೆ Read More »

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಆಭರಣ ಕಳವು

ಸಮಗ್ರ ನ್ಯೂಸ್: ಇಬ್ಬರು ಮಹಿಳೆಯರೊಂದಿಗೆ ಬಂದ ಮೂವರ ತಂಡ ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಮಳಿಗೆಯೊಂದರಿಂದ ಸುಮಾರು ₹ 3 ಲಕ್ಷ ಮೌಲ್ಯದ ಚಿನ್ನದ ಬಳೆ ಕಳವು ಮಾಡಿದ ಘಟನೆ ಪುತ್ತೂರು ನಗರದಲ್ಲಿ ನಡೆದಿದೆ. ‌ನಗರದ ಹೆಗ್ಡೆ ಆರ್ಕೇಡ್‌ನಲ್ಲಿರುವ ‘ಆರ್.ಕೆ.ಜ್ಯುವೆಲ್ಲರ್ಸ್‌’ ಚಿನ್ನಾಭರಣ ಮಳಿಗೆಯಲ್ಲಿ ಕಳವು ನಡೆದಿದೆ. ಘಟನೆಗೆ ಸಂಬಂಧಿಸಿ ಮಳಿಗೆಯ ಮಾಲೀಕ ಕೃಷ್ಣತ್ ನಾಮದೇವ್ ಸುರ್ವೆ ಅವರು ಪುತ್ತೂರು ನಗರ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ಮಾರ್ಚ್‌ 30ರಂದು ವಿವಿಧ ವಿನ್ಯಾಸದ ಆಭರಣಗಳನ್ನು ತೋರಿಸುವಂತೆ ಮೂವರು ಅಪರಿಚಿತರು

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಆಭರಣ ಕಳವು Read More »

ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಸಾವು ಹೇಗಾಯ್ತು ಗೊತ್ತಾ? ಮದುವೆಯಾಗಿ ಒಂದೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು?

ಸಮಗ್ರ ನ್ಯೂಸ್: ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಮತ್ತು ತುಳು ನಾಟಕದ ನಟಿಯೊಬ್ಬರ ಈ ಪ್ರೇಮ ಕಥೆ ಈಗ ಭೀಕರ ತಿರುವು ಪಡೆದಿದ್ದು, ಹವಾಮಾನ ಕೇವಲ ಒಂದು ತಿಂಗಳಲ್ಲಿ ಗಂಡ ಹೆಣವಾಗಿದ್ದಾನೆ. ಈ ಪ್ರಕರಣದ ಸುತ್ತ ಈಗ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ. ಮೃತ ಸುದೀಪ್ ಶೆಟ್ಟಿ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಇತ್ತಆಕೆ ರಂಗಭೂಮಿ ಹಾಗೂ ಕಿರುತೆರೆಯಲ್ಲಿ ನಟಿಸುವ ನಟಿ ಸೌಮ್ಯಾ ಶೆಟ್ಟಿ. ಇವರಿಬ್ಬರಿಗೂ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಈ ಸ್ನೇಹ

ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಸಾವು ಹೇಗಾಯ್ತು ಗೊತ್ತಾ? ಮದುವೆಯಾಗಿ ಒಂದೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? Read More »

ಪುತ್ತೂರು: ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ‌ಅಧಿಕೃತ ಆದೇಶ| ಸೇಡಿಯಾಪುನಲ್ಲಿ ಸ್ಥಾಪನೆಯಾಗಲಿದೆ ಸುಸಜ್ಜಿತ ಆಸ್ಪತ್ರೆ

ಸಮಗ್ರ ನ್ಯೂಸ್: ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಮೆಡಿಕಲ್ ಕಾಲೇಜು ನಿರ್ಮಾಣವಾಗುವಲ್ಲಿ ಸರಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸೇಡಿಯಾಪಿನಲ್ಲಿ ಕಾಯ್ದಿರಿಸಲಾಗಿರುವ ೪೦ ಎಕ್ರೆ ಜಾಗದಲ್ಲಿ 300 ಬೆಡ್‌ನ ಮೆಡಿಕಲ್ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನವನ್ನು ಒದಗಿಸುವುದರ ಜೊತೆಗೆ ಕಟ್ಟಡದ ರೂಪುರೇಶೆಗಳ ಬಗ್ಗೆಯೂ ಸರಕಾರದದ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅಂತಿಮ ಮುದ್ರೆ ಬಿದ್ದಿದೆ. 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-138 ರಲ್ಲಿ ‘ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು

ಪುತ್ತೂರು: ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ‌ಅಧಿಕೃತ ಆದೇಶ| ಸೇಡಿಯಾಪುನಲ್ಲಿ ಸ್ಥಾಪನೆಯಾಗಲಿದೆ ಸುಸಜ್ಜಿತ ಆಸ್ಪತ್ರೆ Read More »