ಕರಾವಳಿ

ಸುಳ್ಯ: ಕಾರಿನಲ್ಲಿ ಹಿಂದೂ ಹುಡುಗಿ ಜೊತೆ‌ ಮುಸ್ಲಿಂ ಯುವಕ| ಪೊಲೀಸ್ ವಿಚಾರಣೆ ವೇಳೆ ಬಯಲಾಯ್ತು ಅಸಲಿ ಸತ್ಯ!!

ಸಮಗ್ರ ನ್ಯೂಸ್: ಕೇರಳ ಮೂಲದ ಅನ್ಯಕೋಮಿನ ಜೋಡಿಯೊಂದು ಸುಳ್ಯ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸುತ್ತಿರುವ ವೇಳೆ ಹಿಂದೂ ಕಾರ್ಯಕರ್ತರು ಸುಳ್ಯದಲ್ಲಿ ತಡೆದು ನಿಲ್ಲಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಜೂ. 18 ರಂದು ಸಂಜೆ ನಡೆದಿದೆ. ಕೇರಳ ಮೂಲದ ಹಿಂದೂ ಹುಡುಗಿಯೊಬ್ಬಳು ಮನೆಯಲ್ಲಿ ಪೋಷಕರ ಜೊತೆ ಜಗಳವಾಡಿಕೊಂಡು ಅನ್ಯಕೋಮಿನ ಯುವಕನೊಂದಿಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನತ್ತ ತೆರಳುತ್ತಿದ್ದಳು ಎಂದು ಭಾವಿಸಿ ಹಿಂದೂ ಕಾರ್ಯಕರ್ತರು ಸುಳ್ಯದಲ್ಲಿ ‌ತಡೆದು ಆ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದರು. ಪೊಲೀಸ್ ವಿಚಾರಣೆ ವೇಳೆ ಆ ಜೋಡಿ ಈ

ಸುಳ್ಯ: ಕಾರಿನಲ್ಲಿ ಹಿಂದೂ ಹುಡುಗಿ ಜೊತೆ‌ ಮುಸ್ಲಿಂ ಯುವಕ| ಪೊಲೀಸ್ ವಿಚಾರಣೆ ವೇಳೆ ಬಯಲಾಯ್ತು ಅಸಲಿ ಸತ್ಯ!! Read More »

ತಿರುವನಂತಪುರಂ ಅನಂತ ಪದ್ಮನಾಭ ದೇವಾಲಯದ ಮುಖ್ಯ ಅರ್ಚಕರಾಗಿ ಕನ್ನಡಿಗ ನೇಮಕ| ಬೆಳ್ತಂಗಡಿಯ ಕೊಕ್ಕಡ ಗ್ರಾಮದ ನಾಗೇಶರಿಗೆ ಒಲಿದ ಭಾಗ್ಯ

ಸಮಗ್ರ ನ್ಯೂಸ್: ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ. ಇವರು ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿದ್ದು, ದಿ. ಸುಬ್ರಾಯ ತೋಡ್ತಿಲ್ಲಾಯ ಮತ್ತು ದಿ.ಯಶೋಧ ದಂಪತಿಗಳ ಪುತ್ರರಾಗಿದ್ದಾರೆ. ಹಿಂದೆ ಸುಬ್ರಾಯ ತೋಡ್ತಿಲ್ಲಾಯರು ಕೂಡ ಇದೇ ದೇವಸ್ಥಾನದಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರ ಅಜ್ಜ ದಿ.ನಾರಾಯಣ ತೋಡ್ತಿಲ್ಲಾಯರು

ತಿರುವನಂತಪುರಂ ಅನಂತ ಪದ್ಮನಾಭ ದೇವಾಲಯದ ಮುಖ್ಯ ಅರ್ಚಕರಾಗಿ ಕನ್ನಡಿಗ ನೇಮಕ| ಬೆಳ್ತಂಗಡಿಯ ಕೊಕ್ಕಡ ಗ್ರಾಮದ ನಾಗೇಶರಿಗೆ ಒಲಿದ ಭಾಗ್ಯ Read More »

ಸುಳ್ಯ: ಬೈಕ್ – ಇನ್ನೋವಾ ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಬೈಕ್ ಮತ್ತು ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸುಳ್ಯದ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಜೂ.17ರಂದು ಸಂಜೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಅಲ್ಪ ಸ್ಪಲ್ಪ ಗಾಯಗಳಾಗಿದ್ದು, ಇನ್ನೋವಾ ಮತ್ತು ಬೈಕ್ ಜಖಂಗೊಂಡಿದೆ.

ಸುಳ್ಯ: ಬೈಕ್ – ಇನ್ನೋವಾ ನಡುವೆ ಮುಖಾಮುಖಿ ಡಿಕ್ಕಿ Read More »

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗಿಲ್ಲ‌ ಸೂಕ್ತ ರಕ್ಷಣೆ| ಒಳರೋಗಿಯಾಗಿ ದಾಖಲಾದವರು ಹೊರಗೆ!!

ಸಮಗ್ರ ನ್ಯೂಸ್: ಇದೊಂದು ನಿಜಕ್ಕೂ ಶಾಕ್ ತರಿಸುವ ಸಂಗತಿ. ಈ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದವರು ಯಾವಾಗ ಬೇಕಾದರೂ, ಎಲ್ಲಿಗೆ ಬೇಕಾದರೂ ಹೋಗಿ ಬರಬಹುದು! ಇಂಥದ್ದೊಂದು ಪರಿಸ್ಥಿತಿ ಇರುವುದು ಸುಳ್ಯ ತಾಲೂಕಿನ ಸುಳ್ಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಂದರೆ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ..! ಹೌದು, ಇಲ್ಲಿ ದಾಖಲಾದ ರೋಗಿಗಳು ಯಾವೂದೇ ಸುರಕ್ಷತೆಯಿಲ್ಲ. ರೋಗಿಯ ಸಹಾಯಕರು ಆತನನ್ನು ಬಿಟ್ಟು ಆಚೀಚೆ ಹೋದರೆ ರೋಗಿಗಳು ಎದ್ದು ಹೊರಗಡೆ ಹೋಗಬಹುದು. ಕೈಯಲ್ಲಿರುವ ಡ್ರಿಪ್ಸ್ ಪೈಪ್ ಸಹಿತ ಪೇಟೆಗೂ ಹೋಗಿ ಬರಬಹುದು. ಇದನ್ನು ಇಲ್ಲಿ

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗಿಲ್ಲ‌ ಸೂಕ್ತ ರಕ್ಷಣೆ| ಒಳರೋಗಿಯಾಗಿ ದಾಖಲಾದವರು ಹೊರಗೆ!! Read More »

ಕೊರಗಜ್ಜನ ಹೆಸರಲ್ಲಿ ವಂಚನೆ; ನಕಲಿ‌ ಖಾತೆ ಸೃಷ್ಟಿಸಿ ದೇಣಿಗೆ ಸಂಗ್ರಹ

ಸಮಗ್ರ ನ್ಯೂಸ್: ತುಳುನಾಡಿನ ಆರಾಧನ ದೈವ ಕೊರಗಜ್ಜ ಅಂದರೆ ಅಷ್ಟು ನಂಬಿಕೆ. ಏನೇ ಕಷ್ಟ ಬಂದರು ಅಜ್ಜನನ್ನು ನೆನೆದರೆ ಪರಿಹಾರವಾಗುತ್ತದೆ. ಆದ್ರೆ, ಇದೀಗ ಕೆಲ ವಂಚಕರು ಇದೇ ಕೊರಗಜ್ಜನ ಹೆಸರಿನಲ್ಲಿ ಭಕ್ತರನ್ನು ವಂಚನೆ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ‘ಡಿವೊಟೀಸ್ ಆಫ್ ಕುತ್ತಾರು ಕೊರಗಜ್ಜ’ ಎಂಬ ಖಾತೆ ತೆರದು ಅದರಲ್ಲಿ ಅನ್ನದಾನ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಮಂಗಳೂರು ತಾಲೂಕಿನ ಆದಿಸ್ಥಳ ಕುತ್ತಾರು ಕೊರಗಜ್ಜ ಸನ್ನಿಧಾನ. ಇಲ್ಲಿನ ಫೋಟೋ ಮತ್ತು ಹೆಸರನ್ನು ಬಳಸಿಕೊಂಡು ದೈವಸ್ಥಾನದ ವೆಬ್

ಕೊರಗಜ್ಜನ ಹೆಸರಲ್ಲಿ ವಂಚನೆ; ನಕಲಿ‌ ಖಾತೆ ಸೃಷ್ಟಿಸಿ ದೇಣಿಗೆ ಸಂಗ್ರಹ Read More »

ವಿದ್ಯಾಮಾತಾ ಅಕಾಡೆಮಿ ಸುಳ್ಯ ಶಾಖೆಯಲ್ಲಿ ಕಂಪ್ಯೂಟರ್ ತರಗತಿ ಪ್ರಾರಂಭ| ಗ್ರಾಮೀಣ ಸರಕಾರಿ ಅಧಿಕಾರಿಗಳ ಬರವನ್ನು ವಿ. ಅಕಾಡೆಮಿ ನೀಗಿಸುತ್ತಿದೆ; ಲ.ವೀರಪ್ಪ ಕಣ್ಕಲ್

ಸಮಗ್ರ ನ್ಯೂಸ್: ಇಂದಿನ ಯುವ ಪೀಳಿಗೆಯ ಜೀವನದ ಆಶಾಕಿರಣವಾಗಿ 130ಕ್ಕೂ ಅಧಿಕ ಸ್ಪರ್ಧಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಿ ಸರಕಾರಿ ಉದ್ಯೋಗ ಲಭಿಸುವಂತೆ ಮಾಡಿದ ವಿದ್ಯಾಮಾತಾ ಅಕಾಡೆಮಿಯು ಕಳೆದ ಕೆಲವು ತಿಂಗಳುಗಳ ಹಿಂದೆ ತನ್ನ ಶಾಖೆಯನ್ನು ಸುಳ್ಯಕ್ಕೆ ವಿಸ್ತರಿಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಗೆ ಸಂಬಂಧಿಸಿದಂತೆ ತರಬೇತಿಯನ್ನು ನೀಡುತ್ತಾ ಸುಳ್ಯದ ಹೃದಯ ಭಾಗದಲ್ಲಿ ಕಾರ್ಯಾಚರಿಸುತಿದ್ದು, ಇದೀಗ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಜೊತೆಗೆ ಕೌಶಲ್ಯಯುಕ್ತ ಉದ್ಯೋಗಾಧರಿತವಾದ ಕಂಪ್ಯೂಟರ್ ಶಿಕ್ಷಣವನ್ನು ಪ್ರಾರಂಭಿಸಿದೆ. ಜೂನ್ 10ರಂದು ಸರಳವಾಗಿ ನಡೆದ ಕಂಪ್ಯೂಟರ್ ತರಗತಿಗಳ

ವಿದ್ಯಾಮಾತಾ ಅಕಾಡೆಮಿ ಸುಳ್ಯ ಶಾಖೆಯಲ್ಲಿ ಕಂಪ್ಯೂಟರ್ ತರಗತಿ ಪ್ರಾರಂಭ| ಗ್ರಾಮೀಣ ಸರಕಾರಿ ಅಧಿಕಾರಿಗಳ ಬರವನ್ನು ವಿ. ಅಕಾಡೆಮಿ ನೀಗಿಸುತ್ತಿದೆ; ಲ.ವೀರಪ್ಪ ಕಣ್ಕಲ್ Read More »

ಮರಕಡಿಯುವ ವೇಳೆ‌ ಬಿದ್ದು ಗಾಯಗೊಂಡ ಗಾಯಾಳುವಿನ ಚಿಕಿತ್ಸೆಗೆ ನೆರವಾಗುವಿರಾ?

ಸಮಗ್ರ ನ್ಯೂಸ್: ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಯ ಪುಚ್ಚೆಹಿತ್ಲು ನಿವಾಸಿ ವೃತ್ತಿಪರ ಆಟೋ ಚಾಲಕ ವಿಶ್ವನಾಥ್ ಗೌಡ ಪುಚ್ಚೆಹಿತ್ತಿಲುರವರ ಚಿಕಿತ್ಸೆಗೆ ನೆರವಾಗಲು ಅವರ ಹಿತೈಷಿಗಳು ಮನವಿ ಮಾಡಿದ್ದಾರೆ. ದಿನಗೂಲಿ ಕಾರ್ಮಿಕನಾಗಿ ದುಡಿಯುತ್ತಾ ಕುಟುಂಬಕ್ಕೆ ಆಸರೆಯಾಗಿದ್ದ ಇವರ ಚಿಕಿತ್ಸಾ ವೆಚ್ಚ 5 ಲಕ್ಷ ರೂಪಾಯಿಯಷ್ಟಾಗಿದೆ. ದುಬಾರಿ ವೆಚ್ಚವನ್ನು ಕುಟುಂಬಕ್ಕೆ ಭರಿಸಲು ತುಂಬಾ ಕಷ್ಟಕರವಾದ ಈ ಸಂದರ್ಭದಲ್ಲಿ ದಾನಿಗಳು ಕೈ ಜೋಡಿಸುವಂತೆ ವಿನಂತಿಸಿದ್ದಾರೆ. ಹೃದಯವಂತ ಓದುಗರು ಸಹಾಯಹಸ್ತ

ಮರಕಡಿಯುವ ವೇಳೆ‌ ಬಿದ್ದು ಗಾಯಗೊಂಡ ಗಾಯಾಳುವಿನ ಚಿಕಿತ್ಸೆಗೆ ನೆರವಾಗುವಿರಾ? Read More »

ಬೋಳಿಯಾರ್ ಘಟನೆ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ ಎಸ್‌ಡಿಪಿಐ ನಾಯಕರ ನಿಯೋಗ

ಸಮಗ್ರ ನ್ಯೂಸ್: ವಿಜಯೋತ್ಸವ ಹೆಸರಿನಲ್ಲಿ ಇತ್ತೀಚಿಗೆ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಉಳ್ಳಾಲ ತಾಲೂಕಿನ ಬೋಳಿಯಾರ್ ಮಸೀದಿಯ ಮುಂಭಾಗದಲ್ಲಿ ಅಕ್ರಮ ಕೂಟ ಕಟ್ಟಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಪರಿಣಾಮ ಉಂಟಾದ ಅಹಿತಕರ ಘಟನೆಯ ಹೆಸರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಹಲವಾರು ಮಂದಿ ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ನೆಪದಲ್ಲಿ ಮನೆಗಳಿಗೆ ದಾಳಿ ನಡೆಸಿದ ಪೊಲೀಸರು ಹಲವಾರು ಯುವಕರನ್ನು, ಮಹಿಳೆಯರನ್ನು ಠಾಣೆಗೆ ಕರೆದೊಯ್ದು ಎರಡು, ಮೂರು ದಿನಗಳ ಕಾಲ ಠಾಣೆಯಲ್ಲಿ ಕೂಡಿಹಾಕಿ ಮಾನಸಿಕ ಹಿಂಸೆ ನೀಡಿದ್ದಾರೆ. ಈ

ಬೋಳಿಯಾರ್ ಘಟನೆ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ ಎಸ್‌ಡಿಪಿಐ ನಾಯಕರ ನಿಯೋಗ Read More »

ಹೊರಗಿನವರು ಬಾಯಿ ಮುಚ್ಕೊಂಡಿದ್ರೆ ಒಳ್ಳೇದು| ನಮ್ಮೂರ ಸಮಸ್ಯೆ ನಾವೇ ಸರಿ ಮಾಡ್ಕೊಳ್ತೇವೆ| ಬೊಳಿಯಾರ್ ಘಟನೆ ಬಗ್ಗೆ ಸ್ಪೀಕರ್ ಖಾದರ್‌ ಖಡಕ್ ಎಚ್ಚರಿಕೆ

ಸಮಗ್ರ ನ್ಯೂಸ್: ಬೋಳಿಯಾರ್​​ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಈ ಪ್ರಕರಣವನ್ನು ದೊಡ್ಡದು ಮಾಡುವವರೇ ದೇಶದ್ರೋಹಿಗಳು ಎಂದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಬೋಳಿಯಾರ್ ಎಂಬುದು ಸಹೋದರತೆ ಇರುವ ಊರು. ಕೆಲವೇ ಕೆಲವು ಯುವಕರಿಂದ ಅಲ್ಲಿ ಕೆಟ್ಟ ಹೆಸರು ಬಂದಿದೆ. ಅದನ್ನು ಅಲ್ಲಿನವರು, ಊರಿನವರೇ ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ. ದಯವಿಟ್ಟು ಹೊರಗಿನವರು ಯಾರೂ ಶಾಂತಿ‌ ಕೆಡಿಸಬೇಡಿ. ಹೊರಗಿನವರು ಬಾಯಿ ಮುಚ್ಚಿ ಕೂರುವುದೇ ದೇಶ ಪ್ರೇಮ. ಹೊರಗಿನ ಎಲ್ಲರೂ

ಹೊರಗಿನವರು ಬಾಯಿ ಮುಚ್ಕೊಂಡಿದ್ರೆ ಒಳ್ಳೇದು| ನಮ್ಮೂರ ಸಮಸ್ಯೆ ನಾವೇ ಸರಿ ಮಾಡ್ಕೊಳ್ತೇವೆ| ಬೊಳಿಯಾರ್ ಘಟನೆ ಬಗ್ಗೆ ಸ್ಪೀಕರ್ ಖಾದರ್‌ ಖಡಕ್ ಎಚ್ಚರಿಕೆ Read More »

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ| ಜೈಲುಪಾಲಾಗಿದ್ದ ಆರೋಪಿಗಳಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆರೋಪಿ ಶಶಿರಾಜ್ ಶೆಟ್ಟಿ ಗೆ 25 ದಿನಗಳ ಬಳಿಕ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅದರಂತೆ ನಾಪತ್ತೆಯಾಗಿದ್ದ ಮತ್ತೊಬ್ಬ ಆರೋಪಿ ಪ್ರಮೋದ್ ದಿಡುಪೆಗೂ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮೇ.18 ರಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರಕರಣದ ಆರೋಪಿಯಾದ ಶಶಿರಾಜ್ ಶೆಟ್ಟಿಯನ್ನು ಮೇ.18

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ| ಜೈಲುಪಾಲಾಗಿದ್ದ ಆರೋಪಿಗಳಿಗೆ ಜಾಮೀನು ಮಂಜೂರು Read More »