ಕರಾವಳಿ

ಕಡಬ: ಪ್ರಿಡ್ಜ್ ಸ್ಪೋಟಗೊಂಡು ಅನಾಹುತ| ಸ್ವಲದರಲ್ಲೇ ಪ್ರಾಣಾಪಾಯದಿಂದ ಪಾರಾದ ಮನೆಯವರು

ಸಮಗ್ರ ನ್ಯೂಸ್: ಮನೆಯೊಳಗಿದ್ದ ರೆಫ್ರಿಜರೇಟರ್ ಸ್ಪೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಭಾನುವಾರ( ಜೂ. 9 ರಂದು) ಕಡಬದಲ್ಲಿ ನಡೆದಿದೆ. ಕಡಬದ ಅಡ್ಡಗದ್ದೆ ಅಂಗನವಾಡಿ ಬಳಿ ಇರುವ ಫಾರುಕ್ ಎಂಬವರ ಮನೆಯಲ್ಲಿ ಈ ಅವಘಡ ಭಾನುವಾರ 3 ಘಂಟೆ ಸುಮಾರಿಗೆ ನಡೆದಿದೆ. ಮದ್ಯಾಹ್ನದ ವೇಳೆ ಫಾರುಕ್ ಮತ್ತು ಅವರ ಪತ್ನಿ ಸಹಿತ ಮಕ್ಕಳು ಮನೆಯಲ್ಲಿದ್ದರು. ಬಳಿಕ ಪತ್ನಿ ಮಕ್ಕಳು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದು ಫಾರುಕ್ ಅವರು ತಹಶಿಲ್ದಾರ್ ಕಚೇರಿ ಬಳಿ ಇರುವ

ಕಡಬ: ಪ್ರಿಡ್ಜ್ ಸ್ಪೋಟಗೊಂಡು ಅನಾಹುತ| ಸ್ವಲದರಲ್ಲೇ ಪ್ರಾಣಾಪಾಯದಿಂದ ಪಾರಾದ ಮನೆಯವರು Read More »

ಬಂಟ್ವಾಳ: ಬಿಜೆಪಿ ವಿಜಯೋತ್ಸವದ ಬಳಿಕ ಚಾಕು ಇರಿತ; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಘಟನೆ ನಡೆದಿದೆ. ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್‌ಗೆ ಚೂರಿ ಇರಿಯಲಾಗಿದೆ. ಮೋದಿ ಪದಗ್ರಹಣ ಹಿನ್ನೆಲೆಯಲ್ಲಿ ಬೋಳಿಯಾರ್‌ನಲ್ಲಿ ವಿಜಯೋತ್ಸವ ಆಯೋಜಿಸವಾಗಿತ್ತು. ವಿಜಯೋತ್ಸವ ಮುಗಿಸಿ ಬೋಳಿಯಾರು ಪೇಟೆಯಲ್ಲಿ ನಿಂತಿದ್ದ ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ಈ ವೇಳೆ ಬಂದ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಯುವಕರ ಮೇಲೆ ಅಟ್ಯಾಕ್ ನಡೆದಿದೆ. ಈ

ಬಂಟ್ವಾಳ: ಬಿಜೆಪಿ ವಿಜಯೋತ್ಸವದ ಬಳಿಕ ಚಾಕು ಇರಿತ; ಇಬ್ಬರು ಗಂಭೀರ Read More »

ಹವಾಮಾನ ವರದಿ| ಕರಾವಳಿಗೆ ಜೂ.9ರಂದು ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಧಾರಾಕಾರ ಮಳೆ ಸುರಿಯುತ್ತಿದ್ದು, ಕೆಲಜಿಲ್ಲೆಗಳಲ್ಲಿ ಭಾರಿ ಮಳೆ ಅವಾಂತರವನ್ನು ಸೃಷ್ಟಿಸಿದೆ. ಸದ್ಯ ಭಾರಿ ಮಳೆ ಸಂಭವವಿರುವ ಕಾರಣ ಮುಂದಿನ 24 ಗಂಟೆಗಳಿಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಅರೇಂಜ್ ಅಲರ್ಟ್. ದಕ್ಷಿಣ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ

ಹವಾಮಾನ ವರದಿ| ಕರಾವಳಿಗೆ ಜೂ.9ರಂದು ರೆಡ್ ಅಲರ್ಟ್ ಘೋಷಣೆ Read More »

ಉಡುಪಿ: ಕಾಪು ಬೀಚಿನಲ್ಲಿ ಬೈಕ್, ಪರ್ಸ್ ಇಟ್ಟು ನಾಪತ್ತೆ; ಪಡುಕೆರೆ ಸಮುದ್ರದಲ್ಲಿ ಮೃತದೇಹ ಪತ್ತೆ!

ಸಮಗ್ರ ನ್ಯೂಸ್‌ : ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌, ಪರ್ಸ್ ಇಟ್ಟು ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ. ಮೃತ ಯುವಕನನ್ನು ಕಾಪು ಪಡುಗ್ರಾಮದ ಕರಣ್ ಸಾಲ್ಯಾನ್ (20) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆಯಿಂದ ಮನೆಯಿಂದ ನಾಪತ್ತೆ ಆಗಿದ್ದ ಕರಣ್ ಸಾಲ್ಯಾನ್ ಅವರ ಬೈಕು, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿತ್ತು. ಕಾಣೆಯಾದ ಬಗ್ಗೆ

ಉಡುಪಿ: ಕಾಪು ಬೀಚಿನಲ್ಲಿ ಬೈಕ್, ಪರ್ಸ್ ಇಟ್ಟು ನಾಪತ್ತೆ; ಪಡುಕೆರೆ ಸಮುದ್ರದಲ್ಲಿ ಮೃತದೇಹ ಪತ್ತೆ! Read More »

ಪುತ್ತೂರು:ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳ ವಿತರಣೆ

ಸಮಗ್ರ ನ್ಯೂಸ್: ಮುಳಿಯ ಜ್ಯುವೆಲ್ಸ್‌ನಿಂದ ವಿಶ್ವ ಪರಿಸರ ದಿನಾಚರಣೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಳಿಯ ಜ್ಯುವೆಲ್ಸ್ ವತಿಯಿಂದ ಮುಳಿಯ ವೃಕ್ಷಾರೋಪಣ ಕಾರ್ಯಕ್ರಮದ ಮೂಲಕ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಗ್ರಾಹಕರಿಗೆ ಗಿಡ ವಿತರಣೆ ಮಾಡಲಾಯಿತು. ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಕುಮಾರ್ ಹೊಳ್ಳ ಅವರಿಗೆ ಗಿಡಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿದರು. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು, ನೆಲ್ಯಾಡಿ, ಸೋಮವಾರಪೇಟೆ ಶಾಖೆಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಏಕಕಾಲಕ್ಕೆ ನಡೆಯಿತು.

ಪುತ್ತೂರು:ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳ ವಿತರಣೆ Read More »

ಬೆಳ್ತಂಗಡಿ: ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ಸಮಗ್ರ ನ್ಯೂಸ್‌ : ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಅವರ ಆರೋಗ್ಯವನ್ನು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ವಿಚಾರಿಸಿದರು. ಜೂನ್ 4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಆಸ್ಪತ್ರೆಗೆ ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಸಂಸದರ ಜೊತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬಿಜೆಪಿ ಕಾರ್ಯಕರ್ತರು ಜೊತೆಯಲ್ಲಿದ್ದರು.

ಬೆಳ್ತಂಗಡಿ: ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ Read More »

ಉಡುಪಿ: ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಭಜರಂಗದಳ ಕಾರ್ಯಕರ್ತರು

ಸಮಗ್ರ ನ್ಯೂಸ್‌ : ಪರ್ಕಳ ಸಮೀಪದ ಹೆರ್ಗದಲ್ಲಿ ಕಾಮಗಾರಿ ಹಂತದಲ್ಲಿದ್ದ ಬಾವಿಗೆ ಬಿದ್ದ ಹಸುವನ್ನು ಭಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿ ಜೀವದಾನ ನೀಡಿದ್ದಾರೆ. ಸುಮಾರು 40 ಅಡಿ ಆಳದ ಬಾವಿಗೆ ಈ ಹಸು ಬಿದ್ದಿತ್ತು. ತಕ್ಷಣ ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಆಗಮಿಸಿದ ಪ್ರಾಣೇಶ್ ಪರ್ಕಳ ನೇತೃತ್ವದ ಕಾರ್ಯಕರ್ತರ ತಂಡ ಕಾರ್ಯಾಚರಣೆ ನಡೆಸಿ ಗಾಯಾಳು ಹಸುವನ್ನು ರಕ್ಷಿಸಿತು. ಪರ್ಕಳ ಬಜರಂಗದಳದ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪ್ರಾಣೇಶ್ ಪರ್ಕಳ, ಶಶಿಕಾಂತ್ ನಡಿದಾರೆ,

ಉಡುಪಿ: ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಭಜರಂಗದಳ ಕಾರ್ಯಕರ್ತರು Read More »

ನೆಲ್ಯಾಡಿ: ಕಾರು ಮತ್ತು ಬೈಕ್‌ ನಡುವೆ ಅಪಘಾತ| ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೈಕ್ ಹಾಗೂ ಮಹೀಂದ್ರಾ ಎಕ್ಸ್’ಯುವಿ 700 ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ಉದನೆ ಸಮೀಪದ ನೇಲ್ಯಡ್ಕ ನಾಳಾಲು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಹೀಂದ್ರಾ ಎಕ್ಸ್’ಯುವಿ 700 ಕಾರು ಹಾಗೂ ಬೈಕ್ ನಡುವೆ ನೇಲ್ಯಡ್ಕ ಸಮೀಪ ಅಪಘಾತ ಸಂಭವಿಸಿದೆ.

ನೆಲ್ಯಾಡಿ: ಕಾರು ಮತ್ತು ಬೈಕ್‌ ನಡುವೆ ಅಪಘಾತ| ಸವಾರ ಸ್ಥಳದಲ್ಲೇ ಸಾವು Read More »

ನೀಟ್ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ಮಂಗಳೂರಿನ ಅರ್ಜುನ್

ಸಮಗ್ರ ನ್ಯೂಸ್: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್-ಯುಜಿ) ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್ (720ಕ್ಕೆ 720 ಅಂಕ) ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ದೆಹಲಿಯ ಏಮ್ಸ್‌ನಲ್ಲಿ ವೈದ್ಯಕೀಯ ಶಿಕ್ಷಣ ಓದುವುದು ನನ್ನ ಕನಸಾಗಿತ್ತು. ಕಾಲೇಜು ವೇಳಾಪಟ್ಟಿಯನ್ನು ಚಾಚೂತಪ್ಪದೆಅನುಸರಿಸುತ್ತಿದ್ದೆ. ಯಾವುದೇ ಅನುಮಾನ ಇದ್ದರೂ ಉಪನ್ಯಾಸಕರು ಪರಿಹರಿಸುತ್ತಿದ್ದರು. ಕಠಿಣ ಪರಿಶ್ರಮ ಮತ್ತು ಏಕಾಗ್ರತೆಯ ಓದು ಗುರಿ ಸಾಧನೆಗೆ ಸಹಕಾರಿಯಾಯಿತು’ ಎಂದು ಅರ್ಜುನ್ ಪ್ರತಿಕ್ರಿಯಿಸಿದ್ದಾರೆ. ಅರ್ಜುನ್ ತಂದೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ

ನೀಟ್ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ಮಂಗಳೂರಿನ ಅರ್ಜುನ್ Read More »

ಪಟಾಕಿ ಸಿಡಿಸಿದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತಲ್ವಾರ್ ನಿಂದ ಹಲ್ಲೆ ನಡೆಸಿದ ಘಟನೆ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಳದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ(33) ಹಲ್ಲೆಗೊಳಾಗಾದವರು. ಕಳೆಂಜದ ಕುಶಲಪ್ಪ ಗೌಡ ಕಜೆ ಹಲ್ಲೆ ಆರೋಪಿ. ಈತ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ. ರಾಜೇಶ್‌ಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಪಟಾಕಿ ಸಿಡಿಸಿದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ Read More »