ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ| ಮಳೆಯ ನಡುವೆಯೂ ನಿಲ್ಲದ ದೈವ ನರ್ತನ ಸೇವೆ
ಸಮಗ್ರ ನ್ಯೂಸ್: ಉಡುಪಿ, ದಕ್ಷಿಣ ಕನ್ನಡ ಜಿಲಲೆಗಳು ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಮೇ 22ರಿಂದ 24ರವರೆಗೆ ಗುಡುಗು-ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಬೆಂಗಳೂರಿನ ಹವಾಮಾನ ಕೇಂದ್ರ ನೀಡಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 22 ರಂದು ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯಲ್ಲೂ ನಡೆಯಿತು ದೈವನರ್ತನ:ಕರಾವಳಿಯಲ್ಲಿ ಮುಂಗಾರು […]









