ಕರಾವಳಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೊಬ್ಬ ಆರೋಪಿ ಮುಂಬೈನಲ್ಲಿ ಬಂಧನ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಕ್ಕೆ ಹಾರಲು ಯತ್ನಿಸುತ್ತಿದ್ದ ಮತ್ತೊಬ್ಬ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಲಾಗಿದೆ. ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಬಂಧಿತ ಆರೋಪಿ. ರಿಯಾಜ್ ಯೂಸಫ್ ಹಾರಳ್ಳಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಮಂಗಳವಾರ ಬಂಧಿಸಿದೆ. ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಕಳೆದ ತಿಂಗಳು ಮನ್ಸೂರ್ ಪಾಷಾ ಜತೆಗೆ ತಲೆಮರೆಸಿಕೊಂಡಿದ್ದ ಮುಸ್ತಫಾ ಪೈಚಾರ್ ನನ್ನು ಬಂಧಿಸಿದ ಒಂದು ತಿಂಗಳ ನಂತರ ಈ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೊಬ್ಬ ಆರೋಪಿ ಮುಂಬೈನಲ್ಲಿ ಬಂಧನ Read More »

ದ.ಕ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಗೆ ತಿರುವಳ್ಳೂರ್ ನಲ್ಲಿ ಭರ್ಜರಿ ಜಯ

ಸಮಗ್ರ ನ್ಯೂಸ್: ಐಎಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿ ಬಳಿಕ ರಾಜಕೀಯ ರಂಗವನ್ನು ಪ್ರವೇಶಿಸಿದ್ದ ಸಸಿಕಾಂತ್ ಸೆಂಥಿಲ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಸಸಿಕಾಂತ್ ಸೆಂಥಿಲ್, ಜಯಭೇರಿ ಬಾರಿಸಿದ್ದಾರೆ.ಸಸಿಕಾಂತ್ ಸೆಂಥಿಲ್ ಕರ್ನಾಟಕದ ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಹೆಸರುವಾಸಿಯಾಗಿದ್ದರು.

ದ.ಕ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಗೆ ತಿರುವಳ್ಳೂರ್ ನಲ್ಲಿ ಭರ್ಜರಿ ಜಯ Read More »

ದ.ಕ ಲೋಕಸಭಾ ಕ್ಷೇತ್ರದಲ್ಲಿ ದಿ. ಸೌಜನ್ಯಾಳಿಗೆ 20 ಸಾವಿರಕ್ಕೂ ಅಧಿಕ ಮತ!! ನ್ಯಾಯಯುತ ಹೋರಾಟಕ್ಕೆ ಅಭೂತಪೂರ್ವ ಬೆಂಬಲ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಪಕ್ಷಗಳ ಮತಬೇಟೆಯ ಜೊತೆ ಧರ್ಮಸ್ಥಳದಲ್ಲಿ ಕೊಲೆಯಾದ ದಿ.ಸೌಜನ್ಯಾ ಪರವಾದ ಕ್ಯಾಂಪೇನ್‌ ಕೂಡಾ ಜೋರಾಗಿ ನಡೆದಿತ್ತು. ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯುವುದಕ್ಕಾಗಿ ನೋಟಾಗೆ ಮತ ಹಾಕುವಂತೆ ಕ್ಯಾಂಪೇನ್‌ ಮಾಡಲಾಗಿತ್ತು. ಬೆಳ್ತಂಗಡಿ ತಾಲ್ಲೂಕಿನಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ನೋಟಾಗೆ ಮತ ಹಾಕುವಂತೆ ಕ್ಯಾಂಪೇನ್‌ ಮಾಡಲಾಗಿತ್ತು. ಇದಕ್ಕೆ ಮತದಾರರು ದೊಡ್ಡ ಮಟ್ಟದಲ್ಲಿ ಸ್ಪಂದಿಸಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ನೋಟಾ

ದ.ಕ ಲೋಕಸಭಾ ಕ್ಷೇತ್ರದಲ್ಲಿ ದಿ. ಸೌಜನ್ಯಾಳಿಗೆ 20 ಸಾವಿರಕ್ಕೂ ಅಧಿಕ ಮತ!! ನ್ಯಾಯಯುತ ಹೋರಾಟಕ್ಕೆ ಅಭೂತಪೂರ್ವ ಬೆಂಬಲ Read More »

ದ.ಕನ್ನಡದಲ್ಲಿ ಬಿಜೆಪಿಗೆ ಭರ್ಜರಿ ಜಯ| ಕ್ಯಾಪ್ಟನ್ ಬ್ರಿಜೇಶ್ ಚೌಟಾ ಇನ್ಮುಂದೆ ಮಂಗಳೂರು ಎಂಪಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಅಪಾರ ಅಭಿಮಾನಿಗಳನ್ನು ಹೊಂದಿರುವ ಕರ್ನಾಟಕದ ಬಲಿಷ್ಠ ಲೋಕ ಸಭಾ ಕ್ಷೇತ್ರವಾಗಿರುವ ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಬ್ರಿಜೇಶ್​ ಚೌಟ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪದ್ಮರಾಜ್​ ವಿರುದ್ಧ ಭರ್ಜರಿ ಮತಗಳ ಅಂತರದ ವಿಜಯ ಸಾಧಿಸಿದ್ದಾರೆ. ಈ ಮೂಲಕ ಕೇಸರಿ ಪಕ್ಷ ಪಾರಮ್ಯ ಇಲ್ಲಿ ಮುಂದುವರಿದಿದೆ. ಆಡಳಿತ ವಿರೋಧಿ ಅಲೆಯನ್ನು ಮೀರುವ ಬಿಜೆಪಿಯ ತಂತ್ರ ಫಲಿಸಿದ್ದು, ಹೊಸ ಮುಖವೊಂದು ಪಾರ್ಲಿಮೆಂಟ್​ಗೆ ಏರಿದೆ. ಬಿಜೆಪಿ, ವಿಶೇಷವಾಗಿ ನರೇಂದ್ರ ಮೋದಿ ಕರ್ನಾಟಕದ

ದ.ಕನ್ನಡದಲ್ಲಿ ಬಿಜೆಪಿಗೆ ಭರ್ಜರಿ ಜಯ| ಕ್ಯಾಪ್ಟನ್ ಬ್ರಿಜೇಶ್ ಚೌಟಾ ಇನ್ಮುಂದೆ ಮಂಗಳೂರು ಎಂಪಿ Read More »

ಉಡುಪಿ- ಚಿಕ್ಕಮಗಳೂರು ಕ್ಷೇತ್ರ| ಬಿಜೆಪಿ‌ ಕೈಹಿಡಿದ ಮತದಾರ| ಕೋಟಾಗೆ ಭರ್ಜರಿ‌ ಗೆಲುವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಿರುದ್ಧ ಗೆಲುವು ಸಾಧಿಸಿದ್ದು, ಮತ ಎಣಿಕೆ ಕೇಂದ್ರ ಸಮೀಪ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಅವರು ಗೆಲುವಿನ ನಗೆ ಬೀರಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಅವರನ್ನು ಮೇಲಕ್ಕೆತ್ತಿ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಈ ಸಂದರ್ಭ ಶಾಸಕರಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ,

ಉಡುಪಿ- ಚಿಕ್ಕಮಗಳೂರು ಕ್ಷೇತ್ರ| ಬಿಜೆಪಿ‌ ಕೈಹಿಡಿದ ಮತದಾರ| ಕೋಟಾಗೆ ಭರ್ಜರಿ‌ ಗೆಲುವು Read More »

ಕುಂಭದ್ರೋಣ ಮಳೆಗೆ ತತ್ತರಿಸಿದ ಕರಾವಳಿ| ಪುತ್ತೂರು ಜಲಾವೃತ; ಬಂಟ್ವಾಳದಲ್ಲಿ ಸಿಡಿಲ ಹೊಡೆತಕ್ಕೆ ಮಹಿಳೆಯರಿಬ್ಬರು ಗಂಭೀರ

ಸಮಗ್ರ ನ್ಯೂಸ್: ಸೋಮವಾರ ಸಂಜೆ(ಜೂ. ೩) ಗುಡುಗು ಸಹಿತ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಜಲಾವೃತಗೊಂಡಿದೆ. ಮಳೆಯ ಆರ್ಭಟಕ್ಕೆ ಪುತ್ತೂರಿನ ದರ್ಬೆಯಲ್ಲಿ ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಅಲ್ಲದೇ ಕೋರ್ಟ್ ರೋಡ್ ಬಳಿಯ ಜ್ಯುವೆಲ್ಲರಿ ಅಂಗಡಿಯೊಂದು ಜಲಾವೃತಗೊಂಡಿದೆ. ಇನ್ನು ಭಾರೀ ಮಳೆಗೆ ರಸ್ತೆಗಳು ನದಿಯಂತಾದವು. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಯಲ್ಲೇ ನೀರು ನಿಂತಿದೆ. ಹೀಗಾಗಿ ರಸ್ತೆಯಲ್ಲಿ ನೀರು ಹೆಚ್ಚಾಗಿ ಪಕ್ಕದ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಬಂಟ್ವಾಳದ

ಕುಂಭದ್ರೋಣ ಮಳೆಗೆ ತತ್ತರಿಸಿದ ಕರಾವಳಿ| ಪುತ್ತೂರು ಜಲಾವೃತ; ಬಂಟ್ವಾಳದಲ್ಲಿ ಸಿಡಿಲ ಹೊಡೆತಕ್ಕೆ ಮಹಿಳೆಯರಿಬ್ಬರು ಗಂಭೀರ Read More »

ಮಂಗಳೂರು: ಕಮಾಲ್ ಮಾಡದ ನೋಟಾ| ಲೀಡ್ ಹೆಚ್ಚಿಸಿಕೊಂಡ ಬ್ರಿಜೇಶ್ ‌ಚೌಟಾ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಈಗಾಗಲೇ ಎರಡು ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ತನ್ನ ಹತಿರದ ಸ್ಪರ್ಧಿ ಕಾಂಗ್ರೆಸ್‌ ನ ಪದ್ಮರಾಜ್‌ ಆರ್‌ ಪೂಜಾರಿ ಗಿಂತ 20 ಸಾವಿರ ಮತಗಳಿಂದ ಮುಂದಿದ್ದಾರೆ. ಕ್ಷೇತ್ರದಲ್ಲಿ ನೋಟಾ ಮತಗಳು ಹೆಚ್ಚಾಗುತ್ತವೆ ಎಂಬ ನಿರೀಕ್ಷೆಯಿದ್ದರೂ ಅದು ಸುಳ್ಳಾಗಿದೆ. ನೋಟಾ ಗೆ ಸದ್ಯ 4134 ಮತ ಬಿದ್ದಿದೆ. ಚೌಟಾ 20 ಸಾವಿರ ಮತಗಳ ಲೀಡ್ ನಲ್ಲಿದ್ದಾರೆ.

ಮಂಗಳೂರು: ಕಮಾಲ್ ಮಾಡದ ನೋಟಾ| ಲೀಡ್ ಹೆಚ್ಚಿಸಿಕೊಂಡ ಬ್ರಿಜೇಶ್ ‌ಚೌಟಾ Read More »

ಬೆಳ್ತಂಗಡಿ: ಅರಣ್ಯಾಧಿಕಾರಿಗಳ ಜೊತೆಗೆ ಗಲಾಟೆ ನಡೆಸಿದ ಪ್ರಕರಣ| ಶಾಸಕ ಹರೀಶ್ ಪೂಂಜಾ, ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಮೇಲೆ‌ ಚಾರ್ಜ್ ಶೀಟ್

ಸಮಗ್ರ ನ್ಯೂಸ್: ಅರಣ್ಯ ಇಲಾಖೆಯ ಜಾಗದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಗಲಾಟೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.1ರಂದು (ದೋಷರೋಪ ಪಟ್ಟಿ)ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಲೋಲಾಕ್ಷ ಎಂಬಾತ ಮೀಸಲು ಅರಣ್ಯ ಇಲಾಖೆಯ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿದ್ದನ್ನು ಉಪ್ಪಿನಂಗಡಿ ಅರಣ್ಯ ಇಲಾಖೆ ಕಿತ್ತು ಹಾಕಿದ್ದರು. ಇದರ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್

ಬೆಳ್ತಂಗಡಿ: ಅರಣ್ಯಾಧಿಕಾರಿಗಳ ಜೊತೆಗೆ ಗಲಾಟೆ ನಡೆಸಿದ ಪ್ರಕರಣ| ಶಾಸಕ ಹರೀಶ್ ಪೂಂಜಾ, ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಮೇಲೆ‌ ಚಾರ್ಜ್ ಶೀಟ್ Read More »

ಉಡುಪಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ – ಸವಾರ ಮೃತ್ಯು

ಸಮಗ್ರ ನ್ಯೂಸ್‌ : ಕೆಎಸ್‌ಆರ್‌ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್‌ನಲ್ಲಿ ನಡೆದಿದೆ. ಮೃತ ಬೈಕ್‌ ಸವಾರನನ್ನು ಕೋಟತಟ್ಟು ಕಲ್ಮಾಡಿ ರಸ್ತೆಯ ವಾಸುದೇವ ಗಾಣಿಗ (33) ಎಂದು ಗುರುತಿಸಲಾಗಿದೆ. ವಾಸುದೇವ ರಾತ್ರಿ ಸುಮಾರು 12 ಗಂಟೆಗೆ ತೆಕ್ಕಟ್ಟೆ ಸಾಯಿಗ್ರಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದರು. ಅವರು ಕೋಟ ಸರ್ಕಲ್ ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರಿನಿಂದ ಶಿರಸಿ ಕಡೆ

ಉಡುಪಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ – ಸವಾರ ಮೃತ್ಯು Read More »

ಉಡುಪಿ: ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿಯ ಬಂಧನ

ಸಮಗ್ರ ನ್ಯೂಸ್‌ : ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಪಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ಆರೋಪಿಗಳನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಸಿನಿಮೀಯ ರೀತಿಯ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ ಪರಂಗಿಪೇಟೆ ಎಂಬವರನ್ನು ಬಂಧಿಸಿದ್ದಾರೆ. ಉಡುಪಿಯಿಂದ ಕಾಪು‌ ಕಡೆಗೆ ಬರುತ್ತಿದ್ದ ಕಾಪು‌ ಸಿಐ ಜಯಶ್ರೀ ಮಾನೆ ಅವರು ಉದ್ಯಾವರ ಸೇತುವೆ

ಉಡುಪಿ: ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿಯ ಬಂಧನ Read More »