ಕರಾವಳಿ

ಉಡುಪಿ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಸಮಗ್ರ ನ್ಯೂಸ್ : ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ ಹಾಕಿದರು. ಈ ಹಿಂದೆ ಹಲವು ಬಾರಿ ಪ್ರತಿಭಟನೆ ಹಾಗೂ ಮನವಿ ನೀಡಿದ ಬಳಿಕ ಸಾಸ್ತಾನ ಟೋಲ್ ಪ್ಲಾಝಾದಲ್ಲಿ ಸ್ಥಳೀಯರಿಗೆ ಕೆಲವು ವರ್ಷಗಳಿಂದ ಶುಲ್ಕ ವಿನಾಯತಿ ನೀಡಲಾಗುತ್ತಿತ್ತು. ಆದರೆ ಈಗ ನವಯುಗ ಕಂಪೆನಿ ಟೋಲ್ ಪ್ಲಾಜಾವನ್ನು ಹೊಸ ಕಂಪೆನಿಗೆ ಮಾರಾಟ ಮಾಡಿದ್ದು, ಆ ಬಳಿಕದಿಂದ ಸ್ಥಳೀಯ ವಾಹನಗಳಿಗೂ ಫಾಸ್ಟ್ಯಾಗ್ ಮೂಲಕ […]

ಉಡುಪಿ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ Read More »

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಅರೆಸ್ಟ್‌

ಸಮಗ್ರ ನ್ಯೂಸ್‌ : ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿ ಮೇಲೆ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಮೇಲೆ ಎಫ್ ಐ ಆರ್ ದಾಖಲಾದ ಹಿನ್ನೆಲೆ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾತ್ರೋ ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹರೀಶ್ ಪೂಂಜ ದೌಡಾಯಿಸಿದ್ದು, ಆರೋಪಿಯನ್ನ ಬಿಡುಗಡೆ ಮಾಡುವಂತೆ ಹೈ ಡ್ರಾಮಾ ಮಾಡಿದ್ದಾರೆ. ಅಮಾಯಕ ಕಾರ್ಯಕರ್ತನನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸರಿಗೆ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಅರೆಸ್ಟ್‌ Read More »

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಸಮಗ್ರ ನ್ಯೂಸ್‌ : ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು ವಾಹನದ ವೀಡಿಯೋ ಚಿತ್ರೀಕರಿಸಿದ ಸಾರ್ವಜನಿಕರೊಬ್ಬರು ಸದ್ರಿ ವಾಹನದ ವಿಮಾ ಅವಧಿಯು ಮುಕ್ತಾಯವಾಗಿರುವುದಾಗಿಯೂ, ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿಯೂ ಸುಳ್ಳು ಸಂದೇಶವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಕುರಿತು ಸ್ಪಷ್ಠನೆ ನೀಡಿರುವ ಪೊಲೀಸ್ ಇಲಾಖೆ, ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳೂ ಕರ್ನಾಟಕ ಗವರ್ನಮೆಂಟ್ ಇನ್ಯುರೆನ್ಸ್ ಡಿಪಾರ್ಟ್‌ಮೆಂಟ್ (ಕೆ.ಜಿ.ಐ.ಡಿ)

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ Read More »

ಉಡುಪಿ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಸಮಗ್ರ ನ್ಯೂಸ್ : ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ನಾಪತ್ತೆ ಯಾದ ಯುವತಿ, 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2542248, ಮೊ.ನಂ.9480805452, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಮೊ.ನಂ: 9480805400 ಅನ್ನು ಸಂಪರ್ಕಿಸಬಹುದಾಗಿದೆ ಎಂದು

ಉಡುಪಿ: ಕಾಲೇಜಿಗೆ ಹೋದ ಯುವತಿ ನಾಪತ್ತೆ Read More »

ಪುತ್ತೂರು: ಕರ್ನಾಟಕದ ಆರ್ಥಿಕ ಸ್ಥಿತಿ, ಪಾಕಿಸ್ತಾನದ ಆರ್ಥಿಕ ಸ್ಥಿತಿಯ ಹಂತಕ್ಕೆ ತಲುಪಿದೆ| ಸಂಜೀವ ಮಠಂದೂರು

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ ಆಗಿಲ್ಲ. ಅಂಗನವಾಡಿ ಕಟ್ಟಡ ಬಿಡಿ ದುರಸ್ಥಿಗೂ ಹಣವಿಲ್ಲ. ಹೈನುಗಾರರಿಗೆ ಪ್ರೋತ್ಸಾಹ ಧನವಿಲ್ಲ ಹೀಗೆ ಕರ್ನಾಟಕದ ಆರ್ಥಿಕ ಸ್ಥಿತಿ ಪಾಕಿಸ್ತಾನದ ಆರ್ಥಿಕ ಸ್ಥಿತಿಯ ಹಂತಕ್ಕೆ ತಲುಪಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸರಕಾರ ಒಂದು ವರ್ಷದಲ್ಲಿ ಎನೂ ಮಾಡಿಲ್ಲ ಎಂಬುದಕ್ಕೆ ಹಲವು ಉದಾಹರಣೆ ಇದೆ. ಇವತ್ತು ಪುತ್ತೂರಿನಲ್ಲಿ

ಪುತ್ತೂರು: ಕರ್ನಾಟಕದ ಆರ್ಥಿಕ ಸ್ಥಿತಿ, ಪಾಕಿಸ್ತಾನದ ಆರ್ಥಿಕ ಸ್ಥಿತಿಯ ಹಂತಕ್ಕೆ ತಲುಪಿದೆ| ಸಂಜೀವ ಮಠಂದೂರು Read More »

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ‌ ಕಾರೊಂದು ಚರಂಡಿಗಿಳಿದ ಘಟನೆ ಸುಳ್ಯ – ಬೆಳ್ಳಾರೆ ಹೆದ್ದಾರಿಯ ಬೇಂಗಮಲೆ ಎಂಬಲ್ಲಿ ಮೇ.17ರಂದು ನಡೆದಿದೆ. ಸುಳ್ಯದಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಆಲ್ಟೊ -800 ಕಾರು ಬೇಂಗಮಲೆ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ಪರಿಣಾಮ ರಸ್ತೆ ಪಕ್ಕದ ಚರಂಡಿಗಿಳಿದು ಜಖಂಗೊಂಡಿದೆ. ಚಾಲಕ ಮಾತ್ರ ಇದ್ದು, ಅಪಾಯದಿಂದ ಪಾರಾಗಿದ್ದಾನೆ.

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು Read More »

ಹವಾಮಾನ ವರದಿ| ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ| ಮೇ.18 ಮತ್ತು 19ರಂದು ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18ರಿಂದ 21ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಹವಾಮಾನ ವರದಿ| ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ| ಮೇ.18 ಮತ್ತು 19ರಂದು ಭಾರೀ ಮಳೆ ಸಾಧ್ಯತೆ Read More »

ಪುತ್ತೂರು: ಜಾಹೀರಾತು ಹೋರ್ಡಿಂಗ್ಸ್ ತೆರವಿಗೆ ಕ್ರಮ – ಎಸಿ

ಸಮಗ್ರ ನ್ಯೂಸ್: ಮುಂಬೈನಲ್ಲಿ ಇತ್ತೀಚೆಗೆ ಬಂದ ಬಿರುಗಾಳಿಗೆ ಭಾರೀ ದೊಡ್ಡ ಗಾತ್ರದ ಜಾಹಿರಾತು ಫಲಕ ಪೆಟ್ರೋಲ್ ಪಂಪ್ ಮೇಲೆ ಬಿದ್ದು 14ಕ್ಕೂ ಅಧಿಕ ಮಂದಿ ಸಾವನಪ್ಪಿದ್ದರು. ಈ ಪ್ರಕರಣದ ಬೆನ್ನಲ್ಲೇ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು ಅಪಾಯಕಾರಿಯಾಗಿರುವ ಜಾಹಿರಾತು ಫಲಕಗಳನ್ನು ತೆಗೆಯಲು ಮುಂದಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಜಿಲ್ಲಾಧಿಕಾರಿಯವರು ಈಗಾಗಲೇ ಎಲ್ಲಾ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನಲೆ ಉಪವಿಭಾಗದ ಕಡೆಯಿಂದ

ಪುತ್ತೂರು: ಜಾಹೀರಾತು ಹೋರ್ಡಿಂಗ್ಸ್ ತೆರವಿಗೆ ಕ್ರಮ – ಎಸಿ Read More »

ಮಡಿಕೇರಿ : ಮೇ.16 ರಂದು ವಿದ್ಯುತ್ ವ್ಯತ್ಯಯ

ಸಮಗ್ರ ನ್ಯೂಸ್: ಕುಶಾಲನಗರ-ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಮೇ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ. ಆದ್ದರಿಂದ ಶಾಂತಳ್ಳಿ, ಗೌಡಳ್ಳಿ, ಸೋಮವಾರಪೇಟೆ ಪಟ್ಟಣ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ಬೇಲೂರು, ಕುಂಬೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಮಡಿಕೇರಿ : ಮೇ.16 ರಂದು ವಿದ್ಯುತ್ ವ್ಯತ್ಯಯ Read More »

ಸುಬ್ರಹ್ಮಣ್ಯ: ಮರ ಬಿದ್ದು ಮಹಿಳೆ ಸಾವು

ಸಮಗ್ರ ನ್ಯೂಸ್: ಗಾಳಿ ಮಳೆಗೆ ಮರ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಲ್ಕುಂದದಲ್ಲಿ ಮೇ15ರ ಸಂಜೆ ನಡೆದಿದೆ. ಮೃತ ಮಹಿಳೆಯನ್ನು ಇಲ್ಲಿನ ನಿವಾಸಿ ಮೀನಾಕ್ಷಿ ಎಂದು ಗುರುತಿಸಲಾಗಿದೆ. ತೋಟದಲ್ಲಿ ಕಟ್ಟಿದ್ದ ಕರುವನ್ನು ಬಿಡಿಸಲು ಹೋಗುವ ಸಂದರ್ಭದಲ್ಲಿ ಬೀಸಿದ ವಿಪರೀತ ಗಾಳಿ ಸಹಿತ ಮಳೆಗೆ ಮರ ಮುರಿದು ಬಿದ್ದಿದ್ದು, ಇದರಿಂದ ಅವರು ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ಮರ ಬಿದ್ದು ಮಹಿಳೆ ಸಾವು Read More »