ಕರಾವಳಿ

ಪುತ್ತೂರು:ಮುಳಿಯ ಚಿನ್ನೋತ್ಸವ ಸ್ಪೆಷಲ್|ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಸಮಗ್ರ ನ್ಯೂಸ್: ಶಿವನಿಗೆ ಸಂಬಂಧಿಸಿದ ರುದ್ರಾಕ್ಷ ಕಂಕಣವು ಜನಸಾಮಾನ್ಯರಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಹಿಂದೂ ಧರ್ಮದಲ್ಲಿ, ರುದ್ರಾಕ್ಷ ಕಂಕಣವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ, ಇದು ಜೀವನಕ್ಕೆ ಸಂಬಂಧಿಸಿದ ಕಷ್ಟಗಳು ಮತ್ತು ಸಮಸ್ಯೆಗಳನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡುತ್ತದೆ. ಅಂತಹ ರುದ್ರಾಕ್ಷಿಗಳನ್ನು ಇತ್ತೀಚಿಗಿನ ದಿನದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ ರುದ್ರಾಕ್ಷಿ ಕಲೆಕ್ಷನ್ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಅನಾವರಣಗೊಂಡಿದೆ. ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ […]

ಪುತ್ತೂರು:ಮುಳಿಯ ಚಿನ್ನೋತ್ಸವ ಸ್ಪೆಷಲ್|ರುದ್ರಾಕ್ಷಿ ಕಲೆಕ್ಷನ್ ಅನಾವರಣ Read More »

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ| ಸವಾರ ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್‌ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಜೇಶ್ವರ – ಸುಬ್ರಹ್ಮಣ್ಯ ಹೆದ್ದಾರಿಯ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಇಂದು (ಮೇ.15) ಬೆಳಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ (23) ಎಂದು ಗುರುತಿಸಲಾಗಿದೆ. ಮೋಕ್ಷಿತ್ ಗೌಡ ಅವರು ಪುರುಷರಕಟ್ಟೆಯಲ್ಲಿರುವ ಬಿಂದು ಫ್ಯಾಕ್ಟರಿಯಲ್ಲಿ ಸಿಫಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪುರುಷರಕಟ್ಟೆಯಲ್ಲಿ ರೂಂ ಮಾಡಿಕೊಂಡು ಉಳಿದುಕೊಂಡಿದ್ದ ಮೋಕ್ಷಿತ್

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ| ಸವಾರ ಸ್ಥಳದಲ್ಲೇ ದುರ್ಮರಣ Read More »

ಬೆಳ್ತಂಗಡಿ: ಬೆನ್ನು ತಟ್ಟಿ ಆರೋಗ್ಯ ವಿಚಾರಿಸಿದ ಪಶುವೈದ್ಯ| ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ| ಪಶು ವೈದ್ಯಾಧಿಕಾರಿಯ ಬಂಧಿಸಿದ ಪೊಲೀಸರು!!

ಸಮಗ್ರ ನ್ಯೂಸ್: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಿಂದ ಮರಳುತ್ತಿದ್ದಂತೆ ಆತನನ್ನು ಕಂಡು ಪರಿಚಿತ‌‌ ಪಶು ವೈದ್ಯಾಧಿಕಾರಿಯೊಬ್ಬರು ಬೆನ್ನುತಟ್ಟಿ ವಿಚಾರಿಸಿದ್ದು, ಇದೇ ವೇಳೆ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ. ಆರೋಪಿ ಡಾಕ್ಟರ್ ಕುಮಾರ್ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕೊಕ್ಕಡ ಗ್ರಾಮದ ಕೃಷ್ಣ ಯಾನೆ ಕಿಟ್ಟ (58) ಮೃತ ದುರ್ದೈವಿ. ಕೊಕ್ಕಡದ‌‌‌ ಸ್ಥಳೀಯ ನಿವಾಸಿ ಮೃತ ಕೃಷ್ಣ ಅವರು ವಿಪರೀತ ಜ್ವರ ಇದ್ದ

ಬೆಳ್ತಂಗಡಿ: ಬೆನ್ನು ತಟ್ಟಿ ಆರೋಗ್ಯ ವಿಚಾರಿಸಿದ ಪಶುವೈದ್ಯ| ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ| ಪಶು ವೈದ್ಯಾಧಿಕಾರಿಯ ಬಂಧಿಸಿದ ಪೊಲೀಸರು!! Read More »

ಉಡುಪಿ: ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಸರಕಾರ ಪತನ- ಶಾಸಕ ಯಶ್ ಪಾಲ್ ಸುವರ್ಣ

ಸಮಗ್ರ ನ್ಯೂಸ್‌ : ಕಾಂಗ್ರೆಸ್ ಸರ್ಕಾರ ಜನರ ಮನ ಗೆಲ್ಲುವಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ ನ ಶಾಸಕರೇ ಸರ್ಕಾರದ ವಿರುದ್ಧ ಬೇಸರಗೊಂಡಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದಂತೆ ಕಾಂಗ್ರೆಸ್ ಸರಕಾರದ ಪತನಕ್ಕೆ ಮುಹೂರ್ತ ನಿಗದಿಯಾಗುತ್ತದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಉರುಳುತ್ತೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಅಭಿವೃದ್ಧಿಗೆ ಅನುದಾನ ಇಲ್ಲದೆ ಶಾಸಕರು ಜನಕ್ಕೆ ಮುಖ ತೋರಿಸದ ಪರಿಸ್ಥಿತಿ ಇದೆ.

ಉಡುಪಿ: ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಸರಕಾರ ಪತನ- ಶಾಸಕ ಯಶ್ ಪಾಲ್ ಸುವರ್ಣ Read More »

ಸುಳ್ಯ: ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿ

ಸಮಗ್ರ ನ್ಯೂಸ್: ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರಿನಲ್ಲಿ ವರದಿಯಾಗಿದೆ. ಮೃತನನ್ನು ನೆಟ್ಟಾರು ನಿವಾಸಿ ಚರಣ್‌ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರಲ್ಲಿ ಅಭ್ಯಾಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸುಳ್ಯ: ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿ Read More »

ಕಲ್ಲಡ್ಕ : ಭಾರೀ ಗಾಳಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಮಗ್ರ ನ್ಯೂಸ್‌ : ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಕಾರು ಚಾಲಕ ತೌಶೀಫ್ ಎಂಬಾತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ. ತೌಶೀಫ್ ಕಾರಿನಲ್ಲಿ ಒಬ್ಬನೇ ಇದ್ದು ಮಾಣಿ ಕಡೆಯಿಂದ ಮಂಗಳೂರಿಗೆ ತೆರಳುವ ವೇಳೆ ಘಟನೆ ನಡೆದಿದೆ. ಸಂಜೆ ಜೋರಾಗಿ ಸುರಿದ ಮಳೆಗೆ ಹೆದ್ದಾರಿಯಲ್ಲಿ ನೀರು ನಿಂತ ಪರಿಣಾಮವಾಗಿ ನಿಯಂತ್ರಣ ಕಳೆದು ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಸರಿಯಾಗಿ

ಕಲ್ಲಡ್ಕ : ಭಾರೀ ಗಾಳಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ಸಮಗ್ರ ನ್ಯೂಸ್ : ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ. ಶಾಸಕರು ಕಛೇರಿಯಲ್ಲಿ ನೀರು ಪೂರೈಕೆ ಅಧಿಕಾರಿಗಳ ಸಭೆ ಕರೆದಿದ್ದು, ಅಧಿಕಾರಿಗಳಿಂದ ಸಭೆಗೆ ತಡೆ ನೀಡಲಾಗಿದೆ.ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಭೆ ನಡೆಸಲು ಅನುಮತಿಯಿಲ್ಲ ಎಂದು ಅಧಿಕಾರಿಗಳು ಸೂಚನೆ ನೀಡಿದರು. ನೀರಿನ ಸಮಸ್ಯೆಯಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ ಎಂದು ಲೋಕಸಭಾ ಚುನಾವಣೆ, ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆಯ ವೇಳೆ ಶಾಸಕರು ಸಭೆಯನ್ನು ಕರೆದಿದ್ದು, ಜನರ ಸಮಸ್ಯೆಯನ್ನು

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ Read More »

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಸ್ತೆ: ಸಂಚಾರ ಅಸ್ತವ್ಯಸ್ತ

ಸಮಗ್ರ ನ್ಯೂಸ್‌ : ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ. ಹೆದ್ದಾರಿ ಕಾಮಗಾರಿ ಹಾಗೂ ಪ್ಲೈ ಓವರ್ ಕಾಮಗಾರಿ ನಡೆಯುತ್ತಿರುವ ಕಲ್ಲಡ್ಕದಲ್ಲಿ ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ನೀರು ಹರಿದು ಹೋಗುವ ಚರಂಡಿ ವ್ಯವಸ್ಥೆ ಸರಿಯಾಗದೆ ಇದ್ದ ಪರಿಣಾಮ ರಸ್ತೆ ತುಂಬಾ‌ ಕೆಸರು ತುಂಬಿಕೊಂಡಿದೆ. ಅಲ್ಲಲ್ಲಿ ಉಂಟಾದ ಗುಂಡಿಯಿಂದ ವಾಹನಗಳು ಸರಾಗವಾಗಿ ಚಲಿಸಲು ಸಾಧ್ಯವಾಗುತ್ತಿಲ್ಲ. ಮೇ.13 ರಂದು ಬೆಳಿಗ್ಗೆಯಿಂದಲೇ ಕುದ್ರೆಬೆಟ್ಟುವಿನಿಂದ ನರಹರಿ ವರೆಗೂ ಟ್ರಾಫಿಕ್ ಜಾಮ್

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಸ್ತೆ: ಸಂಚಾರ ಅಸ್ತವ್ಯಸ್ತ Read More »

ಕಡಬ: ಕುಮಾರಧಾರ ಒಡಲಲ್ಲಿ ಅಕ್ರಮ ಮರಳುಗಾರಿಕೆ| ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಸೇರಿ‌ ಇಬ್ಬರ ಮೇಲೆ ಎಫ್ಐಆರ್| ಉದ್ದೇಶ ಪೂರ್ವಕ ಕೇಸು ದಾಖಲು ಎಂದ ಮರಳು ವ್ಯಾಪಾರಸ್ಥರ ಸಂಘ

ಸಮಗ್ರ ನ್ಯೂಸ್: ಕುಮಾರಧಾರ ನದಿಯಲ್ಲಿ ಮರಳು ಕಳ್ಳತನ ನಡೆಸುತ್ತಿದ್ದ ಬೃಹತ್ ಜಾಲವೊಂದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮೇ 7 ರಂದು ಬೇಧಿಸಿದ್ದಾರೆ. ಜಿಲ್ಲೆಯ ಪ್ರತಿಷ್ಟಿತ ಜನ ಪ್ರತಿನಿಧಿಯೊಬ್ಬರ ಕೃಪಕಟಾಕ್ಷದಲ್ಲಿ ಬಿಜೆಪಿಯ ಪ್ರಭಾವಿ ನಾಯಕರೊಬ್ಬರ ನೇತೃತ್ವದಲ್ಲಿ ಕಡಬದ ಕುದ್ಮಾರಿನಲ್ಲಿ ಈ ಬೃಹತ್ ಮರಳು ದಂಧೆ ಕಳೆದ ಹಲವಾರು ಸಮಯದಿಂದ ಎಗ್ಗಿಲ್ಲದೆ ನಡೆಯುತಿತ್ತು. ಈ ಬಗ್ಗೆ ಹಲವು ಬಾರಿ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಪುತ್ತೂರು ಎಪಿಎಂಸಿಯ ಮಾಜಿ ಅಧ್ಯಕ್ಷ ಜಿಲ್ಲೆಯ ಪ್ರಭಾವಿ ಬಿಜೆಪಿ

ಕಡಬ: ಕುಮಾರಧಾರ ಒಡಲಲ್ಲಿ ಅಕ್ರಮ ಮರಳುಗಾರಿಕೆ| ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಸೇರಿ‌ ಇಬ್ಬರ ಮೇಲೆ ಎಫ್ಐಆರ್| ಉದ್ದೇಶ ಪೂರ್ವಕ ಕೇಸು ದಾಖಲು ಎಂದ ಮರಳು ವ್ಯಾಪಾರಸ್ಥರ ಸಂಘ Read More »

ಕಡಬ: ಸಿಡಿಲು‌ ಬಡಿದು ಓರ್ವ ಸಾವು, ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಸಿಡಿಲು ಬಡಿದು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಇಚಿಲಂಪಾಡಿಯ ಕುರಿಯಾಳ ಕೊಪ್ಪ ಎಂಬಲ್ಲಿ ಮರಳು ತೆಗೆದು ಶೆಡ್ ನಲ್ಲಿ ಮೂವರು ಕುಳಿತಿದ್ದ ವೇಳೆ ಸಿಡಿಲು ಬಡಿದಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಕಡಬ: ಸಿಡಿಲು‌ ಬಡಿದು ಓರ್ವ ಸಾವು, ಇಬ್ಬರು ಗಂಭೀರ Read More »