ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ| ಅವರವರ ಪ್ರಕಾರ ಎಲ್ಲರೂ ಅಮಾಯಕರೇ, ಯಾರನ್ನೂ ಬಿಡೋ ಮಾತೇ ಇಲ್ಲ – ಎಸ್ಪಿ
ಸಮಗ್ರ ನ್ಯೂಸ್: ಶಾಸಕ ಹರೀಶ್ ಪೂಂಜ ಅವರ ಬಂಧನ ಹೈಡ್ರಾಮಾದಲ್ಲಿ ಪೊಲೀಸರು ಅನಗತ್ಯವಾಗಿ ಮನೆಗೆ ನುಗ್ಗಿದ್ದಾರೆ ಎಂಬ ಆರೋಪಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಮಾಧ್ಯಮಕ್ಕೆ ಸ್ಪಷ್ಟೀಕರಣ ನೀಡಿದ್ದಾರೆ. ಪೂಂಜ ಅವರ ಮನೆಗೆ ಆರಂಭದಲ್ಲಿ ನೋಟಿಸ್ ನೀಡುವ ಸಲುವಾಗಿ ಮೂವರು ತೆರಳಿದ್ದರು. ಆದರೆ ಅಲ್ಲಿ ಅವರು ಠಾಣೆಗೆ ಬಾರದೆ ಜನ ಸೇರಿಸಿ ದ್ದರಿಂದ ಭದ್ರತೆಗಾಗಿ ಹೆಚ್ಚುವರಿ ತಂಡ ಕಳುಹಿಸಬೇಕಾಯಿತು. ಬಳಿಕ ಅಲ್ಲಿನ ರಸ್ತೆ ಕಿರಿದಾಗಿದ್ದರಿಂದ ನೀವು ತೆರಳಿದರೆ










