ಕರಾವಳಿ

ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಸಮಗ್ರ ನ್ಯೂಸ್‌ : ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ವ್ಯಕ್ತಿಯ ಶವ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೋಲೀಸ್ ಮೂಲಗಳು ತಿಳಿಸಿವೆ. ಬಂಟರ ಭವನದ ಹೊರಗಡೆಯಲ್ಲಿ ಈತನ ಸೇರಿದ ಬೈಕ್ ನಿಲ್ಲಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ ಪೊಲೀಸ್ ಮೂಲಗಳ ಪ್ರಕಾರ ಈತ ಬೈಕ್ ನಿಲ್ಲಿಸಿ ಕಂಪೌಂಡ್ […]

ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಸುಳ್ಯ: ಮೊಬೈಲ್ ರಿಚಾರ್ಜ್ ಗೆ ಬಂದಿದ್ದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ| ದೂರು ದಾಖಲು

ಸಮಗ್ರ ನ್ಯೂಸ್: ಕರೆನ್ಸಿ ರಿಚಾರ್ಚ್‌ಗೆಂದು ಏರ್ ಟೆಲ್ ಮಳಿಗೆಗೆ ಬಂದ ಯುವತಿಯೊಬ್ಬಳ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕನ ಮೇಲೆ ಯುವತಿಯ ಮನೆಯವರು ಪೊಲೀಸ್‌ಗೆ ದೂರು ನೀಡಿದ ಘಟನೆ ಸೋಮವಾರ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರದಲ್ಲಿರುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿ ಮೊಬೈಲ್‌ ರಿಚಾರ್ಜ್‌ಗೆ ಬಂದ ಸಂದರ್ಭ ಕುಳಿತುಕೊಳ್ಳುವಂತೆ ಹೇಳಿದ ಯುವಕ ಆಕೆಯ ಅರಿವಿಗೆ ಬಾರದಂತೆ ಫೋಟೋ ಕ್ಲಿಕ್ಕಿಸಿದ್ದನು. ಇದನ್ನು ಗಮನಿಸಿದ ಯುವತಿ ಆಕ್ಷೇಪಿಸಿರುವುದಲ್ಲದೆ ಆತನ ಮೊಬೈಲನ್ನು ಕಸಿದು ನೋಡಿದಾಗ ತನ್ನ ಫೋಟೋ ಇರುವುದನ್ನು ನೋಡಿ ಗಾಬರಿಯಿಂದ

ಸುಳ್ಯ: ಮೊಬೈಲ್ ರಿಚಾರ್ಜ್ ಗೆ ಬಂದಿದ್ದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ| ದೂರು ದಾಖಲು Read More »

ಸುಳ್ಯ: ಪರಿವಾರಕಾನದಲ್ಲಿ ಹೋಟೆಲ್ ವೃಷಭ ಶುಭಾರಂಭ

ಸಮಗ್ರ ನ್ಯೂಸ್: ವಿನೋದ್ ಸರಳಿಕುಂಜ ರವರ ಮಾಲಕತ್ವದ ಹೋಟೆಲ್ ವೃಷಭ ಮೇ.3 ರಂದು ಮಾಣಿ ಮೈಸೂರು ಹೆದ್ದಾರಿಯ ಪರಿವಾರಕಾನ ಶುಭಾರಂಭಗೊಂಡಿತು. ಬೆಳಗ್ಗೆ ಅರ್ಚಕ ಶಿವಪ್ರಸಾದ್ ಕೆದಿಲಾಯ ನಾಗಪಟ್ಟಣ ರವರ ನೇತೃತ್ವದಲ್ಲಿ ಗಣಪತಿ ಹವನ ನೆರವೇರಿತು. ಹಿರಿಯರಾದ ವೀಣಾವತಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಲೆಟ್ಟಿ ಪಂಚಾಯತ್ ಸದಸ್ಯ ರತೀಶನ್ ಆರಂಬೂರು ಶುಭ ಹಾರೈಸಿ, ಜಯರಾಮ ಶಾಂತಿನಗರ, ಶಿವಾನಂದ ಉಪ್ಪಳ, ವಿಜಯಶ್ರೀ, ವಾಣಿಶ್ರೀ ಹಾಗೂ ಬಂಧು-ಮಿತ್ರರು ಉಪಸ್ಥಿತರಿದ್ದರು. ಹೋಟೆಲ್ ನಲ್ಲಿ ಮಾಂಸಹಾರಿ ಮತ್ತು ಸಸ್ಯಹಾರಿ ಊಟ ಉಪಹಾರದ ವ್ಯವಸ್ಥೆ ಇದ್ದು,

ಸುಳ್ಯ: ಪರಿವಾರಕಾನದಲ್ಲಿ ಹೋಟೆಲ್ ವೃಷಭ ಶುಭಾರಂಭ Read More »

ಕಡಬ:ಮಹಿಳೆಯ ನಂಬರ್ ಕೇಳಿದ ಸುಳ್ಯದ ಡ್ರೈವರ್ ಗೆ ಸಿಕ್ತು ಬಿಸಿ ಬಿಸಿ‌ ಕಜ್ಜಾಯ

ಸಮಗ್ರ ನ್ಯೂಸ್: ಉರೂಸ್‌ ಸಮಾರಂಭಕ್ಕೆ ಬಂದಿದ್ದ ವಿವಾಹಿತ ವ್ಯಕ್ತಿಯೊಬ್ಬ ಅಲ್ಲಿದ್ದ ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದ ಕಾರಣಕ್ಕೆ ಸ್ಥಳದಲ್ಲಿದ್ದವರು ಆತನಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಕಡಬ ತಾಲೂಕಿನ ಮರ್ದಾಳದ ನೆಕ್ಕಿತಡ್ಕದಲ್ಲಿ ಸಂಭವಿಸಿದೆ. ಸುಳ್ಯದಲ್ಲಿ ಲಾರಿ ಚಾಲಕನಾಗಿರುವ ನವಾಝ್ ಪಂಡಿತ್‌ ಎಂಬಾತ ಮಹಿಳೆಯ ನಂಬರ್‌ ಕೇಳಿ ಸ್ಥಳೀಯರಿಂದ ಥಳಿತಕ್ಕೊಳಗಾದ ವ್ಯಕ್ತಿ. ಉರೂಸ್‌ ವೇಳೆ ಮಹಿಳೆಯಲ್ಲಿ ಮೊಬೈಲ್‌ ನಂಬರ್‌ ಕೇಳಿದ ವಿಚಾರಕ್ಕೆ ಸಂಬಂಧಿಸಿ ಮಾತಿಗೆ ಮಾತು ಬೆಳೆದು ಜಗಳಕ್ಕೆ ಕಾರಣವಾಗಿದೆ. ಥಳಿತಕ್ಕೊಳಗಾದ ವ್ಯಕ್ತಿ ಮರ್ದಾಳ ನಿವಾಸಿಗಳಾದ ಖಲೀಲ್‌ ಅನ್ಸರ್‌, ಶರೀಫ್‌

ಕಡಬ:ಮಹಿಳೆಯ ನಂಬರ್ ಕೇಳಿದ ಸುಳ್ಯದ ಡ್ರೈವರ್ ಗೆ ಸಿಕ್ತು ಬಿಸಿ ಬಿಸಿ‌ ಕಜ್ಜಾಯ Read More »

ಕಡಬ: ಮದುವೆ ಮನೆಯಲ್ಲಿ ಫೋಟೋ ತೆಗೆದ ಆರೋಪ| ಹಲ್ಲೆ, ಇತ್ತಂಡಗಳಿಂದ ದೂರು ದಾಖಲು

ಸಮಗ್ರ ನ್ಯೂಸ್: ಮದುವೆ‌ ಔತಣ ಕೂಟದಲ್ಲಿ ಯುವಕನೋರ್ವ ಯುವತಿಯೊಂದಿಗಿರುವುದನ್ನು ಮೊಬೈಲ್‌ನಲ್ಲಿ ಫೋಟೋ ತೆಗೆದಿದ್ದಾರೆ ಎನ್ನಲಾದ ಘಟನೆಯೊಂದಕ್ಕೆ ಸಂಬಂಧಿಸಿ ಇತ್ತಂಡಗಳ ವಿರುದ್ಧ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ. 29ರಂದು ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಕುಶಾಲಪ್ಪ ಗೌಡ ಅವರ ಪುತ್ರಿಯ ವಿವಾಹ ಔತಣಕೂಟ ನಡೆದಿತ್ತು. ಅಲ್ಲಿ ನಿಶಾಂತ್‌ ಎಂಬ ಯುವಕ ಯುವತಿಯೊಂದಿಗಿರುವ ಫೋಟೋವನ್ನು ಬಾಂತಾಜೆ ನಿವಾಸಿ ದಿವಾಕರ ತೆಗೆದಿದ್ದಾರೆ ಎಂದು ಆರೋಪಿಸಿ ನಿಶಾಂತ್‌ ನೇತೃತ್ವದಲ್ಲಿ ಧನಂಜಯ, ಜನಾರ್ದನ, ಲೋಕೇಶ, ರಮೇಶ್‌, ಉದಯ, ಭುವನ, ಅಶ್ವಿ‌ತ್‌ ಅವರು

ಕಡಬ: ಮದುವೆ ಮನೆಯಲ್ಲಿ ಫೋಟೋ ತೆಗೆದ ಆರೋಪ| ಹಲ್ಲೆ, ಇತ್ತಂಡಗಳಿಂದ ದೂರು ದಾಖಲು Read More »

ಉಡುಪಿ : ಕಾಪು ಪಿಲಿಕೋಲ ಸಂಪನ್ನ- ಓರ್ವನನ್ನು ಸ್ಪರ್ಶಿಸಿದ ಪಿಲಿ

ಸಮಗ್ರ ನ್ಯೂಸ್‌ : ಇತಿಹಾಸ ಪ್ರಸಿದ್ಧ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ ಸಂಪನ್ನಗೊಂಡಿತು. ಎರಡು ತಾಸಿನ ಬಣ್ಣಗಾರಿಕೆಯ ಬಳಿಕ ಅಬ್ಬರದೊಂದಿಗೆ ಪಂಜರದೊಳಗಿಂದ ಹೊರಗೆ ಬಂದ ಪಿಲಿಚಂಡಿ ದೈವವು ಬ್ರಹ್ಮರ ಗುಂಡಕ್ಕೆ ಮೂರು ಸುತ್ತು ಬಂದು, ಮಾರಿಯಮ್ಮ ಗುಡಿಯ ಮುಂಭಾಗದಲ್ಲಿ ನೆಡಲಾಗಿದ್ದ ಬಂಟ ಕಂಬವನ್ನೇರಿ ಜೀವಂತ ಕೋಳಿಯನ್ನು ಬಲಿಯಾಗಿ ಸ್ವೀಕರಿಸಿ ಮುಂದೆ ಗ್ರಾಮ ಭೇಟಿಗೆ ತೆರಳುವುದು ಸಂಪ್ರದಾಯವಾಗಿದೆ. ಕರಾವಳಿಯಲ್ಲಿ ಹಲವು ಬಗೆಯ ಭೂತಾರಾಧನೆಗಳಿವೆ. ಆದರೆ ಹುಲಿಕೋಲದಂತಹ

ಉಡುಪಿ : ಕಾಪು ಪಿಲಿಕೋಲ ಸಂಪನ್ನ- ಓರ್ವನನ್ನು ಸ್ಪರ್ಶಿಸಿದ ಪಿಲಿ Read More »

ಮಡಿಕೇರಿ: 2 ವರ್ಷದ ಹಿಂದೆ ಮನೆಗೆ ನುಗ್ಗಿ ಕಳ್ಳತನ ಮಾಡಿದ ಐದು ಕಳ್ಳರ ಬಂಧನ

ಸಮಗ್ರ ನ್ಯೂಸ್: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಲೂರು ಗ್ರಾಮದ ಚನ್ನಂಗಿ ನಿವಾಸಿ ತಂಗಚ್ಚನ್ ಕೆ.ಕೆ ಎಂಬುವರ ಮನೆಗೆ 2022ರ ಜೂನ್ 8 ರಂದು ರಾತ್ರಿ 8:30 ಸಮಯದಲ್ಲಿ ಅಪರಿಚಿತ ಮುಸುಕುದಾರಿ ವ್ಯಕ್ತಿಗಳು ತಂಗಚ್ಚನ್ ಅವರ ಮನೆಗೆ ಪ್ರವೇಶಿಸಿ ತಂಗಚ್ಚನ್ ಹಾಗೂ ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಅಂದಾಜು ಎರಡು ಲಕ್ಷ ರೂಪಾಯಿ ಹಾಗೂ ಪತ್ನಿಯ ಕುತ್ತಿಗೆಯಲ್ಲಿದ್ದ ಎಂಟು ಗ್ರಾಂ ಚಿನ್ನದ ಸರ ಕಿತ್ತುಕೊಂಡು ಹೋಗಿರುವ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮಡಿಕೇರಿ: 2 ವರ್ಷದ ಹಿಂದೆ ಮನೆಗೆ ನುಗ್ಗಿ ಕಳ್ಳತನ ಮಾಡಿದ ಐದು ಕಳ್ಳರ ಬಂಧನ Read More »

ಕರಾವಳಿಯಲ್ಲಿ ಬಿಸಿಲ ಝಳಕ್ಕೆ ಬಸ್ ಗಾಜು ಪುಡಿಪುಡಿ| ದಿಢೀರ್ ಹೃದಯಾಘಾತದಿಂದ 6 ಮಂದಿ ಸಾವು| ಕಾದು ಕೆಂಡವಾದ ಕಡಲ ನಗರಿ!!

ಸಮಗ್ರ ನ್ಯೂಸ್: ಬಿಸಿಲಿನ ತಾಪದಿಂದ ಕೇರಳ ರಾಜ್ಯ ರಸ್ತೆ ನಿಗಮದ ಮಲಬಾರ್ ಬಸ್ಸಿನ ಮುಂಭಾಗದ ಗಾಜು ಒಡೆದ ಪರಿಣಾಮ, ಇಬ್ಬರು ಮಕ್ಕಳು ಹಾಗೂ ಚಾಲಕ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಉರಿಮಜಲು ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಮುಂಭಾಗದ ಗಾಜು ಒಡೆದಿದೆ. ಬಸ್‌ನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಬಾಲಕರು ಹಾಗೂ ಬಸ್ ಚಾಲಕ ಗಾಯಗೊಂಡಿದ್ದಾರೆ. ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು

ಕರಾವಳಿಯಲ್ಲಿ ಬಿಸಿಲ ಝಳಕ್ಕೆ ಬಸ್ ಗಾಜು ಪುಡಿಪುಡಿ| ದಿಢೀರ್ ಹೃದಯಾಘಾತದಿಂದ 6 ಮಂದಿ ಸಾವು| ಕಾದು ಕೆಂಡವಾದ ಕಡಲ ನಗರಿ!! Read More »

ದಿಢೀರ್ ಕುಸಿತ ಕಂಡ ಕೋಕೋ ಧಾರಣೆ| ಕೆಜಿ ದರದಲ್ಲಿ ₹35 ಇಳಿಕೆ

ಸಮಗ್ರ ನ್ಯೂಸ್: ವಿಪರೀತ ಧಾರಣೆ‌ ಕಂಡಿದ್ದ ಕೊಕ್ಕೋ ದರದಲ್ಲಿ ದಿಢೀರ್ ಕುಸಿತ ಕಂಡಿದೆ. ಸಾಧಾರಣವಾಗಿ 60-70 ರೂಪಾಯಿ ಆಸುಪಾಸಿನಲ್ಲಿದ್ದ ಧಾರಣೆ ₹ 325 ವರೆಗೂ ಹೋಗಿತ್ತು. ಇದೀಗ ಮತ್ತೆ ಕುಸಿತ ಕಂಡಿದ್ದು 290 ರೂಪಾಯಿಗೆ ಇಳಿಕೆಯಾಗಿದೆ. ಹಸಿ ಕೊಕ್ಕೋ ಧಾರಣೆ 325 ರೂಪಾಯಿವರೆಗೆ ಏರಿಕೆ ಕಂಡಿದ್ದರೆ, ಒಣ ಕೊಕೊ ಧಾರಣೆ 900 ರೂಪಾಯಿ ಆಸುಪಾಸಿಗೆ ಬಂದಿತ್ತು. ಇದೀಗ ಧಾರಣೆ ಇಳಿಕೆಯಾಗಿದೆ. ಹಸಿ ಕೊಕ್ಕೋ ಧಾರಣೆ 290 ರೂಪಾಯಿಗೆ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ ಹೊಂದಿರುವ ಕೊಕೊ ಪ್ರಮುಖವಾಗಿ ಆಫ್ರಿಕಾ

ದಿಢೀರ್ ಕುಸಿತ ಕಂಡ ಕೋಕೋ ಧಾರಣೆ| ಕೆಜಿ ದರದಲ್ಲಿ ₹35 ಇಳಿಕೆ Read More »

ಉಪ್ಪಿನಂಗಡಿ: ಹೃದಯಾಘಾತದಿಂದ ಮಲಗಿದ್ದಲ್ಲೇ ಯುವಕ ಸಾವು

ಸಮಗ್ರ ನ್ಯೂಸ್: ಗಾರೆ ಕೆಲಸಕ್ಕೆ ಹೋಗುವ ಯುವಕನೊಬ್ಬ ಮಲಗಿದ್ದಲ್ಲೇ ಹೃದಯಾಘಾತಕ್ಕೆ ಸಿಲುಕಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪ ನಡೆದಿದೆ. ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ. ಗೋಪಾಲ ಗೌಡರ ಪುತ್ರ 27ರ ಹರೆಯದ ಜನಾರ್ದನ ನಿನ್ನಿಕಲ್ಲು ಹೃದಯಾಘಾತದಿಂದ ಶುಕ್ರವಾರ ಮೃತಪಟ್ಟಿದ್ದಾರೆ. ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಇವರು ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು. ಇವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು ನೋಡಿದಾಗ ಜನಾರ್ದನ ಮಲಗಿದ್ದಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ. ಶ್ರೀ ದುರ್ಗಾ ಭಜನಾ ಮಂಡಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಮಲಗಿದ್ದಲ್ಲೇ ಯುವಕ ಸಾವು Read More »