ಕರಾವಳಿ

ಉಡುಪಿ: ಪೊಲೀಸರೇ ಗೂಂಡಾ ರೀತಿ ವರ್ತಿಸಿದರೆ ವ್ಯವಸ್ಥೆಗೆ ಮಾರಕ; ಮಾಜಿ ಸಚಿವ ವಿ. ಸುನಿಲ್ ಕುಮಾರ್

ಸಮಗ್ರ ನ್ಯೂಸ್‌ : ಪೊಲೀಸರೇ ಗೂಂಡಾ ರೀತಿ ವರ್ತನೆ ಮಾಡಿದರೆ ಅದು ವ್ಯವಸ್ಥೆಗೆ ಮಾರಕ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಜನರಿಗೆ ರಕ್ಷಣೆ ಕೊಡುವುದು, ವಿಶ್ವಾಸ ನಿರ್ಮಾಣ ಮಾಡುವುದು ಪೊಲೀಸರ ಜವಾಬ್ದಾರಿ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಳ್ತಂಗಡಿಯಲ್ಲಿ ಕಾನೂನು ಉಲ್ಲಂಘಿಸುವಂತಹ ಯಾವುದೇ ಘಟನೆ ನಡೆದಿರಲಿಲ್ಲ. ವಿನಾಕಾರಣ ರಾಜಕೀಯ ದ್ವೇಷದಿಂದ ಬಂಧನಕ್ಕೆ ಮುಂದಾಗಿದ್ದಾರೆ. ಈ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ

ಉಡುಪಿ: ಪೊಲೀಸರೇ ಗೂಂಡಾ ರೀತಿ ವರ್ತಿಸಿದರೆ ವ್ಯವಸ್ಥೆಗೆ ಮಾರಕ; ಮಾಜಿ ಸಚಿವ ವಿ. ಸುನಿಲ್ ಕುಮಾರ್ Read More »

ಉಡುಪಿ: ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ;ಸುನಿಲ್ ಕುಮಾರ್

ಸಮಗ್ರ ನ್ಯೂಸ್‌ : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು. ಇಲ್ಲದಿದ್ದರೆ ಪಕ್ಷದ ನಿಯಮ ಉಲ್ಲಂಘಿಸಿದ ಆಧಾರದ ಮೇಲೆ ಶಿಸ್ತು ಕ್ರಮ ಜರುಗಿಸುವುದು ಅನಿವಾರ್ಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 24 ಗಂಟೆಯೊಳಗೆ ಸ್ಪರ್ಧೆಗೆ ನಿವೃತ್ತಿ ಘೋಷಿಸದಿದ್ದರೆ, ಪಕ್ಷ ವಿರೋಧಿ ಚಟುವಟಿಕೆ ಅಥವಾ ಪಕ್ಷಕ್ಕೆ ಮುಜುಗರ ಉಂಟು

ಉಡುಪಿ: ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ;ಸುನಿಲ್ ಕುಮಾರ್ Read More »

ಮಂಗಳೂರು : ಶಾಸಕರೇ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ: ಎಂಎಲ್ ಸಿ ಹರೀಶ್ ಕುಮಾರ್

ಸಮಗ್ರ ನ್ಯೂಸ್ : ಪ್ರಜ್ಞಾವಂತ ನಾಗರಿಕರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಅಪಮಾನ ಮಾಡಿದ್ದಾರೆ. ಜನವಿರೋಧಿ ಕಾರ್ಯದಲ್ಲಿ ಪಾಲ್ಗೊಂಡು, ಶಾಸಕರೆ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ ಎಂದು ದ. ಕ ಕಾಂಗ್ರೆಸ್ ಅಧ್ಯಕ್ಷ ಎಂಎಲ್ ಸಿ ಹರೀಶ್ ಕುಮಾರ್ ಕಿಡಿಕಾರಿದ್ದಾರೆ. ಹಿಂದಿನ ಶಾಸಕರುಗಳು ಆ ಕ್ಷೇತ್ರದ ಗೌರವ ಉಳಿಸಿದವರು. ಅಕ್ರಮ ಕಲ್ಲು ಗಣಿಗಾರಿಕೆ, ಮರಳುಗಾರಿಕೆ ರೌಡಿ ಶೀಟರ್ ವ್ಯಕ್ತಿಯನ್ನು ರಕ್ಷಿಸಲು ಹೋಗಿದ್ದಾರೆ. ಅವನ ಬಂಧನವಾದಾಗ ಪೊಲೀಸರಿಗೆ ಬೈತಾರೆ, ತಲೆ ಕಡಿರಿ ಅಂತಾರೆ,

ಮಂಗಳೂರು : ಶಾಸಕರೇ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ: ಎಂಎಲ್ ಸಿ ಹರೀಶ್ ಕುಮಾರ್ Read More »

ಬೆಳ್ತಂಗಡಿ: ಕೊನೆಗೂ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜಾ

ಸಮಗ್ರ ನ್ಯೂಸ್: ಇಂದು ಬೆಳಿಗ್ಗೆಯಿಂದ ನಡೆದ ಹೈಡ್ರಾಮ ಬಳಿಕ ಶಾಸಕ ಹರೀಶ್ ಪೂಂಜಾ ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ತನ್ನ ಆಪ್ತ , ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅಕ್ರಮ ಗಣಿಗಾರಿಕೆ ಮತ್ತು ಸ್ಪೋಟಕ ದಾಸ್ತಾನು ಪ್ರಕರಣದಲ್ಲಿ ಬಂಧಿತನಾದ ಬಳಿಕ ಠಾಣೆಗೆ ತೆರಳಿದ ಶಾಸಕ ಪೂಂಜಾ ಪೊಲೀಸರಿಗೆ ಬೆದರಿಕೆ ಮತ್ತು ಠಾಣೆಯನ್ನು ಧ್ವಂಸ ಮಾಡುವ ಬಗ್ಗೆ ಬೆದರಿಕೆ ಹಾಕಿದ್ದರು. ಶಾಸಕರ ಹೇಳಿಕೆಯ ಆಧಾರದಲ್ಲಿ ಎರಡೆರಡು ಎಫ್ಐಆರ್ ಜಡಿದ ಪೊಲೀಸರು ಹರೀಶ್ ಪೂಂಜಾರನ್ನು ಬಂಧಿಸಲು ಅವರ ಗರ್ಡಾಡಿಯ

ಬೆಳ್ತಂಗಡಿ: ಕೊನೆಗೂ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜಾ Read More »

ಹರೀಶ್ ಪೂಂಜಾರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ‌ಹಾಕದಿರಿ – ವಿಜಯೇಂದ್ರ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನ ಬಂಧನ ಸಾಧ್ಯತೆ ವಿಚಾರವಾಗಿ ಕೆಂಡಾಮಂಡಲರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶಾಸಕರನ್ನು ಅರೆಸ್ಟ್‌ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದರೆ ಮುಂದೆ ನಡೆಯುವುದಕ್ಕೆ ಕಾಂಗ್ರೆಸ್‌ ಹೊಣೆ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರೀಶ್ ಪೂಂಜಾ ಉದ್ವೇಗದಲ್ಲಿ ಕೆಲವು ಮಾತನಾಡಿದ್ದಾರೆ, ಅದು ತಪ್ಪು ಎಂದು ಅವರಿಗೂ ಗೊತ್ತಾಗಿದೆ, ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಸಾಧ್ಯವಿಲ್ಲ ಕಾನೂನು ಸುವ್ಯವಸ್ಥೆ ಹದಗೆಡಲು ನೀವೆ ಕುಮ್ಮಕ್ಕು ನೀಡುತ್ತಿದ್ದಿರಿ ಎಂಧು ವಿಜಯೇಂದ್ರ

ಹರೀಶ್ ಪೂಂಜಾರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ‌ಹಾಕದಿರಿ – ವಿಜಯೇಂದ್ರ Read More »

ಮಂಗಳೂರು : ಹೆಜಮಾಡಿ ಟೋಲ್ ಪ್ಲಾಜಾ- ಶೌಚಾಲಯವಿಲ್ಲದೆ ಪರದಾಟ

ಸಮಗ್ರ ನ್ಯೂಸ್ : ಟೋಲ್ ನಿರ್ವಾಹಣೆ, ಸುಂಕ ವಸೂಲಿಗೆ ಹೊಸ ಕಂಪನಿ ಹೆಜಮಾಡಿಗೆ ವಕ್ಕರಿಸಿದ್ದರೂ ಹಳೆಯ ಸಮಸ್ಯೆಗಳು ಜೀವಂತವಿದ್ದು, ಕಳೆದ ಸುಮಾರು ಹತ್ತು ದಿನಗಳಿಂದ ಶೌಚಾಲಯ ದುರಸ್ಥಿ ಹೆಸರಲ್ಲಿ ಮುಚ್ಚಿದ್ದು ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಗಿದೆ. ಶೌಚಾಲಯವನ್ನು ಹೈಟೆಕ್ ಮಾಡುವುದಾಗಿ ಬದಲಿ ವ್ಯವಸ್ಥೆ ಕಲ್ಪಿಸದೆ ಶೌಚಾಲಯವನ್ನು ಮುಚ್ಚಿ ಕಾಮಗಾರಿ ಆರಂಭಿಸಲಾಗಿದ್ದು, ಇದೀಗ ಕೆಲ ದಿನಗಳಿಂದ ಕಾಮಗಾರಿ ಸ್ಥಗಿತಗೊಂಡಿದ್ದು , ಅಗೆದು ಹಾಕಲಾದ ಅರೆಬರೆ ಶೌಚಾಲಯ ಭೇಟಿ ಸಂದರ್ಭ ಗೊಚರಿಸುತ್ತದೆ. ಪುರುಷರು ವಿಧಿ ಇಲ್ಲದೆ ಟೋಲ್ ಪ್ರದೇಶದಲ್ಲಿ ಬಯಲು ಮೂತ್ರ

ಮಂಗಳೂರು : ಹೆಜಮಾಡಿ ಟೋಲ್ ಪ್ಲಾಜಾ- ಶೌಚಾಲಯವಿಲ್ಲದೆ ಪರದಾಟ Read More »

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾಗೆ ಬಂಧನ ಭೀತಿ| ಮನೆ ಸುತ್ತುವರಿದ ಖಾಕಿ ಪಡೆ

ಸಮಗ್ರ ನ್ಯೂಸ್: ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ವಿರುದ್ಧ ಈಗ ಪ್ರತ್ಯೇಕವಾಗಿ ಎರಡು ಪ್ರಕರಣ ದಾಖಲಾಗಿರುವ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜಾಗೆ ಬಂಧನ ಭೀತಿ ಎದುರಾಗಿದೆ. ಎರಡೂ ಪ್ರಕರಣಗಳು ಜಾಮೀನು ರಹಿತ ಪ್ರಕರಣವಾಗಿದ್ದು ಇದೀಗ ಹರೀಶ್ ಪೂಂಜ ಅವರ ಬಂಧನಕ್ಕಾಗಿ ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ಪೂಂಜ ಮನೆಗೆ ಆಗಮಿಸಿದ್ದು, ಮನೆಯಲ್ಲಿ ಖಾಕಿ ಪಡೆ

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾಗೆ ಬಂಧನ ಭೀತಿ| ಮನೆ ಸುತ್ತುವರಿದ ಖಾಕಿ ಪಡೆ Read More »

ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ| ಮಳೆಯ ನಡುವೆಯೂ ನಿಲ್ಲದ ದೈವ ನರ್ತನ ಸೇವೆ

ಸಮಗ್ರ ನ್ಯೂಸ್: ಉಡುಪಿ, ದಕ್ಷಿಣ ಕನ್ನಡ ಜಿಲಲೆಗಳು ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಮೇ 22ರಿಂದ 24ರವರೆಗೆ ಗುಡುಗು-ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಬೆಂಗಳೂರಿನ ಹವಾಮಾನ ಕೇಂದ್ರ ನೀಡಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 22 ರಂದು ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯಲ್ಲೂ ನಡೆಯಿತು ದೈವನರ್ತನ:ಕರಾವಳಿಯಲ್ಲಿ ಮುಂಗಾರು

ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ| ಮಳೆಯ ನಡುವೆಯೂ ನಿಲ್ಲದ ದೈವ ನರ್ತನ ಸೇವೆ Read More »

‘ವಸಂತ ಬಂಗೇರ ಬಡವರ, ಸತ್ಯದ ಪರವಾಗಿದ್ದರು’| ಬೆಳ್ತಂಗಡಿಯಲ್ಲಿ ಸಿಎಂ ಸಿದ್ದರಾಮಯ್ಯ ನುಡಿನಮನ

ಸಮಗ್ರ ನ್ಯೂಸ್: ‘ವಸಂತ ಬಂಗೇರ ಅವರು ಸದಾ ಬಡವರ ಪರ, ಸತ್ಯದ ಪರ ಇದ್ದರು. ಬಡವರ ಕೆಲಸ ಮಾಡಿಕೊಡಲು ಯಾವ ಹಂತಕ್ಕೆ ಬೇಕಾದರೂ ಹೋಗುತ್ತಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅಗಲಿದ ಮಾಜಿ ಶಾಸಕ ದಿ.‌ವಸಂತ ಬಂಗೇರಗೆ ನುಡಿನಮನ ಸಲ್ಲಿಸಲು ತಾಲ್ಲೂಕಿನ ಕುವೆಟ್ಟುವಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಕ್ಷೇತ್ರದ ಅಭಿವೃದ್ಧಿ ವಿಚಾರಗಳಲದಲಿ ಬಂಗೇರ ಅವರಿಗೆ ತಾನು ಯಾರ ಜೊತೆ ಮಾತನಾಡುತ್ತಿದ್ದೇನೆ ಎನ್ನುವುದು ಮುಖ್ಯ ಆಗುತ್ತಿರಲಿಲ್ಲ. ಬಡವರ ಸಮಸ್ಯೆ ಪರಿಹರಿಸುವುದೇ ಅವರಿಗೆ ಮುಖ್ಯವಾಗಿತ್ತು.ಮಾನವಿಯತೆ ಇದ್ದ ಮನುಷ್ಯ.

‘ವಸಂತ ಬಂಗೇರ ಬಡವರ, ಸತ್ಯದ ಪರವಾಗಿದ್ದರು’| ಬೆಳ್ತಂಗಡಿಯಲ್ಲಿ ಸಿಎಂ ಸಿದ್ದರಾಮಯ್ಯ ನುಡಿನಮನ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ಐಆರ್| ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆ ಮರುಕಳಿಸುತ್ತೇನೆ ಎಂದ ಶಾಸಕ!!

ಸಮಗ್ರ ನ್ಯೂಸ್: ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ‌ದ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಬಂಧನ ಖಂಡಿಸಿ ಇಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಸಂದರ್ಭ ಪೊಲೀಸರಿಗೆ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮಂಗಳವಾರ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ‘ಶಶಿರಾಜ್‌ ಶೆಟ್ಟಿ ಬಂಧನ ಖಂಡಿಸಿ ಬೆಳ್ತಂಗಡಿಯ ವಿಕಾಸಸೌಧದ ಎದುರು ಸೋಮವಾರ ಬಿಜೆಪಿ ವತಿಯಿಂದ ನಡೆಸಿದ್ದ ಪ್ರತಿಭಟನೆಗೆ ಸಂಬಂಧಪಟ್ಟ ಇಲಾಖೆಯಿಂದ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ಐಆರ್| ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆ ಮರುಕಳಿಸುತ್ತೇನೆ ಎಂದ ಶಾಸಕ!! Read More »