ಕರಾವಳಿ

ಸುಳ್ಯ: ಸಾವಿನಲ್ಲೂ ಜೊತೆಯಾದ ಸಹೋದರರು!!

ಸಮಗ್ರ ನ್ಯೂಸ್: ಅಣ್ಣ ನಿಧನರಾದ ವಿಷಯ ತಿಳಿದು‌ ತಮ್ಮ ಕೂಡಾ ಕುಸಿದು ಬಿದ್ದು ಮೃತಪಟ್ಟ ಮನಕಲಕುವ ಘಟನೆಯೊಂದಕ್ಕೆ ಸುಳ್ಯ ತಾಲೂಕಿನ ಅರಂತೋಡು ಸಾಕ್ಚಿಯಾಗಿದೆ. ಅರಂತೋಡು ಗ್ರಾಮದ ನಿವಾಸಿ ಅಬ್ದುಲ್ಲ ರವರು (82) ರವರು ಅಸೌಖ್ಯದಿಂದ ಇಂದು (ಎ.30) ಮುಂಜಾನೆ ನಿಧನರಾದರು. ಈ ವಿಷಯ ತಿಳಿಯುತಿದ್ದಂತೆ ಸಹೋದರ ಉದಯನಗರದ ನಿವಾಸಿ ಮಹಮ್ಮದ್ (76) ಅವರು ಮನೆಯಲ್ಲಿ ಕುಸಿದುಬಿದ್ದರು. ಮನೆಯವರು ತಕ್ಷಣ ಮಹಮ್ಮದ್ ರನ್ನು ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬಂದರಾದರೂ ಆ ವೇಳೆಗೆ ಮಹಮ್ಮದ್ ರವರು ಮೃತಪಟ್ಟರೆಂದು ತಿಳಿದುಬಂದಿದ್ದು ಸಹೋದರರು […]

ಸುಳ್ಯ: ಸಾವಿನಲ್ಲೂ ಜೊತೆಯಾದ ಸಹೋದರರು!! Read More »

ಕರಾವಳಿಗರೇ ಎಚ್ಚರ…| ಮೇ. 2ರವರೆಗೆ ಬೀಸಲಿದೆ ಬಿಸಿಗಾಳಿ

ಸಮಗ್ರ ನ್ಯೂಸ್: ಮೇ 2ರ ತನಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಸಿದೆ. ದಕ್ಷಿಣ ಕನ್ನಡದಲ್ಲಿ ಇನ್ನೂ ನಾಲ್ಕು ದಿನ ಬಿಸಿ ವಾತಾವರಣ ಮುಂದುವರಿಯಲಿದೆ. ರಾಜ್ಯದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡದ ಕೆಲವು ಪ್ರದೇಶಗಳಲ್ಲಿ ಮಾತ್ರ ಎಪ್ರಿಲ್‌ನಲ್ಲಿ

ಕರಾವಳಿಗರೇ ಎಚ್ಚರ…| ಮೇ. 2ರವರೆಗೆ ಬೀಸಲಿದೆ ಬಿಸಿಗಾಳಿ Read More »

ಸುಬ್ರಹ್ಮಣ್ಯ: ಬಾಳುಗೋಡು ಗ್ರಾಮ ಕಾಂಗ್ರೆಸ್ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ಟೇಬಲ್ ಫ್ಯಾನ್ ಕೊಡುಗೆ

ಸಮಗ್ರ ನ್ಯೂಸ್: ಬಿಸಿಲಿನ ಝಳ ಹೆಚ್ಚುತ್ತಿರುವ ಈ ಸಂಧರ್ಭದಲ್ಲಿ, ದಿನಕೂಲಿ ನಡೆಸಿ ಜೀವನ ಸಾಗಿಸುವ ಮನೆಗಳಲ್ಲಿನ ಅಶಕ್ತರು ಮತ್ತು ಅನಾರೋಗ್ಯಗಳಿಂದ ಬಳಲುತ್ತಿರುವ, ಕನಿಷ್ಠ ಫ್ಯಾನ್ ಹೊಂದಿರದ ಕುಟುಂಬಗಳನ್ನು ಗಮನಿಸಿದ ಬಾಳುಗೋಡು ಗ್ರಾಮದ ಕಾಂಗ್ರೆಸ್ ಸಮಿತಿಯ ಸದಸ್ಯರು ಕಡುಬಡತನದಲ್ಲಿ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ, ರೇಷನ್ ಕಾರ್ಡ್ ತಿದ್ದುಪಡಿಯಾಗದೇ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಲಕ್ಷ್ಮೀ ಯೋಜನೆಯಿಂದ ವಂಚಿತರಾದ ನಾಲ್ಕು ಮನೆಗಳನ್ನು ಗುರುತಿಸಿ ಅವರ ಮನೆಗಳಿಗೆ ಮಾನವೀಯ ನೆಲೆಯಲ್ಲಿ ಟೇಬಲ್ ಫ್ಯಾನ್ ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಬಾಳುಗೋಡು

ಸುಬ್ರಹ್ಮಣ್ಯ: ಬಾಳುಗೋಡು ಗ್ರಾಮ ಕಾಂಗ್ರೆಸ್ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ಟೇಬಲ್ ಫ್ಯಾನ್ ಕೊಡುಗೆ Read More »

ಪುತ್ತೂರು: KFDC ರಬ್ಬರ್ ತೋಟಕ್ಕೆ ಬೆಂಕಿ

ಸಮಗ್ರ ನ್ಯೂಸ್: ಕೆ.ಎಫ್ .ಡಿ.ಸಿ ಯ ರಬ್ಬರ್ ತೋಟಕ್ಕೆ ಕರೆಂಟ್ ಶಾರ್ಟ್ ಆಗಿ ಬೆಂಕಿ ಹೊತ್ತಿಕೊಂಡ ಘಟನೆ ಪುತ್ತೂರು ತಾಲೂಕಿನ ಮೊಗಪ್ಪೆ ಗ್ರಾಮದ ನೆಟ್ಟಾರಿನಲ್ಲಿ ಎ.27 ರಂದು ನಡೆದಿದೆ. ಈ ಅವಘಡವೂ ಮಧ್ಯಾಹ್ನ 2 ಗಂಟೆ ಹೊತ್ತಿಗೆ ಸಂಭವಿಸಿದ್ದು. ರಬ್ಬರ್ ಗುಡ್ಡೆಯಿಂದ ಬರುವ ಹೊಗೆಯ ಮೂಲಕ ತಿಳಿದು ಸ್ಥಳೀಯರು ನೀರು ಹಾಕಿ ಬೆಂಕಿಯನ್ನು ನಂದಿಸಿದ್ದಾರೆ. ತೋಟದಲ್ಲಿ ರಬ್ಬರ್ ಮರಗಳಿಗೆ ಹಾನಿ‌ ಉಂಟಾಗಿದೆ ಎಂದು ತಿಳಿದುಬಂದಿದೆ.

ಪುತ್ತೂರು: KFDC ರಬ್ಬರ್ ತೋಟಕ್ಕೆ ಬೆಂಕಿ Read More »

ಉಡುಪಿ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಸಮಗ್ರ ನ್ಯೂಸ್‌ : ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಟ್ಟೆ ಸಮೀಪದ ಗುಡ್ಡೆಅಂಗಡಿ ರಾ.ಹೆ.66ರಲ್ಲಿ ಕೊಯ್ಕಾಡಿ ತಿರುವಿನಲ್ಲಿ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಫೋನ್‌ ಪೇ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಎಂದು‌ ಗುರುತಿಸಲಾಗಿದೆ. ಇವರ ಸ್ನೇಹಿತರಾದ ವಿಘ್ನೇಶ್‌ (28), ಚೇತನ್‌ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣದ

ಉಡುಪಿ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ Read More »

ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ|ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ‍್ಯಾಂಕ್

ಸಮಗ್ರ ನ್ಯೂಸ್’: ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ಇ.ಬಿ.ಎ.ಸಿ ಯಲ್ಲಿ ತಲಾ 100 ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್ ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 03 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಇವರು

ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ|ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ‍್ಯಾಂಕ್ Read More »

ಎ.30ರವರೆಗೆ ಕರಾವಳಿಗರಿಗೆ ಹೀಟ್ ವೇವ್ ಸಂಕಷ್ಟ| ಹೊರಗೆ ಹೋಗದಂತೆ ಸೂಚನೆ ನೀಡಿದ ಐಎಂಡಿ

ಸಮಗ್ರ ನ್ಯೂಸ್: ಕರಾವಳಿಯಲ್ಲಿಎ.30ರವರೆಗೆ ಬಿಸಿಗಾಳಿ ಅಲೆ ಬೀಸಲಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಈ ವಿದ್ಯಮಾನ ನಡೆಯುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ದ.ಕ, ಉಡುಪಿ ಸಹಿತ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಹೆಚ್ಚಾಗಲಿದೆ ಎಂದು ವರದಿ

ಎ.30ರವರೆಗೆ ಕರಾವಳಿಗರಿಗೆ ಹೀಟ್ ವೇವ್ ಸಂಕಷ್ಟ| ಹೊರಗೆ ಹೋಗದಂತೆ ಸೂಚನೆ ನೀಡಿದ ಐಎಂಡಿ Read More »

ದ.ಕ ಜಿಲ್ಲೆಯ ಈ ಮತಗಟ್ಟೆಯಲ್ಲಿ ಶೇ.100 ಮತದಾನ| ದೇಶಕ್ಕೆ ಮಾದರಿಯಾದ ಕುಗ್ರಾಮದ ಮತದಾರರು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಎರಡನೇ ಹಂತದ (ಕರ್ನಾಟಕದಲ್ಲಿ ಮೊದಲ ಹಂತ) ಮತದಾನ ಇಂದು ನಡೆಯುತ್ತಿದ್ದು ದ.ಕ ಜಿಲ್ಲೆಯ ಬೆಳ್ತಂಗಡಿತಾಲೂಕಿನ ನೆರಿಯ ಗ್ರಾಮದ ಬಾಂಜಾರು ಮಲೆಯಲ್ಲಿ ಶೇ.100 ಮತದಾನವಾಗಿದೆ. ದ.ಕ‌ ಜಿಲ್ಲೆಯ ಅತ್ಯಂತ ಕುಗ್ರಾಮವಾಗಿರುವ ಬಾಂಜಾರು ಮಲೆಯ ಸಮುದಾಯ ಭವನದಲ್ಲಿ ನಡೆದ ಮತದಾನದಲ್ಲಿ ಎಲ್ಲರೂ ತಮ್ಮ ಹಕ್ಕುಗಳನ್ನು ಚಲಾಯಿಸಿ ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ನೂರು ಶೇಖಡಾ ಮತದಾನವಾದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಬಾಂಜಾರು ಮಲೆ ಮತಗಟ್ಟೆಯಲ್ಲಿ 4 ಗಂಟೆಯ ಸುಮಾರಿಗೆ ಶೇ.100

ದ.ಕ ಜಿಲ್ಲೆಯ ಈ ಮತಗಟ್ಟೆಯಲ್ಲಿ ಶೇ.100 ಮತದಾನ| ದೇಶಕ್ಕೆ ಮಾದರಿಯಾದ ಕುಗ್ರಾಮದ ಮತದಾರರು Read More »

ಉಡುಪಿ: ರಾಜೀವನಗರ ಮತಗಟ್ಟೆಯಲ್ಲಿ ನಕಲಿ ಮತದಾನದ ಆರೋಪ

ಸಮಗ್ರ ನ್ಯೂಸ್‌ : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 80ನೇ ಬಡಗಬೆಟ್ಟು ಗ್ರಾಪಂನ ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆಯಲ್ಲಿ ವ್ಯಕ್ತಿಯೊಬ್ಬರ ಹೆಸರಿನಲ್ಲಿ ಬೇರೆ ವ್ಯಕ್ತಿ ಆಗಮಿಸಿ ಮತದಾನ ಮಾಡಿದ್ದು, ಇಲ್ಲಿ ನಕಲಿ ಮತದಾನ ನಡೆದಿರುವ ಆರೋಪಗಳು ಕೇಳಿಬಂದಿವೆ. ಅರ್ಬಿಯ ಕೃಷ್ಣ ನಾಯಕ್ ಎಂಬವರು ಮತದಾನ ಮಾಡಲು ಮತಗಟ್ಟೆಗೆ ಆಗಮಿಸಿದಾಗ ತಮ್ಮ ಹೆಸರಿನಲ್ಲಿ ಆಗಲೇ ಮತದಾನ ಮಾಡಿರುವುದಾಗಿ ಮತ ಗಟ್ಟೆ ಅಧಿಕಾರಿಗಳು ತಿಳಿಸಿದರು. ಆದರೆ ನಾನು ಮತದಾನ ಮಾಡಿಲ್ಲ ಎಂದು ಕೃಷ್ಣ ನಾಯಕ್ ವಾದ ಮಂಡಿಸಿದರು. ಇದರಿಂದ

ಉಡುಪಿ: ರಾಜೀವನಗರ ಮತಗಟ್ಟೆಯಲ್ಲಿ ನಕಲಿ ಮತದಾನದ ಆರೋಪ Read More »

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ, ಉಪನ್ಯಾಸ

ಸಮಗ್ರ ನ್ಯೂಸ್: ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐ.ಎಸ್.ಟಿ.ಇ) ಇದರ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಅಣ್ಣಯ್ಯ ಕೆ. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.ವ್ರತ್ತಿಪರ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ವ್ರತ್ತಿ ಅಭಿವ್ರದ್ಧಿ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಐ.ಎಸ್‌.ಟಿ.ಇ ಸಂಸ್ಥೆಯ ಬಗ್ಗೆ ಸಂಚಾಲಕ

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ, ಉಪನ್ಯಾಸ Read More »