ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ನೂತನ ಬಂಡಿ ರಥ ಆಗಮನ

ಸಮಗ್ರ ನ್ಯೂಸ್: ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಅವರು ಸೇವಾರೂಪದಲ್ಲಿ ಸಮರ್ಪಿಸುವ ನೂತನ ಬಂಡಿ ರಥವು ಮೆರವಣಿಗೆಯೊಂದಿಗೆ ಸೋಮವಾರ ಕುಕ್ಕೆಗೆ ತಲುಪಿತು. ಆನೆ, ಬಿರುದಾವಳಿ ಮತ್ತು ಬ್ಯಾಂಡ್ ವಾದ್ಯಗಳ ನಿನಾದದೊಂದಿಗೆ ರಥವನ್ನು ಸ್ವಾಗತಿಸಲಾಯಿತು. ರಥವನ್ನು ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಸ್ವಾಗತಿಸಲಾಯಿತು. ಮಹಾಗಣಪತಿಗೆ ಪೂಜೆ ನೆರವೇರಿಸಿದ ಬಳಿಕ ಪುರೋಹಿತ ಪ್ರಸಾದ್ ಕಲ್ಲೂರಾಯ ನೂತನ ಬಂಡಿ ರಥಕ್ಕೆ ಪೂಜೆ ನೆರವೇರಿಸಿದರು. ಬಳಿಕ ದೇವಳದ ಆಡಳಿತಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಅವರು ರಥಕ್ಕೆ ಪುಷ್ಪಾರ್ಚನೆ

ಕುಕ್ಕೆ ಸುಬ್ರಹ್ಮಣ್ಯ: ನೂತನ ಬಂಡಿ ರಥ ಆಗಮನ Read More »

ಉಳ್ಳಾಲ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ಕಪ್ಪು ಬಣ್ಣದ ಕಾರಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧ ಪಿಸ್ತೂಲ್ ಇಟ್ಟುಕೊಂಡು ಯಾವುದೋ ದುಷ್ಕೃತ್ಯ ನಡೆಸುವುದಕ್ಕಾಗಿ ತಿರುಗಾಡುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೊಹಮ್ಮದ್ ಅಸ್ಕರ್(26) ಮತ್ತು ಅಬ್ದುಲ್ ನಿಸಾರ್.ಕೆ(29) ಎನ್ನುವವರಾಗಿದ್ದಾರೆ. ಪಿಸ್ತೂಲ್, ಸಜೀವ

ಉಳ್ಳಾಲ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಪೊಲೀಸರ ವಶಕ್ಕೆ Read More »

ಬೆಳ್ತಂಗಡಿ: ‘ಕಾರ್ಯಕರ್ತರ ತಂಟೆಗೆ ಬಂದ್ರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ’| ಖಾಕಿಗೆ ಆವಾಜ್ ಹಾಕಿದ ಶಾಸಕ ಹರೀಶ್ ಪೂಂಜಾ!!

ಸಮಗ್ರ ನ್ಯೂಸ್: ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿದರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ ಎಂದು ಬೆಳ್ತಂಗಡಿ ಶಾಸಕ (BJP MLA) ಹರೀಶ್ ಪೂಂಜಾ(harish poonja) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದ ಪ್ರತಿಭಟನೆಯಲ್ಲಿ ಮಾತನಾಡುತ್ತಾ ಅವರು, ‘ದಕ್ಷಿಣ ಕನ್ನಡ ಎಸ್‍ಪಿಗೆ ತಲೆಯಲ್ಲಿ ಕೂದಲು ಇಲ್ಲಾಂತ ಮಾತ್ರ ಅಂದ್ಕೊಂಡಿದ್ದೆ, ಈಗ ನೋಡಿದ್ರೆ ಬುದ್ಧಿನೂ ಇಲ್ಲ. ಕಾಂಗ್ರೆಸ್ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಇದೇ ವೇಳೇ ಅವರ,

ಬೆಳ್ತಂಗಡಿ: ‘ಕಾರ್ಯಕರ್ತರ ತಂಟೆಗೆ ಬಂದ್ರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ’| ಖಾಕಿಗೆ ಆವಾಜ್ ಹಾಕಿದ ಶಾಸಕ ಹರೀಶ್ ಪೂಂಜಾ!! Read More »

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ| ಬಂಟ್ವಾಳ ಮೂಲದ ಇಬ್ಬರು ದಾರುಣ ಸಾವು

ಸಮಗ್ರ ನ್ಯೂಸ್: ಶಿರಾಡಿ ಘಾಟ್ ವ್ಯಾಪ್ತಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೈನರ್ ಒಂದರ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಬಂಟ್ವಾಳ ಮೂಲದ ಇಬ್ಬರು ಸಾವನಪ್ಪಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರನಹಳ್ಳಿಯಿಂದ ಸುಮಾರು ಎಂಟು ಕಿಲೋಮೀಟರ್ ದೂರದ ಶಿರಾಡಿ ಘಾಟಿ್ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ 6.30ರ ಸಮಯದಲ್ಲಿ ಘಟನೆ ಸಂಭವಿಸಿದೆ. ಸಕಲೇಶಪುರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಲಾರಿ

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ| ಬಂಟ್ವಾಳ ಮೂಲದ ಇಬ್ಬರು ದಾರುಣ ಸಾವು Read More »

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಟಿಸಿ ಕೊಟ್ಟಿಲ್ಲವೆಂದು ಬೇಸರದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೊನ್ನೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಬಂದಿದ್ದು ಈತ ಉತ್ತೀರ್ಣನಾಗಿದ್ದ. ಇವನು ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ಆದರೆ ಆತ್ಮಹತ್ಯೆ  ಮಾಡಿಕೊಂಡಿದ್ದಾನೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ನಿತಿನ್‌ ಆಚಾರಿ, ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದ. ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಬೈದಿದ್ದರಿಂದ ಬೇಸರಗೊಂಡು ಡೆತ್ ನೋಟ್

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ವಿದ್ಯಾರ್ಥಿ ಆತ್ಮಹತ್ಯೆ Read More »

ಪುತ್ತೂರು: ಕೊನೆಗೂ ಸಿಕ್ಕಿದ ಪ್ರೇತವರ| ಆಟಿ ತಿಂಗಳಲ್ಲಿ ನಡೆಯಲಿದೆ ‘ಕುಲೆ ಮದಿಮೆ’

ಸಮಗ್ರ ನ್ಯೂಸ್: ಪ್ರೇತ ವಿವಾಹಕ್ಕೆ ವರ ಬೇಕೆಂದು ಜಾಹೀರಾತು ಹಾಕಿದ ಸುದ್ದಿ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಜಾಹೀರಾತು ಹಾಕಿದ ಫಲವಾಗಿ ಪ್ರೇತವಿವಾಹಕ್ಕೆ ವರ ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರೇತ ವಿವಾಹಕ್ಕೆ ಪ್ರೇತ ವಧುವಿಗೆ ಕಾಸರಗೋಡು ಸಮೀಪದ ಬಾಯಾರು ಕಡೆಯ ವರ ಈಗ ನಿಗದಿಯಾಗಿದ್ದು, ಮುಂದಿನ ಆಷಾಡ ತಿಂಗಳಲ್ಲಿ ಪ್ರೇತ ಮದುವೆ ನಡೆಯಲಿದೆ. “ಸುಮಾರು 30 ವರ್ಷದ ಹಿಂದೆ ತೀರಿ ಹೋದಾಕೆಗೆ ಪ್ರೇತ ವರ ಸದ್ಯ ಬೇಕಾಗಿದೆ’ ಎಂದು ಪತ್ರಿಕೆಯಲ್ಲಿ ಜಾಹೀರಾತು ಹಾಕಿದ್ದನ್ನು ಗಮನಿಸಿದ

ಪುತ್ತೂರು: ಕೊನೆಗೂ ಸಿಕ್ಕಿದ ಪ್ರೇತವರ| ಆಟಿ ತಿಂಗಳಲ್ಲಿ ನಡೆಯಲಿದೆ ‘ಕುಲೆ ಮದಿಮೆ’ Read More »

ಬೆಳ್ತಂಗಡಿ: ಪಿಎಸ್ಐ ಗೆ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜಾ ಮೇಲೆ‌ ಎಫ್ಐಆರ್

ಸಮಗ್ರ ನ್ಯೂಸ್: ಪೊಲೀಸ್ ಠಾಣೆಯ ಎದುರು ಬೆಂಬಲಿಗರ ಪರ ಧರಣಿ ಮಾಡಿದಲ್ಲದೆ, ಠಾಣೆಯ PSI ಗೆ ಧಮ್ಕಿ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ

ಬೆಳ್ತಂಗಡಿ: ಪಿಎಸ್ಐ ಗೆ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜಾ ಮೇಲೆ‌ ಎಫ್ಐಆರ್ Read More »

ಉಡುಪಿ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಸಮಗ್ರ ನ್ಯೂಸ್ : ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ ಹಾಕಿದರು. ಈ ಹಿಂದೆ ಹಲವು ಬಾರಿ ಪ್ರತಿಭಟನೆ ಹಾಗೂ ಮನವಿ ನೀಡಿದ ಬಳಿಕ ಸಾಸ್ತಾನ ಟೋಲ್ ಪ್ಲಾಝಾದಲ್ಲಿ ಸ್ಥಳೀಯರಿಗೆ ಕೆಲವು ವರ್ಷಗಳಿಂದ ಶುಲ್ಕ ವಿನಾಯತಿ ನೀಡಲಾಗುತ್ತಿತ್ತು. ಆದರೆ ಈಗ ನವಯುಗ ಕಂಪೆನಿ ಟೋಲ್ ಪ್ಲಾಜಾವನ್ನು ಹೊಸ ಕಂಪೆನಿಗೆ ಮಾರಾಟ ಮಾಡಿದ್ದು, ಆ ಬಳಿಕದಿಂದ ಸ್ಥಳೀಯ ವಾಹನಗಳಿಗೂ ಫಾಸ್ಟ್ಯಾಗ್ ಮೂಲಕ

ಉಡುಪಿ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ Read More »

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಅರೆಸ್ಟ್‌

ಸಮಗ್ರ ನ್ಯೂಸ್‌ : ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿ ಮೇಲೆ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಮೇಲೆ ಎಫ್ ಐ ಆರ್ ದಾಖಲಾದ ಹಿನ್ನೆಲೆ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾತ್ರೋ ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹರೀಶ್ ಪೂಂಜ ದೌಡಾಯಿಸಿದ್ದು, ಆರೋಪಿಯನ್ನ ಬಿಡುಗಡೆ ಮಾಡುವಂತೆ ಹೈ ಡ್ರಾಮಾ ಮಾಡಿದ್ದಾರೆ. ಅಮಾಯಕ ಕಾರ್ಯಕರ್ತನನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸರಿಗೆ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಅರೆಸ್ಟ್‌ Read More »

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಸಮಗ್ರ ನ್ಯೂಸ್‌ : ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು ವಾಹನದ ವೀಡಿಯೋ ಚಿತ್ರೀಕರಿಸಿದ ಸಾರ್ವಜನಿಕರೊಬ್ಬರು ಸದ್ರಿ ವಾಹನದ ವಿಮಾ ಅವಧಿಯು ಮುಕ್ತಾಯವಾಗಿರುವುದಾಗಿಯೂ, ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿಯೂ ಸುಳ್ಳು ಸಂದೇಶವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಕುರಿತು ಸ್ಪಷ್ಠನೆ ನೀಡಿರುವ ಪೊಲೀಸ್ ಇಲಾಖೆ, ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳೂ ಕರ್ನಾಟಕ ಗವರ್ನಮೆಂಟ್ ಇನ್ಯುರೆನ್ಸ್ ಡಿಪಾರ್ಟ್‌ಮೆಂಟ್ (ಕೆ.ಜಿ.ಐ.ಡಿ)

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ Read More »