ಕರಾವಳಿ

ಪುತ್ತೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಸಮಗ್ರ ನ್ಯೂಸ್‌ : ಮತದಾನದ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಕಡಬದ ಬಿಳಿನೆಲೆ ಮತಗಟ್ಟೆ ಬಳಿ ನಡೆದಿದೆ. ಮತಗಟ್ಟೆ ಕೇಂದ್ರದ ಗೇಟಿನ ಬಳಿ ಪ್ರಚಾರಕ್ಕೆ ಯತ್ನಿಸಿದ್ದ ಒಂದು ರಾಜಕೀಯ ಪಕ್ಷದ ಕಾರ್ಯಕರ್ತರು ನಡೆಯನ್ನು ಇನ್ನೊಂದು ಪಕ್ಷದ ಕಾರ್ಯಕರ್ತರು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಈ ಸಂದರ್ಭ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗುವ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಪುತ್ತೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ Read More »

ಉಡುಪಿ: ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು-ರಕ್ಷಿತ್ ಶೆಟ್ಟಿ

ಸಮಗ್ರ ನ್ಯೂಸ್‌ : ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ವೋಟ್ ಮಾಡ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಹೇಳಿದರು. ಉಡುಪಿ ಕುಕ್ಕಿಕಟ್ಟೆ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ. ಯಾವಾಗಲೂ ನಾನು ಒಂದು ನಿರ್ಧಾರಕ್ಕೆ

ಉಡುಪಿ: ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು-ರಕ್ಷಿತ್ ಶೆಟ್ಟಿ Read More »

ಉಡುಪಿ: ಮತದಾನದಿಂದ ದೂರ ಉಳಿದವರಿಗೆ ಪೌರತ್ವ ಕೊಡಬಾರದು- ಪೇಜಾವರ ಶ್ರೀ

ಸಮಗ್ರ ನ್ಯೂಸ್‌ : ನಮಗೆ ಬೇಕಾಗಿರುವ ಸರಕಾರ ರೂಪಿಸುವ ದೊಡ್ಡ ಬದ್ಧತೆ ಪ್ರಜೆಗಳ ಮೇಲೆ ಇದೆ. ಹೀಗಾಗಿ ಎಲ್ಲಾ ಪ್ರಜೆಗಳು ತಪ್ಪದೇ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ದೂರ ಉಳಿಯಬಾರದು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನ ಮಾಡಿ ತುಂಬಾ ಹೆಮ್ಮೆ ಅನಿಸುತ್ತಿದೆ. ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಾಗ ಅನುಭವಿಸಿದ ಧನ್ಯತಾಭಾವ ಈಗಲೂ ಅನುಭವಿಸಿದ್ದೇವೆ. ದೇಶದಲ್ಲಿ ಎಲ್ಲಾ ಬಗೆಯ ಜನ ಎಲ್ಲಾ ಕಾಲಕ್ಕೂ ಇರುತ್ತಾರೆ.

ಉಡುಪಿ: ಮತದಾನದಿಂದ ದೂರ ಉಳಿದವರಿಗೆ ಪೌರತ್ವ ಕೊಡಬಾರದು- ಪೇಜಾವರ ಶ್ರೀ Read More »

ಉಡುಪಿ-ಚಿಕ್ಕಮಗಳೂರು ಕ್ಷೇತ್ರ| ಸಂಜೆ 5ಗಂಟೆಗೆ ಶೇ. 72.13ರಷ್ಟು ಮತದಾನ

ಸಮಗ್ರ ನ್ಯೂಸ್‌ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಸಂಜೆ 5ಗಂಟೆಯ ವೇಳೆ ಶೇ. 72.13 ರಷ್ಟು ಮತದಾನವಾಗಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ. 73.53, ಕಾಪುವಿನಲ್ಲಿ ಶೇ.74.50, ಕುಂದಾಪುರದಲ್ಲಿ ಶೇ.74.28, ಉಡುಪಿಯಲ್ಲಿ ಶೇ.72.52, ಚಿಕ್ಕಮಗಳೂರಿನಲ್ಲಿ ಶೇ. 66.13, ಮೂಡುಗೆರೆಯಲ್ಲಿ ಶೇ. 73.48, ಶೃಂಗೇರಿಯಲ್ಲಿ ಶೇ. 75.02 ಹಾಗೂ ತರೀಕೆರೆಯಲ್ಲಿ ಶೇ. 69.06ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ನಿಂದ ತಿಳಿದುಬಂದಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರ| ಸಂಜೆ 5ಗಂಟೆಗೆ ಶೇ. 72.13ರಷ್ಟು ಮತದಾನ Read More »

ಪುತ್ತೂರು: ಬಿಸಿಲಿನ ತಾಪಕ್ಕೆ ಮತಗಟ್ಟೆ ಸಿಬ್ಬಂದಿಗಳು ಹೈರಾಣಾ

ಸಮಗ್ರ ನ್ಯೂಸ್‌ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉರಿ ಬಿಸಿಲು ಹೆಚ್ಚಾಗಿದೆ. ಇಂದು ನಗರದ ತೆಂಕಿಲದ ವಿವೇಕಾನಂದ ಶಾಲೆಯಲ್ಲಿ ಮಸ್ಟರಿಂಗ್ ಕೇಂದ್ರ ಕಾರ್ಯಾಚರಿಸುತ್ತಿದೆ. ಇದೀಗ ಮಸ್ಟರಿಂಗ್ ಕೇಂದ್ರದಿಂದ ತಮ್ಮ ತಮ್ಮ ಮತಗಟ್ಟೆಗಳಿಗೆ ಚುನಾವಣಾ ಕರ್ತವ್ಯ ಸಿಬ್ಬಂದಿಗಳು ತೆರಳಿದ್ದಾರೆ. ಇನ್ನು ಬಿಸಿಲಿನ ತಾಪಕ್ಕೆ ಮತಗಟ್ಟೆ ಸಿಬ್ಬಂದಿಗಳು ಹೈರಾಣಾಗಿದ್ದಾರೆ. ಬಿಸಿಲಿನ ಝಳವನ್ನು ತಪ್ಪಿಸಲು ಮತದಾನದ ಪರಿಕರಗಳನ್ನೇ ತಡೆಯಾಗಿ ಸಿಬ್ಬಂದಿಗಳು ಬಳಸಿಕೊಂಡದ್ದು ಕಂಡು ಬಂತು. ಕೆಲವರು ಇವಿ ಪ್ಯಾಟ್ ಪೆಟ್ಟಿಗೆಯನ್ನು ತಲೆಯಲ್ಲಿಟ್ಟು ಬಿಸಿಲಿನ ಪ್ರಕರತೆ ತಪ್ಪಿಸಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಮತಯಂತ್ರ ಮರೆಯಾಗಿ ಇಡುವ

ಪುತ್ತೂರು: ಬಿಸಿಲಿನ ತಾಪಕ್ಕೆ ಮತಗಟ್ಟೆ ಸಿಬ್ಬಂದಿಗಳು ಹೈರಾಣಾ Read More »

ಬಂಟ್ವಾಳ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

ಸಮಗ್ರ ನ್ಯೂಸ್‌ : ಸ್ಲೀಪರ್ ಕೋಚ್ ಬಸ್‌ನಲ್ಲಿ ಬೆಂಗಳೂರಿನಿಂದ ಬಂಟ್ವಾಳಕ್ಕೆ ಪ್ರಯಾಣಿಸುತ್ತಿದ್ದ ಬಂಟ್ವಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನಾಗಿದ್ದ ಆರೋಪಿ ಅಝೀಮ್ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದನು. ಬಸ್‌ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ವಿದ್ಯಾರ್ಥಿನಿಯ ಮೈಮೇಲೆ ಸಹಪ್ರಯಾಣಿಕ ಕೈ ಮಾಡಿರುವುದು ಕಂಡು ಬಂತು. ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ತಂದರು. ಆದರೆ ಚಾಲಕನಿಂದ

ಬಂಟ್ವಾಳ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ Read More »

ಸುಳ್ಯ: ಬೈಕ್‌ ಮೇಲೆ ಪಲ್ಟಿ ಹೊಡೆದ ಜೀಪು| ಗಂಭೀರ ಗಾಯಗೊಂಡಿದ್ದ ಸವಾರ ಸಾವು

ಸಮಗ್ರ ನ್ಯೂಸ್: ಜೀಪೊಂದು‌ ಬೈಕ್ ಮೇಲೆ‌ ಮಗುಚಿ ಬಿದ್ದ ಪರಿಣಾಮ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಅಜ್ಜಾವರ ಮೂಲದ ದಂಪತಿಗಳು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಪೈಕಿ ವಿನಾಯಕ ಮೂರ್ತಿ ಎಂಬುವವರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು, ಇವರ ಪತ್ನಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಇರುವುದಾಗಿ ತಿಳಿದುಬಂದಿದೆ. ಸುಳ್ಯ

ಸುಳ್ಯ: ಬೈಕ್‌ ಮೇಲೆ ಪಲ್ಟಿ ಹೊಡೆದ ಜೀಪು| ಗಂಭೀರ ಗಾಯಗೊಂಡಿದ್ದ ಸವಾರ ಸಾವು Read More »

ಮಂಗಳೂರು: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ-ಮಾಸ್ಟರಿಂಗ್ ಕಾರ್ಯ ಆರಂಭ

ಸಮಗ್ರ ನ್ಯೂಸ್ : ದಕ್ಷಿಣಕನ್ನಡ ಜಿಲ್ಲೆಯ 8 ಕಡೆಗಳಲ್ಲಿ ಮಾಸ್ಟರಿಂಗ್ ಕಾರ್ಯ ಆರಂಭವಾಗಿದೆ. ಜಿಲ್ಲೆಯಲ್ಲಿ 18,18,127 ಮತದಾರರಿದ್ದಾರೆ. ಒಟ್ಟು 1876 ಮತಗಟ್ಟೆ ಇರಲಿದೆ. 171 ಅತೀ ಸೂಕ್ಷ್ಮ ಮತಗಟ್ಟೆಗಳು ಹಾಗು 1705 ಸಾಮಾನ್ಯ ಮತಗಟ್ಟೆ ಇರಲಿದ್ದು, ಮತಗಟ್ಟೆಗಳಿಗೆ 11255 ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಇನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 1500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 1600 ಪೊಲೀಸರ ನಿಯೋಜನೆ ಮಾಡಲಾಗಿದೆ. ಸದ್ಯ ಮತಗಟ್ಟೆಗಳಿಗೆ ತೆರಳಿರುವ ಸಿಬ್ಬಂದಿಗಳಿಗೆ ಅಧಿಕಾರಿಗಳು ನಿರ್ದೇಶನಗಳನ್ನ

ಮಂಗಳೂರು: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ-ಮಾಸ್ಟರಿಂಗ್ ಕಾರ್ಯ ಆರಂಭ Read More »

ಕಳಚಿದ ಯಕ್ಷರಂಗದ ಹಿರಿಯ ಕೊಂಡಿ| ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಸಮಗ್ರ ನ್ಯೂಸ್: ಬಡಗುತಿಟ್ಟು ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ (67) ವಿಧಿವಶರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಏಪ್ರಿಲ್‌ 25 ರಂದು ಬೆಳಗ್ಗೆ 4.30ಕ್ಕೆ ಬೆಂಗಳೂರಿನಲ್ಲಿರುವ ತಮ್ಮ ಪುತ್ರನ ನಿವಾಸದಲ್ಲಿ ನಿಧನರಾಗಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 46 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಭಾಗವತ ಸುಬ್ರಮಣ್ಯ ಧಾರೇಶ್ವರ ಅವರು ಕಾಳಿಂಗ ನಾವುಡರ ಅಗಲುವಿಕೆಯ ಬಳಿಕ ಉಂಟಾಗಬಹುದಿದ್ದ ನಿರ್ವಾತವನ್ನು ತುಂಬಲು ಯತ್ನಿಸಿದ್ದ ಭಾಗವತ ಶ್ರೇಷ್ಠ ಎನಿಸಿಕೊಂಡಿದ್ದರು. ಮೂಲತಃ ಗೋಕರ್ಣ ಮೂಲದವಾರದ ಭಾಗವತ ಸುಬ್ರಮಣ್ಯ ಧಾರೇಶ್ವರ ಅವರು

ಕಳಚಿದ ಯಕ್ಷರಂಗದ ಹಿರಿಯ ಕೊಂಡಿ| ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ Read More »

ಉಪ್ಪಿನಂಗಡಿ: ಬಸ್ ನಲ್ಲಿ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ| ದೂರು ದಾಖಲಿಸಿದ ಯುವತಿ

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಆಗಮಿಸುತ್ತಿದ್ದ ಹಿಂದೂ ಯುವತಿಗೆ ಮುಸ್ಲಿಂ ಯುವಕನೋರ್ವ ಕಿರುಕುಳ ನೀಡಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮತದಾನಕ್ಕೆಂದು ಬೆಂಗಳೂರಿನಿಂದ ಮಂಗಳೂರಿನತ್ತ ಖಾಸಗಿ ಬಸ್ ನಲ್ಲಿ ಬರುತ್ತಿದ್ದ ಯುವತಿಗೆ ಯುವಕ ಸಹಪ್ರಯಾಣಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಯುವತಿ ರಕ್ಷಣೆಗಾಗಿ ಬಸ್ ಚಾಲಕನ ಮೊರೆ ಹೋದ ವೇಳೆ ಯಾವುದೇ ಸ್ಪಂದನೆ ದೊರೆಯದಿದ್ದು, ಬಳಿಕ ಯುವತಿ ಯುವಕನ ಮೇಲೆ ಪ್ರತಿರೋಧಯೊಡ್ಡಿ ಆತನಿಂದ ಆಧಾರ್ ಕಾರ್ಡ್

ಉಪ್ಪಿನಂಗಡಿ: ಬಸ್ ನಲ್ಲಿ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ| ದೂರು ದಾಖಲಿಸಿದ ಯುವತಿ Read More »