ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಟಿ ಮಹೋತ್ಸವ ಹಿನ್ನಲೆ| ಮದ್ಯದಂಗಡಿ ಮುಚ್ಚಲು ಡಿಸಿ‌ ಆದೇಶ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಡಿಸೆಂಬರ್ 2 ರ ತನಕ ನಡೆಯಲಿದ್ದು, ನವೆಂಬರ್ 25 ರಂದು ಪಂಚಮಿ ರಥೋತ್ಸವ, ತೈಲಾಭ್ಯಂಜನ ಹಾಗೂ 26 ರಂದು ಚಂಪಾಷಷ್ಠಿ ಮಹಾರಥೋತ್ಸವವು ನಡೆಯಲಿದ್ದು, ಸುಮಾರು 50 ರಿಂದ 60 ಸಾವಿರ ಭಕ್ತಾಧಿಗಳು ಸೇರುವ ನಿರೀಕ್ಷೆ ಇದೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿಕೊಂಡು ಕಿರುಕುಳ ಉಂಟುಮಾಡುವುದನ್ನು ತಪ್ಪಿಸಲು ಮತ್ತು ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನವೆಂಬರ್ 25 ರಂದು ಬೆಳಿಗ್ಗೆ […]

ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಟಿ ಮಹೋತ್ಸವ ಹಿನ್ನಲೆ| ಮದ್ಯದಂಗಡಿ ಮುಚ್ಚಲು ಡಿಸಿ‌ ಆದೇಶ Read More »

ದ.ಕ ದಲ್ಲಿ ಶೀಘ್ರ ಆನೆ ಕಾರ್ಯಪಡೆ‌ ಸ್ಥಾಪನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ವಿವಿಧ ಭಾಗಗಳಲ್ಲಿ ಮಾನವ-ಆನೆ ಸಂಘರ್ಷದ ಘಟನೆಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಗೆ ಮೀಸಲಾದ ಆನೆ ಕಾರ್ಯಪಡೆ (ಇಟಿಎಫ್) ರಚನೆಯನ್ನು ಸರ್ಕಾರ ಅಂತಿಮಗೊಳಿಸಲು ನಿರ್ಧರಿಸಿದೆ. ಆದಾಗ್ಯೂ, ಆನೆ ಶಿಬಿರದ ಪ್ರಸ್ತಾವನೆಗೆ ಗಣನೀಯವಾಗಿ ಹೆಚ್ಚಿನ ಹೂಡಿಕೆಯ ಅಗತ್ಯವಿರುತ್ತದೆ ಮತ್ತು ಉದ್ದೇಶಿತ ಗುಂಡ್ಯ ಪ್ರದೇಶದಲ್ಲಿ ಸ್ಥಳೀಯರಿಂದ ವಿರೋಧವನ್ನು ಎದುರಿಸಿದೆ. ಈ ಅಡೆತಡೆಗಳನ್ನು ಪರಿಗಣಿಸಿ, ಅಧಿಕಾರಿಗಳು ಈಗ ಇಟಿಎಫ್ ಸ್ಥಾಪನೆಗೆ ಆದ್ಯತೆ ನೀಡುತ್ತಿದ್ದಾರೆ, ಸುಳ್ಯ ಮತ್ತು ಗುಂಡ್ಯವನ್ನು ಕೇಂದ್ರ ಕಾರ್ಯಾಚರಣೆಯ ವಲಯಗಳಾಗಿ ಗುರುತಿಸಲಾಗಿದೆ. ಪ್ರಸ್ತಾವನೆಗೆ ಈಗಾಗಲೇ ಸಚಿವ

ದ.ಕ ದಲ್ಲಿ ಶೀಘ್ರ ಆನೆ ಕಾರ್ಯಪಡೆ‌ ಸ್ಥಾಪನೆ Read More »

ಸುರತ್ಕಲ್ – ನಂತೂರು – ಬಿಸಿರೋಡ್ ಹೆದ್ದಾರಿ NHAI ಗೆ ಹಸ್ತಾಂತರ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಸುರತ್ಕಲ್-ನಂತೂರು-ಬಿ.ಸಿ. ರಸ್ತೆ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್ ಅನ್ನು ಸುಧಾರಿಸಬೇಕೆಂಬ ಬಹುದಿನಗಳ ಬೇಡಿಕೆಗೆ ಕೊನೆಗೂ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿರುವ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕ ಜಾಲವನ್ನು ಸುಧಾರಣೆ ಮಾಡುವ ಬೇಡಿಕೆ ತುಂಬಾ ವರ್ಷಗಳಿಂದ ಕೇಳಿಬಂದಿತ್ತು. ಕೊನೆಗೂ ಎನ್‌ಎಂಪಿಟಿ ವ್ಯಾಪ್ತಿಯ

ಸುರತ್ಕಲ್ – ನಂತೂರು – ಬಿಸಿರೋಡ್ ಹೆದ್ದಾರಿ NHAI ಗೆ ಹಸ್ತಾಂತರ Read More »

ಕರಾವಳಿಯಾದ್ಯಂತ ಕಾಡಿದ ವರುಣ| ಇಂದೂ ಮಳೆ ಮನ್ಸೂಚನೆ

ಸಮಗ್ರ ನ್ಯೂಸ್: ಮಲಕ್ಕಾ ಮತ್ತು ದಕ್ಷಿಣ ಅಂಡಮಾನ್‌ ಸಮುದ್ರ, ಬಂಗಾಲಕೊಲ್ಲಿ ಮತ್ತು ಶ್ರೀಲಂಕಾದಲ್ಲಿ ನಿಮ್ನ ಒತ್ತಡ ನಿರ್ಮಾಣಗೊಂಡಿದ್ದು, ಪಶ್ಚಿಮ ವಾಯುವ್ಯ ದಿಕ್ಕಿನತ್ತ ಸಾಗುತ್ತಿದೆ. ನ. 24ರಂದು ಇದರ ತೀವ್ರತೆ ಇನ್ನಷ್ಟು ಹೆಚ್ಚಾಗಿ ಮುಂದಿನ 48 ಗಂಟೆಗಳಲ್ಲಿ ಇದು ಚಂಡಮಾರುತವಾಗಿ ಪರಿವರ್ತನೆ ಯಾಗುವ ಸಾಧ್ಯತೆ ಇದೆ. ನಿಮ್ನ ಒತ್ತಡದ ಪರಿಣಾಮ ಮತ್ತು ಹಿಂಗಾರು ಕಾರಣದಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದೆ. ಶನಿವಾರ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿತ್ತು. ರವಿವಾರವೂ ಮಳೆ

ಕರಾವಳಿಯಾದ್ಯಂತ ಕಾಡಿದ ವರುಣ| ಇಂದೂ ಮಳೆ ಮನ್ಸೂಚನೆ Read More »

ಕಡಬ: ಖಿನ್ನತೆಯಿಂದ ಬಳಲುತ್ತಿದ್ದ ಯುವಕ ನೇಣಿಗೆ ಶರಣು| ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದು ಆತ್ಮಹತ್ಯೆ

ಸಮಗ್ರ ನ್ಯೂಸ್: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ಜೀವಾಂತ್ಯಕ್ಕೆ ಶರಣಾದ ಹೃದಯ ವಿದ್ರಾವಕ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ ಆಕೋಟತ್ತಡ್ಕದಲ್ಲಿ ಸಂಭವಿಸಿದೆ. ಮೃತನನ್ನು ದಿ. ವಾಲ್ಟರ್ ರೋಡ್ರಿಗಸ್ ವಾಲ್ಟರ್ ರೋಡ್ರಿಗಸ್ ಅವರ ಪುತ್ರ ಚೇತನ್ ಎಂದು ಗುರುತಿಸಲಾಗಿದೆ. ಚೇತನ್ ತನ್ನ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾನೆ. ಪದವಿ ಶಿಕ್ಷಣ ಮುಗಿಸಿದ್ದ ಚೇತನ್, ಮನೆಯಲ್ಲಿ ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದನು. ಆದರೆ, ಕಳೆದ ಕೆಲ ಸಮಯದಿಂದ ಆತ ತೀವ್ರ ಮಾನಸಿಕ

ಕಡಬ: ಖಿನ್ನತೆಯಿಂದ ಬಳಲುತ್ತಿದ್ದ ಯುವಕ ನೇಣಿಗೆ ಶರಣು| ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದು ಆತ್ಮಹತ್ಯೆ Read More »

ಬೆಳ್ತಂಗಡಿ ಕೋರ್ಟ್ ಗೆ ಧರ್ಮಸ್ಥಳ ಪ್ರಕರಣದ ವರದಿ ಸಲ್ಲಿಸಿದ ಎಸ್ಐಟಿ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು, ಈ ಪ್ರಕರಣದ ಸಾಕ್ಷಿ ದೂರುದಾರ ಸೇರಿ ಆರು ಮಂದಿ ಸೇರಿ ಯಾವ ರೀತಿ ನ್ಯಾಯಾಲಯದ ದಾರಿ ತಪ್ಪಿಸಿದ್ದಾರೆ ಎಂಬ ಕುರಿತು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಗುರುವಾರ ವರದಿ ಸಲ್ಲಿಸಿದರು. ಎಸ್‌ಐಟಿಯ ಮುಖ್ಯ ತನಿಖಾಧಿಕಾರಿಗಳಾದ ಜಿತೇಂದ್ರ ಕುಮಾರ್‌ ದಯಾಮ ಹಾಗೂ ಸಿ.ಎ.ಸೈಮನ್‌ ಅವರು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ

ಬೆಳ್ತಂಗಡಿ ಕೋರ್ಟ್ ಗೆ ಧರ್ಮಸ್ಥಳ ಪ್ರಕರಣದ ವರದಿ ಸಲ್ಲಿಸಿದ ಎಸ್ಐಟಿ Read More »

ಧರ್ಮಸ್ಥಳ ಬುರುಡೆ ಪ್ರಕರಣ| ತಿಮರೋಡಿ, ಮಟ್ಟಣ್ಣನವರ್ ಸೇರಿ‌ 6 ಮಂದಿ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಲಾಗಿದೆ ಎಂದು ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಎಂದು ಎಸ್‌ಐಟಿ ವತಿಯಿಂದ 4000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗುವುದು. ಎಸ್‌ಐಟಿಯ ಮುಖ್ಯ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರು ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಒಟ್ಟು ಆರು ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು. ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್, ವಿಠಲ್ ಗೌಡ ಸೇರಿ

ಧರ್ಮಸ್ಥಳ ಬುರುಡೆ ಪ್ರಕರಣ| ತಿಮರೋಡಿ, ಮಟ್ಟಣ್ಣನವರ್ ಸೇರಿ‌ 6 ಮಂದಿ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ Read More »

ಮಂಗಳೂರು: ಯಕ್ಷಗಾನ, ಕಂಬಳ, ಜಾತ್ರೆಗಿಲ್ಲ ಅಡ್ಡಿ| ಜಿಲ್ಲಾಡಳಿತದಿಂದ ಮಹತ್ವದ ಮಾಹಿತಿ

ಸಮಗ್ರ ನ್ಯೂಸ್: ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಿತು. ‘ಧ್ವನಿವರ್ಧಕ ಬಳಕೆಯ ನೆಪ ಹೇಳಿ ರಾತ್ರಿ ವೇಳೆ ಕಂಬಳಕ್ಕೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚನೆ ನೀಡಬೇಕು’ ಎಂದು ಶಾಸಕ ಅಶೋಕ್‌

ಮಂಗಳೂರು: ಯಕ್ಷಗಾನ, ಕಂಬಳ, ಜಾತ್ರೆಗಿಲ್ಲ ಅಡ್ಡಿ| ಜಿಲ್ಲಾಡಳಿತದಿಂದ ಮಹತ್ವದ ಮಾಹಿತಿ Read More »

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ (DKWJA) 2025-28ರ ಸಾಲಿಗಾಗಿ ನಡೆದ ಚುನಾವಣೆಯಲ್ಲಿ, ವಾರ್ತಾಭಾರತಿ ಪತ್ರಿಕೆಯ ಮಂಗಳೂರು ಬ್ಯೂರೋ ಚೀಫ್ ಆಗಿರುವ ಪುಷ್ಪರಾಜ್ ಬಿ.ಎನ್. ಅವರು ನೂತನ ಅಧ್ಯಕ್ಷರಾಗಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ ಪುಷ್ಪರಾಜ್ ಅವರು ಒಟ್ಟು 187 ಮತಗಳನ್ನು ಪಡೆದು, ತಮ್ಮ ಪ್ರತಿಸ್ಪರ್ಧಿ, ವಿಜಯವಾಣಿ ವರದಿಗಾರ ಶ್ರವಣ್ ಕುಮಾರ್ ನಾಳ (144 ಮತಗಳು) ಅವರನ್ನು ಸೋಲಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಸುಮಾರು

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ Read More »

ಅಡಿಕೆ ಕ್ಯಾನ್ಸರ್‌ ಕಾರಕವಲ್ಲ, ಪ್ರತಿಬಂಧಕ| ಎನೆಪೋಯ ಯೂನಿವರ್ಸಿಟಿ ಸಂಶೋಧನಾ ವರದಿಯಲ್ಲಿ ಬಹಿರಂಗ

ಸಮಗ್ರ ನ್ಯೂಸ್: ಅಡಿಕೆ ಬೆಳಗಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಅಡಿಕೆ ಸಾರಗಳು ಶಕ್ತಿಶಾಲಿ ಕ್ಯಾನ್ಸರ್ ಪ್ರತಿ ಬಂಧಕ ಗುಣಗಳನ್ನು ಹೊಂದಿವೆ ಎಂದು ಯೆನಪೊಯ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆಯಲ್ಲಿ ಬಹಿರಂಗವಾಗಿದೆ. ಮಂಗಳೂರಿನ‌ ಯೆನೆಪೊಯ ವಿಶ್ವವಿದ್ಯಾನಿಲಯವು ಅಡಿಕೆಯ ಮೇಲೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಿ ತಯಾರಿಸಿದ ವರದಿಯಲ್ಲಿ ಅಡಿಕೆಯ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತವೆ. ಇದು ಸಾಮಾನ್ಯ ಕೋಶಗಳಿಗೆ ಹಾನಿಯನ್ನುಂಟು ಮಾಡುವುದಿಲ್ಲ. ಸಂಪ್ರದಾಯಕವಾಗಿ ಸಂಸ್ಕರಿಸಿದ ಅಡಿಕೆಯನ್ನು ಬಳಸಿದರೆ

ಅಡಿಕೆ ಕ್ಯಾನ್ಸರ್‌ ಕಾರಕವಲ್ಲ, ಪ್ರತಿಬಂಧಕ| ಎನೆಪೋಯ ಯೂನಿವರ್ಸಿಟಿ ಸಂಶೋಧನಾ ವರದಿಯಲ್ಲಿ ಬಹಿರಂಗ Read More »