ಕರಾವಳಿ

ದಕ್ಷಿಣ ಕನ್ನಡ : ನವರಾತ್ರಿ ಮೆರವಣಿಗೆ ದಿನಗಳಂದು ಮದ್ಯದಂಗಡಿ ಬಂದ್ ಗೆ ಆದೇಶ

ಸಮಗ್ರ ನ್ಯೂಸ್: ದ.ಕ ಜಿಲ್ಲಾದ್ಯಂತ ನವರಾತ್ರಿ ಹಬ್ಬವನ್ನು ಆಚರಿಸಲಿದ್ದು, ಈ ಹಬ್ಬದ ಸಮಯದಲ್ಲಿ ಜಿಲ್ಲೆಯಲ್ಲಿ ಶಾರದಾ ಮೂರ್ತಿಯ ವಿಗ್ರಹಗಳನ್ನು ತಯಾರಿಸಿದ ಸ್ಥಳಗಳಿಂದ ವಿಜೃಂಭಣೆಯಿಂದ ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪನೆ ಮಾಡಿ ಭಜನೆ, ಆರ್ಕೆಸ್ಟ್ರಾ, ವಾದ್ಯಗೋಷ್ಟಿ, ಧಾರ್ಮಿಕ ಮತ್ತು ಸಾಂಸ್ಕಂತಿಕ ಕಾರ್ಯಕ್ರಮಗಳು ನಡೆಯಲಿದೆ. ನಂತರ ನಿಗದಿತ ದಿನದಂದು ಶಾರದಾ ಮೂರ್ತಿಯ ವಿಸರ್ಜನಾ ಮೆರವಣಿಗೆಯು ಪ್ರತಿಷ್ಠಾಪನಾ ಸ್ಥಳದಿಂದ ಭವ್ಯ ಮೆರವಣಿಗೆಯಲ್ಲಿ ಟ್ಯಾಬ್ಲೋ, ಚೆಂಡೆ, ಮುಂತಾದ ಸ್ತಬ್ಧ ಚಿತ್ರಗಳೊಂದಿಗೆ ಸಾಗಿ ನಂತರ ಬಾವಿ, ಕೆರೆ, ನದಿಗಳಲ್ಲಿ ವಿಸರ್ಜನೆ ನಡೆಸಲಿರುತ್ತಾರೆ ಹಾಗೂ ಕಾರ್ಯಕ್ರಮದಲ್ಲಿ ಸಾವಿರಾರು […]

ದಕ್ಷಿಣ ಕನ್ನಡ : ನವರಾತ್ರಿ ಮೆರವಣಿಗೆ ದಿನಗಳಂದು ಮದ್ಯದಂಗಡಿ ಬಂದ್ ಗೆ ಆದೇಶ Read More »

ಯಾವ ತಪ್ಪು ಮಾಡದ ನನ್ನ ಮೇಲೆ ಯಾಕಿಷ್ಟು ಕೋಪ? – ವೀರೇಂದ್ರ ಹೆಗ್ಗಡೆ

ಸಮಗ್ರ ನ್ಯೂಸ್: ‘ಯಾವ ತಪ್ಪು ಮಾಡದೆ, ಯಾರನ್ನೂ ನೋಯಿಸದೆ ಕರ್ತವ್ಯ ನಿಭಾಯಿಸುತ್ತ ಬಂದಿದ್ದೇನೆ. ನನ್ನ ಮೇಲೆ ಕೆಲವರು ಏಕೆ ದ್ವೇಷ ಕಾರುತ್ತಿದ್ದಾರೆ? ಏಕೆ ನಿಷ್ಠುರವಾಗಿ ವರ್ತಿಸುತ್ತಿದ್ದಾರೆ ಎಂದು ಗೊತ್ತಾಗುತ್ತಿಲ್ಲ’ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳ ಹಿತರಕ್ಷಣಾ ವೇದಿಕೆ ಆಶ್ರಯದಲ್ಲಿ ಧರ್ಮಸ್ಥಳದಲ್ಲಿ ಊರ ಜನರು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಶ್ರೀ ಮಂಜುನಾಥಸ್ವಾಮಿ ಸನ್ನಿಧಿ ಹಾಗೂ ಅಣ್ಣಪ್ಪಸ್ವಾಮಿ ಬೆಟ್ಟದ ಎದುರು ಶುಕ್ರವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ

ಯಾವ ತಪ್ಪು ಮಾಡದ ನನ್ನ ಮೇಲೆ ಯಾಕಿಷ್ಟು ಕೋಪ? – ವೀರೇಂದ್ರ ಹೆಗ್ಗಡೆ Read More »

ಕೇವಲ ಒಂದು ಸಾವಿರ ರುಪಾಯಿಗೆ ಸ್ವಂತ ಮನೆ ಗೆಲ್ಲಬೇಕೆ? RAS Enterprises ಮೂಲಕ ಇಲ್ಲಿದೆ ಸುವರ್ಣಾವಕಾಶ

ಸಮಗ್ರ ನ್ಯೂಸ್: :ಮಂಗಳೂರಿನ Ras Enterprisesಯಶಸ್ವಿ 5 ಸೀಸನ್’ಗಳನ್ನು ಪೂರೈಸಿ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “RAS ಎಂಟರ್ಪ್ರೈಸಸ್” ಸಂಸ್ಥೆ, ಇದೀಗ ಆರನೇ ಸೀಸನ್ ಆರಂಭಿಸಿದ್ದು, ಸದಸ್ಯರಿಗೆ ಈ ಸೀಸನ್’ನಲ್ಲಿ ಭರ್ಜರಿ ಧಮಾಕ ಆಫರ್ ನೀಡಿದೆ. ಮಾಸಿಕ ಕಂತು ಒಂದು ಸಾವಿರ ರೂಪಾಯಿಯಂತೆ, ಒಟ್ಟು ಇಪ್ಪತ್ತು ತಿಂಗಳು ಕಟ್ಟುವ ಮಾಸಿಕ ಯೋಜನೆ ಇದಾಗಿದ್ದು. ಸೇರಿದ ಸದಸ್ಯರಿಗೆ ಪ್ರತಿ ತಿಂಗಳು ಬಂಪರ್ ಬಹುಮಾನ ಇರಲಿದೆ. ಕೊನೆಯವರೆಗೆ ಕಟ್ಟಿ ಯಾವುದೇ ಬಹುಮಾನ ಸಿಗದ ಸದಸ್ಯರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವಂತ

ಕೇವಲ ಒಂದು ಸಾವಿರ ರುಪಾಯಿಗೆ ಸ್ವಂತ ಮನೆ ಗೆಲ್ಲಬೇಕೆ? RAS Enterprises ಮೂಲಕ ಇಲ್ಲಿದೆ ಸುವರ್ಣಾವಕಾಶ Read More »

ಪುತ್ತೂರು: ಹಿಂದೂ ಕಾರ್ಯಕರ್ತನ‌ ಮೇಲೆ ಹಲ್ಲೆ ಪ್ರಕರಣ| ಪುತ್ತಿಲ ಪರಿವಾರದ ಕೈವಾಡವಿಲ್ಲ – ಹಿಂಜಾವೇ ಸ್ಪಷ್ಟನೆ

ಸಮಗ್ರ ನ್ಯೂಸ್: ಪುತ್ತೂರಿನ ದರ್ಬೆ ವೃತ್ತದ ಬಳಿ ಹಿಂದೂ ಜಾಗರಣ ವೇದಿಕೆ ಮುಖಂಡರೊಬ್ಬರಿಗೆ ಪುತ್ತಿಲ ಪರಿವಾರದ ಮುಖಂಡನಿಗೆ ಹಲ್ಲೆ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಿಂದೂ ಜಾಗರಣ ವೇದಿಕೆ ಮುಖಂಡರು ಸ್ಪಷ್ಟನೆ ನೀಡಿದ್ದಾರೆ. ಈ ಹಲ್ಲೆ ನಡೆದಿರುವ ಹಿಂದೆ ಬಿಜೆಪಿ ಮತ್ತು ಪುತ್ತಿಲ ಪರಿವಾರದ ಕೈವಾಡವಿಲ್ಲ ಎಂದಿದ್ದಾರೆ. ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಹಿಂದೂ ಜಾಗರಣ ವೇದಿಕೆ ಈ ಹಲ್ಲೆ ವೈಯುಕ್ತಿಕ ವಿಚಾರವಾಗಿ ನಡೆದಿದೆ ಎಂದು ಪುತ್ತಿಲ ಪರಿವಾರದ ಮುಖಂಡರಿಂದ ಸ್ಪಷ್ಟನೆ ನೀಡಿದ್ದಾರೆ. ವಾಟ್ಸಪ್ ಗ್ರೂಪ್ ಗಳಲ್ಲಿ ಹಿಂದೂ

ಪುತ್ತೂರು: ಹಿಂದೂ ಕಾರ್ಯಕರ್ತನ‌ ಮೇಲೆ ಹಲ್ಲೆ ಪ್ರಕರಣ| ಪುತ್ತಿಲ ಪರಿವಾರದ ಕೈವಾಡವಿಲ್ಲ – ಹಿಂಜಾವೇ ಸ್ಪಷ್ಟನೆ Read More »

ಭಾರೀ ಮಳೆ ಹಿನ್ನಲೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಆ.19ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಆ.19ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಗಳಿಗೆ ರಜೆ ಇರುವುದಿಲ್ಲ, ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ,

ಭಾರೀ ಮಳೆ ಹಿನ್ನಲೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಆ.19ರಂದು ರಜೆ ಘೋಷಣೆ Read More »

ಸುಬ್ರಮಣ್ಯ ಕೆ. ಎಸ್. ಎಸ್ ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ 

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ರಕ್ಷಾ ಬಂಧನ  ಕಾರ್ಯಕ್ರಮವನ್ನು ಕಾಲೇಜಿನ ಐ.ಕ್ಯೂ.ಎ.ಸಿ ಘಟಕ ಮತ್ತು ವಿದ್ಯಾರ್ಥಿ ಪರಿಷತ್ತು ವತಿಯಿಂದ ಆ.11 ರಂದು ನಡೆಸಲಾಯಿತು.   ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿನ ಆಂಗ್ಲ ಭಾಷಾ ಉಪನ್ಯಾಸಕರಾದ ಸುಬ್ರಹ್ಮಣ್ಯ ಎ.ಯು   ಮುಖ್ಯ ಅಭ್ಯಾಗತರಾಗಿ ಆಗಮಿಸಿ ರಕ್ಷಾ ಬಂಧನ ಸಂದೇಶ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದ್ದರು. ವೇದಿಕೆಯಲ್ಲಿ  ಐ.ಕ್ಯೂ.ಎ.ಸಿ ಘಟಕದ ಸಂಯೋಜಕಿ ಲತಾ ಬಿ.ಟಿ ಮತ್ತು ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ  ಶಿವಪ್ರಸಾದ್ ಎಸ್

ಸುಬ್ರಮಣ್ಯ ಕೆ. ಎಸ್. ಎಸ್ ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ  Read More »

ಉಡುಪಿ: ಕಾಂತಾರ ಖ್ಯಾತಿಯ ಹಿರಿಯ ನಟ ಪ್ರಭಾಕರ ಕಲ್ಯಾಣಿ ನಿಧನ

ಸಮಗ್ರ ನ್ಯೂಸ್: ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ಹಿರಿಯಡ್ಕದಲ್ಲಿರುವ ತಮ್ಮ ನಿವಾಸದಲ್ಲಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಕಳೆದ 3 ದಿನಗಳ ಹಿಂದೆ ಹಿರಿಯಡಕ ಪೇಟೆಯಲ್ಲಿ ತಲೆ ಸುತ್ತಿ ಬಿದ್ದಿದ್ದರು. ಇಂದು ಮಲಗಿದಲ್ಲಿಯೇ ಹೃದಯಘಾತದಿಂದ ನಿಧನರಾಗಿದ್ದಾರೆ. 5 ವರ್ಷದ ಹಿಂದೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಸ್ಟಂಟ್ ಹಾಕಲಾಗಿತ್ತು. ಮೃತರು ರಂಗಭೂಮಿ ಕಲಾವಿದರಾಗಿದ್ದು, ಕಾಂತಾರ ಚಿತ್ರದಲ್ಲಿ ಕಲಾವಿದರಾಗಿ ಅಭಿನಯಿಸಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಅನೇಕ ಬಂಧು-ಮಿತ್ರರನ್ನು

ಉಡುಪಿ: ಕಾಂತಾರ ಖ್ಯಾತಿಯ ಹಿರಿಯ ನಟ ಪ್ರಭಾಕರ ಕಲ್ಯಾಣಿ ನಿಧನ Read More »

ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಲು ಸಿಎಂ ಗೆ ಬಿಜೆಪಿ ನಿಯೋಗದಿಂದ ಮನವಿ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಮತ್ತು ಮರಳಿನ ಸಮಸ್ಯೆಗಳ ಪರಿಹಾರಕ್ಕೆ ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ನಿಯೋಗ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದ್ದು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗದಿಂದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರನ್ನು ಭೇಟಿ

ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಲು ಸಿಎಂ ಗೆ ಬಿಜೆಪಿ ನಿಯೋಗದಿಂದ ಮನವಿ Read More »

ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶನ| ವಿಶ್ವ ದಾಖಲೆ ಬರೆದ ಮಂಗಳೂರಿನ ರೆಮೋನಾ ಪಿರೇರಾ

ಸಮಗ್ರ ನ್ಯೂಸ್: ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ‌ ಬಿಎ ವಿದ್ಯಾರ್ಥಿನಿ ರೆಮೋನಾ ಸಾಧನೆ ಈಗ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಯಾಗಿದೆ. ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರಾ ಹಾಲ್​​ನಲ್ಲಿ ರೆಮೋನಾ ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಸತತ ಏಳು ದಿನಗಳ ಕಾಲ ರಾತ್ರಿ ಹಗಲೆನ್ನದೆ ದಿನವಿಡೀ ಭರತನಾಟ್ಯ ಪ್ರದರ್ಶನ ಮಾಡಿದ್ದಾರೆ. ಸತತ 127 ಗಂಟೆ ಭರತನಾಟ್ಯ ಪ್ರದರ್ಶನ

ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶನ| ವಿಶ್ವ ದಾಖಲೆ ಬರೆದ ಮಂಗಳೂರಿನ ರೆಮೋನಾ ಪಿರೇರಾ Read More »

ಜು.25ರಂದು ದ‌.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾ ಪ್ರವಾಸ

ಸಮಗ್ರ ನ್ಯೂಸ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜುಲೈ 25 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 6:55 ಮಂಗಳೂರು ವಿಮಾನ ನಿಲ್ದಾಣ ಆಗಮನ, 8- ಸಕ್ರ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 10:30 – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 – ದಕ್ಷಿಣ

ಜು.25ರಂದು ದ‌.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾ ಪ್ರವಾಸ Read More »