ಕರಾವಳಿ

ವಿಟ್ಲ: ಬಾವಿಗೆ ರಿಂಗ್ ಹಾಕುವ ವೇಳೆ ದುರಂತ| ಉಸಿರುಗಟ್ಟಿ‌ ಇಬ್ಬರು ಕಾರ್ಮಿಕರು ಸಾವು

ಸಮಗ್ರ ನ್ಯೂಸ್: ಬಾವಿಗೆ ರಿಂಗ್ ಹಾಕುವ ವೇಳೆ ಆಮ್ಲಜನಕದ ಕೊರತೆಯುಂಟಾಗಿ ಕಾರ್ಮಿಕರಿಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ‌ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ. ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ ಮತ್ತು ಮಲಾರ್ ನಿವಾಸಿ ಆಲಿ ಸಾವನ್ನಪ್ಪಿದವರು. ಅಳಕೆ ಸಮೀಪ ಪಡಿಬಾಗಿಲಿನಲ್ಲಿ ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಓರ್ವ ಕಾರ್ಮಿಕ ಬಾವಿಗಿಳಿದಿದ್ದರು. ಕೆಳಗಿಳಿದವರು ಮೇಲೆರಲಾರದೆ ಒದ್ದಾಟ ನಡೆಸುತ್ತಿರುವುದನ್ನು […]

ವಿಟ್ಲ: ಬಾವಿಗೆ ರಿಂಗ್ ಹಾಕುವ ವೇಳೆ ದುರಂತ| ಉಸಿರುಗಟ್ಟಿ‌ ಇಬ್ಬರು ಕಾರ್ಮಿಕರು ಸಾವು Read More »

ಸುಬ್ರಹ್ಮಣ್ಯ: ಬಸ್ ನಿಂದ ಬಿದ್ದು ಪ್ರಯಾಣಿಕ ಸಾವು

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ. ಬೆಂಗಳೂರು ಮೂಲದ ಸುಂಕದಕಟ್ಟೆಯ ಮಂಜುನಾಥ ಮೃತರು. ಎ. 22ರಂದು ಮಂಜುನಾಥ ಅವರು ಪತ್ನಿ ಜತೆ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಯಾಣಿಸಿದ್ದರು. ಬಸ್‌ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ತಲಪುವಾಗ ಚಾಲಕ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ್ದರಿಂದ ಮತ್ತು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೇ ಇದ್ದುದರಿಂದ ಮಂಜುನಾಥ ಅವರು ಕೆಳಗೆ ಬಿದ್ದು ಗಂಭೀರ ಗಾಯಗೊಂಡರು. ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ

ಸುಬ್ರಹ್ಮಣ್ಯ: ಬಸ್ ನಿಂದ ಬಿದ್ದು ಪ್ರಯಾಣಿಕ ಸಾವು Read More »

ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲಾದ್ಯಂತ ಮಧ್ಯಮಾರಾಟ ನಿಷೇಧ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ – 2024ನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಸುವ್ಯವಸ್ಧೆಯನ್ನು ಕಾಪಾಡುವ ದೃಷ್ಟಿಯಿಂದ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ವೆಂಕಟ್ ರಾಜಾ ಅವರು ಜಿಲ್ಲಾದ್ಯಂತ ಮಧ್ಯ ಮಾರಾಟ ನಿಷೇಧ ಆದೇಶ ಹೊರಡಿಸಿದ್ದಾರೆ. ಎ.24 ರಂದು ಸಂಜೆ 5 ಗಂಟೆಯಿಂದ ಎ.26 ರ ಮಧ್ಯರಾತ್ರಿ 12 ಗಂಟೆವರೆಗೆ ಮತ್ತು ಜೂ.3 ರಂದು ಸಂಜೆ 5 ಗಂಟೆಯಿಂದ ಜೂ.4 ರ ಮಧ್ಯರಾತ್ರಿ 12 ಗಂಟೆವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮಧ್ಯಗಳ ಸಾಗಣಿಕೆ, ಶೇಕರಣೆ

ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲಾದ್ಯಂತ ಮಧ್ಯಮಾರಾಟ ನಿಷೇಧ Read More »

ಪುತ್ತೂರು:ಸಂತೋಷದ ವೈವಿಧ್ಯಮಯ ಮಿನುಗುವ ಚಿನ್ನದ ಹಬ್ಬ!ಮುಳಿಯ ಚಿನ್ನೋತ್ಸವಕ್ಕೆ ಚಾಲನೆ

ಸಮಗ್ರ ನ್ಯೂಸ್: 24 ವರ್ಷಗಳ ಹಿಂದೆ ವಜ್ರರತ್ನಗಳ ಪ್ರದರ್ಶನ ಹಬ್ಬದ ಮೂಲಕ ಗ್ರಾಹಕರಿಗೆ ಹತ್ತಿರವಾದ ಪ್ರಸಿದ್ದ ಚಿನ್ನಾಭರಣ ಮಳಿಗೆ ಪುತ್ತೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ಪ್ರತಿ ವರ್ಷ ನಡೆಯುವ ಚಿನ್ನೋತ್ಸವಕ್ಕೆ ಈ ಬಾರಿ ಚಿನ್ನದ ಹಬ್ಬ “ಮುಳಿಯ ಚಿನ್ನೋತ್ಸವ” ಕ್ಕೆ ಎ. 22ರಂದು ಚಾಲನೆ ನೀಡಲಾಯಿತು. ಮೇ 20ರ ತನಕ ನಡೆಯುವ ಈ ಚಿನ್ನೋತ್ಸವವನ್ನು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ನ ಪ್ರೊ. ಡಾ. ಸೌಮ್ಯ ಅವರು ಉದ್ಘಾಟಿಸಿ ಚಾಲನೆ ನೀಡಿದರು. ಬಳಿಕ ಚಿನ್ನಾಭರಣದ ಹೊಸ ವಿನ್ಯಾಸಗಳನ್ನು

ಪುತ್ತೂರು:ಸಂತೋಷದ ವೈವಿಧ್ಯಮಯ ಮಿನುಗುವ ಚಿನ್ನದ ಹಬ್ಬ!ಮುಳಿಯ ಚಿನ್ನೋತ್ಸವಕ್ಕೆ ಚಾಲನೆ Read More »

ಬೆಳ್ತಂಗಡಿ :ಕೆರೆಯಲ್ಲಿ ಕಾಡುಕೋಣದ ಮೃತದೇಹ ಪತ್ತೆ

ಸಮಗ್ರ ನ್ಯೂಸ್ : ಕೊಯ್ಯೂರು ಗ್ರಾಮದ ಬದ್ಯಾರು ಎಂಬಲ್ಲಿ ಕೃಷಿಕರೊಬ್ಬರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ ದೇಹ ಕಂಡುಬಂದ ಘಟನೆ ನಡೆದಿದೆ. ಕಾಡುಕೋಣದ ಮೃತ ದೇಹವನ್ನು ಅರಣ್ಯ ಇಲಾಖೆ, ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಹಾಗೂ ಸ್ಥಳೀಯರು ಸೇರಿ ಸೋಮವಾರ ಕೆರೆಯಿಂದ ಮೇಲೆತ್ತಿದರು. ನೀರು ಅರಸಿಕೊಂಡು ಬಂದ ಸುಮಾರು 6 ವರ್ಷ ಪ್ರಾಯದ ಕಾಡುಕೋಣ ನೀರು ಕುಡಿದ ಬಳಿಕ ಕೆರೆಯ ಕೆಸರಿನಲ್ಲಿ ಸಿಲುಕಿ ಮೇಲೆ ಬರಲಾರದೆ ಎರಡು ದಿನಗಳ ಹಿಂದೆ ಮೃತಪಟ್ಟಿರುವ ಕುರಿತು

ಬೆಳ್ತಂಗಡಿ :ಕೆರೆಯಲ್ಲಿ ಕಾಡುಕೋಣದ ಮೃತದೇಹ ಪತ್ತೆ Read More »

ಮಂಗಳೂರು: ದೇಶದ ಜನತೆ ಉದ್ಯೋಗ ಕೇಳಿದಾಗ ಮೋದಿ ನೀಡಿದ್ದು ಚೊಂಬು- ಸುರ್ಜೆವಾಲಾ ಕಿಡಿ

ಸಮಗ್ರ ನ್ಯೂಸ್‌ : ಮಂಗಳೂರಿನಲ್ಲಿ ಚೊಂಬು ಹಿಡಿದುಕೊಂಡೆ ರಣದೀಪ್ ಸುರ್ಜೆವಾಲಾ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನತೆ ಉದ್ಯೋಗ ಕೇಳಿದಾಗ ಮೋದಿ ನೀಡಿದ್ದು ಚೊಂಬು. ಕರ್ನಾಟಕ ನ್ಯಾಯ ಕೇಳಿದಾಗ ಮೋದಿ ನೀಡೋದು ಚೊಂಬು. ಜನರು 15 ಲಕ್ಷ ಕೇಳಿದಾಗ ಮೋದಿ ನೀಡೋದು ಚೊಂಬು. ಜನ ಸ್ಮಾರ್ಟ್ ಸಿಟಿ ಕೇಳಿದಾಗ ಮೋದಿ ಕೊಡೋದು ಚೊಂಬು ಎಂದು ಕಿಡಿಕಾರಿದ್ದಾರೆ. ಕೇಂದ್ರ ಸರಕಾರ ಕನ್ನಡಿಗರಿಗೆ , ರಾಜ್ಯದ ರೈತರಿಗೆ ಅನ್ಯಾಯ ಮಾಡಿದೆ. ಕಳೆದ ವಿಧಾನ ಸಭಾ ಚುನಾವಣೆ ಬಿಜೆಪಿಗೆ

ಮಂಗಳೂರು: ದೇಶದ ಜನತೆ ಉದ್ಯೋಗ ಕೇಳಿದಾಗ ಮೋದಿ ನೀಡಿದ್ದು ಚೊಂಬು- ಸುರ್ಜೆವಾಲಾ ಕಿಡಿ Read More »

ಉಡುಪಿ:1 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ; ಆರೋಪಿಯ ಬಂಧನ

ಸಮಗ್ರ ನ್ಯೂಸ್‌ : ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವುಗೈದು ಬಿಹಾರಕ್ಕೆ ಸಾಗಿಸುತ್ತಿದ್ದ ಅಂತರ್ ರಾಜ್ಯ ಕಳವು ಆರೋಪಿಯೋರ್ವನನ್ನು ಕೋಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಹಾರ ರಾಜ್ಯದ ಸೀತಾಮರಿ ಜಿಲ್ಲೆಯ ನಿವಾಸಿ ಮುಹಮ್ಮದ್ ಇರ್ಫಾನ್ (35) ಬಂಧಿತ ಆರೋಪಿ. ಈತ ಎ.20ರಂದು ಕೇರಳದ ಚಿತ್ರ ನಿರ್ಮಾಪಕ ಜೋಶಿಯವರ ಕೊಚ್ಚಿ ಪನಂಪಲ್ಲಿಯ ಮನೆಯಲ್ಲಿ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದು ಬಿಹಾರಕ್ಕೆ ಸಾಗಿಸುತ್ತಿದ್ದನು. ಖಚಿತ ಮಾಹಿತಿಯನ್ನು ಆಧರಿಸಿ ಕೋಟ ಪೊಲೀಸರು ಮೂರ್ಕೈ ಸಮೀಪ ಶನಿವಾರ ಸಂಜೆ

ಉಡುಪಿ:1 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ; ಆರೋಪಿಯ ಬಂಧನ Read More »

ಸುಳ್ಯ: ವರ್ಷ ಕಳೆದರೂ ಉದ್ಘಾಟನೆ‌ ಭಾಗ್ಯ ಕಾಣದ ವಿದ್ಯುತ್ ಪರಿವರ್ತಕ| ಮನವಿಗಳಿಗೂ ಕಿಮ್ಮತ್ತು ಕೊಡದ ಮೆಸ್ಕಾಂ

ಸಮಗ್ರ ನ್ಯೂಸ್: ಸ್ಥಾಪನೆ ಮಾಡಿ ಎರಡು ವರ್ಷ ಕಳೆದರೂ ವಿದ್ಯುತ್ ಸಂಪರ್ಕ ಕಲ್ಪಿಸದೇ ಟ್ರಾನ್ಸ್ ಫಾರ್ಮರ್ ಒಂದಕ್ಕೆ ಗ್ರಹಣ ಹಿಡಿದ ಘಟನೆ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಂಡುಬರುತ್ತಿದೆ. ಐವರ್ನಾಡು ಗ್ರಾಮದ ಬದಂತಡ್ಕ ಕೊಯಿಲ ಎಂಬಲ್ಲಿ ಗ್ರಾಮಸ್ಥರ ಮನವಿಯ ಮೇರೆಗೆ ಕಳೆದ ಒಂದು ವರ್ಷಗಳ ಹಿಂದೆ ಟಿಸಿ ಅಳವಡಿಸಲಾಗಿತ್ತು.‌ ಆರಂಭದಲ್ಲಿ ಚುರುಕಿನಿಂದ‌ ಕೆಲಸ ಪ್ರಾರಂಭಿಸಿ ಟಿಸಿ ಸ್ಥಾಪನೆ ಮಾಡಲಾಗಿದೆ. ಅದಾದ‌ ಬಳಿಕ ಸಂಪರ್ಕ ಇದುವರೆಗೆ ಲಭಿಸಿಲ್ಲ. ಈ ಕುರಿತಂತೆ ಗ್ರಾಮಸ್ಥರು ಗ್ರಾಮಸಭೆ, ವಾರ್ಡ್ ಸಭೆಗಳಲ್ಲಿ ಚರ್ಚಿಸಿದರೂ ಪ್ರಯೋಜನವಾಗಿಲ್ಲ. ಇನ್ನು

ಸುಳ್ಯ: ವರ್ಷ ಕಳೆದರೂ ಉದ್ಘಾಟನೆ‌ ಭಾಗ್ಯ ಕಾಣದ ವಿದ್ಯುತ್ ಪರಿವರ್ತಕ| ಮನವಿಗಳಿಗೂ ಕಿಮ್ಮತ್ತು ಕೊಡದ ಮೆಸ್ಕಾಂ Read More »

ಸುಳ್ಯ: ರೈತರ ಬೇಡಿಕೆಗಳಿಗೆ ನೀಡಿಲ್ಲ ಮನ್ನಣೆ| ಬಿಜೆಪಿ ಹೊರತಾದ ಪಕ್ಷಗಳ ಬೆಂಬಲಕ್ಕೆ ರೈತ ಸಂಘ ಕರೆ

ಸಮಗ್ರ ನ್ಯೂಸ್: ‘ಕೇಂದ್ರದಲ್ಲಿ ಆಡಳಿತ ನಡೆಸಿದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಯಾವುದೇ ಬೇಡಿಕೆ ಈಡೇರಿಸದೆ, ರೈತರಿಗೆ ವಿರುದ್ಧವಾಗಿ ಆಡಳಿತ ನಡೆಸಿ ರೈತ ವಿರೋಧಿ ನೀತಿ ಅನುಸರಿಸಿದೆ. ಈ ಕಾರಣದಿಂದ ಬಿಜೆಪಿ ಹೊರತಾದ ಇತರ ಪಕ್ಷಗಳನ್ನು ಬೆಂಬಲಿಸಬೇಕು’ ಎಂದುಕರ್ನಾಟಕ ರಾಜ್ಯ ರೈತ ಸಂಘದ ಸುಳ್ಯ ಘಟಕ ಕರೆ ನೀಡಿದೆ. ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ನೂಜಾಲು ಪದ್ಮನಾಭ ಗೌಡ, ‘ನರೇಂದ್ರ ಮೋದಿ ಸರ್ಕಾರ 2014ರಲ್ಲಿ ಆಡಳಿತಕ್ಕೆ ಬರುವ ವೇಳೆ ವಿವಿಧ

ಸುಳ್ಯ: ರೈತರ ಬೇಡಿಕೆಗಳಿಗೆ ನೀಡಿಲ್ಲ ಮನ್ನಣೆ| ಬಿಜೆಪಿ ಹೊರತಾದ ಪಕ್ಷಗಳ ಬೆಂಬಲಕ್ಕೆ ರೈತ ಸಂಘ ಕರೆ Read More »

ಉಡುಪಿ : ಬೈಕ್ ಗೆ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್‌ : ಖಾಸಗಿ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಇಂದು ಸಂಜೆ ನಡೆದಿದೆ. ಉಡುಪಿಯಿಂದ ಬ್ರಹ್ಮಾವರ ಕಡೆ ಹೋಗುತ್ತಿದ್ದ ಖಾಸಗಿ ಬಸ್, ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಚಕ್ರ ಹರಿದಿದ್ದು, ಇದರಿಂದ ಗಂಭೀರವಾಗಿ ಗಾಯ ಗೊಂಡ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತರ

ಉಡುಪಿ : ಬೈಕ್ ಗೆ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು Read More »