ಕರಾವಳಿ

ಪುತ್ತೂರು: ಯುವಕ ಅನುಮಾನಾಸ್ಪದ ಸಾವು| ತಾಯಿ ಸೇರಿ ಮೂವರನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಪುತ್ತೂರಿನ ಬೆಟ್ಟಂಪಾಡಿಯ ಪಾರೆ ಎಂಬಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಚೇತನ್ (33) ಸಾವನ್ನಪ್ಪಿದ ಯುವಕ. ಚೇತನ್ ನೇಣು ಬಿಗಿದು ಸಾವನ್ನಪ್ಪಿರುವ ಬಗ್ಗೆ ಮೃತನ ತಾಯಿ ಪೋಲೀಸರಿಗೆ ತಿಳಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಮೃತದೇಹ ನೋಡಿ ಅನುಮಾನಗೊಂಡ ಪೋಲೀಸರು, ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಜೊತೆಗೆ ಮೃತನ ತಾಯಿ ಉಮಾವತಿ ಸೇರಿದಂತೆ ಮೂವರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಈತ ಮೇ.09ರ ರಾತ್ರಿ ಕುಡಿದು ಮನೆಗೆ ಬಂದಿದ್ದ ಚೇತನ್, ತಾಯಿ ಜೊತೆ ಜಗಳವಾಡಿ ಮನೆ ಪಕ್ಕದ

ಪುತ್ತೂರು: ಯುವಕ ಅನುಮಾನಾಸ್ಪದ ಸಾವು| ತಾಯಿ ಸೇರಿ ಮೂವರನ್ನು ಬಂಧಿಸಿದ ಪೊಲೀಸರು Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯ ಬಂಧನ

ಸಮಗ್ರ ನ್ಯೂಸ್: ಬಿಜೆಪಿಯ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2022 ರಲ್ಲಿ ಪ್ರವೀಣ್ ನೆಟ್ಟಾರನ್ನು ಬೆಳ್ಳಾರೆಯ ನೆಟ್ಟಾರು ಸಮೀಪದ ಅವರ ಅಂಗಡಿ ಬಳಿ ಹತ್ಯೆ ನಡೆಸಲಾಗಿತ್ತು.‌ ಈ ಪ್ರಕರಣದಲ್ಲಿ ಹಲವು ಆರೋಪಿಗಳನ್ನು ಎನ್ಐಎ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಅನ್ನು ಹಾಸನದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯ ಬಂಧನ Read More »

ಪಂಚಭೂತಗಳಲ್ಲಿ ಲೀನವಾದ ಮಾಜಿ ಶಾಸಕ ವಸಂತ ಬಂಗೇರ| ಪುತ್ರಿಯಿಂದ ಚಿತೆಗೆ ಅಗ್ನಿ ಸ್ಪರ್ಶ

ಸಮಗ್ರ ನ್ಯೂಸ್: ಮೇ. 8ರಂದು ನಿಧನರಾದ ಮಾಜಿ ಶಾಸಕ ವಸಂತ ಬಂಗೇರ ಅವರ ಅಂತ್ಯ ಸಂಸ್ಕಾರ ಇಂದು ನಡೆಯಿತು. ವಸಂತ ಬಂಗೇರ ಅವರು ಜನಿಸಿದ್ದ ಕುವೆಟ್ಟು ಗ್ರಾಮದ ಕೇದೆ ಹೊಸ ಮನೆಯ ಬಳಿ ಬಿಲ್ಲವ ಸಮುದಾಯದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ವಸಂತ ಬಂಗೇರ ಅವರ ಎರಡನೇ ಪುತ್ರಿ ಬಬಿತಾ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಅಂತ್ಯಕ್ರಿಯೆಗೂ ಮೊದಲು ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಂಸದ ನಳೀನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ

ಪಂಚಭೂತಗಳಲ್ಲಿ ಲೀನವಾದ ಮಾಜಿ ಶಾಸಕ ವಸಂತ ಬಂಗೇರ| ಪುತ್ರಿಯಿಂದ ಚಿತೆಗೆ ಅಗ್ನಿ ಸ್ಪರ್ಶ Read More »

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ

ಸಮಗ್ರ ನ್ಯೂಸ್: ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯಲ್ಲಿ ಐದು ಬಾರಿ ಗೆದ್ದು ಶಾಸಕರಾಗಿದ್ದ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಸಂಜೆ (ಮೇ.8) ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ Read More »

ಹಿರಿಯ ಜಾನಪದ ವಿದ್ವಾಂಸ ಡಾ| ಪಾಲ್ತಾಡಿ‌ ರಾಮಕೃಷ್ಣ ಆಚಾರ್ ವಿಧಿವಶ

ಸಮಗ್ರ ನ್ಯೂಸ್: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಪೆರುವಾಜೆಯಲ್ಲಿರುವ ತಮ್ಮ ಮಗಳ ಮನೆಯಲ್ಲಿದ್ದ ಆಚಾರ್‌ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರು ಉಂಟಾಗಿತ್ತು. ತಕ್ಷಣ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಮೃತದೇಹವನ್ನು ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಇಂದು ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬಸ್ಥರು

ಹಿರಿಯ ಜಾನಪದ ವಿದ್ವಾಂಸ ಡಾ| ಪಾಲ್ತಾಡಿ‌ ರಾಮಕೃಷ್ಣ ಆಚಾರ್ ವಿಧಿವಶ Read More »

ಬಿಸಿರೋಡ್: ಹೋಟೆಲ್ ವೊಂದರಲ್ಲಿ ನೇಣು ಬಿಗಿದು ಅವಿವಾಹಿತ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಇಂದು ನಡೆದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿಮಾದಲ್ಲಿ ರೂಮ್ ಮಾಡಿದ್ದ, ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ನ ಬಾಗಿಲು ತೆರೆಯದ ಇದ್ದ

ಬಿಸಿರೋಡ್: ಹೋಟೆಲ್ ವೊಂದರಲ್ಲಿ ನೇಣು ಬಿಗಿದು ಅವಿವಾಹಿತ ಯುವಕ ಆತ್ಮಹತ್ಯೆ Read More »

ಮಲ್ಪೆ ಮೀನುಗಾರಿಕ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸಿ| ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಸಮಗ್ರ ನ್ಯೂಸ್‌ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿರುವ ಅಗ್ನಿಶಾಮಕ ದಳದ 15 ವರ್ಷ ಹಿಂದಿನ ಎರಡು ವಾಹನಗಳನ್ನು ಸರ್ಕಾರ ಎರಡು ತಿಂಗಳ ಹಿಂದೆ ಸೇವೆಯಿಂದ ಹಿಂಪಡೆದಿದ್ದು, ಇದೀಗ ತುರ್ತು ಸಂದರ್ಭದಲ್ಲಿ ಯಾವುದೇ ಅಗ್ನಿಶಾಮಕ ವಾಹನ ಲಭ್ಯವಿಲ್ಲದೆ ಸಮಸ್ಯೆ ಸೃಷ್ಟಿಯಾಗಿದೆ. ಸರಕಾರ ತಕ್ಷಣ ವಾಹನ ಒದಗಿಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಆಗ್ರಹ ಮಾಡಿದ್ದಾರೆ. ದೇಶದ ಪ್ರಮುಖ ಮೀನುಗಾರಿಕೆ ಬಂದರುಗಳಲ್ಲಿ ಒಂದಾದ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಈ ಹಿಂದೆ

ಮಲ್ಪೆ ಮೀನುಗಾರಿಕ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸಿ| ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ Read More »

ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಸಮಗ್ರ ನ್ಯೂಸ್‌ : ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ವ್ಯಕ್ತಿಯ ಶವ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೋಲೀಸ್ ಮೂಲಗಳು ತಿಳಿಸಿವೆ. ಬಂಟರ ಭವನದ ಹೊರಗಡೆಯಲ್ಲಿ ಈತನ ಸೇರಿದ ಬೈಕ್ ನಿಲ್ಲಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ ಪೊಲೀಸ್ ಮೂಲಗಳ ಪ್ರಕಾರ ಈತ ಬೈಕ್ ನಿಲ್ಲಿಸಿ ಕಂಪೌಂಡ್

ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಸುಳ್ಯ: ಮೊಬೈಲ್ ರಿಚಾರ್ಜ್ ಗೆ ಬಂದಿದ್ದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ| ದೂರು ದಾಖಲು

ಸಮಗ್ರ ನ್ಯೂಸ್: ಕರೆನ್ಸಿ ರಿಚಾರ್ಚ್‌ಗೆಂದು ಏರ್ ಟೆಲ್ ಮಳಿಗೆಗೆ ಬಂದ ಯುವತಿಯೊಬ್ಬಳ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕನ ಮೇಲೆ ಯುವತಿಯ ಮನೆಯವರು ಪೊಲೀಸ್‌ಗೆ ದೂರು ನೀಡಿದ ಘಟನೆ ಸೋಮವಾರ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರದಲ್ಲಿರುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿ ಮೊಬೈಲ್‌ ರಿಚಾರ್ಜ್‌ಗೆ ಬಂದ ಸಂದರ್ಭ ಕುಳಿತುಕೊಳ್ಳುವಂತೆ ಹೇಳಿದ ಯುವಕ ಆಕೆಯ ಅರಿವಿಗೆ ಬಾರದಂತೆ ಫೋಟೋ ಕ್ಲಿಕ್ಕಿಸಿದ್ದನು. ಇದನ್ನು ಗಮನಿಸಿದ ಯುವತಿ ಆಕ್ಷೇಪಿಸಿರುವುದಲ್ಲದೆ ಆತನ ಮೊಬೈಲನ್ನು ಕಸಿದು ನೋಡಿದಾಗ ತನ್ನ ಫೋಟೋ ಇರುವುದನ್ನು ನೋಡಿ ಗಾಬರಿಯಿಂದ

ಸುಳ್ಯ: ಮೊಬೈಲ್ ರಿಚಾರ್ಜ್ ಗೆ ಬಂದಿದ್ದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ| ದೂರು ದಾಖಲು Read More »

ಸುಳ್ಯ: ಪರಿವಾರಕಾನದಲ್ಲಿ ಹೋಟೆಲ್ ವೃಷಭ ಶುಭಾರಂಭ

ಸಮಗ್ರ ನ್ಯೂಸ್: ವಿನೋದ್ ಸರಳಿಕುಂಜ ರವರ ಮಾಲಕತ್ವದ ಹೋಟೆಲ್ ವೃಷಭ ಮೇ.3 ರಂದು ಮಾಣಿ ಮೈಸೂರು ಹೆದ್ದಾರಿಯ ಪರಿವಾರಕಾನ ಶುಭಾರಂಭಗೊಂಡಿತು. ಬೆಳಗ್ಗೆ ಅರ್ಚಕ ಶಿವಪ್ರಸಾದ್ ಕೆದಿಲಾಯ ನಾಗಪಟ್ಟಣ ರವರ ನೇತೃತ್ವದಲ್ಲಿ ಗಣಪತಿ ಹವನ ನೆರವೇರಿತು. ಹಿರಿಯರಾದ ವೀಣಾವತಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಲೆಟ್ಟಿ ಪಂಚಾಯತ್ ಸದಸ್ಯ ರತೀಶನ್ ಆರಂಬೂರು ಶುಭ ಹಾರೈಸಿ, ಜಯರಾಮ ಶಾಂತಿನಗರ, ಶಿವಾನಂದ ಉಪ್ಪಳ, ವಿಜಯಶ್ರೀ, ವಾಣಿಶ್ರೀ ಹಾಗೂ ಬಂಧು-ಮಿತ್ರರು ಉಪಸ್ಥಿತರಿದ್ದರು. ಹೋಟೆಲ್ ನಲ್ಲಿ ಮಾಂಸಹಾರಿ ಮತ್ತು ಸಸ್ಯಹಾರಿ ಊಟ ಉಪಹಾರದ ವ್ಯವಸ್ಥೆ ಇದ್ದು,

ಸುಳ್ಯ: ಪರಿವಾರಕಾನದಲ್ಲಿ ಹೋಟೆಲ್ ವೃಷಭ ಶುಭಾರಂಭ Read More »