ಕರಾವಳಿ

ಕಡಬ:ಮಹಿಳೆಯ ನಂಬರ್ ಕೇಳಿದ ಸುಳ್ಯದ ಡ್ರೈವರ್ ಗೆ ಸಿಕ್ತು ಬಿಸಿ ಬಿಸಿ‌ ಕಜ್ಜಾಯ

ಸಮಗ್ರ ನ್ಯೂಸ್: ಉರೂಸ್‌ ಸಮಾರಂಭಕ್ಕೆ ಬಂದಿದ್ದ ವಿವಾಹಿತ ವ್ಯಕ್ತಿಯೊಬ್ಬ ಅಲ್ಲಿದ್ದ ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದ ಕಾರಣಕ್ಕೆ ಸ್ಥಳದಲ್ಲಿದ್ದವರು ಆತನಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಕಡಬ ತಾಲೂಕಿನ ಮರ್ದಾಳದ ನೆಕ್ಕಿತಡ್ಕದಲ್ಲಿ ಸಂಭವಿಸಿದೆ. ಸುಳ್ಯದಲ್ಲಿ ಲಾರಿ ಚಾಲಕನಾಗಿರುವ ನವಾಝ್ ಪಂಡಿತ್‌ ಎಂಬಾತ ಮಹಿಳೆಯ ನಂಬರ್‌ ಕೇಳಿ ಸ್ಥಳೀಯರಿಂದ ಥಳಿತಕ್ಕೊಳಗಾದ ವ್ಯಕ್ತಿ. ಉರೂಸ್‌ ವೇಳೆ ಮಹಿಳೆಯಲ್ಲಿ ಮೊಬೈಲ್‌ ನಂಬರ್‌ ಕೇಳಿದ ವಿಚಾರಕ್ಕೆ ಸಂಬಂಧಿಸಿ ಮಾತಿಗೆ ಮಾತು ಬೆಳೆದು ಜಗಳಕ್ಕೆ ಕಾರಣವಾಗಿದೆ. ಥಳಿತಕ್ಕೊಳಗಾದ ವ್ಯಕ್ತಿ ಮರ್ದಾಳ ನಿವಾಸಿಗಳಾದ ಖಲೀಲ್‌ ಅನ್ಸರ್‌, ಶರೀಫ್‌

ಕಡಬ:ಮಹಿಳೆಯ ನಂಬರ್ ಕೇಳಿದ ಸುಳ್ಯದ ಡ್ರೈವರ್ ಗೆ ಸಿಕ್ತು ಬಿಸಿ ಬಿಸಿ‌ ಕಜ್ಜಾಯ Read More »

ಕಡಬ: ಮದುವೆ ಮನೆಯಲ್ಲಿ ಫೋಟೋ ತೆಗೆದ ಆರೋಪ| ಹಲ್ಲೆ, ಇತ್ತಂಡಗಳಿಂದ ದೂರು ದಾಖಲು

ಸಮಗ್ರ ನ್ಯೂಸ್: ಮದುವೆ‌ ಔತಣ ಕೂಟದಲ್ಲಿ ಯುವಕನೋರ್ವ ಯುವತಿಯೊಂದಿಗಿರುವುದನ್ನು ಮೊಬೈಲ್‌ನಲ್ಲಿ ಫೋಟೋ ತೆಗೆದಿದ್ದಾರೆ ಎನ್ನಲಾದ ಘಟನೆಯೊಂದಕ್ಕೆ ಸಂಬಂಧಿಸಿ ಇತ್ತಂಡಗಳ ವಿರುದ್ಧ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ. 29ರಂದು ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಕುಶಾಲಪ್ಪ ಗೌಡ ಅವರ ಪುತ್ರಿಯ ವಿವಾಹ ಔತಣಕೂಟ ನಡೆದಿತ್ತು. ಅಲ್ಲಿ ನಿಶಾಂತ್‌ ಎಂಬ ಯುವಕ ಯುವತಿಯೊಂದಿಗಿರುವ ಫೋಟೋವನ್ನು ಬಾಂತಾಜೆ ನಿವಾಸಿ ದಿವಾಕರ ತೆಗೆದಿದ್ದಾರೆ ಎಂದು ಆರೋಪಿಸಿ ನಿಶಾಂತ್‌ ನೇತೃತ್ವದಲ್ಲಿ ಧನಂಜಯ, ಜನಾರ್ದನ, ಲೋಕೇಶ, ರಮೇಶ್‌, ಉದಯ, ಭುವನ, ಅಶ್ವಿ‌ತ್‌ ಅವರು

ಕಡಬ: ಮದುವೆ ಮನೆಯಲ್ಲಿ ಫೋಟೋ ತೆಗೆದ ಆರೋಪ| ಹಲ್ಲೆ, ಇತ್ತಂಡಗಳಿಂದ ದೂರು ದಾಖಲು Read More »

ಉಡುಪಿ : ಕಾಪು ಪಿಲಿಕೋಲ ಸಂಪನ್ನ- ಓರ್ವನನ್ನು ಸ್ಪರ್ಶಿಸಿದ ಪಿಲಿ

ಸಮಗ್ರ ನ್ಯೂಸ್‌ : ಇತಿಹಾಸ ಪ್ರಸಿದ್ಧ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ ಸಂಪನ್ನಗೊಂಡಿತು. ಎರಡು ತಾಸಿನ ಬಣ್ಣಗಾರಿಕೆಯ ಬಳಿಕ ಅಬ್ಬರದೊಂದಿಗೆ ಪಂಜರದೊಳಗಿಂದ ಹೊರಗೆ ಬಂದ ಪಿಲಿಚಂಡಿ ದೈವವು ಬ್ರಹ್ಮರ ಗುಂಡಕ್ಕೆ ಮೂರು ಸುತ್ತು ಬಂದು, ಮಾರಿಯಮ್ಮ ಗುಡಿಯ ಮುಂಭಾಗದಲ್ಲಿ ನೆಡಲಾಗಿದ್ದ ಬಂಟ ಕಂಬವನ್ನೇರಿ ಜೀವಂತ ಕೋಳಿಯನ್ನು ಬಲಿಯಾಗಿ ಸ್ವೀಕರಿಸಿ ಮುಂದೆ ಗ್ರಾಮ ಭೇಟಿಗೆ ತೆರಳುವುದು ಸಂಪ್ರದಾಯವಾಗಿದೆ. ಕರಾವಳಿಯಲ್ಲಿ ಹಲವು ಬಗೆಯ ಭೂತಾರಾಧನೆಗಳಿವೆ. ಆದರೆ ಹುಲಿಕೋಲದಂತಹ

ಉಡುಪಿ : ಕಾಪು ಪಿಲಿಕೋಲ ಸಂಪನ್ನ- ಓರ್ವನನ್ನು ಸ್ಪರ್ಶಿಸಿದ ಪಿಲಿ Read More »

ಮಡಿಕೇರಿ: 2 ವರ್ಷದ ಹಿಂದೆ ಮನೆಗೆ ನುಗ್ಗಿ ಕಳ್ಳತನ ಮಾಡಿದ ಐದು ಕಳ್ಳರ ಬಂಧನ

ಸಮಗ್ರ ನ್ಯೂಸ್: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಲೂರು ಗ್ರಾಮದ ಚನ್ನಂಗಿ ನಿವಾಸಿ ತಂಗಚ್ಚನ್ ಕೆ.ಕೆ ಎಂಬುವರ ಮನೆಗೆ 2022ರ ಜೂನ್ 8 ರಂದು ರಾತ್ರಿ 8:30 ಸಮಯದಲ್ಲಿ ಅಪರಿಚಿತ ಮುಸುಕುದಾರಿ ವ್ಯಕ್ತಿಗಳು ತಂಗಚ್ಚನ್ ಅವರ ಮನೆಗೆ ಪ್ರವೇಶಿಸಿ ತಂಗಚ್ಚನ್ ಹಾಗೂ ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಅಂದಾಜು ಎರಡು ಲಕ್ಷ ರೂಪಾಯಿ ಹಾಗೂ ಪತ್ನಿಯ ಕುತ್ತಿಗೆಯಲ್ಲಿದ್ದ ಎಂಟು ಗ್ರಾಂ ಚಿನ್ನದ ಸರ ಕಿತ್ತುಕೊಂಡು ಹೋಗಿರುವ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮಡಿಕೇರಿ: 2 ವರ್ಷದ ಹಿಂದೆ ಮನೆಗೆ ನುಗ್ಗಿ ಕಳ್ಳತನ ಮಾಡಿದ ಐದು ಕಳ್ಳರ ಬಂಧನ Read More »

ಕರಾವಳಿಯಲ್ಲಿ ಬಿಸಿಲ ಝಳಕ್ಕೆ ಬಸ್ ಗಾಜು ಪುಡಿಪುಡಿ| ದಿಢೀರ್ ಹೃದಯಾಘಾತದಿಂದ 6 ಮಂದಿ ಸಾವು| ಕಾದು ಕೆಂಡವಾದ ಕಡಲ ನಗರಿ!!

ಸಮಗ್ರ ನ್ಯೂಸ್: ಬಿಸಿಲಿನ ತಾಪದಿಂದ ಕೇರಳ ರಾಜ್ಯ ರಸ್ತೆ ನಿಗಮದ ಮಲಬಾರ್ ಬಸ್ಸಿನ ಮುಂಭಾಗದ ಗಾಜು ಒಡೆದ ಪರಿಣಾಮ, ಇಬ್ಬರು ಮಕ್ಕಳು ಹಾಗೂ ಚಾಲಕ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಉರಿಮಜಲು ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಮುಂಭಾಗದ ಗಾಜು ಒಡೆದಿದೆ. ಬಸ್‌ನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಬಾಲಕರು ಹಾಗೂ ಬಸ್ ಚಾಲಕ ಗಾಯಗೊಂಡಿದ್ದಾರೆ. ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು

ಕರಾವಳಿಯಲ್ಲಿ ಬಿಸಿಲ ಝಳಕ್ಕೆ ಬಸ್ ಗಾಜು ಪುಡಿಪುಡಿ| ದಿಢೀರ್ ಹೃದಯಾಘಾತದಿಂದ 6 ಮಂದಿ ಸಾವು| ಕಾದು ಕೆಂಡವಾದ ಕಡಲ ನಗರಿ!! Read More »

ದಿಢೀರ್ ಕುಸಿತ ಕಂಡ ಕೋಕೋ ಧಾರಣೆ| ಕೆಜಿ ದರದಲ್ಲಿ ₹35 ಇಳಿಕೆ

ಸಮಗ್ರ ನ್ಯೂಸ್: ವಿಪರೀತ ಧಾರಣೆ‌ ಕಂಡಿದ್ದ ಕೊಕ್ಕೋ ದರದಲ್ಲಿ ದಿಢೀರ್ ಕುಸಿತ ಕಂಡಿದೆ. ಸಾಧಾರಣವಾಗಿ 60-70 ರೂಪಾಯಿ ಆಸುಪಾಸಿನಲ್ಲಿದ್ದ ಧಾರಣೆ ₹ 325 ವರೆಗೂ ಹೋಗಿತ್ತು. ಇದೀಗ ಮತ್ತೆ ಕುಸಿತ ಕಂಡಿದ್ದು 290 ರೂಪಾಯಿಗೆ ಇಳಿಕೆಯಾಗಿದೆ. ಹಸಿ ಕೊಕ್ಕೋ ಧಾರಣೆ 325 ರೂಪಾಯಿವರೆಗೆ ಏರಿಕೆ ಕಂಡಿದ್ದರೆ, ಒಣ ಕೊಕೊ ಧಾರಣೆ 900 ರೂಪಾಯಿ ಆಸುಪಾಸಿಗೆ ಬಂದಿತ್ತು. ಇದೀಗ ಧಾರಣೆ ಇಳಿಕೆಯಾಗಿದೆ. ಹಸಿ ಕೊಕ್ಕೋ ಧಾರಣೆ 290 ರೂಪಾಯಿಗೆ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ ಹೊಂದಿರುವ ಕೊಕೊ ಪ್ರಮುಖವಾಗಿ ಆಫ್ರಿಕಾ

ದಿಢೀರ್ ಕುಸಿತ ಕಂಡ ಕೋಕೋ ಧಾರಣೆ| ಕೆಜಿ ದರದಲ್ಲಿ ₹35 ಇಳಿಕೆ Read More »

ಉಪ್ಪಿನಂಗಡಿ: ಹೃದಯಾಘಾತದಿಂದ ಮಲಗಿದ್ದಲ್ಲೇ ಯುವಕ ಸಾವು

ಸಮಗ್ರ ನ್ಯೂಸ್: ಗಾರೆ ಕೆಲಸಕ್ಕೆ ಹೋಗುವ ಯುವಕನೊಬ್ಬ ಮಲಗಿದ್ದಲ್ಲೇ ಹೃದಯಾಘಾತಕ್ಕೆ ಸಿಲುಕಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪ ನಡೆದಿದೆ. ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ. ಗೋಪಾಲ ಗೌಡರ ಪುತ್ರ 27ರ ಹರೆಯದ ಜನಾರ್ದನ ನಿನ್ನಿಕಲ್ಲು ಹೃದಯಾಘಾತದಿಂದ ಶುಕ್ರವಾರ ಮೃತಪಟ್ಟಿದ್ದಾರೆ. ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಇವರು ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು. ಇವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು ನೋಡಿದಾಗ ಜನಾರ್ದನ ಮಲಗಿದ್ದಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ. ಶ್ರೀ ದುರ್ಗಾ ಭಜನಾ ಮಂಡಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಮಲಗಿದ್ದಲ್ಲೇ ಯುವಕ ಸಾವು Read More »

ಉಡುಪಿ: ಮೇ.4ರಂದು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

ಸಮಗ್ರ ನ್ಯೂಸ್‌ : ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು, ವಿಜ್ಡಮ್ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ಮೇ 4ರಂದು ಬೆಳಿಗ್ಗೆ 9 ರಿಂದ ಸಂಜೆ 4:30ರವರೆಗೆ ಮಿಲಾಗ್ರಿಸ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದೆ ಎಂದು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿನ್ಸೆಂಟ್ ಆಳ್ವ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ ಪದವೀಧರಲ್ಲದೇ, ವಾಣಿಜ್ಯ ಮತ್ತು ನಿರ್ವಹಣೆ, ಇಂಜಿನಿಯರಿಂಗ್, ಡಿಪ್ಲೋಮಾ ವಿದ್ಯಾರ್ಥಿಗಳು ನೊಂದಣಿಯನ್ನು ಮಾಡಿಕೊಳ್ಳಬಹುದಾಗಿದೆ. ಎಸೆಸೆಲ್ಸಿ ಬಳಿಕ ಡಿಪ್ಲೋಮ, ಐಟಿಐ ಕಲಿತ, ಪದವಿ ಪೂರ್ವ,

ಉಡುಪಿ: ಮೇ.4ರಂದು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ Read More »

ಕಬಕದಲ್ಲಿ ಸರಣಿ ಅಪಘಾತ| ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು

ಸಮಗ್ರ ನ್ಯೂಸ್‌ : ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ. ಘಟನೆಯಿಂದ ಮಂಗಳೂರು – ಪುತ್ತೂರು ಹಾಗೂ ಪುತ್ತೂರು – ವಿಟ್ಲ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಹಾಗೂ ರೋಗಿಯ ಕಡೆಯವರನ್ನು ಪರ್ಯಾಯ ಆ್ಯಂಬುಲೆನ್ಸ್ ನಲ್ಲಿ ಮಂಗಳೂರಿಗೆ ಕಳುಹಿಸಿಕೊಡಲಾಯಿತು. ಸುಳ್ಯ

ಕಬಕದಲ್ಲಿ ಸರಣಿ ಅಪಘಾತ| ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು Read More »

ಉಡುಪಿ: ಯುವಕನಿಗೆ ಲೈಂಗಿಕ ಕಿರುಕುಳ-ವಾಸ್ತುತಜ್ಞನ ಬಂಧನ

ಸಮಗ್ರ ನ್ಯೂಸ್‌ : ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ್ (51) ಬಂಧಿತ ಆರೋಪಿ. ಈತ ಬ್ರಹ್ಮಾವರ ಬಸ್‌ ನಿಲ್ದಾಣ ಸಮೀಪದ ಲಾಡ್ಜ್ ವೊಂದರ ರೂಮಿನಲ್ಲಿ ವಾಸ್ತುತಜ್ಞ, ಜಲತಜ್ಞ, ಯೋಗ ಪಂಡಿತ, ಆಧ್ಯಾತ್ಮಿಕ ಪಂಡಿತ ಎಂಬುದಾಗಿ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದರು. 18ರ ಹರೆಯದ ಯುವಕ ತನ್ನ ತಂದೆಯೊಂದಿಗೆ ಈತನ ಬಳಿ ವಾಸ್ತು ಕೇಳಲು ಲಾಡ್ಜ್‌ನಲ್ಲಿರುವ ರೂಮಿಗೆ ರಾತ್ರಿ 9ಗಂಟೆ ಸುಮಾರಿಗೆ ಹೋಗಿದ್ದನು.

ಉಡುಪಿ: ಯುವಕನಿಗೆ ಲೈಂಗಿಕ ಕಿರುಕುಳ-ವಾಸ್ತುತಜ್ಞನ ಬಂಧನ Read More »