ಕರಾವಳಿ

ಕರಾವಳಿಯ ಕಲಾವಿದ ಕಿರಣ್ ಸಿ. ಅವರಿಗೆ ಪ್ರಧಾನಿ ಮೋದಿ ಕಚೇರಿಯಿಂದ ಕರೆ, ಮೆಚ್ಚುಗೆ ಪತ್ರ

ಸಮಗ್ರ ನ್ಯೂಸ್‌ : ಪ್ರಧಾನಿಯವರ ಚಿತ್ರ ಬಿಡಿಸಿ ರೋಡ್ ಶೋ ವೇಳೆ ಖುದ್ದು ಮೋದಿಯವರಿಗೇ ನೀಡಿರುವ ಕರಾವಳಿಯ ಕಲಾವಿದ ಕಿರಣ್ ಸಿ. ಅವರಿಗೆ ಪ್ರಧಾನಿ ಮೋದಿಯವರ ಕಚೇರಿಯಿಂದ ಬುಧವಾರ ಕರೆ ಬಂದಿದ್ದು, ಮೆಚ್ಚುಗೆ ಪತ್ರ ನೀಡಿದ್ದಾರೆ. ತೊಕ್ಕೊಟ್ಟುವಿನ ಪಿಲಾರ್ ನ ಕಲಾವಿದ ಕಿರಣ್ ಸಿ. ಅವರು ಮೋದಿಯವರ ಚಿತ್ರ ಬಿಡಿಸಿ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಪ್ರಧಾನಿ ರೋಡ್ ಶೋ ವೇಳೆ ಪ್ರದರ್ಶಿಸಿದ್ದಾರೆ. ಇದನ್ನು ಮೋದಿಯವರು ಗಮನಿಸಿ, ತಕ್ಷಣ ಎಸ್ ಪಿ ಜಿ ಕಮಾಂಡೊ ಮೂಲಕ ಚಿತ್ರವನ್ನು ತರಿಸಿ […]

ಕರಾವಳಿಯ ಕಲಾವಿದ ಕಿರಣ್ ಸಿ. ಅವರಿಗೆ ಪ್ರಧಾನಿ ಮೋದಿ ಕಚೇರಿಯಿಂದ ಕರೆ, ಮೆಚ್ಚುಗೆ ಪತ್ರ Read More »

ಮಂಗಳೂರು: ಯುವ ದಂತವೈದ್ಯೆ ಹಠಾತ್ ಸಾವು

ಸಮಗ್ರ ವಾರ್ತೆ: ಯುವ ದಂತ ವೈದ್ಯೆಯೊಬ್ಬರು ಹಠಾತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ಮೃತರನ್ನು ಡಾ. ಸ್ವಾತಿ ಶೆಟ್ಟಿ (24) ಎಂದು ಗುರುತಿಸಲಾಗಿದೆ. ಎ.ಜೆ. ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಪೂರೈಸಿದ್ದ ಸ್ವಾತಿ ಮಂಗಳವಾರದಿಂದ ನಗರದ ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ವೈದ್ಯಕೀಯ ವೃತ್ತಿ ಆರಂಭಿಸಲಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ತನಕ ಆಳ್ವರಬೆಟ್ಟು ಮನೆಯಲ್ಲಿ ತಂಗಿದ್ದ ಸ್ವಾತಿ ಸೋಮವಾರ ಸಂಜೆ ಮನೆಯಿಂದ ಪಾಂಡೇಶ್ವರದ ಪಿಜಿಗೆ ಬಂದು ತಂಗಿದ್ದರು. ರಾತ್ರಿ ತಾಯಿ ತಂದೆ ಜತೆಗೆ ಮೊಬೈಲ್

ಮಂಗಳೂರು: ಯುವ ದಂತವೈದ್ಯೆ ಹಠಾತ್ ಸಾವು Read More »

ಪುತ್ತೂರು: ಬೈಕ್ ಗೆ ಡಿಕ್ಕಿ ಹೊಡೆದ ಜೀಪ್| ಬೈಕ್ ಸವಾರ ಸಾವು, ಮಕ್ಕಳು ಗಂಭೀರ

ಸಮಗ್ರ ನ್ಯೂಸ್: ಬೈಕ್‍ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ತಡ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ. ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(48) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಲೋಕೇಶ್ ಅವರು

ಪುತ್ತೂರು: ಬೈಕ್ ಗೆ ಡಿಕ್ಕಿ ಹೊಡೆದ ಜೀಪ್| ಬೈಕ್ ಸವಾರ ಸಾವು, ಮಕ್ಕಳು ಗಂಭೀರ Read More »

ಉಡುಪಿ: ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಶಾಸಕರ ನಿರುತ್ಸಾಹ; ಹೈಕಮಾಂಡ್ ಗೆ ದೂರು ಕೊಟ್ಟ ಕೋಟ

ಸಮಗ್ರ ನ್ಯೂಸ್‌ : ಕೇಸರಿ ಕೋಟೆಯಲ್ಲೇ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ನಿರುತ್ಸಾಹ ಕಂಡು ಬಂದಿದೆ. ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಂದಲೇ ಬೆಂಬಲ ಸಿಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಸ್ವತಃ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರೇ ಹೈಕಮಾಂಡ್ ಮುಂದೆ ಅಳಲು ತೋಡಿಕೊಂಡಿದ್ದು, ಸೂಕ್ತ ಬೆಂಬಲ ದೊರೆಯುತ್ತಿಲ್ಲ ಎಂದು ದೂರು ನೀಡಿದ್ದಾರೆ ಎನ್ನಲಾಗಿದೆ. ಕೋಟ ದೂರಿನ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಉಡುಪಿಗೆ ದೌಡಾಯಿಸಿದ್ದು, ಬಿಜೆಪಿ ಮಂಡಲ ಅಧ್ಯಕ್ಷರ ಜೊತೆ

ಉಡುಪಿ: ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಶಾಸಕರ ನಿರುತ್ಸಾಹ; ಹೈಕಮಾಂಡ್ ಗೆ ದೂರು ಕೊಟ್ಟ ಕೋಟ Read More »

ಮಂಗಳೂರು: ಎಸ್‌ಡಿಪಿಐ ದ. ಕ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ| ಮತದಾನದ ಕುರಿತು ಜಾಗ್ರತಿಗೆ ನಿರ್ಧಾರ

ಸಮಗ್ರ ನ್ಯೂಸ್‌ : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಸಭೆಯು ಇಂದು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ಅದ್ಯಕ್ಷತೆಯಲ್ಲಿ ಬಿ ಸಿ ರೋಡ್ ಪಕ್ಷದ ಕಚೇರಿಯಲ್ಲಿ ಜರಗಿತು. SDPI ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಅಬ್ದುಲ್ ಲತೀಫ್ ರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧೆ ಮಾಡದಿದ್ದರೂ ಮತದಾನದ ಕುರಿತು ಮತದಾರರಲ್ಲಿ, ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಿ ಸಂವಿದಾನ

ಮಂಗಳೂರು: ಎಸ್‌ಡಿಪಿಐ ದ. ಕ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ| ಮತದಾನದ ಕುರಿತು ಜಾಗ್ರತಿಗೆ ನಿರ್ಧಾರ Read More »

ಉಡುಪಿ: ಸೌಜನ್ಯಾಳ ನ್ಯಾಯಕ್ಕಾಗಿ ಈ ಬಾರಿ ನೋಟಾ ಜಾಗೃತಿ- ಮಹೇಶ್ ಶೆಟ್ಟಿ ತಿಮರೋಡಿ

ಸಮಗ್ರ ನ್ಯೂಸ್‌ : ಉಜಿರೆಯ ಎಸ್‌ಡಿಎಂ ಕಾಲೇಜಿನ 17 ವರ್ಷದ ಹೆಣ್ಣುಮಗಳು ಸೌಜನ್ಯ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಕೊಲೆಯಾಗಿ 11 ವರ್ಷಗಳು ಕಳೆದಿವೆ. ನೈಜ ಅಪರಾಧಿಗಳ ಬಂಧನ ಇನ್ನೂ ಆಗಿಲ್ಲ, ಸೌಜನ್ಯ ತಾಯಿ ಕುಸುಮಾವತಿ ನ್ಯಾಯಕ್ಕಾಗಿ ಹರಿಸಿದ ಕಣ್ಣೀರು ಅಧಿಕಾರದಲ್ಲಿರುವ ಯಾವ ಪಕ್ಷದ ನಾಯಕರಿಗೂ ಕಾಣಲಿಲ್ಲ. ಹೆತ್ತಕರುಳಿನ ಕೂಗು ಇವರಿಗೆ ಕೇಳಿಸಲಿಲ್ಲ. ಇದೀಗ ಸೌಜನ್ಯಾ ಕುಟುಂಬದ ನ್ಯಾಯಕ್ಕಾಗಿ ನೋಟ ಅಭಿಯಾನ ಆರಂಭಿಸಿದ್ದು, ಅದಕ್ಕೆ ಭಾರೀ ಜನಬೆಂಬಲ ವ್ಯಕ್ತವಾಗಿದೆ ಎಂದು ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

ಉಡುಪಿ: ಸೌಜನ್ಯಾಳ ನ್ಯಾಯಕ್ಕಾಗಿ ಈ ಬಾರಿ ನೋಟಾ ಜಾಗೃತಿ- ಮಹೇಶ್ ಶೆಟ್ಟಿ ತಿಮರೋಡಿ Read More »

Lokasabha election; ಬಲ್ಲವರ‌ ಜಿಲ್ಲೆಯಲ್ಲಿ ಬಿಲ್ಲವರೇ ನಿರ್ಣಾಯಕ| ಒಗ್ಗಟ್ಟು ಪ್ರದರ್ಶಿಸಿದರೆ ಒಡೆಯಲಿದೆ ಬಿಜೆಪಿ ಭದ್ರಕೋಟೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪ್ರಚಾರ ಕಾರ್ಯ ಜೋರಾಗಿದೆ. ಈ ನಡುವೆ ಬುದ್ದಿವಂತರ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಬಿಲ್ಲವ ಮತಗಳೇ ನಿರ್ಣಾಯಕವಾಗಿದ್ದು, ಬಿಲ್ಲವ ವೋಟ್ ಛಿದ್ರವಾಗದಂತೆ ಮತಗಳನ್ನು ಭದ್ರಪಡಿಸಲು ಬಿಜೆಪಿ – – ಕಾಂಗ್ರೆಸ್ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಇದೇ ಸ್ಟ್ರಾಟಜಿಯನ್ನು ಮುಂದುವರಿಸಿರುವ ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರಿಂದ ರೋಡ್ ಶೋನಲ್ಲಿ ನಾರಾಯಣ ಗುರುಗಳಿಗೆ ಗೌರವ ಸಹ ನೀಡಲಾಗಿದೆ. ಬಿಜೆಪಿಗೆ ಬಿಲ್ಲವ ಸಮಾಜದ ಪ್ರಭಾವಿ ನಾಯಕ ಪದ್ಮರಾಜ್ ಕಾಂಗ್ರೆಸ್ ನ

Lokasabha election; ಬಲ್ಲವರ‌ ಜಿಲ್ಲೆಯಲ್ಲಿ ಬಿಲ್ಲವರೇ ನಿರ್ಣಾಯಕ| ಒಗ್ಗಟ್ಟು ಪ್ರದರ್ಶಿಸಿದರೆ ಒಡೆಯಲಿದೆ ಬಿಜೆಪಿ ಭದ್ರಕೋಟೆ Read More »

ಪುತ್ತೂರು ಜಾತ್ರೆ ಹಿನ್ನಲೆ| ಮದ್ಯ ಮಾರಾಟ ನಿಷೇಧಿಸಿದ‌ ಡಿಸಿ

ಸಮಗ್ರ ನ್ಯೂಸ್: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10 ರಿಂದ ಏಪ್ರಿಲ್ 20ರವರೆಗೆ ವರ್ಷಾವಧಿ ಜಾತ್ರೆಯೂ ನಡೆಯುತ್ತಿದ್ದು, ಜಾತ್ರೋತ್ಸವದ ಸಮಯದಲ್ಲಿ ಸಾವಿರಾರು ಜನರು ಸೇರುವ ನಿರೀಕ್ಷೆ ಇರುತ್ತದೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಏಪ್ರಿಲ್

ಪುತ್ತೂರು ಜಾತ್ರೆ ಹಿನ್ನಲೆ| ಮದ್ಯ ಮಾರಾಟ ನಿಷೇಧಿಸಿದ‌ ಡಿಸಿ Read More »

ಸುಳ್ಯ: ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು

ಸಮಗ್ರ ನ್ಯೂಸ್: ಕಾರೊಂದು ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ಎ.17ರ ಮುಂಜಾನೆ ಸಂಭವಿಸಿದೆ. ಇಲ್ಲಿನ ಸರಕಾರಿ ಬಸ್ಸು ನಿಲ್ದಾಣದ ಬಳಿಯಲ್ಲಿ ಘಟನೆ ನಡೆದಿದ್ದು, ನಗರದ ಜಟ್ಟಿಪಳ್ಳ ಎಂಬಲ್ಲಿನ ಗೋಪಾಲ ಎಂಬುವರು ಮೃತಪಟ್ಟಿದ್ದಾಗಿ‌ ತಿಳಿದುಬಂದಿದೆ. ಅಪಘಾತಕ್ಕೆ ಕಾರಣವಾದ ಕಾರು ಕೇರಳ ಮೂಲದ್ದು‌ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ‌ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸುಳ್ಯ: ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು Read More »

ಉಡುಪಿ : ಏ. 17ರಿಂದ ಉಡುಪಿ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ -ಯಶ್ ಪಾಲ್ ಸುವರ್ಣ

ಸಮಗ್ರ ನ್ಯೂಸ್‌ : ರಾಷ್ಟೀಯ ಹೆದ್ದಾರಿ 66 ಉಡುಪಿ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯ ಒಂದು ಭಾಗ ಪೂರ್ಣಗೊಂಡಿದ್ದು ಏಪ್ರಿಲ್ 17 ರಿಂದ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಈ ಹಿಂದಿನ ರಾಷ್ಟೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಸಂತೆಕಟ್ಟೆಯಲ್ಲಿ ನಿತ್ಯ ವಾಹನ ದಟ್ಟಣೆಯಿಂದ ನಿತ್ಯ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಂಸದೆ ಶೋಭಾ ಕರಂದ್ಲಾಜೆಯವರು ಆದ್ಯತೆಯ ಮೇರೆಗೆ ಅಂಡರ್ ಪಾಸ್ ಕಾಮಗಾರಿ ಮಂಜೂರು ಮಾಡಿ ಇದೀಗ ಸುಗಮ ಸಂಚಾರಕ್ಕೆ ಅವಕಾಶ

ಉಡುಪಿ : ಏ. 17ರಿಂದ ಉಡುಪಿ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ -ಯಶ್ ಪಾಲ್ ಸುವರ್ಣ Read More »