ಕರಾವಳಿ

ಮಂಗಳೂರಿನಲ್ಲಿ ನಮೋ ಮೇನಿಯಾ| ರೋಡ್ ಶೋ ಮುಖಾಂತರ ಮತ ಪ್ರಚಾರ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಮಾಡಿದ್ದು, ಸಾವಿರಾರು ಜನರು ಮೋದಿಯನ್ನು ನೋಡಲು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಟ್ಟಡ, ಕಾಂಪೌಂಡ್ ಮೇಲೇರಿ ನಿಂತು ಮೋದಿ ರೋಡ್ ಶೋ ವೀಕ್ಷಿಸಿದ್ದಾರೆ. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್​ಶೋ ನಡೆಸಿದ್ದು, ನಗರದೆಲ್ಲೆಡೆ ಮೋದಿ, ಮೋದಿ ಜೈ ಘೋಷ ಮೊಳಗಿದೆ. ಇನ್ನೂ ಪ್ರಧಾನಿ ನಾರಾಯಣ ಗುರು ಪುತ್ಥಳಿಗೆ ನಮಸ್ಕರಿಸಿ ರೋಡ್ ಶೋ ಆರಂಭಿಸಿದರು. ರಸ್ತೆಯುದ್ದಕ್ಕೂ ಜನಸಾಗರ ಹರಿದು ಬಂದಿತ್ತು. ಕೇಸರಿ ಕೋಟೆಯಲ್ಲಿ ಜನರನ್ನು […]

ಮಂಗಳೂರಿನಲ್ಲಿ ನಮೋ ಮೇನಿಯಾ| ರೋಡ್ ಶೋ ಮುಖಾಂತರ ಮತ ಪ್ರಚಾರ Read More »

ಮಂಗಳೂರು: ಮೋದಿ ರೋಡ್ ಶೋ ಪಕ್ಕದಲ್ಲಿ ಬೆಂಕಿ ಅವಘಡ

ಸಮಗ್ರ ನ್ಯೂಸ್: ಇಂದು ಮೈಸೂರಿನಲ್ಲಿ ಸಮಾವೇಶ ಮುಗಿಸಿ ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆದಿತ್ತು. ಆದರೆ ರೋಡ್ ಶೋ ಪಕ್ಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಗರದ ಭಾರತ್ ಮಾಲ್ ಪಕ್ಕದ ಔಷಧ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ನರೇಂದ್ರ ಮೋದಿ ರೋಡ್ ಶೋ ನಡೆಯುತ್ತಿದ್ದ ಮಾರ್ಗದಿಂದ ಈ ಕಟ್ಟಡ ಕೇವಲ 50 ಮೀಟರ್ ಅಂತರದಲ್ಲಿದೆ. ನಾಯಕ್ ಹೆಲ್ತ್ ಕೇರ್ ಗೋಡೌನ್‌ನಲ್ಲಿ

ಮಂಗಳೂರು: ಮೋದಿ ರೋಡ್ ಶೋ ಪಕ್ಕದಲ್ಲಿ ಬೆಂಕಿ ಅವಘಡ Read More »

ಮಂಗಳೂರು: ಮೋದಿ ರೋಡ್‌ ಶೋಗೆ ಕ್ಷಣಗಣನೆ; ನಗರದೆಲ್ಲೆಡೆ ಪೊಲೀಸ್‌ ಸರ್ಪಗಾವಲು

ಸಮಗ್ರ ನ್ಯೂಸ್‌ : ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿ ಇಂದು ರಾತ್ರಿ 7.45ರಿಂದ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಮತ ಯಾಚಿಸಲಿದ್ದಾರೆ. ಪ್ರಧಾನಿ ಭಾಗವಹಿಸುವ ಈ ಕಾರ್ಯಕ್ರಮದ ಸಲುವಾಗಿ ನಗರದೆಲ್ಲೆಡೆ ಬಿಗು ಭದ್ರತೆ ಏರ್ಪಡಿಸಲಾಗಿದೆ. ಬ್ರಹ್ಮಶ್ರೀ ನಾರಾಯಣಗುರು ವೃತ್ತರಿಂದ ಆರಂಭವಾಗಲಿರುವ ರೋಡ್‌ ಶೋ ಲಾಲ್‌ಬಾಗ್‌, ಪಿವಿಎಸ್‌ ವೃತ್ತದ ಮೂಲಕ ಸಾಗಿ ನವಭಾರತ ವೃತ್ತದಲ್ಲಿ ಸಮಾಪನಗೊಳ್ಳಲಿದೆ. ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರಧಾನಿ ರೋಡ್‌ ಶೋ ಆರಂಭಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ

ಮಂಗಳೂರು: ಮೋದಿ ರೋಡ್‌ ಶೋಗೆ ಕ್ಷಣಗಣನೆ; ನಗರದೆಲ್ಲೆಡೆ ಪೊಲೀಸ್‌ ಸರ್ಪಗಾವಲು Read More »

ಉಡುಪಿ: 6100 ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ – ಡಿಸಿ ಕೆ. ವಿದ್ಯಾಕುಮಾರಿ

ಸಮಗ್ರ ನ್ಯೂಸ್‌ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವಿಶೇಷ ಚೇತನರು ಹಾಗೂ 85 ವರ್ಷ ಮೇಲ್ಪಟ್ಟ ಮತದಾನ ಕೇಂದ್ರಗಳಿಗೆ ತೆರಳಿ ಮತದಾನ ಮಾಡಲು ಆಗದ 6100 ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ ತಿಳಿಸಿದರು. ಅವರು ಇಂದು ಕಾಪು ತಾಲೂಕಿನ ಕಲ್ಯಾ ಗ್ರಾಮದ ವಯಸ್ಕ ಮತದಾನರ ಮನೆಯಲ್ಲಿ ನಡೆದ ಮತದಾನದ ಪ್ರಕ್ರಿಯೆಯನ್ನು ಪರಿಶೀಲಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ವಿಶೇಷ ಚೇತನ ಹಾಗೂ 85 ವರ್ಷ ಮೇಲ್ಪಟ

ಉಡುಪಿ: 6100 ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ – ಡಿಸಿ ಕೆ. ವಿದ್ಯಾಕುಮಾರಿ Read More »

ಇಂದು ಉಡುಪಿ ಜಿಲ್ಲೆಯಾದ್ಯಂತ ಮಹಾನಾಯಕ ಜೈ ಭೀಮ್ ರ್ಯಾಲಿ

ಸಮಗ್ರ ನ್ಯೂಸ್‌ : ದಲಿತ ಸಂಘಟನೆಗಳು ಹಾಗೂ ಇತರ ಸಮಾನ ಮನಸ್ಕ ಸಂಟನೆಗಳ ನೇತೃತ್ವದಲ್ಲಿ ಸಂವಿಧಾನಶಿಲ್ಪಿ ಡಾ.ಅಂಬೇಡ್ಕ‌ರ್ ಅವರ 133ನೇ ಜನ್ಮದಿನಾಚರಣೆ ಪ್ರಯುಕ್ತ ಶಕ್ತಿಶಾಲಿ ಭಾರತಕ್ಕಾಗಿ ಭೀಮ ಸಂವಿಧಾನ ಮಹಾ ನಾಯಕ ಜೈ ಭೀಮ್ ರ್ಯಾಲಿಯನ್ನು ಏಪ್ರಿಲ್ 14ರಂದು ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಸಹಬಾಳ್ವೆ ಉಡುಪಿ ಅಧ್ಯಕ್ಷ ಹಾಗೂ ಹಿರಿಯ ಚಿಂತಕ ಪ್ರೊ.ಫಣಿರಾಜ್ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಂದೂರಿನಿಂದ ಹೊರಡುವ ರ್ಯಾಲಿಯು ಕುಂದಾಪುರ, ಬ್ರಹ್ಮಾವರ, ಹೆಬ್ರಿ, ಕಾರ್ಕಳ, ಕಾಪು ಮಾರ್ಗವಾಗಿ ಉಡುಪಿಯಲ್ಲಿ

ಇಂದು ಉಡುಪಿ ಜಿಲ್ಲೆಯಾದ್ಯಂತ ಮಹಾನಾಯಕ ಜೈ ಭೀಮ್ ರ್ಯಾಲಿ Read More »

ಉಡುಪಿ : ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ-ಜೆ.ಪಿ. ಹೆಗ್ಡೆ

ಸಮಗ್ರ ನ್ಯೂಸ್‌ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೇಳಿದಂತೆ ನಡೆದುಕೊಂಡಿದೆ. ಚುನಾವಣೆಗೆ ಮೊದಲು ನೀಡಿನ 5 ಗ್ಯಾರಂಟಿಗಳ ಭರವಸೆಯನ್ನು ಈಡೇರಿಸಿದೆ. ಆದರೆ, ಬಿಜೆಪಿ ಸರಕಾರ ಆಡಿದಂತೆ ನಡೆದುಕೊಂಡಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದರು. ಚಿಕ್ಕಮಗಳೂರಿನ ವಿವಿಧ ಕಡೆಗಳಲ್ಲಿ ಮತಪ್ರಚಾರ ನಡೆಸಿ ಮಾತನಾಡಿದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಬೆಲೆ ಕಡಿಮೆಯಾಗಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಯಾಕೆ ಕಡಿಮೆ ಮಾಡಿಲ್ಲ? ವರ್ಷಕ್ಕೆ 2 ಕೋಟಿ, 10 ವರ್ಷಕ್ಕೆ

ಉಡುಪಿ : ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ-ಜೆ.ಪಿ. ಹೆಗ್ಡೆ Read More »

ಉಡುಪಿ:ಲೇಖನಗಳು ವ್ಯವಸ್ಥೆಗೆ ಬಿಸಿ ಮುಟ್ಟಿಸಲಿ- ಡಾ.ರವೀಂದ್ರನಾಥ್ ಶ್ಯಾನುಭಾಗ್

ಸಮಗ್ರ ನ್ಯೂಸ್‌ : ಪತ್ರಿಕೆಯಲ್ಲಿ ಲೇಖನ ಬಂದರೆ ಸಮಸ್ಯೆ ಪರಿಹಾರ ಆಗುತ್ತದೆ ಎಂಬುದು ಹೆಚ್ಚಿನವರ ಭಾವನೆ. ಆದರೆ ಲೇಖನಗಳಿಂದ ಕೇವಲ ಜನಾಭಿಪ್ರಾಯ ಸಂಗ್ರಹ ಆಗುತ್ತದೆ ಹೊರತು ಸಮಸ್ಯೆ ಪರಿಹಾರ ಆಗುವುದಿಲ್ಲ. ಆ ಜನಾಭಿಪ್ರಾಯ ನಮ್ಮ ವ್ಯವಸ್ಥೆಗೆ ತಲುಪಿದರೆ ಮಾತ್ರ ಸಮಸ್ಯೆ ಪರಿಹಾರ ಆಗಲು ಸಾಧ್ಯ ಎಂದು ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ್ ಶ್ಯಾನುಭಾಗ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ

ಉಡುಪಿ:ಲೇಖನಗಳು ವ್ಯವಸ್ಥೆಗೆ ಬಿಸಿ ಮುಟ್ಟಿಸಲಿ- ಡಾ.ರವೀಂದ್ರನಾಥ್ ಶ್ಯಾನುಭಾಗ್ Read More »

ಉಡುಪಿ: ಎ.15- 16ರಂದು ‘ಇನ್ನರ್‌ಸೆನ್ಸ್’ ಕಲಾ ಪ್ರದರ್ಶನ

ಸಮಗ್ರ ನ್ಯೂಸ್‌ : ವಿಶ್ವದ ಖ್ಯಾತ ಕಲಾವಿದ ಲಿಯನಾರ್ಡೋ ಡ ವಿಂಚಿ ಅವರ ಸ್ಮರಣಾರ್ಥ ಎಪ್ರಿಲ್ 15ರಂದು ನಡೆಯುವ ವಿಶ್ವಕಲಾ ದಿನಾಚರಣೆಯ ಪ್ರಯುಕ್ತ ಮಣಿಪಾಲದ ತ್ರಿವರ್ಣ ಆರ್ಟ್ ಗ್ಯಾಲರಿಯ ವತಿಯಿಂದ ಎಪ್ರಿಲ್15 ಮತ್ತು 16ರಂದು ಆರ್ಟ್ ಸ್ಕೂಲ್‌ನ ಐವರು ಕಲಾ ವಿದ್ಯಾರ್ಥಿಗಳಿಂದ ‘ಇನ್ನ‌ರ್ ಸೆನ್ಸ್‌’ ಎಂಬ ಪ್ರತಿಷ್ಠಾಪನಾ ಕಲಾ ಪ್ರದರ್ಶನ ನಡೆಯಲಿದೆ ಎಂದು ತ್ರಿವರ್ಣ ಕಲಾ ಶಾಲೆಯ ಹರೀಶ್ ಸಾಗ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಲೆ ಹಾಗೂ ಬದುಕಿನ ವಿವಿಧ ಆಯಾಮದಲ್ಲಿ

ಉಡುಪಿ: ಎ.15- 16ರಂದು ‘ಇನ್ನರ್‌ಸೆನ್ಸ್’ ಕಲಾ ಪ್ರದರ್ಶನ Read More »

ರಾಜಕೀಯ ಹಿತಾಸಕ್ತಿಗಾಗಿ ‘ಸೌಜನ್ಯ’ಕ್ಕೂ ನ್ಯಾಯದ ಮಾತನಾಡಿಲ್ಲ| ಸೌಜನ್ಯ ಪ್ರಕರಣದಲ್ಲಿ ಬಿಜೆಪಿ‌ – ಕಾಂಗ್ರೆಸ್ ಸಮಾನ ಪಾಲು ಪಡೆದಿದೆ – ತಿಮರೋಡಿ

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗದೇ ಇರುವ ಹಿನ್ನಲೆ ನೋಟಾ ಅಭಿಯಾನ ಹಮ್ಮಿದ ಕುರಿತಾಗಿ ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಇಡೀ ಪ್ರಕರಣವನ್ನು ಮುಚ್ಚಿಹಾಕಿಸಿದ್ದು ಅಲ್ಲದೇ ಈ ಪ್ರಕರಣದಲ್ಲಿ ಕಾಂಗ್ರೆಸ್ ಕೂಡ ಪಾಲು ಇದೆ ಎಂದು ಹೋರಾಟಗಾರರು ಆರೋಪಿಸಿದರು. ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಹೇಶ್ ಶೆಟ್ಟಿ‌ ತಿಮರೋಡಿ, ಸೌಜನ್ಯ ಅತ್ಯಾಚಾರಗೈದ ಕಾಮಾಂದರಿಗೆ ಶಿಕ್ಷೆ ಆಗಿಲ್ಲ.

ರಾಜಕೀಯ ಹಿತಾಸಕ್ತಿಗಾಗಿ ‘ಸೌಜನ್ಯ’ಕ್ಕೂ ನ್ಯಾಯದ ಮಾತನಾಡಿಲ್ಲ| ಸೌಜನ್ಯ ಪ್ರಕರಣದಲ್ಲಿ ಬಿಜೆಪಿ‌ – ಕಾಂಗ್ರೆಸ್ ಸಮಾನ ಪಾಲು ಪಡೆದಿದೆ – ತಿಮರೋಡಿ Read More »

ಮಂಗಳೂರಿನಲ್ಲಿ ಮೋದಿ ರೋಡ್‍ಶೋ/ ಸಂಚಾರ ವ್ಯವಸ್ಥೆ ಹೀಗಿದೆ ನೋಡಿ..

ಸಮಗ್ರ ನ್ಯೂಸ್: ನಾಳೆ (ಏ.14) ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಂಗಳೂರಿನಲ್ಲಿ ರೋಡ್‍ಶೋ ನಡೆಸಲಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೋದಿ ರೋಡ್ ಶೋಗೆ ಬಿಜೆಪಿ ಸಾರಥ್ಯದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದರೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ಬಿಗಿಗೊಳಿಸಿದೆ. ನಾಗರಿಕರಿಗೆ ಅನಾನುಕೂಲ ಉಂಟಾಗದಂತೆ ಹಾಗೂ ಪ್ರಧಾನಿ ರೋಡ್ ಶೋ ಸುಗಮವಾಗಿ ನಡೆಯುವಂತೆ ನಾಳೆ ಮಧ್ಯಾಹ್ನ 2 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ನಗರದಲ್ಲಿ ಪರ್ಯಾಯ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ವಾಹನ ಸಂಚಾರ ನಿಷೇಧಿಸಿರುವ

ಮಂಗಳೂರಿನಲ್ಲಿ ಮೋದಿ ರೋಡ್‍ಶೋ/ ಸಂಚಾರ ವ್ಯವಸ್ಥೆ ಹೀಗಿದೆ ನೋಡಿ.. Read More »