ಕರಾವಳಿ

ಪುತ್ತೂರು: KFDC ರಬ್ಬರ್ ತೋಟಕ್ಕೆ ಬೆಂಕಿ

ಸಮಗ್ರ ನ್ಯೂಸ್: ಕೆ.ಎಫ್ .ಡಿ.ಸಿ ಯ ರಬ್ಬರ್ ತೋಟಕ್ಕೆ ಕರೆಂಟ್ ಶಾರ್ಟ್ ಆಗಿ ಬೆಂಕಿ ಹೊತ್ತಿಕೊಂಡ ಘಟನೆ ಪುತ್ತೂರು ತಾಲೂಕಿನ ಮೊಗಪ್ಪೆ ಗ್ರಾಮದ ನೆಟ್ಟಾರಿನಲ್ಲಿ ಎ.27 ರಂದು ನಡೆದಿದೆ. ಈ ಅವಘಡವೂ ಮಧ್ಯಾಹ್ನ 2 ಗಂಟೆ ಹೊತ್ತಿಗೆ ಸಂಭವಿಸಿದ್ದು. ರಬ್ಬರ್ ಗುಡ್ಡೆಯಿಂದ ಬರುವ ಹೊಗೆಯ ಮೂಲಕ ತಿಳಿದು ಸ್ಥಳೀಯರು ನೀರು ಹಾಕಿ ಬೆಂಕಿಯನ್ನು ನಂದಿಸಿದ್ದಾರೆ. ತೋಟದಲ್ಲಿ ರಬ್ಬರ್ ಮರಗಳಿಗೆ ಹಾನಿ‌ ಉಂಟಾಗಿದೆ ಎಂದು ತಿಳಿದುಬಂದಿದೆ.

ಪುತ್ತೂರು: KFDC ರಬ್ಬರ್ ತೋಟಕ್ಕೆ ಬೆಂಕಿ Read More »

ಉಡುಪಿ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಸಮಗ್ರ ನ್ಯೂಸ್‌ : ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಟ್ಟೆ ಸಮೀಪದ ಗುಡ್ಡೆಅಂಗಡಿ ರಾ.ಹೆ.66ರಲ್ಲಿ ಕೊಯ್ಕಾಡಿ ತಿರುವಿನಲ್ಲಿ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಫೋನ್‌ ಪೇ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಎಂದು‌ ಗುರುತಿಸಲಾಗಿದೆ. ಇವರ ಸ್ನೇಹಿತರಾದ ವಿಘ್ನೇಶ್‌ (28), ಚೇತನ್‌ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣದ

ಉಡುಪಿ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ Read More »

ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ|ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ‍್ಯಾಂಕ್

ಸಮಗ್ರ ನ್ಯೂಸ್’: ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ಇ.ಬಿ.ಎ.ಸಿ ಯಲ್ಲಿ ತಲಾ 100 ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್ ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 03 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಇವರು

ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ|ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ‍್ಯಾಂಕ್ Read More »

ಎ.30ರವರೆಗೆ ಕರಾವಳಿಗರಿಗೆ ಹೀಟ್ ವೇವ್ ಸಂಕಷ್ಟ| ಹೊರಗೆ ಹೋಗದಂತೆ ಸೂಚನೆ ನೀಡಿದ ಐಎಂಡಿ

ಸಮಗ್ರ ನ್ಯೂಸ್: ಕರಾವಳಿಯಲ್ಲಿಎ.30ರವರೆಗೆ ಬಿಸಿಗಾಳಿ ಅಲೆ ಬೀಸಲಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಈ ವಿದ್ಯಮಾನ ನಡೆಯುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ದ.ಕ, ಉಡುಪಿ ಸಹಿತ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಹೆಚ್ಚಾಗಲಿದೆ ಎಂದು ವರದಿ

ಎ.30ರವರೆಗೆ ಕರಾವಳಿಗರಿಗೆ ಹೀಟ್ ವೇವ್ ಸಂಕಷ್ಟ| ಹೊರಗೆ ಹೋಗದಂತೆ ಸೂಚನೆ ನೀಡಿದ ಐಎಂಡಿ Read More »

ದ.ಕ ಜಿಲ್ಲೆಯ ಈ ಮತಗಟ್ಟೆಯಲ್ಲಿ ಶೇ.100 ಮತದಾನ| ದೇಶಕ್ಕೆ ಮಾದರಿಯಾದ ಕುಗ್ರಾಮದ ಮತದಾರರು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಎರಡನೇ ಹಂತದ (ಕರ್ನಾಟಕದಲ್ಲಿ ಮೊದಲ ಹಂತ) ಮತದಾನ ಇಂದು ನಡೆಯುತ್ತಿದ್ದು ದ.ಕ ಜಿಲ್ಲೆಯ ಬೆಳ್ತಂಗಡಿತಾಲೂಕಿನ ನೆರಿಯ ಗ್ರಾಮದ ಬಾಂಜಾರು ಮಲೆಯಲ್ಲಿ ಶೇ.100 ಮತದಾನವಾಗಿದೆ. ದ.ಕ‌ ಜಿಲ್ಲೆಯ ಅತ್ಯಂತ ಕುಗ್ರಾಮವಾಗಿರುವ ಬಾಂಜಾರು ಮಲೆಯ ಸಮುದಾಯ ಭವನದಲ್ಲಿ ನಡೆದ ಮತದಾನದಲ್ಲಿ ಎಲ್ಲರೂ ತಮ್ಮ ಹಕ್ಕುಗಳನ್ನು ಚಲಾಯಿಸಿ ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ನೂರು ಶೇಖಡಾ ಮತದಾನವಾದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಬಾಂಜಾರು ಮಲೆ ಮತಗಟ್ಟೆಯಲ್ಲಿ 4 ಗಂಟೆಯ ಸುಮಾರಿಗೆ ಶೇ.100

ದ.ಕ ಜಿಲ್ಲೆಯ ಈ ಮತಗಟ್ಟೆಯಲ್ಲಿ ಶೇ.100 ಮತದಾನ| ದೇಶಕ್ಕೆ ಮಾದರಿಯಾದ ಕುಗ್ರಾಮದ ಮತದಾರರು Read More »

ಉಡುಪಿ: ರಾಜೀವನಗರ ಮತಗಟ್ಟೆಯಲ್ಲಿ ನಕಲಿ ಮತದಾನದ ಆರೋಪ

ಸಮಗ್ರ ನ್ಯೂಸ್‌ : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 80ನೇ ಬಡಗಬೆಟ್ಟು ಗ್ರಾಪಂನ ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆಯಲ್ಲಿ ವ್ಯಕ್ತಿಯೊಬ್ಬರ ಹೆಸರಿನಲ್ಲಿ ಬೇರೆ ವ್ಯಕ್ತಿ ಆಗಮಿಸಿ ಮತದಾನ ಮಾಡಿದ್ದು, ಇಲ್ಲಿ ನಕಲಿ ಮತದಾನ ನಡೆದಿರುವ ಆರೋಪಗಳು ಕೇಳಿಬಂದಿವೆ. ಅರ್ಬಿಯ ಕೃಷ್ಣ ನಾಯಕ್ ಎಂಬವರು ಮತದಾನ ಮಾಡಲು ಮತಗಟ್ಟೆಗೆ ಆಗಮಿಸಿದಾಗ ತಮ್ಮ ಹೆಸರಿನಲ್ಲಿ ಆಗಲೇ ಮತದಾನ ಮಾಡಿರುವುದಾಗಿ ಮತ ಗಟ್ಟೆ ಅಧಿಕಾರಿಗಳು ತಿಳಿಸಿದರು. ಆದರೆ ನಾನು ಮತದಾನ ಮಾಡಿಲ್ಲ ಎಂದು ಕೃಷ್ಣ ನಾಯಕ್ ವಾದ ಮಂಡಿಸಿದರು. ಇದರಿಂದ

ಉಡುಪಿ: ರಾಜೀವನಗರ ಮತಗಟ್ಟೆಯಲ್ಲಿ ನಕಲಿ ಮತದಾನದ ಆರೋಪ Read More »

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ, ಉಪನ್ಯಾಸ

ಸಮಗ್ರ ನ್ಯೂಸ್: ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐ.ಎಸ್.ಟಿ.ಇ) ಇದರ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಅಣ್ಣಯ್ಯ ಕೆ. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.ವ್ರತ್ತಿಪರ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ವ್ರತ್ತಿ ಅಭಿವ್ರದ್ಧಿ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಐ.ಎಸ್‌.ಟಿ.ಇ ಸಂಸ್ಥೆಯ ಬಗ್ಗೆ ಸಂಚಾಲಕ

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ, ಉಪನ್ಯಾಸ Read More »

ಪುತ್ತೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಸಮಗ್ರ ನ್ಯೂಸ್‌ : ಮತದಾನದ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಕಡಬದ ಬಿಳಿನೆಲೆ ಮತಗಟ್ಟೆ ಬಳಿ ನಡೆದಿದೆ. ಮತಗಟ್ಟೆ ಕೇಂದ್ರದ ಗೇಟಿನ ಬಳಿ ಪ್ರಚಾರಕ್ಕೆ ಯತ್ನಿಸಿದ್ದ ಒಂದು ರಾಜಕೀಯ ಪಕ್ಷದ ಕಾರ್ಯಕರ್ತರು ನಡೆಯನ್ನು ಇನ್ನೊಂದು ಪಕ್ಷದ ಕಾರ್ಯಕರ್ತರು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಈ ಸಂದರ್ಭ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗುವ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಪುತ್ತೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ Read More »

ಉಡುಪಿ: ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು-ರಕ್ಷಿತ್ ಶೆಟ್ಟಿ

ಸಮಗ್ರ ನ್ಯೂಸ್‌ : ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ವೋಟ್ ಮಾಡ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಹೇಳಿದರು. ಉಡುಪಿ ಕುಕ್ಕಿಕಟ್ಟೆ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ. ಯಾವಾಗಲೂ ನಾನು ಒಂದು ನಿರ್ಧಾರಕ್ಕೆ

ಉಡುಪಿ: ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು-ರಕ್ಷಿತ್ ಶೆಟ್ಟಿ Read More »

ಉಡುಪಿ: ಮತದಾನದಿಂದ ದೂರ ಉಳಿದವರಿಗೆ ಪೌರತ್ವ ಕೊಡಬಾರದು- ಪೇಜಾವರ ಶ್ರೀ

ಸಮಗ್ರ ನ್ಯೂಸ್‌ : ನಮಗೆ ಬೇಕಾಗಿರುವ ಸರಕಾರ ರೂಪಿಸುವ ದೊಡ್ಡ ಬದ್ಧತೆ ಪ್ರಜೆಗಳ ಮೇಲೆ ಇದೆ. ಹೀಗಾಗಿ ಎಲ್ಲಾ ಪ್ರಜೆಗಳು ತಪ್ಪದೇ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ದೂರ ಉಳಿಯಬಾರದು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನ ಮಾಡಿ ತುಂಬಾ ಹೆಮ್ಮೆ ಅನಿಸುತ್ತಿದೆ. ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಾಗ ಅನುಭವಿಸಿದ ಧನ್ಯತಾಭಾವ ಈಗಲೂ ಅನುಭವಿಸಿದ್ದೇವೆ. ದೇಶದಲ್ಲಿ ಎಲ್ಲಾ ಬಗೆಯ ಜನ ಎಲ್ಲಾ ಕಾಲಕ್ಕೂ ಇರುತ್ತಾರೆ.

ಉಡುಪಿ: ಮತದಾನದಿಂದ ದೂರ ಉಳಿದವರಿಗೆ ಪೌರತ್ವ ಕೊಡಬಾರದು- ಪೇಜಾವರ ಶ್ರೀ Read More »