ಕರಾವಳಿ

ಮಂಗಳೂರು :ಲೋಕಸಭಾ ಚುನಾವಣೆ- ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಸಮಗ್ರ ನ್ಯೂಸ್‌ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ ಜಿಲ್ಲೆಯ ಸೌಜನ್ಯ ಪರ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದ್ದು, ಹೋರಾಟಗಾರರು ಈ ಬಾರಿ ನೋಟ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ ಎಂದು ಸಮಿತಿಯ ಮುಖಂಡ ಗಿರೀಶ್ ಮಟ್ಟನ್ನನವರ್ ತಿಳಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಿದ ಅವರು, ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಪ್ರಕರಣ ಮಾತ್ರವಲ್ಲ ಅದಕ್ಕಿಂತಲೂ ಹಿಂದೆ ನಡೆದ ಆನೆ ಮಾವುತ ಪ್ರಕರಣ, ಪದ್ಮಾವತಿ […]

ಮಂಗಳೂರು :ಲೋಕಸಭಾ ಚುನಾವಣೆ- ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ Read More »

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಸಮಗ್ರ:ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ಸಂಘದ ವತಿಯಿಂದ ವೃತ್ತಿ ಮಾರ್ಗದರ್ಶನ ಮತ್ತು ವಿದ್ಯಾರ್ಥಿ ಪ್ರೇರಣೆ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಎಂಬಿಎ ವಿಭಾಗದ ಪ್ರಾಧ್ಯಾಪಕ ಕೃಷ್ಣಾನಂದ ಎ. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳ ಮುಂದೆ ಇರುವ ವಿವಿಧ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥೆ ರಮಾ

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ Read More »

ಕಾರವಾರ: ಬೊಮ್ಮಾಯಿ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ 103 ಸೀಟುಗಳನ್ನು ಗೆಲ್ಲಿಸುತ್ತಿದ್ದೆ; ಯತ್ನಾಳ್

ಸಮಗ್ರ ನ್ಯೂಸ್‌ : ಬೊಮ್ಮಾಯಿ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ 103 ಸೀಟುಗಳನ್ನು ಗೆಲ್ಲಿಸುತ್ತಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕುಮಟಾದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುತ್ವದ ರಾಜಕಾರಣಿಗಳನ್ನು ಎಂದೂ ಮುಗಿಸಲು ಸಾಧ್ಯವಿಲ್ಲ. ಈಶ್ವರಪ್ಪನವರು ಹೇಳುವ ವಿಚಾರವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು. ನಾನು ವಿರೋಧ ಪಕ್ಷದ ನಾಯಕನಾಗುವ ಎಲ್ಲಾ ಅರ್ಹತೆ ಇತ್ತು. ನನ್ನನ್ನು ಮಾಡಲಿಲ್ಲ, ನನಗೆ ಅಸಮಾಧಾನ ಇಲ್ಲ. ಜೂನ್ 4ರ ನಂತರ ಕುಟುಂಬ ರಾಜಕಾರಣದಿಂದ ಇಡೀ ದೇಶದಲ್ಲಿ

ಕಾರವಾರ: ಬೊಮ್ಮಾಯಿ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ 103 ಸೀಟುಗಳನ್ನು ಗೆಲ್ಲಿಸುತ್ತಿದ್ದೆ; ಯತ್ನಾಳ್ Read More »

ಬೆಳ್ಳಾರೆ:ರವೀಂದ್ರ ಬಂಗೇರ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಾಶನ ಹಸ್ತಾಂತರ

ರವೀಂದ್ರ ಬಂಗೇರ ಅವರು ಕಳೆದ 4 ವರ್ಷಗಳಿಂದ ಪಾಶ್ವವಾಯು ಸಮಸ್ಯೆಯಿಂದ ದೇಹದ ಒಂದು ಭಾಗ ಬಲಹೀನತೆಯಿಂದ, ದುಡಿಯಲು ಆಶಕ್ತರಾಗಿದ್ದಾರೆ. ಅಲ್ಲದೆ ಅವರ ಜೀವನ ನಿರ್ವಹಣೆಗೆ ಕಷ್ಟಕರವಾಗಿದ್ದು, ಅವರಿಗೆ ಅವರಿಗೆ ಮಂಜೂರಾದ ಮೊತ್ತವನ್ನು ಹಸ್ತಾಂತರ ಮಾಡಿದರು. ಈ ಸಂಧರ್ಭ ವಲಯ ಮೇಲ್ವಿಚಾರಕ ಗೋಪಾಲಕೃಷ್ಣ, ಸೇವಾಪ್ರತಿನಿಧಿ ಯಶೋಧರವರು ಉಪಸ್ಥಿತರಿದ್ದರು.

ಬೆಳ್ಳಾರೆ:ರವೀಂದ್ರ ಬಂಗೇರ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಾಶನ ಹಸ್ತಾಂತರ Read More »

ಉಡುಪಿ: ಕಾಂಗ್ರೆಸ್ ಸರ್ಕಾರ ಹಸಿದ ಹೊಟ್ಟೆಗೆ ಅನ್ನ ನೀಡುವ ಕೆಲಸ ಮಾಡುತ್ತಿದೆ; ಕೆ. ಜಯಪ್ರಕಾಶ ಹೆಗ್ಡೆ

ಸಮಗ್ರ ನ್ಯೂಸ್‌ : ಹಿಂದೆ ಕೇವಲ 20 ತಿಂಗಳ ಕಾಲ ಸಂಸದನಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪೂರ್ಣಗೊಳಿಸುವುದರೊಂದಿಗೆ ಈ ಬಾರಿಯ ಚುನಾವಣೆಯಲ್ಲಿ ಮತ್ತೊಂದು ಅವಕಾಶ ಕೊಡಿ. ಮನೆ ಮನೆಗೆ ಭೇಟಿ ನೀಡಿ ಮತ ಕೇಳುವ ವೇಳೆ ಅಭಿವೃದ್ಧಿ ಮತ್ತು ಸಿದ್ದರಾಮಯ್ಯ ನೇತೃತ್ವದ ಉತ್ತಮ ಕಾರ್ಯಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕೆಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ ಹೆಗ್ಡೆ ಪಕ್ಷ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ನಡೆದ

ಉಡುಪಿ: ಕಾಂಗ್ರೆಸ್ ಸರ್ಕಾರ ಹಸಿದ ಹೊಟ್ಟೆಗೆ ಅನ್ನ ನೀಡುವ ಕೆಲಸ ಮಾಡುತ್ತಿದೆ; ಕೆ. ಜಯಪ್ರಕಾಶ ಹೆಗ್ಡೆ Read More »

ಬೆಳ್ತಂಗಡಿ : ಗೋದಾಮಿಗೆ ನುಗ್ಗಿ 1.35 ಲಕ್ಷ ರೂ. ಮೌಲ್ಯದ ಅಡಿಕೆ ಕಳವು

ಸಮಗ್ರ ನ್ಯೂಸ್:‌ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 1.35 ಲಕ್ಷ ರೂ. ಮೌಲ್ಯದ ಅಡಿಕೆ ಕಳವುಗೈದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಪಂಥ ಎಂಬಲ್ಲಿ ನಡೆದಿದೆ. ತಣ್ಣೀರುಪಂಥ ನಿವಾಸಿ ಅಬ್ದುಲ್ ಹಕೀಂ ಎಂಬವರು ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. ಎ.2ರಂದು ಸಂಜೆಯ ವೇಳೆ ಸುಲಿಯದ ಅಡಿಕೆಯನ್ನು 75 ಗೋಣಿ ಚೀಲಗಳಲ್ಲಿ ತುಂಬಿಸಿ ಮನೆ ಸಮೀಪವೇ ಇರುವ ಗೋದಾಮಿನಲ್ಲಿ ಇಟ್ಟು ಬೀಗ ಹಾಕಿದ್ದರು. ಎ 3ರಂದು ಬೆಳಗ್ಗೆ ನೋಡಿದಾಗ ಗೋದಾಮಿನ ಬಾಗಿಲು ತುಂಡಾಗಿ ಬಿದ್ದಿರುವುದು

ಬೆಳ್ತಂಗಡಿ : ಗೋದಾಮಿಗೆ ನುಗ್ಗಿ 1.35 ಲಕ್ಷ ರೂ. ಮೌಲ್ಯದ ಅಡಿಕೆ ಕಳವು Read More »

ಸುಳ್ಯ: ಕೆಲಸ ಕೇಳಿಕೊಂಡು ಬಂದಾವನಿಂದಲೇ ಮೊಬೈಲ್‌, ಬೈಕ್‌ ಕಳವು

ಸಮಗ್ರ ನ್ಯೂಸ್ : ಕೆಲಸ ಕೇಳಿಕೊಂಡು ಬಂದವನಿಂದ ಮೊಬೈಲ್‌, ಬೈಕ್‌ ಕಳವು ಮಾಡಿ ಪರಾರಿಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಬರಾಯದ ರಿಯಾಜ್‌ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ. ರಿಯಾಜ್‌ ಅವರು ಅರಂತೋಡಿನ ಹೊಟೇಲ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರಲ್ಲಿಗೆ ಅವರ ಪರಿಚಯದ ಹರ್ಷಿಕೇಶ್‌ ಕೆಲಸ ಕೇಳಿಕೊಂಡು ಹೋಗಿದ್ದು, ಆತನನ್ನು ರಿಯಾಜ್‌ ಹೊಟೇಲ್‌ಗೆ ಕರೆದುಕೊಂಡು ಹೋಗಿದ್ದಾನೆ. ಮಧ್ಯಾಹ್ನ ರಿಯಾಜ್‌ ವಿಶ್ರಾಂತಿ ಪಡೆದು ಎದ್ದು ನೋಡಿದಾಗ ಹರ್ಷಿಕೇಶ್‌ ರೂಂನಲ್ಲಿ ಕಾಣಿಸಲಿಲ್ಲ. ಜೊತೆಗೆ ರಿಯಾಜ್‌

ಸುಳ್ಯ: ಕೆಲಸ ಕೇಳಿಕೊಂಡು ಬಂದಾವನಿಂದಲೇ ಮೊಬೈಲ್‌, ಬೈಕ್‌ ಕಳವು Read More »

ವಿಟ್ಲ: ಬಸ್-ಪಿಕಪ್‌ ಢಿಕ್ಕಿ; ಹಲವರಿಗೆ ಗಾಯ

ಸಮಗ್ರ ನ್ಯೂಸ್‌ : ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ಹಲವು ಮಂದಿ ಇದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

ವಿಟ್ಲ: ಬಸ್-ಪಿಕಪ್‌ ಢಿಕ್ಕಿ; ಹಲವರಿಗೆ ಗಾಯ Read More »

ಉಪ್ಪಿನಂಗಡಿ: ಬಸ್, ಕಂಟೈನರ್ ನಡುವೆ ಢಿಕ್ಕಿ; ಹಲವು ಮಂದಿಗೆ ಗಾಯ

ಸಮಗ್ರ ನ್ಯೂಸ್‌ : ಖಾಸಗಿ ಬಸ್ ಮತ್ತು ಕಂಟೈನರ್ ನಡುವೆ ಢಿಕ್ಕಿಯಾಗಿ ಹಲವು ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾ. ಹೆ. 75ರ ಉಪ್ಪಿನಂಗಡಿ ಉದನೆ ಬಳಿಯ ನೇಲ್ಯಡ್ಕದಲ್ಲಿ ನಡೆದಿದೆ. ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ವರನ ಕಡೆಯವರ ಮದುವೆಯ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ಗೆ ಢಿಕ್ಕಿ ಹೊಡೆದಿದೆ. ಅವಘಡದಲ್ಲಿ ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ

ಉಪ್ಪಿನಂಗಡಿ: ಬಸ್, ಕಂಟೈನರ್ ನಡುವೆ ಢಿಕ್ಕಿ; ಹಲವು ಮಂದಿಗೆ ಗಾಯ Read More »

ದ.ಕ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರಿಗೆ ಕಾರ್ಮಿಕ ವರ್ಗದ ಮಹಿಳೆಯರಿಂದ ದೇಣಿಗೆ

ಸಮಗ್ರ ನ್ಯೂಸ್‌ : ನಾಳೆ ನಾಮಪತ್ರ ಸಲ್ಲಿಸಲಿರುವ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಚುನಾವಣಾ ಠೇವಣಿಗಾಗಿ ಕಾರ್ಮಿಕ ಮಹಿಳೆಯರು ದೇಣಿಗೆ ನೀಡಿದ್ದಾರೆ. ತಾವು ದುಡಿದ ಸ್ವಂತ ಹಣವನ್ನು ದೇಣಿಗೆ ರೂಪಾದಲ್ಲಿ ಬ್ರಿಜೇಶ್ ಚೌಟಾ ಅವರಿಗೆ ಮಹಿಳೆಯರು ಸಹಾಯಹಸ್ತದ ರೂಪದಲ್ಲಿ ನೀಡಿದ್ದಾರೆ. ಮೀನಿನ ವ್ಯಾಪಾರ, ಹೂವಿನ ವ್ಯಾಪಾರ ಹಾಗು ಇತರೆ ಸಣ್ಣ ಪುಟ್ಟ ವ್ಯವಹಾರ ಮಾಡುವ ಮಹಿಳೆಯರು ಆರತಿ ಬೆಳಗಿ ಹಣೆಗೆ ತಿಲಕ ಹಚ್ಚಿ ದೃಷ್ಟಿ ತೆಗೆದು ಆಶೀರ್ವಾದಿಸಿ ಬಳಿಕ ಚುನಾವಣಾ ಠೇವಣಿಗೆ

ದ.ಕ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರಿಗೆ ಕಾರ್ಮಿಕ ವರ್ಗದ ಮಹಿಳೆಯರಿಂದ ದೇಣಿಗೆ Read More »