ಕರಾವಳಿ

ಫೆ.15: ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿಯವರ ಕೃತಿ ‘ಕರಾವಳಿಯ ರಕ್ತಕಣ್ಣೀರು’ ಬಿಡುಗಡೆ

ಸಮಗ್ರ ನ್ಯೂಸ್: ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿ ಅವರು ಬರೆದಿರುವ, ಕರಾವಳಿ ಕರ್ನಾಟಕದ ಮತೀಯ ಸಂಘರ್ಷದ ಕರಾಳ ಮುಖವನ್ನು ಅನಾವರಣಗೊಳಿಸುವ ‘ಕರಾವಳಿಯ ರಕ್ತ-ಕಣ್ಣೀರು’ ಕೃತಿ ಫೆ.15ರ ಭಾನುವಾರದಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಗಾಂಧಿ ಭವನದಲ್ಲಿ ಬಿಡುಗಡೆಯಾಗಲಿದೆ. ‘ಅಹರ್ನಿಶಿ ಪ್ರಕಾಶನ’ ಪ್ರಕಟಿಸಿರುವ ಈ ಕೃತಿಯು 2015 ರಿಂದ 2025ರ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮತೀಯ ಸಂಘರ್ಷಗಳು ಹಾಗೂ ಪ್ರತಿಕಾರದ ದಾಳಿಗಳಿಗೆ ಬಲಿಯಾದ ಅಮಾಯಕ ಕುಟುಂಬಗಳ ಇಂದಿನ ದಾರುಣ ಸ್ಥಿತಿಗತಿಗಳನ್ನು ದಾಖಲಿಸಲಾಗಿದೆ. ದ್ವೇಷದ ರಾಜಕಾರಣವು ಸಾಮಾನ್ಯ ಕುಟುಂಬಗಳನ್ನು ಹೇಗೆ […]

ಫೆ.15: ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿಯವರ ಕೃತಿ ‘ಕರಾವಳಿಯ ರಕ್ತಕಣ್ಣೀರು’ ಬಿಡುಗಡೆ Read More »

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಟಿಪ್ಪರ್, ಪಿಕಪ್ ನಲ್ಲಿ ಸಾಗಿಸಿದ ಶಿಕ್ಷಕ ಅಮಾನತು

ಸಮಗ್ರ ನ್ಯೂಸ್: ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಟಿಪ್ಪರ್, ಪಿಕಪ್ ನಲ್ಲಿ ಸಾಗಿಸಿದ ಶಿಕ್ಷಕ ಅಮಾನತು Read More »

ನಿರುದ್ಯೋಗಿಗಳಿಗೆ ಸುವರ್ಣಾವಕಾಶ|ಫೆ.16 ರಂದು ಮಂಗಳೂರಿನ ಕೆರಿಯರ್ ಪಾಯಿಂಟ್ ನಲ್ಲಿ ನೇರ ಸಂದರ್ಶನ

ಸಮಗ್ರ ನ್ಯೂಸ್: ದುಬೈ ನಲ್ಲಿ ಹಲವು ವರ್ಷಗಳಿಂದ ಪ್ರಸಿದ್ಧಿ ಹೊಂದಿರುವ  ಹಾಗೂ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಮೆರಿಕಾ ಕಂಪೆನಿಯು ಇದೆ ಮೊದಲ ಬಾರಿಗೆ ಮಂಗಳೂರಿನಲ್ಲಿ ಉದ್ಯೋಗ ನೇರ ಸಂದರ್ಶನ ನಡೆಸಲಿದ್ದು ಇದೇ ತಿಂಗಳ ಫೆ.16 ಸೋಮವಾರದಂದು ಮಂಗಳೂರಿನಲ್ಲಿನ ಕೆರಿಯರ್ ಪಾಯಿಂಟ್ ನಲ್ಲಿ ನೇರ ಸಂದರ್ಶನ ನಡೆಯಲಿದೆ. 29 ವರ್ಷಕ್ಕಿಂತ ಕಡಿಮೆ ವಯಸ್ಸು, ECR ಸ್ವೀಕಾರಾರ್ಹ. ಪ್ರೌಢಶಾಲಾ ಶಿಕ್ಷಣ, ಮೂಲ ಇಂಗ್ಲಿಷ್ ಸಂವಹನ ಕೌಶಲ್ಯಗಳನ್ನು ಹೊಂದಿರುವವರು ಈ ಸಂದರ್ಶನದಲ್ಲಿ ಭಾಗವಹಿಸಬಹುದು. SSLC ಪಾಸ್ ಆದ ನಿರುದ್ಯೋಗಿಗಳಿಗೆ /

ನಿರುದ್ಯೋಗಿಗಳಿಗೆ ಸುವರ್ಣಾವಕಾಶ|ಫೆ.16 ರಂದು ಮಂಗಳೂರಿನ ಕೆರಿಯರ್ ಪಾಯಿಂಟ್ ನಲ್ಲಿ ನೇರ ಸಂದರ್ಶನ Read More »

ಬೆಳ್ತಂಗಡಿ: ವಿದ್ಯಾರ್ಥಿನಿ ಅಪಹರಣ ಯತ್ನ ಪೊಲೀಸ್ ಇಲಾಖೆ ವೈಫಲ್ಯ – ಶಾಸಕ ಪೂಂಜಾ

ಸಮಗ್ರ ನ್ಯೂಸ್: ಬೆಳ್ತಂಗಡಿ ಕಾಲೇಜು ವಿಧ್ಯಾರ್ಥಿನಿ ಅಪಹರಣದಂತಹ ಕೃತ್ಯ ಹಾಡುಹಗಲೇ ನಡೆದಿರೋದು ಪೋಲೀಸ್ ವೈಫಲ್ಯಕ್ಕೆ ಉದಾಹರಣೆ, ರಾಜ್ಯದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲ, ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ವಿಧ್ಯಾರ್ಥಿನಿ ಅಪಹರಣಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧ್ಯಾರ್ಥಿನಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಘಟನೆ ಇದು ಕೇವಲ ಒಂದು

ಬೆಳ್ತಂಗಡಿ: ವಿದ್ಯಾರ್ಥಿನಿ ಅಪಹರಣ ಯತ್ನ ಪೊಲೀಸ್ ಇಲಾಖೆ ವೈಫಲ್ಯ – ಶಾಸಕ ಪೂಂಜಾ Read More »

ಕಾಸರಗೋಡು: ‘ಕುಣಿಯ’ದಲ್ಲಿ ಸಮಸ್ತ ಶತಮಾನೋತ್ಸವ ಸಂಭ್ರಮ

ಸಮಗ್ರ ನ್ಯೂಸ್: ನೂರು ವಸಂತಗಳನ್ನು ಪೂರೈಸಿರುವ ಸಮಸ್ತ ಕೇರಳ ಜಂಇಯತ್ತುಲ್ ಉಲಮಾ ಸಂಘಟನೆಯು ತನ್ನ ಶತಮಾನೋತ್ಸವ ಸಂಭ್ರಮಕ್ಕೆ ಇಲ್ಲಿನ ಕುಣಿಯ ಪಟ್ಟಣ ಸಜ್ಜಾಗಿದ್ದು, ಸಕಲ ಸಿದ್ಧತೆ ನಡೆದಿದೆ. ಬುಧವಾರ (ಫೆ.4)ರಂದು ಕಾರ್ಯಕ್ರಮಕ್ಕೆ ಚಾಲನೆ ದೊರತಿದ್ದು, ಅಧ್ಯಯನ ಶಿಬಿರ, ಗ್ಲೋಬಲ್ ಎಕ್ಸ್ಪೊಬಳಿಕ ಫೆ.8ರಂದು ಅಂತರರಾಷ್ಟ್ರೀಯ ಮಹಾಸಮ್ಮೇಳನ ನಡೆಯಲಿದೆ. ಬೃಹತ್‌ ಸ್ವಾಗತ ಕಮಾನುಗಳೊಂದಿಗೆ ವೇದಿಕೆ ಸಿಂಗಾರಗೊಂಡಿದ್ದು, ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳದ ಭಾಗದಲ್ಲಿ ಕಾರ್ಯಕ್ರಮದ ಫ್ಲೆಕ್ಸ್‌, ಧ್ವಜಗಳು ರಾರಾಜಿಸುತ್ತಿವೆ. ಇಸ್ಲಾಮಿನ ಮೂಲ ಆಶಯಕ್ಕೆ ಧಕ್ಕೆಯಾಗದಂತೆ ಸಮುದಾಯದೊಳಗೆ ನಿರಂತರವಾಗಿ ಜಾಗೃತಿ ಮೂಡಿಸುತ್ತಿರುವ

ಕಾಸರಗೋಡು: ‘ಕುಣಿಯ’ದಲ್ಲಿ ಸಮಸ್ತ ಶತಮಾನೋತ್ಸವ ಸಂಭ್ರಮ Read More »

ಉಡುಪಿ: ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ನಿಧನ

ಸಮಗ್ರ ನ್ಯೂಸ್: ಬೈಂದೂರಿನ ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ (90) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದುನಿಧನರಾಗಿದ್ದಾರೆ. 1935ರ ಡಿ.24ರದು ಬಸೂರಿನಲ್ಲಿ ಜನಿಸಿದ ಇವರು 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬನ್ನೂರು ಸೇವಾ ಸಹಕಾರಿ ಸಂಘದ

ಉಡುಪಿ: ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ನಿಧನ Read More »

ದಕ್ಷಿಣ ಕನ್ನಡದಲ್ಲಿ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ಕೋರ್ಟ್ ಮೆಟ್ಟಿಲೇರಲು ನಿರ್ಧಾರ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಕ ಕೋಳಿ ಅಂಕಕ್ಕಾಗಿ ಹೋರಾಟ ಪ್ರಾರಂಭವಾಗಿದ್ದು, ಕೋಳಿ ಅಂಕ ಬೇಕು ಎಂದು ಇದೀಗ ನ್ಯಾಯಾಲಯದ ಮೆಟ್ಟಿಲೇರಲು ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ಸಮಿತಿ ನಿರ್ಧರಿಸಿದೆ.ಇದರೊಂದಿಗೆ ಕಂಬಳ ರೀತಿಯಲ್ಲೇ ಮತ್ತೊಂದು ಹೋರಾಟಕ್ಕೆ ಕರಾವಳಿ ಮುಂದಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕ ನಡೆಸಲು ಪೋಲೀಸರ ನಿರ್ಬಧಿಸಿದ ಹಿನ್ನೆಲೆ.ಇದೀಗ ಕೋಳಿ ಅಂಕಕ್ಕಾಗಿ ಹೋರಾಟ ಪ್ರಾರಂಭವಾಗಿದೆ. ಈ ಹಿನ್ನಲೆ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ಸಮಿತಿಯ ಸಭೆ ಫೆಬ್ರವರಿ 1 ರಂದು ಪುತ್ತೂರಿನಲ್ಲಿ ಸಭೆ ಸೇರಿದ್ದು, ಈ ವೇಳೆ

ದಕ್ಷಿಣ ಕನ್ನಡದಲ್ಲಿ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ಕೋರ್ಟ್ ಮೆಟ್ಟಿಲೇರಲು ನಿರ್ಧಾರ Read More »

ಪುತ್ತೂರು: ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ನಡೆಯಲಿದೆ ಬೃಹತ್ ಹೋರಾಟ| ಫೆ.1ರಂದು ಸಮಾಲೋಚನಾ ಸಭೆ

ಸಮಗ್ರ ನ್ಯೂಸ್: ಜೂಜಿನ ನೆಪವೊಡ್ಡಿ ದಕ್ಷಿಣಕನ್ನಡ ಜಿಲ್ಲೆಯ ಪೊಲೀಸರು ಈ ಬಾರಿ ಯಾವುದೇ ಸಾಂಪ್ರದಾಯಿಕ ಕೋಳಿ ಅಂಕಗಳನ್ನು ನಡೆಸದಂತೆ ತಡೆದಿದ್ದು, ಇದೀಗ ಸಾಂಪ್ರದಾಯಿಕ ಕೋಳಿ ಅಂಕ ಉಳಿಸುವ ನಿಟ್ಟಿನಲ್ಲಿ ಹೋರಾಟಗಾರರು ಮುಂದಾಗಿದ್ದು, ಫೆಬ್ರವರಿ 1 ರಂದು ಪುತ್ತೂರಿನಲ್ಲಿ ಬೃಹತ್ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ. ದಕ್ಷಿಣಕನ್ನಡ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ಕೋಳಿ ಅಂಕಕ್ಕೆ ತಡೆ ಒಡ್ಡುತ್ತಿರುವ ಸರಕಾರ ಮತ್ತು ಪೊಲೀಸ ಇಲಾಖೆ ವಿರುದ್ದ ಇದೀಗ ಹೋರಾಟಕ್ಕೆ ಮುಂದಾಗಿದೆ. ಈ ಹಿನ್ನಲೆ ಫೆಬ್ರವರಿ 1ರಂದು ಪುತ್ತೂರಿನಲ್ಲಿ ‘ಕೋಳಿ ಅಂಕ’ಕ್ಕಾಗಿ

ಪುತ್ತೂರು: ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ನಡೆಯಲಿದೆ ಬೃಹತ್ ಹೋರಾಟ| ಫೆ.1ರಂದು ಸಮಾಲೋಚನಾ ಸಭೆ Read More »

ಮಂಗಳೂರು: ಕಲಾವಿದ ‘ಸ್ವಾತಿ ಸತೀಶ್’ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಪರಿಸರದ ಹೆಸರಾಂತ ಚಲನಚಿತ್ರ ಕಲಾವಿದ, ಸಂಗೀತ ಸಂಯೋಜಕ ಹಾಗೂ ಸೃಜನಶೀಲ ಕಲಾಕಾರರಾದ ಸ್ವಾತಿ ಸತೀಶ್ (49) ಅವರು ಶನಿವಾರ ಆತ್ಮಹತ್ಯೆಗೆ ಶರಣಾಗುವ ಮೂಲಕ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೂರೂವರೆ ದಶಕಗಳಿಂದ ಕಲಾಕ್ಷೇತ್ರದಲ್ಲಿ ಅತ್ಯಂತ ಸಕ್ರಿಯವಾಗಿದ್ದ ಇವರು, ಮುಡಿಪುವಿನ ಮಿತ್ತಬಾರೆ ಬಳಿ ವೈಯಕ್ತಿಕ ಕಾರಣಗಳಿಂದ ಮನನೊಂದು ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಶನಿವಾರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಮುಡಿಪು ಪೇಟೆಯಲ್ಲಿ ಕಾಣಿಸಿಕೊಂಡಿದ್ದ ಅವರು, ಆ ನಂತರ ಈ

ಮಂಗಳೂರು: ಕಲಾವಿದ ‘ಸ್ವಾತಿ ಸತೀಶ್’ ಆತ್ಮಹತ್ಯೆಗೆ ಶರಣು Read More »

ಇನ್ಸ್ಟಾಗ್ರಾಂ ವೈರಲ್ ಸ್ಟಾರ್ ಆಶಾ ಪಂಡಿತ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಥಟ್ಟನೆ ಪ್ರಸಿಯ ಪಡೆದಿರುವ ನಾಗುರಿ ಆಶಾ(Ashapandith) ರವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ತಿಳಿದಿಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಹಟ್ಟತ್ತನೆ ಪ್ರಸಿದ್ದಿ ಪಡೆದಿರುವ ಅವರು ತನ್ನ ಬೈಗುಳದಿಂದಲೇ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದರು.ಅವರಿಗೆ ರಾತ್ರಿ ವೇಳೆ ಎದೆ ನೋವು ಉಂಟಾಗಿ ತ ವಾಂತಿ ಮಾಡಿದ್ದು ಇಂದು(ಜ.23) ಬೆಳಗಿನ ಜಾವ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಇನ್ಸ್ಟಾಗ್ರಾಂ ವೈರಲ್ ಸ್ಟಾರ್ ಆಶಾ ಪಂಡಿತ್ ಹೃದಯಾಘಾತದಿಂದ ಸಾವು Read More »