ರಾಜಕೀಯ ಪಕ್ಷಗಳಿಗೆ ಠಕ್ಕರ್ ನೀಡಲು ನಿರ್ಧರಿಸಿದ ಸೌಜನ್ಯಾ ಹೋರಾಟ ಸಮಿತಿ| ನೋಟಾ ಅಭಿಯಾನಕ್ಕೆ ಕರೆ ನೀಡಿದ ಮಟ್ಟಣ್ಣನವರ್
ಸಮಗ್ರ ನ್ಯೂಸ್: ರಾಜಕೀಯ ಪಕ್ಷಗಳಿಗೆ ಎಚ್ಚರಿಕೆಯ ಗಂಟೆ ನೀಡುವ ಜೊತೆಗೆ ದೇಶದ ಗಮನ ಸೆಳೆಯುವ ಉದ್ದೇಶದಿಂದ ಲೋಕಸಭಾ ಚುನಾವಣೆಯಲ್ಲಿ ‘ನೋಟಾ’ಕ್ಕೆ ಮತ ಹಾಕಲು ಸೌಜನ್ಯಾ ಪರ ಹೋರಾಟಗಾರರು ಜಾಗೃತಿ ಅಭಿಯಾನ ಪ್ರಾರಂಭಿಸಿದ್ದಾರೆ ಎಂದು ಸೌಜನ್ಯಾ ಹೋರಾಟ ಸಮಿತಿ ಮುಖಂಡ ಗಿರೀಶ್ ಮಟ್ಟಣ್ಣನವರ್ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ‘ಬೆಳ್ತಂಗಡಿ ತಾಲ್ಲೂಕಿನಲ್ಲಿ ನಡೆದ ಸೌಜನ್ಯಾ ಎಂಬ ಯುವತಿಯ ಹತ್ಯೆ ಪ್ರಕರಣದ ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ 11 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ, ಪ್ರಮುಖ ರಾಜಕೀಯ […]










