ಕರಾವಳಿ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ ಸತ್ಯಜಿತ್ ಸುರತ್ಕಲ್| ಪದ್ಮರಾಜ್, ಕೋಟಾ, ಗೀತಾಗೆ ಬೆಂಬಲ ನೀಡಲು ಮನವಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ನಾರಾಯಣ‌ಗುರು ವಿಚಾರ ವೇದಿಕೆಯಿಂದ ಬಿಲ್ಲವ ಸಮುದಾಯದ ಅಭ್ಯರ್ಥಿಗಳಿಗೆ ಬೆಂಬಲ ನೀಡುವುದಾಗಿ ಸತ್ಯಜಿತ್ ಸುರತ್ಕಲ್ ತಿಳಿಸಿದ್ದಾರೆ. ಅವರು ಸೋಮವಾರದಂದು ಮಂಗಳೂರಿನಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಾರಾಯಣ‌ಗುರು ವಿಚಾರ ವೇದಿಕೆ ನಾರಾಯಣ ‌ಗುರು ಸಮುದಾಯದ ಅಭ್ಯರ್ಥಿಗಳಾದ ದ.ಕ ಕ್ಷೇತ್ರದಲ್ಲಿ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ‌ ಶ್ರೀನಿವಾಸ ಪೂಜಾರಿ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಅವರನ್ನು ಬೆಂಬಲಿಸಲಿದೆ,’ ಎಂದು ತಿಳಿಸಿದ್ದಾರೆ. ‘ವೇದಿಕೆ ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ಸಮುದಾಯವೂ ಪಕ್ಷದ […]

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ ಸತ್ಯಜಿತ್ ಸುರತ್ಕಲ್| ಪದ್ಮರಾಜ್, ಕೋಟಾ, ಗೀತಾಗೆ ಬೆಂಬಲ ನೀಡಲು ಮನವಿ Read More »

ಉಡುಪಿ: ಸರಳೇಬೆಟ್ಟುವಿನಲ್ಲಿ ಮನೆಯೊಳಗೆ ನುಗ್ಗಿ ಕೋಳಿಗಳನ್ನು ಬಲಿ ಪಡೆದ ಚಿರತೆ

ಸಮಗ್ರ ನ್ಯೂಸ್‌ : ಮಣಿಪಾಲ ಸಮೀಪದ ಸರಳೇಬೆಟ್ಟು ಪರಿಸರದಲ್ಲಿ ಮತ್ತೆ ಚಿರತೆ ಹಾವಳಿ ಕಂಡುಬಂದಿದ್ದು, ಮನೆಯೊಂದರ ಕೋಳಿ ಗೂಡಿಗೆ ಲಗ್ಗೆ ಇಟ್ಟ ಚಿರತೆ, ಕೋಳಿಗಳನ್ನು ಬಲಿ ಪಡೆದುಕೊಂಡಿದೆ. ಸರಳೇಬೆಟ್ಟುವಿನ ರಾಮಮಂದಿರದ ಸಮೀಪ ಸುನಿತಾ ಡಿಸೋಜ ಎಂಬವರ ಮನೆಗೆ ರಾತ್ರಿ ಹೊತ್ತಿನಲ್ಲಿ ದಾಳಿ ನಡೆಸಿದ ಚಿರತೆ, ಕೋಳಿ ಗೂಡಿನಲ್ಲಿದ್ದ ಎರಡು ಕೋಳಿಗಳನ್ನು ತಿಂದಿದೆ. ಒಂದು ಕೋಳಿಯನ್ನು ಗೂಡಿನಲ್ಲಿಯೇ ಬಿಟ್ಟು ಓಡಿ ಹೋಗಿದೆ. ಈ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಕಂಡು ಬಂದಿದೆ. ಮಣಿಪಾಲದ ಸುತ್ತಮುತ್ತ ಪ್ರದೇಶಗಳಾದ ಸರಳೇಬೆಟ್ಟು, ಕೋಡಿ, ಎಂಡ್

ಉಡುಪಿ: ಸರಳೇಬೆಟ್ಟುವಿನಲ್ಲಿ ಮನೆಯೊಳಗೆ ನುಗ್ಗಿ ಕೋಳಿಗಳನ್ನು ಬಲಿ ಪಡೆದ ಚಿರತೆ Read More »

ಕಾರವಾರ :ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ: ಶಿಕ್ಷಕಿ ಸಾವು

ಸಮಗ್ರ ನ್ಯೂಸ್‌ : ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ ಹೊಡೆದು ಶಿಕ್ಷಕಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಿರ್ಜಾನಕರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ವಿಜಯಾ ಮಾಸ್ತೆಪ್ಪ ಭೋವಿ (40) ಮೃತ ಪಟ್ಟ ದುರ್ದೈವಿ. ವಿಜಯಾ ಅವರು ತಾಲ್ಲೂಕಿನ ಬಂಡಲದ ಬಡಗಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದರು. ಪತಿ ಜತೆಗೆ ವಿಜಯಾ ಅವರು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ಗೆ ನಗರಸಭೆಯ ತ್ಯಾಜ್ಯ ತುಂಬುವ ಟ್ರಕ್ ಬಡಿದಿದೆ. ಈ ವೇಳೆ ಕೆಳಗೆ ಬಿದ್ದ ಶಿಕ್ಷಕಿ ವಿಜಯಾ

ಕಾರವಾರ :ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ: ಶಿಕ್ಷಕಿ ಸಾವು Read More »

ಬಂಟ್ವಾಳ: ರಿಕ್ಷಾ-ಸ್ಕೂಟರ್ ಢಿಕ್ಕಿ

ಸಮಗ್ರ ನ್ಯೂಸ್‌ : ರಿಕ್ಷಾ ಢಿಕ್ಕಿಯಾಗಿ ಸ್ಕೂಟರ್ ಸವಾರನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳದ ಪರಂಗಿಪೇಟೆ ಎಂಬಲ್ಲಿ ನಡೆದಿದೆ. ಮೂಡಬಿದಿರೆ ನಿವಾಸಿ ಕೌಶಿಕ್ ಗಾಯಗೊಂಡ ವ್ಯಕ್ತಿ. ಪರಂಗಿಪೇಟೆ ಎಂಬಲ್ಲಿ ಏಕಮುಖ ರಸ್ತೆಯಲ್ಲಿ ಬಂದ ರಿಕ್ಷಾ ಚಾಲಕನೋರ್ವ ಸ್ಕೂಟರ್ ಗೆ ಎದುರಿನಿಂದ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಂಟ್ವಾಳ: ರಿಕ್ಷಾ-ಸ್ಕೂಟರ್ ಢಿಕ್ಕಿ Read More »

ಕಡಬ: ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು| ಶಾಸಕದ್ವಯರ ನೇತ್ರತ್ವದಲ್ಲಿ ರಾತ್ರೋರಾತ್ರಿ ಪ್ರತಿಭಟನೆ| ಸ್ಥಳಕ್ಕೆ‌ ಎಸ್ಪಿ ಭೇಟಿ; ಆರೋಪಿಗಳ ಬಂಧಿಸುವ ಭರವಸೆ

ಸಮಗ್ರ ನ್ಯೂಸ್: ಕಡಬ ಸಮೀಪದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋ ಸಾಗಾಟದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾ.30 ರ ಸಂಜೆ ನಡೆದಿತ್ತು. ನೆಕ್ಕಿತ್ತಡ್ಕದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಮೃತ ದುರ್ದೈವಿ.‌ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಡಿಕ್ಕಿಯಾಗಿದ್ದು, ಕಾರನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದ. ಆರೋಪಿಗಳು ಕಾರನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿನ ದಿ| ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ

ಕಡಬ: ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು| ಶಾಸಕದ್ವಯರ ನೇತ್ರತ್ವದಲ್ಲಿ ರಾತ್ರೋರಾತ್ರಿ ಪ್ರತಿಭಟನೆ| ಸ್ಥಳಕ್ಕೆ‌ ಎಸ್ಪಿ ಭೇಟಿ; ಆರೋಪಿಗಳ ಬಂಧಿಸುವ ಭರವಸೆ Read More »

ಕಡಬ: ಆಲಂಕಾರು‌ ಬಳಿ ಸಿಲಿಂಡರ್ ವಾಹನ – ಟೆಂಪೋ ನಡುವೆ ಅಪಘಾತ| ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ಆಕ್ಷಿಜನ್ ಸಿಲಿಂಡರ್ ಸಾಗಾಟದ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಫಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾದ ಘಟನೆ ಮಾ.30 ರ ರಾತ್ರಿ ನಡೆದಿದೆ. ಆಲಂಕಾರಿನಿಂದ ಪುತ್ತೂರಿನತ್ತ ಸಾಗುತ್ತಿದ್ದ ಸಿಎನ್ ಜಿ ಸಿಲಿಂಡರ್ ಸಾಗಾಟದ ಲಾರಿ ಮತ್ತು ಕಡಬದತ್ತ ಬರುತ್ತಿದ್ದ ಟೆಂಪೋ ನಡುವೆ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಟೆಂಪೋ ವಾಹನದಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಕಡಬ: ಆಲಂಕಾರು‌ ಬಳಿ ಸಿಲಿಂಡರ್ ವಾಹನ – ಟೆಂಪೋ ನಡುವೆ ಅಪಘಾತ| ಇಬ್ಬರು ಗಂಭೀರ Read More »

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಸುಳ್ಯದ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರಿಗೆ ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಯನ್ನು ಮಾ. 29ರಂದು ಬೆಂಗಳೂರಿನ ಬಾಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆದ ವಿಶ್ವ ಕನ್ನಡ ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಮ್ಮೇಳನದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷೆ ಕಮಲ ರಾಜೇಶ್, ಸಮಾಜ ಸೇವಕಿ, ಸೂರಜ್ ಫೌಂಡೇಷನ್ ಸಂಸ್ಥಾಪಕಿ ಸುಜಾತ ಎಸ್ ಮುನಿರಾಜು,

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಪ್ರದಾನ Read More »

ಕಡಬ ಬ್ಲಾಕ್ ಕಾಂಗ್ರೆಸ್ಸಿನಲ್ಲಿ ಲೋಕಸಭಾ ಚುನಾವಣಾ ಪೂರ್ವಬಾವಿ ಸಭೆ

ಸಮಗ್ರ ನ್ಯೂಸ್: ಇದೆ ಬರುವ ಏಪ್ರಿಲ್ 26ರ ನಡೆಯುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯಾಗಿ ಕಡಬ ಬ್ಲಾಕ್ ಕಾಂಗ್ರೆಸ್ಸಿನ ಪೂರ್ವಬಾವಿ ಸಭೆಯು ಮಾ. 28ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಡಿಸಿಸಿ ಪದಾಧಿಕಾರಿಗಳು, ಕೆಪಿಸಿಸಿ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು, ಸುಳ್ಯ ವಿಧಾನಸಭಾ ಕ್ಷೇತ್ರದ ವಿಕ್ಷಕ ಜಯಪ್ರಕಾಶ್ ರೈ, ಕಡಬ ಬ್ಲಾಕ್ ಕಾಂಗ್ರೇಸ್ ವೀಕ್ಷಕ ಕಿರಣ್

ಕಡಬ ಬ್ಲಾಕ್ ಕಾಂಗ್ರೆಸ್ಸಿನಲ್ಲಿ ಲೋಕಸಭಾ ಚುನಾವಣಾ ಪೂರ್ವಬಾವಿ ಸಭೆ Read More »

ನೇತ್ರಾವತಿ ನದಿಗೆ ಹಾರಿ ತಾಯಿ ಮಗು ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಒಂದು ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಡ್ಯಾಂ ಬಳಿಯ ನಡೆದಿದೆ. ಅಡ್ಯಾರ್ ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತ ದುರ್ದೈವಿಗಳು. ಇಬ್ಬರ ಮೃತದೇಹಗಳು ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಗುರುವಾರವಷ್ಟೇ ಚೈತ್ರ ಮಗುವಿನ ಹುಟ್ಟುಹಬ್ಬವನ್ನು ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದರು. ನಂತರ ನಿನ್ನೆ ಶುಕ್ರವಾರ ಮಧ್ಯಾಹ್ನದ ನಂತರ ತಾಯಿ-ಮಗು ನಾಪತ್ತೆಯಾಗಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಸಂಬಂಧಿಕರು

ನೇತ್ರಾವತಿ ನದಿಗೆ ಹಾರಿ ತಾಯಿ ಮಗು ಆತ್ಮಹತ್ಯೆ Read More »

ಮಲ್ಪೆ: ರಿಕ್ಷಾ ಚಾಲಕ ನಾಪತ್ತೆ

ಸಮಗ್ರ ನ್ಯೂಸ್:‌ ಬಾಡಿಗೆ ಇದೆ ಎಂದು ಮನೆಯಿಂದ ಹೋದ ಆಟೋರಿಕ್ಷಾ ಚಾಲಕ ಮೂಡುತೋನ್ಸೆ ಗ್ರಾಮದ ಮಹಮ್ಮದ್‌ ಫೈಜಲ್‌ (36) ಮಾ. 27ರ ರಾತ್ರಿಯಿಂದ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ತಡರಾತ್ರಿಯಾದರೂ ಮನೆಗೆ ಬಾರದ್ದನ್ನು ಕಂಡು ಪತ್ನಿ ಫೈಜಲ್‌ ಅವರ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್‌ಆಫ್‌ ಬರುತ್ತಿತ್ತು. ಅವರ ಆಟೋರಿಕ್ಷಾ ಮನೆ ಬಳಿಯ ಮೈದಾನದ ಬಳಿ ನಿಲ್ಲಿಸಿರುವುದು ಪತ್ತೆಯಾಗಿದೆ. ಫೈಜಲ್‌ ಅವರು ಆಟೋರಿಕ್ಷಾ ಚಾಲಕ ವೃತ್ತಿಯ ಜತೆಗೆ ಟೈಲ್ಸ್‌ ಜೋಡಿಸುವ ಕೆಲಸವನ್ನೂ ಸಹ ಮಾಡಿಕೊಂಡಿದ್ದರು ಎಂಬ

ಮಲ್ಪೆ: ರಿಕ್ಷಾ ಚಾಲಕ ನಾಪತ್ತೆ Read More »