ಕರಾವಳಿ

ಬಂಟ್ವಾಳ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಅತಿ ಹೆಚ್ಚು ಕುಡಿತದ ಚಟ, ಮಾನಸಿಕವಾಗಿ ಅಸ್ವಸ್ಥತೆಯನ್ನು ಹೊಂದಿದ್ದ ವ್ಯಕ್ತಿಯೊಬ್ಬ ವಿಷ ಪದಾರ್ಥ ಸೇವಿಸಿ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರವೀಣ್ ನಜರತ್ (45) ಮೃತಪಟ್ಟ ವ್ಯಕ್ತಿ. ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ವಿಪರೀತ ಕುಡಿತದ ಚಟ ಹೊಂದಿದ್ದನು. ಕಳೆದ 15 ದಿನಗಳ ಹಿಂದೆ ಮಾನಸಿಕವಾಗಿ ನೊಂದಿದ್ದ ಈತ ಮನೆಯ ಮಹಡಿಯಿಂದ ಕೆಳಗೆ ಹಾರಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದನು. ಮಾ.29 ರಂದು ಕೆಲಸಕ್ಕೆ […]

ಬಂಟ್ವಾಳ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ಬ್ರಹ್ಮಾವರ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಸಮಗ್ರ ನ್ಯೂಸ್‌ : ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಇಂದು ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ನಡೆದಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆಯಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮವಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ. ವಾತಾವರಣದಲ್ಲಿ ಶಾಖದ ಅಲೆಗಳ ಹೆಚ್ಚಳದಿಂದಾಗಿ ಅನೇಕ ವಾಹನಗಳು ಬಿಸಿಯಾಗುತ್ತಿವೆ ಮತ್ತು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಇದು ಕೂಡ ಘಟನೆಗೆ ಕಾರಣವಾಗಿರಬಹುದು ಎಂಬ ಮಾಹಿತಿ ತಿಳಿದು

ಬ್ರಹ್ಮಾವರ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್ Read More »

ಉಡುಪಿ: 10,680 ರೂ. ಮೌಲ್ಯದ 24.030 ಲೀ ಮದ್ಯ ವಶ

ಸಮಗ್ರ ನ್ಯೂಸ್: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ. 31 ರಂದು ಅಬಕಾರಿ ಇಲಾಖೆ ವತಿಯಿಂದ 10,680 ರೂ. ಮೌಲ್ಯದ 24.030 ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಉಡುಪಿ: 10,680 ರೂ. ಮೌಲ್ಯದ 24.030 ಲೀ ಮದ್ಯ ವಶ Read More »

ಕಾರ್ಕಳ : ಆಧುನಿಕ ವಸ್ತುಗಳಿಂದ ದುರ್ಬಲ| ವಿದ್ವಾನ್ ಕೃಷ್ಣರಾಜ ಕುತ್ಪಾಡಿ

ಸಮಗ್ರ ನ್ಯೂಸ್‌ : ಆಧುನಿಕ ವಸ್ತುಗಳಿಂದ ನಾವು ದುರ್ಬಲರಾಗುತ್ತಿದ್ದೇವೆ ಎಂದು ವಿದ್ವಾನ್ ಕೃಷ್ಣರಾಜ ಕುತ್ಪಾಡಿ ತಿಳಿಸಿದರು. ಅವರು ತಾಲ್ಲೂಕು ಮುನಿಯಾಲಿನ ಗೋಧಾಮದಲ್ಲಿ ಗೋಕುಲಾನಂದ ವಿಹಾರ ಪ್ರಕೃತಿ ಮಾತೆಯ ಮಡಿಲಲ್ಲಿ ಒಂದು ಕ್ಷಣ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಪರಿಸರ ಎಲ್ಲವನ್ನೂ ಒಳಗೊಂಡಿರುವಂತಹದು. ಅಂದರೆ ಮರ, ಗಿಡ, ಹರಿಯುವ ನೀರು ಇವುಗಳ ಜೊತೆಗೆ ಚಿಕ್ಕ ಜೀವಿಗಳೂ ಪರಿಸರದ ಅಂಶಗಳಾಗಿವೆ. ಪ್ರಕೃತಿ ನಮ್ಮ ಭೋಗಕ್ಕಲ್ಲ, ನಮ್ಮ ಬದುಕಿಗೆ. ಗುಬ್ಬಚ್ಚಿ, ಚಿಟ್ಟೆ ಇವುಗಳ ಪರಾಗ ಸ್ಪರ್ಶ ದಿಂದಲೇ ಹೂವು ಕಾಯಿ ಹಣ್ಣು ನಮಗೆ

ಕಾರ್ಕಳ : ಆಧುನಿಕ ವಸ್ತುಗಳಿಂದ ದುರ್ಬಲ| ವಿದ್ವಾನ್ ಕೃಷ್ಣರಾಜ ಕುತ್ಪಾಡಿ Read More »

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ ಸತ್ಯಜಿತ್ ಸುರತ್ಕಲ್| ಪದ್ಮರಾಜ್, ಕೋಟಾ, ಗೀತಾಗೆ ಬೆಂಬಲ ನೀಡಲು ಮನವಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ನಾರಾಯಣ‌ಗುರು ವಿಚಾರ ವೇದಿಕೆಯಿಂದ ಬಿಲ್ಲವ ಸಮುದಾಯದ ಅಭ್ಯರ್ಥಿಗಳಿಗೆ ಬೆಂಬಲ ನೀಡುವುದಾಗಿ ಸತ್ಯಜಿತ್ ಸುರತ್ಕಲ್ ತಿಳಿಸಿದ್ದಾರೆ. ಅವರು ಸೋಮವಾರದಂದು ಮಂಗಳೂರಿನಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಾರಾಯಣ‌ಗುರು ವಿಚಾರ ವೇದಿಕೆ ನಾರಾಯಣ ‌ಗುರು ಸಮುದಾಯದ ಅಭ್ಯರ್ಥಿಗಳಾದ ದ.ಕ ಕ್ಷೇತ್ರದಲ್ಲಿ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ‌ ಶ್ರೀನಿವಾಸ ಪೂಜಾರಿ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಅವರನ್ನು ಬೆಂಬಲಿಸಲಿದೆ,’ ಎಂದು ತಿಳಿಸಿದ್ದಾರೆ. ‘ವೇದಿಕೆ ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ಸಮುದಾಯವೂ ಪಕ್ಷದ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ ಸತ್ಯಜಿತ್ ಸುರತ್ಕಲ್| ಪದ್ಮರಾಜ್, ಕೋಟಾ, ಗೀತಾಗೆ ಬೆಂಬಲ ನೀಡಲು ಮನವಿ Read More »

ಉಡುಪಿ: ಸರಳೇಬೆಟ್ಟುವಿನಲ್ಲಿ ಮನೆಯೊಳಗೆ ನುಗ್ಗಿ ಕೋಳಿಗಳನ್ನು ಬಲಿ ಪಡೆದ ಚಿರತೆ

ಸಮಗ್ರ ನ್ಯೂಸ್‌ : ಮಣಿಪಾಲ ಸಮೀಪದ ಸರಳೇಬೆಟ್ಟು ಪರಿಸರದಲ್ಲಿ ಮತ್ತೆ ಚಿರತೆ ಹಾವಳಿ ಕಂಡುಬಂದಿದ್ದು, ಮನೆಯೊಂದರ ಕೋಳಿ ಗೂಡಿಗೆ ಲಗ್ಗೆ ಇಟ್ಟ ಚಿರತೆ, ಕೋಳಿಗಳನ್ನು ಬಲಿ ಪಡೆದುಕೊಂಡಿದೆ. ಸರಳೇಬೆಟ್ಟುವಿನ ರಾಮಮಂದಿರದ ಸಮೀಪ ಸುನಿತಾ ಡಿಸೋಜ ಎಂಬವರ ಮನೆಗೆ ರಾತ್ರಿ ಹೊತ್ತಿನಲ್ಲಿ ದಾಳಿ ನಡೆಸಿದ ಚಿರತೆ, ಕೋಳಿ ಗೂಡಿನಲ್ಲಿದ್ದ ಎರಡು ಕೋಳಿಗಳನ್ನು ತಿಂದಿದೆ. ಒಂದು ಕೋಳಿಯನ್ನು ಗೂಡಿನಲ್ಲಿಯೇ ಬಿಟ್ಟು ಓಡಿ ಹೋಗಿದೆ. ಈ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಕಂಡು ಬಂದಿದೆ. ಮಣಿಪಾಲದ ಸುತ್ತಮುತ್ತ ಪ್ರದೇಶಗಳಾದ ಸರಳೇಬೆಟ್ಟು, ಕೋಡಿ, ಎಂಡ್

ಉಡುಪಿ: ಸರಳೇಬೆಟ್ಟುವಿನಲ್ಲಿ ಮನೆಯೊಳಗೆ ನುಗ್ಗಿ ಕೋಳಿಗಳನ್ನು ಬಲಿ ಪಡೆದ ಚಿರತೆ Read More »

ಕಾರವಾರ :ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ: ಶಿಕ್ಷಕಿ ಸಾವು

ಸಮಗ್ರ ನ್ಯೂಸ್‌ : ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ ಹೊಡೆದು ಶಿಕ್ಷಕಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಿರ್ಜಾನಕರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ವಿಜಯಾ ಮಾಸ್ತೆಪ್ಪ ಭೋವಿ (40) ಮೃತ ಪಟ್ಟ ದುರ್ದೈವಿ. ವಿಜಯಾ ಅವರು ತಾಲ್ಲೂಕಿನ ಬಂಡಲದ ಬಡಗಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದರು. ಪತಿ ಜತೆಗೆ ವಿಜಯಾ ಅವರು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ಗೆ ನಗರಸಭೆಯ ತ್ಯಾಜ್ಯ ತುಂಬುವ ಟ್ರಕ್ ಬಡಿದಿದೆ. ಈ ವೇಳೆ ಕೆಳಗೆ ಬಿದ್ದ ಶಿಕ್ಷಕಿ ವಿಜಯಾ

ಕಾರವಾರ :ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ: ಶಿಕ್ಷಕಿ ಸಾವು Read More »

ಬಂಟ್ವಾಳ: ರಿಕ್ಷಾ-ಸ್ಕೂಟರ್ ಢಿಕ್ಕಿ

ಸಮಗ್ರ ನ್ಯೂಸ್‌ : ರಿಕ್ಷಾ ಢಿಕ್ಕಿಯಾಗಿ ಸ್ಕೂಟರ್ ಸವಾರನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳದ ಪರಂಗಿಪೇಟೆ ಎಂಬಲ್ಲಿ ನಡೆದಿದೆ. ಮೂಡಬಿದಿರೆ ನಿವಾಸಿ ಕೌಶಿಕ್ ಗಾಯಗೊಂಡ ವ್ಯಕ್ತಿ. ಪರಂಗಿಪೇಟೆ ಎಂಬಲ್ಲಿ ಏಕಮುಖ ರಸ್ತೆಯಲ್ಲಿ ಬಂದ ರಿಕ್ಷಾ ಚಾಲಕನೋರ್ವ ಸ್ಕೂಟರ್ ಗೆ ಎದುರಿನಿಂದ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಂಟ್ವಾಳ: ರಿಕ್ಷಾ-ಸ್ಕೂಟರ್ ಢಿಕ್ಕಿ Read More »

ಕಡಬ: ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು| ಶಾಸಕದ್ವಯರ ನೇತ್ರತ್ವದಲ್ಲಿ ರಾತ್ರೋರಾತ್ರಿ ಪ್ರತಿಭಟನೆ| ಸ್ಥಳಕ್ಕೆ‌ ಎಸ್ಪಿ ಭೇಟಿ; ಆರೋಪಿಗಳ ಬಂಧಿಸುವ ಭರವಸೆ

ಸಮಗ್ರ ನ್ಯೂಸ್: ಕಡಬ ಸಮೀಪದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋ ಸಾಗಾಟದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾ.30 ರ ಸಂಜೆ ನಡೆದಿತ್ತು. ನೆಕ್ಕಿತ್ತಡ್ಕದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಮೃತ ದುರ್ದೈವಿ.‌ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಡಿಕ್ಕಿಯಾಗಿದ್ದು, ಕಾರನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದ. ಆರೋಪಿಗಳು ಕಾರನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿನ ದಿ| ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ

ಕಡಬ: ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು| ಶಾಸಕದ್ವಯರ ನೇತ್ರತ್ವದಲ್ಲಿ ರಾತ್ರೋರಾತ್ರಿ ಪ್ರತಿಭಟನೆ| ಸ್ಥಳಕ್ಕೆ‌ ಎಸ್ಪಿ ಭೇಟಿ; ಆರೋಪಿಗಳ ಬಂಧಿಸುವ ಭರವಸೆ Read More »

ಕಡಬ: ಆಲಂಕಾರು‌ ಬಳಿ ಸಿಲಿಂಡರ್ ವಾಹನ – ಟೆಂಪೋ ನಡುವೆ ಅಪಘಾತ| ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ಆಕ್ಷಿಜನ್ ಸಿಲಿಂಡರ್ ಸಾಗಾಟದ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಫಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾದ ಘಟನೆ ಮಾ.30 ರ ರಾತ್ರಿ ನಡೆದಿದೆ. ಆಲಂಕಾರಿನಿಂದ ಪುತ್ತೂರಿನತ್ತ ಸಾಗುತ್ತಿದ್ದ ಸಿಎನ್ ಜಿ ಸಿಲಿಂಡರ್ ಸಾಗಾಟದ ಲಾರಿ ಮತ್ತು ಕಡಬದತ್ತ ಬರುತ್ತಿದ್ದ ಟೆಂಪೋ ನಡುವೆ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಟೆಂಪೋ ವಾಹನದಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಕಡಬ: ಆಲಂಕಾರು‌ ಬಳಿ ಸಿಲಿಂಡರ್ ವಾಹನ – ಟೆಂಪೋ ನಡುವೆ ಅಪಘಾತ| ಇಬ್ಬರು ಗಂಭೀರ Read More »