ಕರಾವಳಿ

ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ಕೈತಪ್ಪಿದ್ದ ಬೆನ್ನಲ್ಲೆ ಮಹತ್ವದ ಜವಾಬ್ದಾರಿ ಕೊಟ್ಟ ಹೈಕಮಾಂಡ್

ಸಮಗ್ರ ನ್ಯೂಸ್: ನಳಿನ್ ಕುಮಾರ್ ಕಟೀಲ್ ಅವರಿಗೆ ಹೈಕಮಾಂಡ್ ಒಂದು ಮಹತ್ವದ ಜವಾಬ್ದಾರಿ ನೀಡಿದೆ. ಹೌದು, ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್​​ ಕೈತಪ್ಪಿದ್ದರಿಂದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಹೈಕಮಾಂಡ್ ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ. ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ […]

ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ಕೈತಪ್ಪಿದ್ದ ಬೆನ್ನಲ್ಲೆ ಮಹತ್ವದ ಜವಾಬ್ದಾರಿ ಕೊಟ್ಟ ಹೈಕಮಾಂಡ್ Read More »

ಬ್ರಹ್ಮಾವರ: ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಬಿದ್ದು ಸಾವು

ಸಮಗ್ರ ನ್ಯೂಸ್‌ : ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಆಕಸ್ಮಿಕವಾಗಿ ಆಯತಪ್ಪಿ ಜಾರಿ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಕುಮ್ರಗೋಡಿನಲ್ಲಿ ನಡೆದಿದೆ. ಮೃತ ವ್ಯಕ್ತಿ ರಾಜು (77) ಎಂದು ತಿಳಿದು ಬಂದಿದೆ. ಘಟನೆಯಿಂದ ಗಂಭೀರವಾಗಿ ರಾಜು ಅವರ ತಲೆ, ಬೆನ್ನು, ಎದೆ, ಕಾಲಿಗೆ ಗಾಯಗಳಾಗಿತ್ತು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಬಿದ್ದು ಸಾವು Read More »

ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್‌ ಪಲ್ಟಿ

ಸಮಗ್ರ ನ್ಯೂಸ್: ಟಿಪ್ಪರ್‌ ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ಉರುಳಿದ ಬಿದ್ದ ಘಟನೆ ಕಿನ್ನಿಗೋಳಿ ಸಮೀಪದ ಶಿಬರೂರು ಸೇತುವೆ ಬಳಿ ನಡೆದಿದೆ. ಚಾಲಕನು ಮದ್ಯದ ಅಮಲಿನಲ್ಲಿ ಅತೀ ವೇಗದಿಂದ ವಾಹನ ಚಲಾಯಿಸಿದ್ದು, ಮೂಲ್ಕಿ ಕಡೆಯಿಂದ ಶಿಬರೂರು ಕಡೆಗೆ ಚಲಿಸುತ್ತಿದ್ದ ಟಿಪ್ಪರ್ ಬಟ್ಟಕೋಡಿ ಸಮೀಪದ ಶರಣ ಬಳಿ, ಹಾಗೂ ನಡುಗೋಡು ಸಮೀಪವೂ ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆಯುವುದು ಸ್ವಲ್ಪದರಲ್ಲೇ ತಪ್ಪಿತ್ತು. ಆದರೆ ಮುಂದೆ ಅತೀ ವೇಗದಿಂದ ಚಲಿಸಿದ ಟಿಪ್ಪರ್ ಶಿಬರೂರು ಸೇತುವೆಯ ಬಳಿ ತಗ್ಗು ಪ್ರದೇಶದ ಗದ್ದೆಗುರುಳಿ

ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್‌ ಪಲ್ಟಿ Read More »

ಪಣಂಬೂರು : ಶವ ಪತ್ತೆ- ಕೊಲೆ ಶಂಕೆ

ಸಮಗ್ರ ನ್ಯೂಸ್: ಪಣಂಬೂರು-ಜೋಕಟ್ಟೆ ಬಯಲು ಪ್ರದೇಶದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಎಂಬ ಸಂಶಯ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲವಾದರೂ, ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಶವ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪಣಂಬೂರು : ಶವ ಪತ್ತೆ- ಕೊಲೆ ಶಂಕೆ Read More »

ಕಾರ್ಕಳ: ಟೂರಿಸ್ಟ್ ಮಿನಿ ಬಸ್‌ ಪಲ್ಟಿ

ಸಮಗ್ರ ನ್ಯೂಸ್‌ : ಕುಕ್ಕುಂದೂರು ಗಣಿತ ನಗರ ಸಮೀಪದ ಮಸೀದಿಯ ಹತ್ತಿರ ಕಾರ್ಕಳ ಕಡೆಯಿಂದ ಉಡುಪಿಗೆ ಹೋಗುತ್ತಿದ್ದ ಟೂರಿಸ್ಟ್ ಮಿನಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಸಂಭವಿಸಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಲಕನು ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ವಾಹನ ಚಲಾಯಿಸಿರುವುದೇ ಕಾರಣವೆನ್ನಲಾಗಿದೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಟೂರಿಸ್ಟ್ ಮಿನಿ ಬಸ್‌ ಪಲ್ಟಿ Read More »

ಉಡುಪಿ ಚಿತ್ತರಂಜನ್ ವೃತ್ತದ ಮಂಟಪಕ್ಕೆ ಹಾನಿ| ದುರಸ್ತಿಗೆ ಆಗ್ರಹ

ಸಮಗ್ರ ನ್ಯೂಸ್: ಅಪರಿಚಿತ ವಾಹನವೊಂದು ನಗರದ ಚಿತ್ತರಂಜನ್ ಸರ್ಕಲ್ ನಲ್ಲಿರುವ ಮಂಟಪಕ್ಕೆ ಡಿಕ್ಕಿ ಹೊಡೆದಿದ್ದು, ಇದರಿಂದ ಮಂಟಪಕ್ಕೆ ಹಾನಿ ಉಂಟಾಗಿದೆ. ವಾಹನ ಗುದ್ದಿದ ತೀವ್ರತೆಗೆ ಮಂಟಪದ ನಾಲ್ಕು ಕಂಬಗಳಲ್ಲಿಯೂ ಬಿರುಕು ಬಿಟ್ಟಿದ್ದು, ಮಂಟಪು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಮಂಟಪದ ನೆರಳಿನಲ್ಲಿ ವಲಸೆ ಕಾರ್ಮಿಕರು, ಹಮಾಲಿಗಳು ವಿಶ್ರಾಂತಿ ಪಡೆಯುತ್ತಿರುತ್ತಾರೆ. ಇದೀಗ ನಾಲ್ಕು ಕಂಬಗಳು ಶಿಥಿಲಗೊಂಡಿರುವುದರಿಂದ ಗೋಪುರದ ಭಾರದ ನಿಯಂತ್ರಣ ಸಿಗದೆ ಮಂಟಪವು ಯಾವುದೇ ಕ್ಷಣದಲ್ಲಿಯೂ ಉರುಳಿಬಿದ್ದು, ಸಾವು ನೋವು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ತಕ್ಷಣವೇ ನಗರಸಭೆ ಅಧಿಕಾರಿಗಳು

ಉಡುಪಿ ಚಿತ್ತರಂಜನ್ ವೃತ್ತದ ಮಂಟಪಕ್ಕೆ ಹಾನಿ| ದುರಸ್ತಿಗೆ ಆಗ್ರಹ Read More »

ಹೆಚ್ಚುತ್ತಿರುವ ಪ್ರಯಾಣಿಕರು/ ತಾತ್ಕಾಲಿಕ ಹೆಚ್ಚುವರಿ ಬೋಗಿ ಸೇರ್ಪಡೆಗೊಳಿಸಿದ ರೈಲ್ವೆ ಇಲಾಖೆ

ಸಮಗ್ರ ನ್ಯೂಸ್: ರೈಲ್ವೆ ಇಲಾಖೆ ಕೆಲವು ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚುತ್ತಿರುವ ಕುರಿತು ಗಮನಹರಿಸಿದ್ದು, ಹೀಗಾಗಿ ತಾತ್ಕಾಲಿಕ ಹೆಚ್ಚುವರಿ ಬೋಗಿ ಸೇರ್ಪಡೆಗೊಳಿಸಿದೆ. ಮಂಗಳೂರು ಸೆಂಟ್ರಲ್ – ತಿರುವನಂತಪುರ ಸೆಂಟ್ರಲ್ ಮಾವೇಲಿ ಎಕ್ಸ್‍ಪ್ರೆಸ್‍ಗೆ (ರೈಲು ಸಂಖ್ಯೆ 16603, 16604) ಮಾ. 27 ರಿಂದ 31 ರವರೆಗೆ ಮಂಗಳೂರಿನಿಂದ ತಿರುವನಂತಪುರಂಗೆ ಹಾಗೂ ಮಾ. 28ರಿಂದ ಏ. 1ರವರೆಗೆ ತಿರುವನಂತಪುರಂನಿಂದ ಮಂಗಳೂರಿಗೆ ಒಂದು ಎಸಿ 3-ಟೈರ್ ಬೋಗಿ ಹೆಚ್ಚಿಸಲಾಗಿದೆ. ಮಾ. 27, 29 ಮತ್ತು 31ರಂದು ರೈಲು ಸಂಖ್ಯೆ 16348 ಮಂಗಳೂರು

ಹೆಚ್ಚುತ್ತಿರುವ ಪ್ರಯಾಣಿಕರು/ ತಾತ್ಕಾಲಿಕ ಹೆಚ್ಚುವರಿ ಬೋಗಿ ಸೇರ್ಪಡೆಗೊಳಿಸಿದ ರೈಲ್ವೆ ಇಲಾಖೆ Read More »

ಸುಳ್ಯ: ಕಾರು – ಟಾಟಾ ಏಸ್ ನಡುವೆ ಡಿಕ್ಕಿ

ಸಮಗ್ರ ನ್ಯೂಸ್: ನಿಲ್ಲಿಸಿದ್ದ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆಗೆ ಚಲಿಸಿದ ಕಾರಣದಿಂದ ಹಿಂಬದಿಯಿಂದ ಬಂದ ಟಾ ಟಾ ಏಸ್ ಗಾಡಿ ಡಿಕ್ಕಿ ಹೊಡೆದು ವಾಹನಗಳೆರಡೂ ಜಖಂಗೊಂಡ ಘಟನೆ ಸುಳ್ಯ ನಗರದ ಜ್ಯೋತಿ ವೃತ್ತದ ಬಳಿ ಸಂಭವಿಸಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರು ಮುಂದಕ್ಕೆ ಚಲಿಸಲು ರಸ್ತೆಗೆ ನುಗ್ಗಿದ್ದು, ಇದರಿಂದ ರಸ್ತೆಯಲ್ಲಿ ಚಲಿಸುತ್ತಿದ್ದ ಟಾಟಾ ಏಸ್ ಗಾಡಿ ಕಾರಿಗೆ ಗುದ್ದಿರುವುದಾಗಿ ಹೇಳಲಾಗಿದೆ. ಎರಡೂ ವಾಹನಗಳು ಜಖಂಗೊಂಡಿರುವುದಾಗಿ ತಿಳಿದುಬಂದಿದೆ.

ಸುಳ್ಯ: ಕಾರು – ಟಾಟಾ ಏಸ್ ನಡುವೆ ಡಿಕ್ಕಿ Read More »

ಕಡಬ: ಅಕ್ರಮ ಆಸ್ತಿ ಗಳಿಕೆ ಪ್ರಕರಣ| ತಾ.ಪಂ ಇಒ ಬಿ.ವಿ ಜಯಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ

ಸಮಗ್ರ ನ್ಯೂಸ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಜಯಣ್ಣ ಅವರ ಕಡಬದ ಪಂಜ ರಸ್ತೆಯ ವಿದ್ಯಾನಗರದ ಬಾಡಿಗೆ ಮನೆ ಹಾಗೂ ಕಛೇರಿಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಕುಶಾಲನಗರ ನಿವಾಸಿಯಾಗಿರುವ ಬಿ.ವಿ.ಜಯಣ್ಣ, ಸೋಮವಾರಪೇಟೆ ಪಟ್ಟಣ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಚುನಾವಣಾ ಹಿನ್ನೆಲೆಯಲ್ಲಿ ಅವರು ಕಡಬ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವಾರದ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಅಕ್ರಮ ಆಸ್ತಿ ಗಳಿಕೆಯ ಹಿನ್ನೆಲೆಯಲ್ಲಿ

ಕಡಬ: ಅಕ್ರಮ ಆಸ್ತಿ ಗಳಿಕೆ ಪ್ರಕರಣ| ತಾ.ಪಂ ಇಒ ಬಿ.ವಿ ಜಯಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ Read More »

ಕೋಮು ದಳ್ಳುರಿಗೆ ಬೆಂದ ಕರಾವಳಿಯಲ್ಲಿ ತೆರೆದ ಸಾಮರಸ್ಯದ ಅಂಗಡಿ| ದೈವಸ್ಥಾನದ ಆಡಳಿತ ಮಂಡಳಿಯಿಂದ ಇಪ್ತಾರ್ ಆಯೋಜನೆ

ಸಮಗ್ರ ನ್ಯೂಸ್: ಹಿಂದೂ – ಮುಸ್ಲಿಂ ಭಾವೈಕ್ಯತೆಗೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಸಾಕ್ಷಿಯಾಗಿದೆ. ಬಂಟ್ವಾಳ ತಾಲೂಕಿನ ಕೆದಿಲ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದಲ್ಲಿ ಇತ್ತೀಚೆಗೆ ಬ್ರಹ್ಮಕಲಶೋತ್ಸವದಲ್ಲಿ ಮುಸ್ಲಿಮರು ಭಾಗವಹಿಸಿದ್ದರು. ಮುಸ್ಲಿಂ ಸಮುದಾಯದವರ ಸಹಕಾರಕ್ಕೆ ಪ್ರತಿಯಾಗಿ, ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಸಾಮಾನ್ಯವಾಗಿ ಕರಾವಳಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೊರೆಕಾಣಿಕೆ ಸಲ್ಲಿಸುವ ಪದ್ದತಿಯಿದೆ. ಅದೇ ರೀತಿ ಕೆದಿಲ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆದಿತ್ತು. ಬ್ರಹ್ಮಕಲಶೋತ್ಸವಕ್ಕೆ ಹೊರೆಕಾಣಿಕೆ ಬರುವ ಸಂದರ್ಭ ಪರಿಸರದ ಮಸೀದಿ ವ್ಯಾಪ್ತಿಯ

ಕೋಮು ದಳ್ಳುರಿಗೆ ಬೆಂದ ಕರಾವಳಿಯಲ್ಲಿ ತೆರೆದ ಸಾಮರಸ್ಯದ ಅಂಗಡಿ| ದೈವಸ್ಥಾನದ ಆಡಳಿತ ಮಂಡಳಿಯಿಂದ ಇಪ್ತಾರ್ ಆಯೋಜನೆ Read More »