ಕರಾವಳಿ

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ|ಸವಾರ ಸಾವು

ಸಮಗ್ರ ನ್ಯೂಸ್:‌ ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ವಾಣಿ ಕಾಲೇಜು ಸಮೀಪ ನಡೆದಿದೆ. ಮೃತ ಯುವಕನನ್ನು ಬೆಳ್ತಂಗಡಿ ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ದಿ. ಜಯರಾಮ ಎಂಬವರ ಪುತ್ರ ಪುರುಷೋತ್ತಮ (19) ಎಂದು ಗುರುತಿಸಲಾಗಿದೆ. ರಾಘವೇಂದ್ರ ನಗರ ನಿವಾಸಿ ತೌಸೀಫ್ ಎಂಬವರ ಪುತ್ರ ತೌಫೀಕ್ (18) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಗುರುವಾಯನಕೆರೆಯಿಂದ […]

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ|ಸವಾರ ಸಾವು Read More »

ಕಾರ್ಕಳ: ರಾತ್ರಿ ನಿದ್ರಿಸಿದ್ದ ವೇಳೆ ಮನೆಗೆ ನುಗ್ಗಿ 2.25 ಲಕ್ಷ ನಗದು ಕಳ್ಳತನ

ಸಮಗ್ರ ನ್ಯೂಸ್:‌ ಮನೆಮಂದಿ ಮಲಗಿದ್ದ ವೇಳೆ ಕಳ್ಳರು ಕಿಟಕಿಯ ಬಾಗಿಲ ಚಿಲಕ ಮುರಿದು ಮನೆಯ ಒಳನುಗ್ಗಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2.25 ಲಕ್ಷ ನಗದು ದೋಚಿದ ಘಟನೆ ಕುಕ್ಕುಂದೂರು ನಲ್ಲಿ ನಡೆದಿದೆ. ಇಲ್ಲಿನ ಜೋಡುರಸ್ತೆ ನಿವಾಸಿ ಜಗದೀಶ್ ಬಿ.ಎ. ಅವರ ಮನೆಯಲ್ಲಿ ಕಳ್ಳತನವಾಗಿದ್ದು, ರಾತ್ರಿ ಮನೆಯ ಬಾಗಿಲು ಹಾಕಿ ಭದ್ರಪಡಿಸಿ ಮಲಗಿದ್ದರು. ಆದರೆ ಬೆಳಗ್ಗಿನ ಜಾವ 3: 40 ಗಂಟೆಗೆ ಜಗದೀಶ್ ರವರು ಮಲಗಿದ್ದ ಕೋಣೆಯು ತೆರೆದ ಶಬ್ದ ಕೇಳಿ ಎದ್ದು ನೋಡಿದಾಗ ಮನೆಯ ಮುಂದಿನ ಬಾಗಿಲು

ಕಾರ್ಕಳ: ರಾತ್ರಿ ನಿದ್ರಿಸಿದ್ದ ವೇಳೆ ಮನೆಗೆ ನುಗ್ಗಿ 2.25 ಲಕ್ಷ ನಗದು ಕಳ್ಳತನ Read More »

ಕಡಬ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್: ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡ ಕೃಷಿಕ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದೆ. ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಬುಡಲೂರು ಎಂಬಲ್ಲಿ ಈ ಘಟನೆ ನಡೆದಿದ್ದು ಬೂಡಲೂರು ನಿವಾಸಿ ಶಿವಣ್ಣ ಗೌಡ(61ವ.)ಆತ್ಮಹತ್ಯೆ ಮಾಡಿಕೊಂಡ ಕೃಷಿಕರಾಗಿದ್ದಾರೆ. ತಮ್ಮ ಮನೆಯಿಂದ ಅನತಿ ದೂರದ ಗುಡ್ಡೆಯೊಂದರಲ್ಲಿ ಶಿವಣ್ಣ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಣ್ಣ ಗೌಡ ಅವರು ಸ್ಥಳೀಯ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘ, ಪುತ್ತೂರು ಭೂ ಅಭಿವೃದ್ಧಿ

ಕಡಬ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ Read More »

ದ.ಕ ಜಿಲ್ಲೆಯಲ್ಲಿ ‌ನಕ್ಸಲ್ ಚಟುವಟಿಕೆ, ಕೋವಿ ಡೆಪಾಸಿಟ್ ವಿಚಾರ| ಕುಕ್ಕೆಗೆ ಭೇಟಿ ನೀಡಿದ ಡಿಸಿಎಂ ಹೇಳಿದ್ದೇನು?

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಕ್ಸಲ್ ಚಟುವಟಿಕೆ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಕ್ಸಲ್ ಚಟುವಟಿಕೆ ಬಗ್ಗೆ ಜಿಲ್ಲಾಧಿಕಾರಿ ಮತ್ತು ಹಿರಿಯ ಅಧಿಕಾರಿಗಳ ಬಳಿ ಚರ್ಚೆ ನಡೆಸುತ್ತೇನೆ ಎಂದರು. ಇನ್ನು ಚುನಾವಣಾ ಸಂದರ್ಭದಲ್ಲಿ ಕೃಷಿಕರ ಕೋವಿ ಠೇವಣಿ ಇಡುವ ವಿಚಾರ ವ್ಯಕ್ತವಾಗುತ್ತಿರುವ ವಿರೋಧಕ್ಕೆ ಪ್ರತಿಕ್ರಿಯಿಸಿದ ಅವರು ಇದು ಹಿಂದಿನಿಂದಲೇ ಬಂದ ಸಂಪ್ರದಾಯ, ಚುನಾವಣಾ ಇಲಾಖೆಯ ಆದೇಶದ ಮೇರೆಗೆ ಈ ಕ್ರಮ ಜರುಗಿಸಲಾಗುತ್ತಿದೆ. ಕಾಡುಪ್ರಾಣಿಗಳ ಸಮಸ್ಯೆಯಿರುವ ಕೃಷಿಕರಿಗೆ

ದ.ಕ ಜಿಲ್ಲೆಯಲ್ಲಿ ‌ನಕ್ಸಲ್ ಚಟುವಟಿಕೆ, ಕೋವಿ ಡೆಪಾಸಿಟ್ ವಿಚಾರ| ಕುಕ್ಕೆಗೆ ಭೇಟಿ ನೀಡಿದ ಡಿಸಿಎಂ ಹೇಳಿದ್ದೇನು? Read More »

ಕುಕ್ಕೆ ಸುಬ್ರಹ್ಮಣ್ಯಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಅವರು ಇಂದು(ಮಾ.26) ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿ, ಹೊಸೋಳಿಗಮ್ಮನ ದರ್ಶನ ಪಡೆದು ಬಿಳಿನೆಲೆಯ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮುಖಾಂತರ ನಿರ್ಗಮಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ಕಡಬ ಬ್ಲಾಕ್ ಕಾಂಗ್ರೆಸ್ ಹಾಗೂ ದೇವಲದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಗೇರು ನಿಗಮದ ಅಧ್ಯಕ್ಷೆ ಹಾಗೂ ಸುಳ್ಯ ವಿಧಾನಸಭೆ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಮಮತ ಗಟ್ಟಿ, ಕಡಬ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ Read More »

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆ ಶಿವಕುಮಾರ್

ಸಮಗ್ರ ನ್ಯೂಸ್: ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಂದರ್ಭದಲ್ಲಿ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು, ಯಾವಾಗಲೂ ಧರ್ಮಯುದ್ಧದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಮಾತು ಬಿಡದ ಮಂಜುನಾಥ, ಕಾಸು ಬೆಳೆದ ತಿಮ್ಮಪ್ಪ ಅಂತಾ ಮಾತಿದೆ. ನನ್ನ ಜೀವನದಲ್ಲಿ ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಹಾಗಾಗಿ ಈ ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆ ಶಿವಕುಮಾರ್ Read More »

ಕರ್ನಾಟಕ ಚಲನಚಿತ್ರೋತ್ಸವದಲ್ಲಿ ಗೌರಿತಾಳಿಗೆ ಪುನೀತ ಪ್ರಶಸ್ತಿ

ಸಮಗ್ರ ನ್ಯೂಸ್: ಯೋಗ ಪಟು ಗೌರಿತಾಳಿಗೆ ಪುನೀತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಾ. 23ರಂದು ಧಾರವಾಡದ ಸುವರ್ಣ ಸಮುಚ್ಛಯ ಭವನ ರಂಗಾಯಣದಲ್ಲಿ ನಡೆಯಿತು. ಕರ್ನಾಟಕ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಚಿತ್ರ ನಟಿ ಸುನಂದಾ ಕಲ್ಬುರ್ಗಿ, ಚಲನಚಿತ್ರ ನಟ ಹಾಗೂ ನಿರ್ಮಾಪಕ ಡಾ. ಕಲ್ಮೇಶ ಹಾವೇರಿ ಪೇಟ, ನಟ ಹಾಗೂ ನಿರ್ದೇಶಕ ತಮನ್, ಚಿತ್ರ ನಿರ್ದೇಶಕ ಲೋಕೇಶ ವಿದ್ಯಾಧರ, ಚೇತನ್ ಫೌಂಡೇಶನ್ ಕರ್ನಾಟಕದ ಅಧ್ಯಕ್ಷ ಚಂದ್ರ ಶೇಖರ ಮಾಡಲಗೇರಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸುಬ್ರಹ್ಮಣ್ಯದ ಕುಮಾರಸ್ವಾಮಿ

ಕರ್ನಾಟಕ ಚಲನಚಿತ್ರೋತ್ಸವದಲ್ಲಿ ಗೌರಿತಾಳಿಗೆ ಪುನೀತ ಪ್ರಶಸ್ತಿ Read More »

ಡಬಲ್ ಸೆಂಚುರಿ ಬಾರಿಸಿದ ಹಸಿ ಕೋಕ್ಕೋ| ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ

ಸಮಗ್ರ ನ್ಯೂಸ್: ಮಾರುಕಟ್ಟೆಯಲ್ಲಿ ಹಸಿ ಕೊಕ್ಕೋ ಧಾರಣೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಪ್ರಸ್ತುತ ಪ್ರತೀ ಕೆ.ಜಿ.ಗೆ 200 ರೂ. ದಾಟಿದೆ. ಇದು ಇದು ವರೆಗಿನ ಸಾರ್ವಕಾಲಿಕ ದಾಖಲೆ ದರ. ಈ ಹಿಂದೆ ಪ್ರತೀ ಕೆ.ಜಿ.ಗೆ 125 ರೂ.ಗಳಿಗಿಂತ ಹೆಚ್ಚಾದುದಿಲ್ಲ. ಇದರ ಜತೆಗೆ ಒಣ ಕೊಕ್ಕೊ ಧಾರಣೆಯೂ ಜಿಗಿದಿದ್ದು, ಬೆಳೆಗಾರರಲ್ಲಿ ಉಲ್ಲಾಸ ಮೂಡಿಸಿದೆ. ಹಸಿ ಕೊಕ್ಕೋ ಧಾರಣೆ ಕೆ.ಜಿ.ಗೆ ತೀರಾ ಕುಸಿತ ಕಂಡು ಹೆಚ್ಚೆಂದರೆ 75 ರೂ. ವರೆಗೆ ಇತ್ತು. ಹಿಂದೆ ಧಾರಣೆ ಕೆ.ಜಿ.ಗೆ 30 ರೂ. ವರೆಗೆ

ಡಬಲ್ ಸೆಂಚುರಿ ಬಾರಿಸಿದ ಹಸಿ ಕೋಕ್ಕೋ| ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ Read More »

ಮಾ.26: ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್| ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಭೇಟಿ

ಸಮಗ್ರ ನ್ಯೂಸ್: ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ರವರು ಮಾ.26ರಂದು ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಮುಂಜಾನೆ ಧರ್ಮಸ್ಥಳಕ್ಕೆ ಆಗಮಿಸಲಿರುವ ಅವರು ಬಳಿಕ ಧರ್ಮಸ್ಥಳದಿಂದ ಬೆಳಗ್ಗೆ 10 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಅವರು ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ, ಮಧ್ಯಾಹ್ನ 12 ಗಂಟೆಗೆ ವಾಪಾಸ್ ತೆರಳಲಿದ್ದಾರೆಂದು ತಿಳಿದುಬಂದಿದೆ.

ಮಾ.26: ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್| ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಭೇಟಿ Read More »

ಉಡುಪಿ:ದಲಿತ ಮಹಿಳೆಗೆ ಹಲ್ಲೆ ಮಾಡಿದ ಆರೋಪಿಯನ್ನು ಡಿಸ್ಜಾರ್ಜ್ ಮಾಡದಿದ್ರೆ ಜಿಲ್ಲಾಸ್ಪತ್ರೆಗೆ ಮುತ್ತಿಗೆ| ವಿಶ್ವನಾಥ್ ಪೇತ್ರಿ ಎಚ್ಚರಿಕೆ

ಸಮಗ್ರ ನ್ಯೂಸ್‌ :ಬೀದಿನಾಯಿಗೆ ಊಟ ಹಾಕಿದ ಕಾರಣಕ್ಕಾಗಿ ದಲಿತ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಇಂದ್ರಾಳಿ ಹಯಗ್ರೀವ ನಗರದ ಚಂದ್ರಕಾಂತ ಭಟ್ ಎಂಬಾತನ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು‌ ಎಂದು ಸಮತಾ ಸೈನಿಕ ದಳ ಜಿಲ್ಲಾಧ್ಯಕ್ಷ ವಿಶ್ವನಾಥ್ ಪೇತ್ರಿ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ. 20ರಂದು ರಾತ್ರಿ ಹಲ್ಲೆಗೊಳಗಾದ ಬೇಬಿ ಅವರು, ತನ್ನ ಮನೆಯ ಸಮೀಪದ ಬೀದಿನಾಯಿಗಳಿಗೆ ಊಟ ಹಾಕುತ್ತಿದ್ದ ವೇಳೆ ಆರೋಪಿ ಚಂದ್ರಕಾಂತ್

ಉಡುಪಿ:ದಲಿತ ಮಹಿಳೆಗೆ ಹಲ್ಲೆ ಮಾಡಿದ ಆರೋಪಿಯನ್ನು ಡಿಸ್ಜಾರ್ಜ್ ಮಾಡದಿದ್ರೆ ಜಿಲ್ಲಾಸ್ಪತ್ರೆಗೆ ಮುತ್ತಿಗೆ| ವಿಶ್ವನಾಥ್ ಪೇತ್ರಿ ಎಚ್ಚರಿಕೆ Read More »