ಕರಾವಳಿ

ಸುಬ್ರಹ್ಮಣ್ಯ:ಕೆಎಸ್ಎಸ್ ಕಾಲೇಜಿನ ನೂತನ ಪ್ರಾಕ್ತನ ವಿದ್ಯಾರ್ಥಿ ಸಂಘ ಉದ್ಘಾಟನೆ

ಸಮಗ್ರ ನ್ಯೂಸ್: ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘ ನೂತನವಾಗಿ ಉದ್ಘಾಟನೆಗೊಂಡಿತು. ಗಣೇಶ್ ನಾಯರ್ ನೇತ್ರತ್ವದಲ್ಲಿ ಹೊಸ ತಂಡ ಮಾ. 25ರಂದು ಅಧಿಕಾರ ವಹಿಸಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಡಾ.ನಿಂಗಯ್ಯ ಅವರು ವಹಿಸಿಕೊಂಡಿದ್ದರು, ಮುಖ್ಯ ಅತಿಥಿಗಳಾಗಿ ಮಂಡ್ಯ ಜಿಲ್ಲಾ ನ್ಯಾಯಧೀಶ ವಿಜಯ ಕುಮಾರ್ ರೈ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಲೆಪ್ಟಿನೆಂಟ್ ಕರ್ನಲ್ ಆಗಿ ನೇಮಕಗೊಂಡ ಸುಬ್ರಹ್ಮಣ್ಯ ದ ಅಜಿತೇಶ್ ಪಿ.ಎಸ್. ಅವರಿಗೆ […]

ಸುಬ್ರಹ್ಮಣ್ಯ:ಕೆಎಸ್ಎಸ್ ಕಾಲೇಜಿನ ನೂತನ ಪ್ರಾಕ್ತನ ವಿದ್ಯಾರ್ಥಿ ಸಂಘ ಉದ್ಘಾಟನೆ Read More »

ಅಸೈಗೋಳಿಯಲ್ಲಿ ರಸ್ತೆ ಅಪಘಾತ|ಡಿವೈಡರ್ ನೆಗೆದು ಬಿದ್ದ ಬೈಕ್, ಸಹ ಸವಾರೆ ದಾರುಣ ಸಾವು

ಸಮಗ್ರ ನ್ಯೂಸ್: ಅಸೈಗೋಳಿಯ ತಿಬ್ಲೆ ಪದವಿನ ರಾಜ್ಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದ ಬೈಕಿನಿಂದ ಎಸೆಯಲ್ಪಟ್ಟ ಸಹ ಸವಾರೆ ಗೃಹಿಣಿಯೋರ್ವರು ದಾರುಣ ಮೃತಪಟ್ಟ ಘಟನೆ ಆದಿತ್ಯವಾರ ಸಂಜೆ ನಡೆದಿದೆ. ಬೋಂದೆಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ನಿಧಿ(29) ಮೃತಪಟ್ಟ ಮಹಿಳೆ. ಬೈಕ್ ಸವಾರ ಯತೀಶ್ ದೇವಾಡಿಗ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಧಿ ಆದಿತ್ಯವಾರ ಮುಡಿಪುವಿನಲ್ಲಿ ನಡೆದಿದ್ದ ಗೃಹ ಪ್ರವೇಶವೊಂದರಲ್ಲಿ ಭಾಗವಹಿಸಿ ಯತೀಶ್ ಜೊತೆ ಬೈಕಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಸಂಜೆ

ಅಸೈಗೋಳಿಯಲ್ಲಿ ರಸ್ತೆ ಅಪಘಾತ|ಡಿವೈಡರ್ ನೆಗೆದು ಬಿದ್ದ ಬೈಕ್, ಸಹ ಸವಾರೆ ದಾರುಣ ಸಾವು Read More »

ಮಂಗಳೂರು: ಅಕ್ರಮ ಗೋಸಾಗಾಟ- ಬಜರಂಗದಳ ಕಾರ್ಯಕರ್ತರಿಂದ ತಡೆ

ಸಮಗ್ರ ನ್ಯೂಸ್: ಕಾರಿನಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಸಂಘಟನೆಯ ಕಾರ್ಯಕರ್ತರನ್ನು ಕಂಡು ಕಾರು ದನಗಳನ್ನು ಸ್ಥಳದಲ್ಲೇ ಬಿಟ್ಟು ತಂಡ ಪರಾರಿಯಾದ ಘಟನೆ ಪುತ್ತೂರಿನ ಕಬಕ ಅಡ್ಯಲಾಯ ದೈವಸ್ಥಾನದ ಸಮೀಪವೇ ನಡೆದಿದೆ. ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದ್ದು ಅದರ ಕಾಲುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಲಾಗಿತ್ತು. ಕಬಕದ ಬಜರಂಗದಳ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ

ಮಂಗಳೂರು: ಅಕ್ರಮ ಗೋಸಾಗಾಟ- ಬಜರಂಗದಳ ಕಾರ್ಯಕರ್ತರಿಂದ ತಡೆ Read More »

ಧರ್ಮಸ್ಥಳ: ತಾಯಿ ಮಗು ನಾಪತ್ತೆ

ಸಮಗ್ರ ನ್ಯೂಸ್: ತಾಯಿ ಒಂಭತ್ತು ತಿಂಗಳ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಕಳೆಂಜ ಗ್ರಾಮದ ಕಾರ್ಯತ್ತಡ್ಕದಲ್ಲಿ ನಡೆದಿದೆ. ಕಳೆಂಜ ಗ್ರಾಮದ ಕಾರ್ಯತ್ತಡ್ಕ ನಿವಾಸಿ ವೆಂಕಪ್ಪ ಗೌಡ ಅವರ ಪತ್ನಿ ಜಯಶ್ರೀ (29ವ) ಹಾಗೂ ಅವರ ಪುತ್ರಿ ರುಷಿಕಾ (9ತಿಂಗಳು) ನಾಪತ್ತೆಯಾದವರು. ಮಾ.22ರಂದು ರಾತ್ರಿ ಜಯಶ್ರೀ ರೂಮಿನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಮಲಗಿದ್ದು, ವೆಂಕಪ್ಪ ಗೌಡ ಅವರು ಮನೆಯ ಹಾಲ್ ನಲ್ಲಿ ಮಲಗಿದ್ದರು. ಮರುದಿನ ಬೆಳಿಗೆ ವೆಂಕಪ್ಪ ಗೌಡರು ಎದ್ದು ನೋಡಿದಾಗ ಮನೆಯಲ್ಲಿ ಪತ್ನಿ ಜಯಶ್ರೀ ಹಾಗೂ 9 ತಿಂಗಳ

ಧರ್ಮಸ್ಥಳ: ತಾಯಿ ಮಗು ನಾಪತ್ತೆ Read More »

ಉಡುಪಿ: ಬೀದಿ ನಾಯಿಗೆ ಊಟ ಹಾಕಿದ್ದಕ್ಕೆ ದಲಿತ ಮಹಿಳೆಗೆ ಹಲ್ಲೆ|ಆರೋಪಿ ಬಂಧನ

ಸಮಗ್ರ ನ್ಯೂಸ್‌ : ಬೀದಿನಾಯಿಗೆ ಊಟ ಹಾಕಿದರು ಎಂಬ ಕಾರಣಕ್ಕಾಗಿ ದಲಿತ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಇಂದ್ರಾಳಿ ಹಯಗ್ರೀವ ನಗರದ ಚಂದ್ರಕಾಂತ ಭಟ್ ಎಂಬಾತನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಕುಂಜಿಬೆಟ್ಟು ಬುಡ್ನಾರ್ ನಿವಾಸಿ ಬೇಬಿ(50) ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ತಮ್ಮ ಪರಿಚಯದ ಚಂದ್ರಕಾಂತ ಎಂಬವರ ಮನೆ ಸಮೀಪ ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದರು. ಈ ವೇಳೆ ಚಂದ್ರಕಾಂತ ನಾಯಿಗಳಿಗೆ ಊಟ ಹಾಕುವುದಕ್ಕೆ ಆಕ್ಷೇಪಿಸಿ ಅವಾಚ್ಯ

ಉಡುಪಿ: ಬೀದಿ ನಾಯಿಗೆ ಊಟ ಹಾಕಿದ್ದಕ್ಕೆ ದಲಿತ ಮಹಿಳೆಗೆ ಹಲ್ಲೆ|ಆರೋಪಿ ಬಂಧನ Read More »

ಪುತ್ತೂರು: ನಟೋರಿಯಸ್ ಅಂತರಾಜ್ಯ ಕಳ್ಳಿ ಅರೆಸ್ಟ್

ಸಮಗ್ರ ನ್ಯೂಸ್: ಫೆಬ್ರವರಿ ತಿಂಗಳಲ್ಲಿ ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎಂಬ ಮಹಿಳೆಯೊಬ್ಬರ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಈಶ್ವರಿ (45) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ಆಕೆ ಕಳವು ನಡೆಸಿದ ಸುಮಾರು ರೂ. 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ. ಈ ಪ್ರಕರಣವನ್ನು ಬೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯತ್ ಮತ್ತು ದ ಕ

ಪುತ್ತೂರು: ನಟೋರಿಯಸ್ ಅಂತರಾಜ್ಯ ಕಳ್ಳಿ ಅರೆಸ್ಟ್ Read More »

ಕಡಬ:ಶಾಂತಿಮೊಗೇರು ಕಿಂಡಿ ಆಣೆಕಟ್ಟು ಬರಿದು ಆರೋಪ| ಊರವರ ಆಕ್ರೋಶಕ್ಕೆ ಜಾಗ ಖಾಲಿ ಮಾಡಿದ ಮರಳು ದಂಧೆಕೋರರು

ಸಮಗ್ರ ನ್ಯೂಸ್‌: ಕುಮಾರಧಾರ ನದಿಗೆ ಕಡಬ ತಾಲೂಕಿನ ಶಾಂತಿಮೊಗೇರು ಎಂಬಲ್ಲಿ ನಿರ್ಮಿಸಿರುವ ಬೃಹತ್ ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆಯಾಗಿ ಅಣೆಕಟ್ಟು ಬರಿದಾಗಿದೆ. ಇದಕ್ಕೆ ಮರಳು ದಂಧೆಯವರೇ ಪ್ರಮುಖ ಕಾರಣ. ತಕ್ಷಣ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ ಬೆನ್ನಿಗೆ ಮರಳು ತೆಗೆಯುತ್ತಿದ್ದವರು ತಮ್ಮ ಎಲ್ಲಾ ವಸ್ತುಗಳೊಂದಿಗೆ ಜಾಗ ಖಾಲಿ ಮಾಡಿದ ಘಟನೆ ನಡೆದಿದೆ. ಅಣೆಕಟ್ಟಿಗೆ ಅಳವಡಿಸಿದ್ದ ಹಲಗೆಯನ್ನು ರಾತೋರಾತ್ರಿ ತೆಗೆದಿರುವುದಲ್ಲದೆ, ಹಲಗೆಯೊಂದರ ಅಡಿಯಲ್ಲಿ ಕಲ್ಲು ಇಡಲಾಗಿದೆ. ಅಲ್ಲದೆ ಕೆಲವು ಹಲಗೆಯ ಅಡಿಯಲ್ಲಿದ್ದ ರಬ್ಬರ್ ವಾಷರನ್ನು ತೆಗೆಯಲಾಗಿದೆ.

ಕಡಬ:ಶಾಂತಿಮೊಗೇರು ಕಿಂಡಿ ಆಣೆಕಟ್ಟು ಬರಿದು ಆರೋಪ| ಊರವರ ಆಕ್ರೋಶಕ್ಕೆ ಜಾಗ ಖಾಲಿ ಮಾಡಿದ ಮರಳು ದಂಧೆಕೋರರು Read More »

ಬಿಸಿಲ‌ ಬೇಗೆಗೆ ತಂಪೆರೆದ‌ ವರುಣ| ಸುಳ್ಯ, ಕಡಬ ತಾಲೂಕಿನ ಹಲವೆಡೆ ಉತ್ತಮ ಮಳೆ

ಸಮಗ್ರ ನ್ಯೂಸ್: ಹಲವು ದಿನಗಳಿಂದ‌ ಸೆಕೆಯಿಂದ ತತ್ತರಿಸಿದ್ದ‌ ಕರಾವಳಿಗೆ ಕಳೆದೆರಡು ದಿನಗಳಿಂದ‌ ಮಳೆಯ‌ ಸಿಂಚನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಲವೆಡೆ ಮತ್ತು‌ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ಕಡೆಗಳಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಎರಡು ದಿನಗಳಿಂದ ಮೋಡದ ವಾತಾವರಣ ಕಂಡುಬಂದಿತ್ತು ಶುಕ್ರವಾರ ಸಂಜೆ ಸಾಮಾನ್ಯ ಮಳೆಯಾಗಿತ್ತು. ಸುಳ್ಯ, ಕಡಬ ತಾಲೂಕಿನ ಕೊಲ್ಲಮೊಗ್ರ, ಕಲ್ಲಾಜೆ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ, ಮರ್ಕಂಜ, ಎಲಿಮಲೆ, ಸಂಪಾಜೆ, ಅರಂತೋಡು, ಹರಿಹರ ಪಲ್ಲತ್ತಡ್ಕ, ಪಂಬೆತ್ತಾಡಿ ಸೇರಿದಂತೆ ವಿವಿಧ

ಬಿಸಿಲ‌ ಬೇಗೆಗೆ ತಂಪೆರೆದ‌ ವರುಣ| ಸುಳ್ಯ, ಕಡಬ ತಾಲೂಕಿನ ಹಲವೆಡೆ ಉತ್ತಮ ಮಳೆ Read More »

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ 12 ಮಂದಿ ಆರೋಪಿಗಳಿಗೆ ಗಡಿಪಾರು ಆದೇಶ

ಸಮಗ್ರ ನ್ಯೂಸ್:‌ ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 12 ಮಂದಿ ಆರೋಪಿಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ. ಅಡ್ಯಾರ್‌ಪದವಿನ ಮುಹಮ್ಮದ್ ಅಶ್ರಫ್ (42) ಮತ್ತು ರಿಯಾಝ್ ಅಹ್ಮದ್ (35), ಸುರತ್ಕಲ್ ಕಾಟಿಪಳ್ಳ ಮದ್ಯದ ವಿಜ್ವಲ್ ಪೂಜಾರಿ (29),ಸುರತ್ಕಲ್ ಕಾನಕಟ್ಲದ ಗಿರಿಧರ್ (24) , ಕಾಟಿಪಳ್ಳ ಚೊಕ್ಕಬೆಟ್ಟುವಿನ ಹರ್ಷದ್ ಯಾನೆ ಹಫೀಝ್ (28), ಉರ್ವಸ್ಟೋರ್‌ನ ವೃಕ್ಷಿತ್ ಯಾನೆ ರಕ್ಷಿತ್ (23) ಮತ್ತು ದುರ್ಗೇಶ್ (25),

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ 12 ಮಂದಿ ಆರೋಪಿಗಳಿಗೆ ಗಡಿಪಾರು ಆದೇಶ Read More »

ಪುತ್ತೂರು: ಫೇಸ್‌ಬುಕ್‌ ಖಾತೆಯಲ್ಲಿ ದ್ವೇಷ ಬಿತ್ತುವ ಪೋಸ್ಟರ್lದೂರು ದಾಖಲು

ಸಮಗ್ರ ನ್ಯೂಸ್:‌ ಜಾತಿ, ಜನಾಂಗ, ಪಂಗಡಗಳ ನಡುವೆ ದ್ವೇಷ ಬಿತ್ತುವ ಹಾಗೂ ಸಮಾಜದ ಸೌಹಾರ್ದತೆಗೆ ಭಂಗವನ್ನುಂಟು ಮಾಡುವಂತಹ ಪೋಸ್ಟನ್ನು ಫೇಸ್‌ಬುಕ್‌ ಖಾತೆಯಲ್ಲಿ ಹಾಕಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ. ಮಾ 21 ರಂದು ರಾತ್ರಿ ಬಲ್ಯಗ್ರಾಮ, ಕಡಬ ನಿವಾಸಿ, ದ.ಕ ಜಿಲ್ಲೆಯ ಅಂಬೇಡ್ಕರ್‌ ಅಪತ್ಬಾಂಧವ ಸಂಘಟನೆಯ ಜಿಲ್ಲಾಧ್ಯಕ್ಷ ರಾಜು ಹೊಸ್ಮಠರವರ ಮೊಬೈಲ್ ಗೆ ಬಂದ ಫೇಸ್ಟುಬುಕ್‌ನ ಲಿಂಕ್‌ನ್ನು ಪರಿಶೀಲಿಸಿದಾಗ, ಪ್ರವೀಣ್ ಮದ್ದಡ್ಕ ಎಂಬಾತನು ತನ್ನ ಫೇಸ್‌ಬುಕ್ ಖಾತೆಯಲ್ಲಿ

ಪುತ್ತೂರು: ಫೇಸ್‌ಬುಕ್‌ ಖಾತೆಯಲ್ಲಿ ದ್ವೇಷ ಬಿತ್ತುವ ಪೋಸ್ಟರ್lದೂರು ದಾಖಲು Read More »