ಕರಾವಳಿ

ಪುತ್ತೂರು:ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟಪಡಿಸಿ| ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ

ಸಮಗ್ರ ನ್ಯೂಸ್‌ : ದೇಶ ದ್ರೋಹಿಗಳ ಹಾಗೂ ರಾಷ್ಟ್ರ ಪ್ರೇಮಿಗಳ ನಡುವಿನ ಸ್ಪರ್ಧೆ ಎಂಬ ಹೇಳಿಕೆಯಲ್ಲಿ ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟ ಪಡಿಸಬೇಕಾಗಿದೆ. ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡುವ ಕಾರ್ಯವನ್ನು ಮಾಡುವ ಜತೆಗೆ ದೇಶ ಪ್ರೇಮದ ಬಗ್ಗೆ ಅನುಮಾನ ಇದ್ದಾಗ ತಮಗೆ ತಾವೇ ಪ್ರಮಾಣ ಪತ್ರ ನೀಡುವ ಕಾರ್ಯ ಬಿಜೆಪಿಯಿಂದ ನಡೆದಿದೆ. ಅಭಿವೃದ್ಧಿಗೆ ಹಾಗೂ ಅಭಿವೃದ್ಧಿ ಹೀನತೆಯ ನಡುವಿನ ಚುನಾವಣೆಯಾಗಿದೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ ಹೇಳಿದರು. ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾರಾಯಣ ಗುರುಗಳ

ಪುತ್ತೂರು:ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟಪಡಿಸಿ| ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ Read More »

ಪುತ್ತೂರು: ಎಲೆಕ್ಟ್ರಾನಿಕ್ಸ್ ಶೋರೂಂನ ಗೋದಾಮಿಗೆ ಬೆಂಕಿ; ಕೋಟ್ಯಾಂತರ ರೂ. ನಷ್ಟ

ಸಮಗ್ರ ನ್ಯೂಸ್‌ : ಎಲೆಕ್ಟ್ರಾನಿಕ್ಸ್ ಶೋರೂಂ ಗೋದಾಮಿಗೆ ಬೆಂಕಿ ಹತ್ತಿ ಕೋಟ್ಯಾಂತರ ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾದ ಘಟನೆ ಪುತ್ತೂರಿನ ದರ್ಬೆಯಲ್ಲಿ ಇಂದು ಬೆಳ್ಳಿಗ್ಗೆ ನಡೆದಿದೆ. ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಗೋದಾಮಿನಲ್ಲಿರುವ ಸೊತ್ತುಗಳು ಧಗಧಗನೆ ಹೊತ್ತಿ ಉರಿದಿವೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಪುತ್ತೂರು ನಗರ ಠಾಣಾ ಪೊಲೀಸರು ಸಾಥ್ ನೀಡಿದ್ದಾರೆ.

ಪುತ್ತೂರು: ಎಲೆಕ್ಟ್ರಾನಿಕ್ಸ್ ಶೋರೂಂನ ಗೋದಾಮಿಗೆ ಬೆಂಕಿ; ಕೋಟ್ಯಾಂತರ ರೂ. ನಷ್ಟ Read More »

ಬಂಟ್ವಾಳ: ಮನೆ ಮಹಡಿಯ ಮೇಲಿಂದ ಬಿದ್ದು ಬಾಲಕ ಮೃತ್ಯು

ಸಮಗ್ರ ನ್ಯೂಸ್‌ : ಬಾಲಕ ಮನೆಯ ಮಹಡಿ ಮೇಲಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿದ್ದ ಘಟನೆ ಇಂದು ಬಂಟ್ವಾಳದಲ್ಲಿ ನಡೆದಿದೆ. ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತಪಟ್ಟ ಬಾಲಕನಾಗಿದ್ದಾನೆ. ಬಾಲಕ ಆದಿಶ್ ತಮ್ಮ ಮನೆಯ ಮಹಡಿಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದನು. ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ

ಬಂಟ್ವಾಳ: ಮನೆ ಮಹಡಿಯ ಮೇಲಿಂದ ಬಿದ್ದು ಬಾಲಕ ಮೃತ್ಯು Read More »

ಬಂಟ್ವಾಳ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಅತಿ ಹೆಚ್ಚು ಕುಡಿತದ ಚಟ, ಮಾನಸಿಕವಾಗಿ ಅಸ್ವಸ್ಥತೆಯನ್ನು ಹೊಂದಿದ್ದ ವ್ಯಕ್ತಿಯೊಬ್ಬ ವಿಷ ಪದಾರ್ಥ ಸೇವಿಸಿ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರವೀಣ್ ನಜರತ್ (45) ಮೃತಪಟ್ಟ ವ್ಯಕ್ತಿ. ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ವಿಪರೀತ ಕುಡಿತದ ಚಟ ಹೊಂದಿದ್ದನು. ಕಳೆದ 15 ದಿನಗಳ ಹಿಂದೆ ಮಾನಸಿಕವಾಗಿ ನೊಂದಿದ್ದ ಈತ ಮನೆಯ ಮಹಡಿಯಿಂದ ಕೆಳಗೆ ಹಾರಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದನು. ಮಾ.29 ರಂದು ಕೆಲಸಕ್ಕೆ

ಬಂಟ್ವಾಳ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ಬ್ರಹ್ಮಾವರ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಸಮಗ್ರ ನ್ಯೂಸ್‌ : ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಇಂದು ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ನಡೆದಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆಯಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮವಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ. ವಾತಾವರಣದಲ್ಲಿ ಶಾಖದ ಅಲೆಗಳ ಹೆಚ್ಚಳದಿಂದಾಗಿ ಅನೇಕ ವಾಹನಗಳು ಬಿಸಿಯಾಗುತ್ತಿವೆ ಮತ್ತು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಇದು ಕೂಡ ಘಟನೆಗೆ ಕಾರಣವಾಗಿರಬಹುದು ಎಂಬ ಮಾಹಿತಿ ತಿಳಿದು

ಬ್ರಹ್ಮಾವರ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್ Read More »

ಉಡುಪಿ: 10,680 ರೂ. ಮೌಲ್ಯದ 24.030 ಲೀ ಮದ್ಯ ವಶ

ಸಮಗ್ರ ನ್ಯೂಸ್: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ. 31 ರಂದು ಅಬಕಾರಿ ಇಲಾಖೆ ವತಿಯಿಂದ 10,680 ರೂ. ಮೌಲ್ಯದ 24.030 ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಉಡುಪಿ: 10,680 ರೂ. ಮೌಲ್ಯದ 24.030 ಲೀ ಮದ್ಯ ವಶ Read More »

ಕಾರ್ಕಳ : ಆಧುನಿಕ ವಸ್ತುಗಳಿಂದ ದುರ್ಬಲ| ವಿದ್ವಾನ್ ಕೃಷ್ಣರಾಜ ಕುತ್ಪಾಡಿ

ಸಮಗ್ರ ನ್ಯೂಸ್‌ : ಆಧುನಿಕ ವಸ್ತುಗಳಿಂದ ನಾವು ದುರ್ಬಲರಾಗುತ್ತಿದ್ದೇವೆ ಎಂದು ವಿದ್ವಾನ್ ಕೃಷ್ಣರಾಜ ಕುತ್ಪಾಡಿ ತಿಳಿಸಿದರು. ಅವರು ತಾಲ್ಲೂಕು ಮುನಿಯಾಲಿನ ಗೋಧಾಮದಲ್ಲಿ ಗೋಕುಲಾನಂದ ವಿಹಾರ ಪ್ರಕೃತಿ ಮಾತೆಯ ಮಡಿಲಲ್ಲಿ ಒಂದು ಕ್ಷಣ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಪರಿಸರ ಎಲ್ಲವನ್ನೂ ಒಳಗೊಂಡಿರುವಂತಹದು. ಅಂದರೆ ಮರ, ಗಿಡ, ಹರಿಯುವ ನೀರು ಇವುಗಳ ಜೊತೆಗೆ ಚಿಕ್ಕ ಜೀವಿಗಳೂ ಪರಿಸರದ ಅಂಶಗಳಾಗಿವೆ. ಪ್ರಕೃತಿ ನಮ್ಮ ಭೋಗಕ್ಕಲ್ಲ, ನಮ್ಮ ಬದುಕಿಗೆ. ಗುಬ್ಬಚ್ಚಿ, ಚಿಟ್ಟೆ ಇವುಗಳ ಪರಾಗ ಸ್ಪರ್ಶ ದಿಂದಲೇ ಹೂವು ಕಾಯಿ ಹಣ್ಣು ನಮಗೆ

ಕಾರ್ಕಳ : ಆಧುನಿಕ ವಸ್ತುಗಳಿಂದ ದುರ್ಬಲ| ವಿದ್ವಾನ್ ಕೃಷ್ಣರಾಜ ಕುತ್ಪಾಡಿ Read More »

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ ಸತ್ಯಜಿತ್ ಸುರತ್ಕಲ್| ಪದ್ಮರಾಜ್, ಕೋಟಾ, ಗೀತಾಗೆ ಬೆಂಬಲ ನೀಡಲು ಮನವಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ನಾರಾಯಣ‌ಗುರು ವಿಚಾರ ವೇದಿಕೆಯಿಂದ ಬಿಲ್ಲವ ಸಮುದಾಯದ ಅಭ್ಯರ್ಥಿಗಳಿಗೆ ಬೆಂಬಲ ನೀಡುವುದಾಗಿ ಸತ್ಯಜಿತ್ ಸುರತ್ಕಲ್ ತಿಳಿಸಿದ್ದಾರೆ. ಅವರು ಸೋಮವಾರದಂದು ಮಂಗಳೂರಿನಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಾರಾಯಣ‌ಗುರು ವಿಚಾರ ವೇದಿಕೆ ನಾರಾಯಣ ‌ಗುರು ಸಮುದಾಯದ ಅಭ್ಯರ್ಥಿಗಳಾದ ದ.ಕ ಕ್ಷೇತ್ರದಲ್ಲಿ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ‌ ಶ್ರೀನಿವಾಸ ಪೂಜಾರಿ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಅವರನ್ನು ಬೆಂಬಲಿಸಲಿದೆ,’ ಎಂದು ತಿಳಿಸಿದ್ದಾರೆ. ‘ವೇದಿಕೆ ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ಸಮುದಾಯವೂ ಪಕ್ಷದ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ ಸತ್ಯಜಿತ್ ಸುರತ್ಕಲ್| ಪದ್ಮರಾಜ್, ಕೋಟಾ, ಗೀತಾಗೆ ಬೆಂಬಲ ನೀಡಲು ಮನವಿ Read More »

ಉಡುಪಿ: ಸರಳೇಬೆಟ್ಟುವಿನಲ್ಲಿ ಮನೆಯೊಳಗೆ ನುಗ್ಗಿ ಕೋಳಿಗಳನ್ನು ಬಲಿ ಪಡೆದ ಚಿರತೆ

ಸಮಗ್ರ ನ್ಯೂಸ್‌ : ಮಣಿಪಾಲ ಸಮೀಪದ ಸರಳೇಬೆಟ್ಟು ಪರಿಸರದಲ್ಲಿ ಮತ್ತೆ ಚಿರತೆ ಹಾವಳಿ ಕಂಡುಬಂದಿದ್ದು, ಮನೆಯೊಂದರ ಕೋಳಿ ಗೂಡಿಗೆ ಲಗ್ಗೆ ಇಟ್ಟ ಚಿರತೆ, ಕೋಳಿಗಳನ್ನು ಬಲಿ ಪಡೆದುಕೊಂಡಿದೆ. ಸರಳೇಬೆಟ್ಟುವಿನ ರಾಮಮಂದಿರದ ಸಮೀಪ ಸುನಿತಾ ಡಿಸೋಜ ಎಂಬವರ ಮನೆಗೆ ರಾತ್ರಿ ಹೊತ್ತಿನಲ್ಲಿ ದಾಳಿ ನಡೆಸಿದ ಚಿರತೆ, ಕೋಳಿ ಗೂಡಿನಲ್ಲಿದ್ದ ಎರಡು ಕೋಳಿಗಳನ್ನು ತಿಂದಿದೆ. ಒಂದು ಕೋಳಿಯನ್ನು ಗೂಡಿನಲ್ಲಿಯೇ ಬಿಟ್ಟು ಓಡಿ ಹೋಗಿದೆ. ಈ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಕಂಡು ಬಂದಿದೆ. ಮಣಿಪಾಲದ ಸುತ್ತಮುತ್ತ ಪ್ರದೇಶಗಳಾದ ಸರಳೇಬೆಟ್ಟು, ಕೋಡಿ, ಎಂಡ್

ಉಡುಪಿ: ಸರಳೇಬೆಟ್ಟುವಿನಲ್ಲಿ ಮನೆಯೊಳಗೆ ನುಗ್ಗಿ ಕೋಳಿಗಳನ್ನು ಬಲಿ ಪಡೆದ ಚಿರತೆ Read More »

ಕಾರವಾರ :ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ: ಶಿಕ್ಷಕಿ ಸಾವು

ಸಮಗ್ರ ನ್ಯೂಸ್‌ : ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ ಹೊಡೆದು ಶಿಕ್ಷಕಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಿರ್ಜಾನಕರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ವಿಜಯಾ ಮಾಸ್ತೆಪ್ಪ ಭೋವಿ (40) ಮೃತ ಪಟ್ಟ ದುರ್ದೈವಿ. ವಿಜಯಾ ಅವರು ತಾಲ್ಲೂಕಿನ ಬಂಡಲದ ಬಡಗಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದರು. ಪತಿ ಜತೆಗೆ ವಿಜಯಾ ಅವರು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ಗೆ ನಗರಸಭೆಯ ತ್ಯಾಜ್ಯ ತುಂಬುವ ಟ್ರಕ್ ಬಡಿದಿದೆ. ಈ ವೇಳೆ ಕೆಳಗೆ ಬಿದ್ದ ಶಿಕ್ಷಕಿ ವಿಜಯಾ

ಕಾರವಾರ :ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ: ಶಿಕ್ಷಕಿ ಸಾವು Read More »