ಕರಾವಳಿ

ಮಂಗಳೂರು: ಹಿರಿಯ, ವಿಕಲಚೇತನ ಮತದಾರರು ಹಕ್ಕು ಚಲಾಯಿಸಲು ಮತಗಟ್ಟೆಗಳಲ್ಲಿಯೇ ಅಗತ್ಯ ಸೌಲಭ್ಯ

ಸಮಗ್ರ ನ್ಯೂಸ್:‌ ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಗಳಲ್ಲಿ ಅರ್ಹ ಮತದಾರರೆಲ್ಲರೂ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಪ್ರತಿಬಾರಿ ವಿವಿಧ ರೀತಿಯ ಸೌಕರ್ಯ ಕಲ್ಪಿಸಿಕೊಡುವ ಚುನಾವಣಾ ಆಯೋಗವು ಈ ಬಾರಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ಶೇ.40ಕ್ಕೂ ಹೆಚ್ಚು ಅಂಗವಿಕಲತೆ ಹೊಂದಿರುವ ವಿಕಲಚೇತನರಿಗೆ ಅಂಚೆ ಮತದ ಮೂಲಕ ಮನೆಯಿಂದಲೇ ಮತ ಚಲಾಯಿಸುವ ಅವಕಾಶ ಕಲ್ಪಿಸಿಕೊಟ್ಟಿದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ಮತದಾರರ ಪಟ್ಟಿಯಲ್ಲಿ ಗುರುತಿಸಲಾದ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕ ಮತದಾರರು ಹಾಗೂ ಶೇ.40ಕ್ಕೂ […]

ಮಂಗಳೂರು: ಹಿರಿಯ, ವಿಕಲಚೇತನ ಮತದಾರರು ಹಕ್ಕು ಚಲಾಯಿಸಲು ಮತಗಟ್ಟೆಗಳಲ್ಲಿಯೇ ಅಗತ್ಯ ಸೌಲಭ್ಯ Read More »

ಮಂಗಳೂರು: ಡಿವೈಡರ್ ಕಾರು ಢಿಕ್ಕಿ| ಬಿಜೆಪಿ ನಾಯಕಿಯ ಮೊಮ್ಮಗ ಸಾವು

ಸಮಗ್ರ ನ್ಯೂಸ್‌ : ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಮೊಮ್ಮಗ ಶಮಿತ್ ಶೆಟ್ಟಿ(29) ಯಾನೆ ಬಂಟಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಮಿತ್ ಶೆಟ್ಟಿಯವರ ಸ್ನೇಹಿತನ ಮನೆಯಲ್ಲಿ ದೈವದ ಕೋಲದಲ್ಲಿ ಭಾಗವಹಿಸಿದ ಬಳಿಕ ತೊಕ್ಕೊಟ್ಟಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆಕಾರು ಢಿಕ್ಕಿಯಾದ ರಭಸಕ್ಕೆ

ಮಂಗಳೂರು: ಡಿವೈಡರ್ ಕಾರು ಢಿಕ್ಕಿ| ಬಿಜೆಪಿ ನಾಯಕಿಯ ಮೊಮ್ಮಗ ಸಾವು Read More »

ಪಿಲಿಕುಳ ಜೈವಿಕ ಉದ್ಯಾನವನದಿಂದ ತಪ್ಪಿಸಿಕೊಂಡ ಬೃಹತ್ ಕಾಳಿಂಗ‌ ಸರ್ಪ

ಸಮಗ್ರ ನ್ಯೂಸ್: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಿಂದ ಬೃಹತ್ ಕಾಳಿಂಗ‌ ಸರ್ಪ ತಪ್ಪಿಸಿಕೊಂಡ ಘಟನೆ ನಡೆದಿದೆ. ಕಾಳಿಂಗ ಸರ್ಪ ತಪ್ಪಿಸಿಕೊಂಡು ಜೈವಿಕ ಉದ್ಯಾನವನದ ಟಿಕೆಟ್​ ಕೌಂಟರ್ ಬಳಿ ಬಂದಿತ್ತು. ಕಾಳಿಂಗ‌ ಸರ್ಪ ಕಂಡು ಜನರು ಹೆದರಿದ್ದಾರೆ. ಬಳಿಕ ರಸ್ತೆ ದಾಟಿ ವಿಜ್ಞಾನ ಕೇಂದ್ರದತ್ತ ಸಾಗಿದ್ದು, ಸದ್ಯ ಕಾಳಿಂಗ‌ ಸರ್ಪ ಹಿಡಿಯಲು ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ. ಇನ್ನು ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಕಾಳಿಂಗ ಸರ್ಪ ತಪ್ಪಿಸಿಕೊಂಡಿದೆ ಎಂದು ಜನರು ಆರೋಪಿಸಿದ್ದಾರೆ.

ಪಿಲಿಕುಳ ಜೈವಿಕ ಉದ್ಯಾನವನದಿಂದ ತಪ್ಪಿಸಿಕೊಂಡ ಬೃಹತ್ ಕಾಳಿಂಗ‌ ಸರ್ಪ Read More »

ಬಂಟ್ವಾಳ : ಅಕ್ರಮ ಮರಳು ಸಾಗಾಟ|ನಾಲ್ವರ ಅರೆಸ್ಟ್‌

ಸಮಗ್ರ ನ್ಯೂಸ್‌ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೊಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಇತ್ತೀಚೆಗೆ ನಡೆದಿದೆ. ಕನ್ಯಾನ ನಿವಾಸಿ ಅಬ್ದುಲ್ ರಹಮಾನ್‌ (೨೧),ಅಡ್ಯಾರು ನಿವಾಸಿ ಮಹಮ್ಮದ್ ಸಾದಿಕ್ , ಕಂಬಳಬೆಟ್ಟು ನಿವಾಸಿ ಗೌತಮ್(೨೧), ಕೆಲಿಂಜ ನಿವಾಸಿ ಗುಡ್ಡಪ್ಪ ಗೌಡ ಎಂಬವರು ಆರೋಪಿಗಳಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನರಿಕೊಂಬು

ಬಂಟ್ವಾಳ : ಅಕ್ರಮ ಮರಳು ಸಾಗಾಟ|ನಾಲ್ವರ ಅರೆಸ್ಟ್‌ Read More »

ಮಂಗಳೂರು: ಹುಡುಗಿಯ ವಿಚಾರ- ಯುವಕನಿಗೆ ಹಿಗ್ಗಾ ಮುಗ್ಗಾ ಥಳಿತ

ಸಮಗ್ರ ನ್ಯೂಸ್‌: ನಗರದ ಪ್ರತಿಷ್ಠಿತ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳಾಗಿರುವ ಯುವಕರು ಹುಡುಗಿ ವಿಚಾರದಲ್ಲಿ ಹೊಡೆದಾಡಿದ್ದು, ಒಬ್ಬ ಯುವಕನಿಗೆ ಮುಖದಲ್ಲಿ ರಕ್ತ ಹರಿಯುವಂತೆ ಹಿಗ್ಗಾಮುಗ್ಗಾ ಹೊಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ನೀರುಮಾರ್ಗದಲ್ಲಿ ಈ ಘಟನೆ ನಡೆದಿದ್ದು ವಿಡಿಯೋದಲ್ಲಿ ಯುವಕರ ಹೊಡೆದಾಟದ ದೃಶ್ಯ ಇದೆ. ಬಟ್ಟೋಡಿ ನಿವಾಸಿ ಯುವಕ ತಾನು ಪ್ರೀತಿಸುತ್ತಿದ್ದ ಹುಡುಗಿಯಲ್ಲಿ ಪದೇ ಪದೇ ಹಣ ಕೇಳಿ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಯುವತಿ ತನ್ನ ನೀರುಮಾರ್ಗದ ಗೆಳೆಯನಿಗೆ ವಿಷಯ ತಿಳಿಸಿದ್ದಳು. ವಿಷಯ ತಿಳಿದ ಲವರ್ ಯುವಕ

ಮಂಗಳೂರು: ಹುಡುಗಿಯ ವಿಚಾರ- ಯುವಕನಿಗೆ ಹಿಗ್ಗಾ ಮುಗ್ಗಾ ಥಳಿತ Read More »

ಉಡುಪಿ:ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ ಮೀನುಗಾರರ ರಕ್ಷಣೆ

ಸಮಗ್ರ ನ್ಯೂಸ್‌ : ಬೋಟ್​​ನಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ 8 ಮಂದಿ ಮೀನುಗಾರರನ್ನು ಉಡುಪಿ ಜಿಲ್ಲೆಯ ಕುಂದಾಪುರದ ಅರಬ್ಬಿ ಸಮುದ್ರದಲ್ಲಿ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ 8 ಮಂದಿ ಬೋಟ್​ ಹಾನಿಗೀಡಾಗಿ ಅಪಾಯಕ್ಕೆ ಸಿಲುಕಿದ್ದರು. ಕಲ್ಮಾಡಿಯ ಪ್ಯಾರು ಎಸ್. ಎಂಬವರ ಒಡೆತನದ ಬೋಟ್​ ಅಪಾಯಕ್ಕೆ ಸಿಲುಕಿತ್ತು. ಬೋಟ್​​ನ ತಳಭಾಗ ಒಡೆದು ನೀರು ಒಳನುಗ್ಗಲಾರಂಭಿಸಿತ್ತು. ಅಪಾಯದ ಅರಿವಾಗುತ್ತಿದ್ದಂತೆಯೇ ಬೋಟ್​ನಲ್ಲಿದ್ದ ಮೀನುಗಾರರು ಪೊಲೀಸರಿಗೆ ವಿಷಯ ತಿಳಿಸಿದ್ದರು. ತಕ್ಷಣವೇ ಪೊಲೀಸರು ಕರಾವಳಿ ಕಾವಲು ಪಡೆಗೆ

ಉಡುಪಿ:ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ ಮೀನುಗಾರರ ರಕ್ಷಣೆ Read More »

ಮಂಗಳೂರು: ಮಾದಕ ವಸ್ತು ಮಾರಾಟ- ಆರೋಪಿ ಬಂಧನ

ಸಮಗ್ರ ನ್ಯೂಸ್‌ :: ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಇದೀಗ ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 46 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಲೊರೊಟೊ ಬರೆಕಾಡು ನಿವಾಸಿ ಅಬ್ದುಲ್ ಸಮದ್ ಯಾನೆ ಚಮ್ಮು (36) ಎಂದು ಗುರುತಿಸಲಾಗಿದೆ. ಈತನಿಂದ 2,30,000 ರೂ. ಮೌಲ್ಯದ 46 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು: ಮಾದಕ ವಸ್ತು ಮಾರಾಟ- ಆರೋಪಿ ಬಂಧನ Read More »

ಕೋಲ್ಪೆ: ಗೂಡಂಗಡಿಯಿಂದ 15 ಸಾವಿರ ರೂ.ಮೌಲ್ಯದ ವಸ್ತು ಕಳವು..!

ಸಮಗ್ರ ನ್ಯೂಸ್‌ : ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಗೂಡಂಗಡಿಯೊಂದರಿಂದ ಕಳ್ಳತನ ಮಾಡಿರುವ ಘಟನೆ ಕೊಣಾಲು ಗ್ರಾಮದ ಕೋಲ್ಪೆ ಬದ್ರಿಯಾ ಜುಮಾ ಮಸೀದಿ ಮುಂಭಾಗದಲ್ಲಿ ನಡೆದಿದೆ. ಕೋಲ್ಪೆ ನಿವಾಸಿ ಮುಸ್ತಫಾ ಎಂಬವರ ಬದ್ರಿಯಾ ಸ್ಟೋರ್ ಗೂಡಂಗಡಿಯಲ್ಲಿ ಈ ಕಳ್ಳತನ ನಡೆದಿದೆ. ಮುಸ್ತಫಾ ಅವರು ಮಾ.20ರಂದು ರಾತ್ರಿ 9 ಗಂಟೆ ವೇಳೆಗೆ ಅಂಗಡಿ ಬಂದ್ ಮಾಡಿ ಮನೆಗೆ ಹೋಗಿದ್ದು ಮಾ.21ರಂದು ಮುಂಜಾನೆ 3 ಗಂಟೆ ವೇಳೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಅಂಗಡಿಯಲ್ಲಿದ್ದ 4 ಸಾವಿರ ನಗದು, ವಿಮಲ್,

ಕೋಲ್ಪೆ: ಗೂಡಂಗಡಿಯಿಂದ 15 ಸಾವಿರ ರೂ.ಮೌಲ್ಯದ ವಸ್ತು ಕಳವು..! Read More »

ಬೆಳ್ತಂಗಡಿ: ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ| ಮದ್ಯ ಸಹಿತ ಆರೋಪಿ ವಶ

ಸಮಗ್ರ ನ್ಯೂಸ್:‌ ಅಕ್ರಮವಾಗಿ ಗೋಡೌನ್ ನಲ್ಲಿ ಮದ್ಯವನ್ನು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳ ಸಿಬ್ಬಂದಿಗಳು ದಾಳಿ ನಡೆಸಿ ಮದ್ಯ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಮಿನಂದೆಲ್ ನಿವಾಸಿ ಶೀನ ಗೌಡರ ಮಗ ದಯಾನಂದ ಗೌಡ (47) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಿನಂದೆಲ್ ಬಾನಿ ಮೆನ್ಸ್

ಬೆಳ್ತಂಗಡಿ: ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ| ಮದ್ಯ ಸಹಿತ ಆರೋಪಿ ವಶ Read More »

ನೆಲ್ಯಾಡಿ: ಡಿಸೇಲ್ ಸಾಗಾಟದ ಟ್ಯಾಂಕರ್ ಪಲ್ಟಿ; ಇಬ್ಬರಿಗೆ ಗಾಯ..!

ಸಮಗ್ರ ನ್ಯೂಸ್‌ : ಡೀಸಿಲ್ ಟ್ಯಾಂಕರ್ ಪಲ್ಟಿಯಾಗಿ ಡೀಸಿಲ್ ಸೋರಿಕೆ ಉಂಟಾಗಿ ಇಬ್ಬರೂ ಗಾಯಗೊಂಡ ಘಟನೆ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಟ್ಯಾಂಕರ್ ಡ್ರೈವರ್ ಮೋಹಿಲ್ ಮತ್ತು ಮನೀಶ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಡೀಸಿಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಪಲ್ಟಿಯಾಗಿದ್ದು. ಕೆಲ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿದೆ. ಗಾಯಗೊಂಡವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ

ನೆಲ್ಯಾಡಿ: ಡಿಸೇಲ್ ಸಾಗಾಟದ ಟ್ಯಾಂಕರ್ ಪಲ್ಟಿ; ಇಬ್ಬರಿಗೆ ಗಾಯ..! Read More »