ಕರಾವಳಿ

ಮಂಗಳೂರು: ಅಕ್ರಮ 642 ಲೀಟರ್ ಮದ್ಯ, 1.7 ಕೆಜಿ ಡ್ರಗ್ಸ್ ವಶ

ಸಮಗ್ರ ನ್ಯೂಸ್:‌ 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 22 ರವರೆಗೆ ಜಿಲ್ಲೆಯಲ್ಲಿ 3,75,022 ರೂಪಾಯಿ ಮೌಲ್ಯದ 642 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 5,43,500 ರೂ. ಮೌಲ್ಯದ 1.7 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ದೂರವಾಣಿ ಮೂಲಕ (1950) 97 ಸಾರ್ವಜನಿಕರಿಂದ ಮಾಹಿತಿ ಕೋರಿಕೆಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದೆ. ಸಿ-ವಿಸಿಲ್ ಆಪ್ ಮೂಲಕ ಇಲ್ಲಿಯವರೆಗೆ 600 ದೂರುಗಳು ಸ್ವೀಕೃತಗೊಂಡಿದ್ದು ಎಲ್ಲಾ ದೂರುಗಳನ್ನು ವಿಲೇವಾರಿ ಮಾಡಲಾಗಿರುತ್ತದೆ. ಎನ್.ಜಿ.ಆರ್.ಎಸ್ ಪೋರ್ಟಲ್ (ರಾಷ್ಟ್ರೀಯ ಕುಂದುಕೊರತೆಗಳ […]

ಮಂಗಳೂರು: ಅಕ್ರಮ 642 ಲೀಟರ್ ಮದ್ಯ, 1.7 ಕೆಜಿ ಡ್ರಗ್ಸ್ ವಶ Read More »

ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಯುವಕ ಸಾವು

ಸಮಗ್ರ ನ್ಯೂಸ್‌ : ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಮೃತ ಪಟ್ಟ ಘಟನೆ ಶುಕ್ರವಾರ ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ನಡೆದಿದೆ. ಅಂಗಡಿ ಪದವಿನ ಪ್ರಜ್ವಲ್ (19) ಮೃತ ಪಟ್ಟ ಯುವಕ. ಬೈಕ್ ವರ್ಕ್ಸ್ ಶೋಪ್ ನಲ್ಲಿ ದುಡಿಯುತ್ತಿದ್ದ ಪ್ರಜ್ವಲ್ ಗೆ ಶಾಕ್ ತಗಲಿದ್ದು , ಬೊಬ್ಬೆ ಕೇಳಿ ಧಾವಿಸಿ ಬಂದ ಸ್ಥಳೀಯರು ವಿದ್ಯುತ್ ಕಂಬದಿಂದ ವಿದ್ಯುತ್ ವಯರನ್ನು ವಿಚ್ಚೇಧಿಸಿ ಯುವಕನನ್ನು ಉಪ್ಪಳದ ಆಸ್ಪತ್ರೆಗೆ ಕೊಂಡೊಯ್ದರೂ ದಾರಿ ಮಧ್ಯೆ ಮೃತ ಪಟ್ಟರು. ಮೃತ ದೇಹವನ್ನು ಮಂಗಲ್ಪಾಡಿ

ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಯುವಕ ಸಾವು Read More »

ಲೋಕಸಭೆ ಚುಣಾವಣೆಯ|ಕಡಬ ಬ್ಲಾಕ್ ಕಾಂಗ್ರೆಸ್ ವೀಕ್ಷಕರಾಗಿ ಯುವ ಮುಖಂಡ ಕಿರಣ್ ಬುಡ್ಲೆಗುತ್ತು ನೇಮಕ

ಸಮಗ್ರ ನ್ಯೂಸ್: ಲೋಕಸಭೆ ಚುಣಾವಣೆ ಹಿನ್ನಲೆಯಲ್ಲಿ ಕಡಬ ಬ್ಲಾಕ್ ವಿಕ್ಷಕರಾಗಿ ಸಂಘಟನಾ ಚತುರ ಹಾಗು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿ ಕಿರಣ್ ಬುಡ್ಲೆಗುತ್ತು ಅವರನ್ನು ಕಡಬ ಬ್ಲಾಕ್ ಕಾಂಗ್ರೆಸ್ ವೀಕ್ಷಕರಾಗಿ ನೇಮಕ ಮಾಡಿದ್ದಾರೆ.

ಲೋಕಸಭೆ ಚುಣಾವಣೆಯ|ಕಡಬ ಬ್ಲಾಕ್ ಕಾಂಗ್ರೆಸ್ ವೀಕ್ಷಕರಾಗಿ ಯುವ ಮುಖಂಡ ಕಿರಣ್ ಬುಡ್ಲೆಗುತ್ತು ನೇಮಕ Read More »

ಸುಳ್ಯ:ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ವತಿಯಿಂದ ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರಿಗೆ ಅಭಿನಂದನೆ- ಸನ್ಮಾನ

ಸಮಗ್ರ ನ್ಯೂಸ್:ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಗೊಂಡ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ನಿರ್ದೇಶಕ ಸದಾನಂದ ಮಾವಜಿ ಅವರನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಮತ್ತು ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ ಅವರು ಸದಾನಂದ ಮಾವಜಿ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕ ರಾಮಚಂದ್ರ ಎಂ., ಜಯರಾಮ ರೈ ಜಾಲ್ಸೂರು, ವಸಂತ

ಸುಳ್ಯ:ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ವತಿಯಿಂದ ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರಿಗೆ ಅಭಿನಂದನೆ- ಸನ್ಮಾನ Read More »

ಮಂಗಳೂರು, ಮಲೆನಾಡಿನ‌ ಹಲವೆಡೆ ಸುರಿದ ಬೇಸಿಗೆ ಮಳೆ| ಇಂದು ಉತ್ತಮ‌ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೆ ಮಳೆ ದರ್ಶನ ನೀಡಿದೆ. ಕಳೆದ ವಾರ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿ ಕಣ್ಮರೆಯಾಗಿದ್ದ ಮಳೆ, ಈ ವಾರಾಂತ್ಯದಲ್ಲಿ ಮತ್ತೆ ಹಲವು ಕಡೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆ ಆರಂಭವಾಗಿದೆ. ಗುರುವಾರ ಸಂಜೆ ಜಿಲ್ಲೆಯ ಶೃಂಗೇರಿಯಲ್ಲಿ ಉತ್ತಮ ಮಳೆಯಾಗಿದೆ. ದ.ಕ ಜಿಲ್ಲೆಯ ಮಂಗಳೂರು ನಗರ, ಗ್ರಾಮಾಂತರ ಭಾಗದ ಅಲ್ಲಲ್ಲಿ, ಬದಿಯಡ್ಕ, ಪಾಣಾಜೆ,‌ ಸುಳ್ಯ ಸಹಿತ ಅಲ್ಲಲ್ಲಿ ಶುಕ್ರವಾರ ಮುಂಜಾನೆ ಹಗುರದಿಂದ ಹಲವು ಕಡೆ ಮಳೆಯಾಗಿದೆ. ಭಾರತೀಯ ಹವಾಮಾನ

ಮಂಗಳೂರು, ಮಲೆನಾಡಿನ‌ ಹಲವೆಡೆ ಸುರಿದ ಬೇಸಿಗೆ ಮಳೆ| ಇಂದು ಉತ್ತಮ‌ ಮಳೆ ಸಾಧ್ಯತೆ Read More »

ಮಂಗಳೂರು: ಮಾ. 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭದ ಹಿನ್ನಲೆ |ನಿಷೇಧಾಜ್ಞೆ ಜಾರಿ

ಸಮಗ್ರ ನ್ಯೂಸ್‌ : ಎಸ್.ಎಸ್.ಎಲ್.ಸಿ ಪರೀಕ್ಷೆ ಮಾ.25 ರಿಂದ ಎಪ್ರಿಲ್ 6ರ ವರೆಗೆ ನಡೆಯಲಿದ್ದು, ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 39 ಪರೀಕ್ಷಾ ಕೇಂದ್ರಗಳಿವೆ.ಆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೊಲೀಸ್ ಆಯುಕ್ತರೂ ಆಗಿರುವ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಸಿದ್ದಾರ್ಥ್ ಗೋಯಲ್ ಆದೇಶಿಸಿದ್ದಾರೆ. ನಿಷೇಧಿತ

ಮಂಗಳೂರು: ಮಾ. 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭದ ಹಿನ್ನಲೆ |ನಿಷೇಧಾಜ್ಞೆ ಜಾರಿ Read More »

ನ್ಯಾಷನಲ್ ಕಬಡ್ಡಿ ಚಾಂಪಿಯನ್‌ ಶಿಪ್ ಗೆ ಮಿಥುನ್ ಏನೆಕಲ್ ಆಯ್ಕೆ

ಸಮಗ್ರ ನ್ಯೂಸ್:ಮಾ.21 ರಿಂದ ಮಾ.23 ರ ತನಕ ಮಹಾರಾಷ್ಟ್ರದಲ್ಲಿ ನಡೆಯಲಿರುವ 70ನೇ ಸೀನಿಯರ್ ನ್ಯಾಷನಲ್ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡದ ಪ್ರತಿನಿಧಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಏನೇಕಲ್ಲಿನ ಮಿಥುನ್ ಗೌಡ ಆಯ್ಕೆ. ಇವರು ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜಿನ ಪೈನಲ್ ಬಿ.ಎ ವಿದ್ಯಾರ್ಥಿ. ಏನೆಕಲ್ಲು ಗ್ರಾಮದ ಸುಂದರ ಗೌಡ ಮತ್ತು ವಸಂತಿ ದಂಪತಿಗಳ ಪುತ್ರ.

ನ್ಯಾಷನಲ್ ಕಬಡ್ಡಿ ಚಾಂಪಿಯನ್‌ ಶಿಪ್ ಗೆ ಮಿಥುನ್ ಏನೆಕಲ್ ಆಯ್ಕೆ Read More »

ಮಂಗಳೂರು: ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ|ಮರಳು ಸಾಗಾಟ ಆರೋಪ

ಸಮಗ್ರ ನ್ಯೂಸ್‌ : ಲಾರಿಗಳ ನಂಬರ್ ಪ್ಲೇಟ್ ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರಳು ಸಾಗಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು, ಮಂಗಳೂರಿನ ಕಣ್ಣೂರಿನಲ್ಲಿ ಮಧ್ಯರಾತ್ರಿ ರಸ್ತೆ ತಡೆದು ಸ್ಥಳೀಯರು ಪ್ರತಿಭಟನೆ ಮಾಡಿದ್ದಾರೆ. ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಅಲ್ಲದೆ ಕಣ್ಣೂರು ಸಮೀಪ ನಂಬರ್ ಪ್ಲೇಟ್ ಮಾಸಿದ ಮರಳು ಸಾಗಾಟದ ಲಾರಿ ಡಿವೈಡರಿಗೆ ಢಿಕ್ಕಿಯಾಗಿದ್ದು, ಪರಿಣಾಮ ಸಾರ್ವಜನಿಕರು ಲಾರಿಗಳನ್ನು ತಡೆಹಿಡಿದ್ದಾರೆ ಈ ವೇಳೆ ಉದ್ವಿಘ್ನ

ಮಂಗಳೂರು: ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ|ಮರಳು ಸಾಗಾಟ ಆರೋಪ Read More »

ಸೌದಿ ಅರೇಬಿಯಾದಲ್ಲಿ ಭೀಕರಅಪಘಾತ| ಹಳೆಯಂಗಡಿಯ ನಾಲ್ವರು ಮೃತ್ಯು

ಸಮಗ್ರ ನ್ಯೂಸ್‌ : ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಂಗಳೂರು ಹೊರವಲಯದ ಹಳೆಯಂಗಡಿ ಮೂಲದ ದಂಪತಿ, 3 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕತಾರ್‌ನಿಂದ ಸೌದಿ ಅರೇಬಿಯಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ಮಗುವಿನೊಂದಿಗೆ ದಂಪತಿ ತೆರಳುತ್ತಿದ್ದಾಗ ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ದುರ್ಘಟನೆಯ ಮಹಿತಿ ಸಿಕ್ಕಿದ ಕೂಡಲೇ ಸ್ಥಳೀಯ ಅಧಿಕಾರಿಗಳು ಘಟನನಾ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನ

ಸೌದಿ ಅರೇಬಿಯಾದಲ್ಲಿ ಭೀಕರಅಪಘಾತ| ಹಳೆಯಂಗಡಿಯ ನಾಲ್ವರು ಮೃತ್ಯು Read More »

ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸಮಗ್ರ ನ್ಯೂಸ್‌ : ಅರಣ್ಯ ಪರಿಸರದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸೊತ್ತುಗಳ ಪತ್ತೆಯಾದ ಘಟನೆ ಬೆಳ್ತಂಗಡಿ ಪುದುವೆಟ್ಟು‌ಗ್ರಾಮದ ಬೋಳ್ಮಿನಾರು, ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಳೆಂಜ ಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳದಲ್ಲಿ ಮದ್ಯದ

ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »