ಕರಾವಳಿ

ಪಣಂಬೂರು : ಶವ ಪತ್ತೆ- ಕೊಲೆ ಶಂಕೆ

ಸಮಗ್ರ ನ್ಯೂಸ್: ಪಣಂಬೂರು-ಜೋಕಟ್ಟೆ ಬಯಲು ಪ್ರದೇಶದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಎಂಬ ಸಂಶಯ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲವಾದರೂ, ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಶವ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪಣಂಬೂರು : ಶವ ಪತ್ತೆ- ಕೊಲೆ ಶಂಕೆ Read More »

ಕಾರ್ಕಳ: ಟೂರಿಸ್ಟ್ ಮಿನಿ ಬಸ್‌ ಪಲ್ಟಿ

ಸಮಗ್ರ ನ್ಯೂಸ್‌ : ಕುಕ್ಕುಂದೂರು ಗಣಿತ ನಗರ ಸಮೀಪದ ಮಸೀದಿಯ ಹತ್ತಿರ ಕಾರ್ಕಳ ಕಡೆಯಿಂದ ಉಡುಪಿಗೆ ಹೋಗುತ್ತಿದ್ದ ಟೂರಿಸ್ಟ್ ಮಿನಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಸಂಭವಿಸಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಲಕನು ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ವಾಹನ ಚಲಾಯಿಸಿರುವುದೇ ಕಾರಣವೆನ್ನಲಾಗಿದೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಟೂರಿಸ್ಟ್ ಮಿನಿ ಬಸ್‌ ಪಲ್ಟಿ Read More »

ಉಡುಪಿ ಚಿತ್ತರಂಜನ್ ವೃತ್ತದ ಮಂಟಪಕ್ಕೆ ಹಾನಿ| ದುರಸ್ತಿಗೆ ಆಗ್ರಹ

ಸಮಗ್ರ ನ್ಯೂಸ್: ಅಪರಿಚಿತ ವಾಹನವೊಂದು ನಗರದ ಚಿತ್ತರಂಜನ್ ಸರ್ಕಲ್ ನಲ್ಲಿರುವ ಮಂಟಪಕ್ಕೆ ಡಿಕ್ಕಿ ಹೊಡೆದಿದ್ದು, ಇದರಿಂದ ಮಂಟಪಕ್ಕೆ ಹಾನಿ ಉಂಟಾಗಿದೆ. ವಾಹನ ಗುದ್ದಿದ ತೀವ್ರತೆಗೆ ಮಂಟಪದ ನಾಲ್ಕು ಕಂಬಗಳಲ್ಲಿಯೂ ಬಿರುಕು ಬಿಟ್ಟಿದ್ದು, ಮಂಟಪು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಮಂಟಪದ ನೆರಳಿನಲ್ಲಿ ವಲಸೆ ಕಾರ್ಮಿಕರು, ಹಮಾಲಿಗಳು ವಿಶ್ರಾಂತಿ ಪಡೆಯುತ್ತಿರುತ್ತಾರೆ. ಇದೀಗ ನಾಲ್ಕು ಕಂಬಗಳು ಶಿಥಿಲಗೊಂಡಿರುವುದರಿಂದ ಗೋಪುರದ ಭಾರದ ನಿಯಂತ್ರಣ ಸಿಗದೆ ಮಂಟಪವು ಯಾವುದೇ ಕ್ಷಣದಲ್ಲಿಯೂ ಉರುಳಿಬಿದ್ದು, ಸಾವು ನೋವು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ತಕ್ಷಣವೇ ನಗರಸಭೆ ಅಧಿಕಾರಿಗಳು

ಉಡುಪಿ ಚಿತ್ತರಂಜನ್ ವೃತ್ತದ ಮಂಟಪಕ್ಕೆ ಹಾನಿ| ದುರಸ್ತಿಗೆ ಆಗ್ರಹ Read More »

ಹೆಚ್ಚುತ್ತಿರುವ ಪ್ರಯಾಣಿಕರು/ ತಾತ್ಕಾಲಿಕ ಹೆಚ್ಚುವರಿ ಬೋಗಿ ಸೇರ್ಪಡೆಗೊಳಿಸಿದ ರೈಲ್ವೆ ಇಲಾಖೆ

ಸಮಗ್ರ ನ್ಯೂಸ್: ರೈಲ್ವೆ ಇಲಾಖೆ ಕೆಲವು ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚುತ್ತಿರುವ ಕುರಿತು ಗಮನಹರಿಸಿದ್ದು, ಹೀಗಾಗಿ ತಾತ್ಕಾಲಿಕ ಹೆಚ್ಚುವರಿ ಬೋಗಿ ಸೇರ್ಪಡೆಗೊಳಿಸಿದೆ. ಮಂಗಳೂರು ಸೆಂಟ್ರಲ್ – ತಿರುವನಂತಪುರ ಸೆಂಟ್ರಲ್ ಮಾವೇಲಿ ಎಕ್ಸ್‍ಪ್ರೆಸ್‍ಗೆ (ರೈಲು ಸಂಖ್ಯೆ 16603, 16604) ಮಾ. 27 ರಿಂದ 31 ರವರೆಗೆ ಮಂಗಳೂರಿನಿಂದ ತಿರುವನಂತಪುರಂಗೆ ಹಾಗೂ ಮಾ. 28ರಿಂದ ಏ. 1ರವರೆಗೆ ತಿರುವನಂತಪುರಂನಿಂದ ಮಂಗಳೂರಿಗೆ ಒಂದು ಎಸಿ 3-ಟೈರ್ ಬೋಗಿ ಹೆಚ್ಚಿಸಲಾಗಿದೆ. ಮಾ. 27, 29 ಮತ್ತು 31ರಂದು ರೈಲು ಸಂಖ್ಯೆ 16348 ಮಂಗಳೂರು

ಹೆಚ್ಚುತ್ತಿರುವ ಪ್ರಯಾಣಿಕರು/ ತಾತ್ಕಾಲಿಕ ಹೆಚ್ಚುವರಿ ಬೋಗಿ ಸೇರ್ಪಡೆಗೊಳಿಸಿದ ರೈಲ್ವೆ ಇಲಾಖೆ Read More »

ಸುಳ್ಯ: ಕಾರು – ಟಾಟಾ ಏಸ್ ನಡುವೆ ಡಿಕ್ಕಿ

ಸಮಗ್ರ ನ್ಯೂಸ್: ನಿಲ್ಲಿಸಿದ್ದ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆಗೆ ಚಲಿಸಿದ ಕಾರಣದಿಂದ ಹಿಂಬದಿಯಿಂದ ಬಂದ ಟಾ ಟಾ ಏಸ್ ಗಾಡಿ ಡಿಕ್ಕಿ ಹೊಡೆದು ವಾಹನಗಳೆರಡೂ ಜಖಂಗೊಂಡ ಘಟನೆ ಸುಳ್ಯ ನಗರದ ಜ್ಯೋತಿ ವೃತ್ತದ ಬಳಿ ಸಂಭವಿಸಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರು ಮುಂದಕ್ಕೆ ಚಲಿಸಲು ರಸ್ತೆಗೆ ನುಗ್ಗಿದ್ದು, ಇದರಿಂದ ರಸ್ತೆಯಲ್ಲಿ ಚಲಿಸುತ್ತಿದ್ದ ಟಾಟಾ ಏಸ್ ಗಾಡಿ ಕಾರಿಗೆ ಗುದ್ದಿರುವುದಾಗಿ ಹೇಳಲಾಗಿದೆ. ಎರಡೂ ವಾಹನಗಳು ಜಖಂಗೊಂಡಿರುವುದಾಗಿ ತಿಳಿದುಬಂದಿದೆ.

ಸುಳ್ಯ: ಕಾರು – ಟಾಟಾ ಏಸ್ ನಡುವೆ ಡಿಕ್ಕಿ Read More »

ಕಡಬ: ಅಕ್ರಮ ಆಸ್ತಿ ಗಳಿಕೆ ಪ್ರಕರಣ| ತಾ.ಪಂ ಇಒ ಬಿ.ವಿ ಜಯಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ

ಸಮಗ್ರ ನ್ಯೂಸ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಜಯಣ್ಣ ಅವರ ಕಡಬದ ಪಂಜ ರಸ್ತೆಯ ವಿದ್ಯಾನಗರದ ಬಾಡಿಗೆ ಮನೆ ಹಾಗೂ ಕಛೇರಿಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಕುಶಾಲನಗರ ನಿವಾಸಿಯಾಗಿರುವ ಬಿ.ವಿ.ಜಯಣ್ಣ, ಸೋಮವಾರಪೇಟೆ ಪಟ್ಟಣ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಚುನಾವಣಾ ಹಿನ್ನೆಲೆಯಲ್ಲಿ ಅವರು ಕಡಬ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವಾರದ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಅಕ್ರಮ ಆಸ್ತಿ ಗಳಿಕೆಯ ಹಿನ್ನೆಲೆಯಲ್ಲಿ

ಕಡಬ: ಅಕ್ರಮ ಆಸ್ತಿ ಗಳಿಕೆ ಪ್ರಕರಣ| ತಾ.ಪಂ ಇಒ ಬಿ.ವಿ ಜಯಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ Read More »

ಕೋಮು ದಳ್ಳುರಿಗೆ ಬೆಂದ ಕರಾವಳಿಯಲ್ಲಿ ತೆರೆದ ಸಾಮರಸ್ಯದ ಅಂಗಡಿ| ದೈವಸ್ಥಾನದ ಆಡಳಿತ ಮಂಡಳಿಯಿಂದ ಇಪ್ತಾರ್ ಆಯೋಜನೆ

ಸಮಗ್ರ ನ್ಯೂಸ್: ಹಿಂದೂ – ಮುಸ್ಲಿಂ ಭಾವೈಕ್ಯತೆಗೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಸಾಕ್ಷಿಯಾಗಿದೆ. ಬಂಟ್ವಾಳ ತಾಲೂಕಿನ ಕೆದಿಲ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದಲ್ಲಿ ಇತ್ತೀಚೆಗೆ ಬ್ರಹ್ಮಕಲಶೋತ್ಸವದಲ್ಲಿ ಮುಸ್ಲಿಮರು ಭಾಗವಹಿಸಿದ್ದರು. ಮುಸ್ಲಿಂ ಸಮುದಾಯದವರ ಸಹಕಾರಕ್ಕೆ ಪ್ರತಿಯಾಗಿ, ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಸಾಮಾನ್ಯವಾಗಿ ಕರಾವಳಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೊರೆಕಾಣಿಕೆ ಸಲ್ಲಿಸುವ ಪದ್ದತಿಯಿದೆ. ಅದೇ ರೀತಿ ಕೆದಿಲ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆದಿತ್ತು. ಬ್ರಹ್ಮಕಲಶೋತ್ಸವಕ್ಕೆ ಹೊರೆಕಾಣಿಕೆ ಬರುವ ಸಂದರ್ಭ ಪರಿಸರದ ಮಸೀದಿ ವ್ಯಾಪ್ತಿಯ

ಕೋಮು ದಳ್ಳುರಿಗೆ ಬೆಂದ ಕರಾವಳಿಯಲ್ಲಿ ತೆರೆದ ಸಾಮರಸ್ಯದ ಅಂಗಡಿ| ದೈವಸ್ಥಾನದ ಆಡಳಿತ ಮಂಡಳಿಯಿಂದ ಇಪ್ತಾರ್ ಆಯೋಜನೆ Read More »

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ|ಸವಾರ ಸಾವು

ಸಮಗ್ರ ನ್ಯೂಸ್:‌ ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ವಾಣಿ ಕಾಲೇಜು ಸಮೀಪ ನಡೆದಿದೆ. ಮೃತ ಯುವಕನನ್ನು ಬೆಳ್ತಂಗಡಿ ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ದಿ. ಜಯರಾಮ ಎಂಬವರ ಪುತ್ರ ಪುರುಷೋತ್ತಮ (19) ಎಂದು ಗುರುತಿಸಲಾಗಿದೆ. ರಾಘವೇಂದ್ರ ನಗರ ನಿವಾಸಿ ತೌಸೀಫ್ ಎಂಬವರ ಪುತ್ರ ತೌಫೀಕ್ (18) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಗುರುವಾಯನಕೆರೆಯಿಂದ

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ|ಸವಾರ ಸಾವು Read More »

ಕಾರ್ಕಳ: ರಾತ್ರಿ ನಿದ್ರಿಸಿದ್ದ ವೇಳೆ ಮನೆಗೆ ನುಗ್ಗಿ 2.25 ಲಕ್ಷ ನಗದು ಕಳ್ಳತನ

ಸಮಗ್ರ ನ್ಯೂಸ್:‌ ಮನೆಮಂದಿ ಮಲಗಿದ್ದ ವೇಳೆ ಕಳ್ಳರು ಕಿಟಕಿಯ ಬಾಗಿಲ ಚಿಲಕ ಮುರಿದು ಮನೆಯ ಒಳನುಗ್ಗಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2.25 ಲಕ್ಷ ನಗದು ದೋಚಿದ ಘಟನೆ ಕುಕ್ಕುಂದೂರು ನಲ್ಲಿ ನಡೆದಿದೆ. ಇಲ್ಲಿನ ಜೋಡುರಸ್ತೆ ನಿವಾಸಿ ಜಗದೀಶ್ ಬಿ.ಎ. ಅವರ ಮನೆಯಲ್ಲಿ ಕಳ್ಳತನವಾಗಿದ್ದು, ರಾತ್ರಿ ಮನೆಯ ಬಾಗಿಲು ಹಾಕಿ ಭದ್ರಪಡಿಸಿ ಮಲಗಿದ್ದರು. ಆದರೆ ಬೆಳಗ್ಗಿನ ಜಾವ 3: 40 ಗಂಟೆಗೆ ಜಗದೀಶ್ ರವರು ಮಲಗಿದ್ದ ಕೋಣೆಯು ತೆರೆದ ಶಬ್ದ ಕೇಳಿ ಎದ್ದು ನೋಡಿದಾಗ ಮನೆಯ ಮುಂದಿನ ಬಾಗಿಲು

ಕಾರ್ಕಳ: ರಾತ್ರಿ ನಿದ್ರಿಸಿದ್ದ ವೇಳೆ ಮನೆಗೆ ನುಗ್ಗಿ 2.25 ಲಕ್ಷ ನಗದು ಕಳ್ಳತನ Read More »

ಕಡಬ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್: ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡ ಕೃಷಿಕ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದೆ. ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಬುಡಲೂರು ಎಂಬಲ್ಲಿ ಈ ಘಟನೆ ನಡೆದಿದ್ದು ಬೂಡಲೂರು ನಿವಾಸಿ ಶಿವಣ್ಣ ಗೌಡ(61ವ.)ಆತ್ಮಹತ್ಯೆ ಮಾಡಿಕೊಂಡ ಕೃಷಿಕರಾಗಿದ್ದಾರೆ. ತಮ್ಮ ಮನೆಯಿಂದ ಅನತಿ ದೂರದ ಗುಡ್ಡೆಯೊಂದರಲ್ಲಿ ಶಿವಣ್ಣ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಣ್ಣ ಗೌಡ ಅವರು ಸ್ಥಳೀಯ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘ, ಪುತ್ತೂರು ಭೂ ಅಭಿವೃದ್ಧಿ

ಕಡಬ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ Read More »