ಕರಾವಳಿ

ಧರ್ಮಸ್ಥಳ: ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿ ರಸ್ತೆಗೆ ಬಿದ್ದು ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್: ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿಯೊಬ್ಬರು ರಸ್ತೆಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಮಾ 17 ರಂದು ಬಸ್ಸಿನಲ್ಲಿ ಬಂದಿದ್ದ ಸುಮಾರು 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಎನ್ನಲಾಗಿದೆ. ಧರ್ಮಸ್ಥಳ ಬಸ್ ತಂಗುದಾಣದಲ್ಲಿ ಜನ ಹೆಚ್ಚಿದ್ದರಿಂದಾಗಿ ಕಿಟಕಿಯ ಮೂಲಕ ಇಳಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆಯ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯದಾಗ ಮೃತ ಪಟ್ಟಿದ್ದಾರೆ […]

ಧರ್ಮಸ್ಥಳ: ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿ ರಸ್ತೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಬಂಟ್ವಾಳ‌ : ವೈನ್‌ಶಾಪ್‌ ಹಿಂಬದಿ ನಿಲ್ಲಿಸಿ ಹೋಗಿದ್ದ ದ್ವಿಚಕ್ರ ವಾಹನ ಕಳವು

ಸಮಗ್ರ ನ್ಯೂಸ್ : ಬಂಟ್ವಾಳ‌ದ ಕಾರ್ತಿಕ್ ವೈನ್‌ ಶಾಪ್‌ ಹಿಂಬದಿಯಲ್ಲಿ ನಿಲ್ಲಿಸಿ ಹೋಗಿದ್ದ ದ್ವಿಚಕ್ರ ವಾಹನ ಕಳವಾಗಿರುವ ಘಟನೆ ನಡೆದಿದೆ. ನರಿಕೊಂಬು ಗ್ರಾಮ ನಿವಾಸಿ ರಮೇಶ್ ಎಂಬವರು ತನ್ನ ದ್ವಿಚಕ್ರ ವಾಹನವನ್ನು (KA 19 EV 0620) ದಿನಾಂಕ: 18-03-2024 ರಂದು ಮದ್ಯಾಹ್ನ, ಬಂಟ್ವಾಳ ಕಾರ್ತಿಕ್ ವೈನ್‌ ಶಾಪ್‌ ಹಿಂಬದಿಯಲ್ಲಿ ನಿಲ್ಲಿಸಿ ಹೋಗಿದ್ದು, ಹಿಂತಿರುಗಿ ಸಂಜೆ ಬಂದು ದ್ವಿಚಕ್ರ ವಾಹನವನ್ನು ನಿಲ್ಲಿಸಿದ ಸ್ಥಳದಲ್ಲಿ ಕಾಣಿಸದೇ ಇದ್ದು, ಯಾರೋ ಕಳ್ಳರು ಅಂದಾಜು ರೂ. 30,000/- ಮೌಲ್ಯದ ದ್ವಿಚಕ್ರ ವಾಹನವನ್ಬುಕಳವು

ಬಂಟ್ವಾಳ‌ : ವೈನ್‌ಶಾಪ್‌ ಹಿಂಬದಿ ನಿಲ್ಲಿಸಿ ಹೋಗಿದ್ದ ದ್ವಿಚಕ್ರ ವಾಹನ ಕಳವು Read More »

ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪದ್ಮರಾಜ್ ಆಯ್ಕೆ

ಸಮಗ್ರ ನ್ಯೂಸ್; ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿರುವ ಪದ್ಮರಾಜ್ ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಳು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್‌ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ. ಇತ್ತೀಚೆಗೆ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೂ ಇವರು ಕಣಕ್ಕಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ

ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪದ್ಮರಾಜ್ ಆಯ್ಕೆ Read More »

ಬಂಟ್ವಾಳ: ಈಜಲು ಬಂದ ವ್ಯಕ್ತಿ ನದಿ ನೀರಿನಲ್ಲಿ ಮುಳುಗಿ ಮೃತ್ಯು

ಸಮಗ್ರ ನ್ಯೂಸ್‌ : ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ಐವರ ಪೈಕಿ ವ್ಯಕ್ತಿಯೋರ್ವನು ನೇತ್ರಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಂಭೂರು ಗ್ರಾಮದ ದೇವಸ್ಥಾನವೊಂದರ ಸಮೀಪ ನದಿಯಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ. ಬೆಳ್ತಂಗಡಿ ನಿವಾಸಿ ಲೋಹಿತಾಕ್ಷ ಮೃತಪಟ್ಟ ವ್ಯಕ್ತಿ. ಬೆಳ್ತಂಗಡಿ ನಿವಾಸಿಗಳಾದ ವಿನ್ಸಿ, ಮ್ಯಾಕ್ಸಿ, ಪ್ರಮೋದ್, ದಯಾನಂದ ಎಂಬವರ ಜೊತೆಗೆ ನೇತ್ರಾವತಿ ನದಿಗೆ ಈಜಾಡಲು ಬಂದಿದ್ದ ವೇಳೆ ಘಟನೆ ನಡೆದಿದೆ. ವಿನ್ಸಿ ಎಂಬವರ ಪತ್ನಿಯ ಮನೆ ಶಂಭೂರಿನಲ್ಲಿದ್ದು, ಇಲ್ಲಿಗೆ ಆಗ್ಗಾಗ್ಗೆ ಬಂದು ನೇತ್ರಾವತಿ ನದಿಯಲ್ಲಿ ಸ್ನಾನ

ಬಂಟ್ವಾಳ: ಈಜಲು ಬಂದ ವ್ಯಕ್ತಿ ನದಿ ನೀರಿನಲ್ಲಿ ಮುಳುಗಿ ಮೃತ್ಯು Read More »

ಮಂಗಳೂರು: ಗಾಂಜಾ ಮಾರಾಟ| ಇಬ್ಬರ ಬಂಧನ

ಸಮಗ್ರ ನ್ಯೂಸ್‌ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ತಿರುವೈಲ್‌ ಗ್ರಾಮದ ವಾಮಾಂಜೂರು ಗ್ರಾಮದಲ್ಲಿ ನಡೆದಿದೆ. ಆರೋಪಿಗಳನ್ನು ದೇರಳಕಟ್ಟೆ ಬೆಳ್ಮ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್‌ ಯಾನೆ ಪೊಂಗ ಅಶ್ರಫ್‌ (30), ಅದೇ ಗ್ರಾಮದ ತಿಲಕನಗರ ನಿವಾಸಿ ಮೊಹಮ್ಮದ್‌ ಅಲ್ಫಾಜ್‌ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 115 ಗ್ರಾಂ ಮೌಲ್ಯದ ಗಾಂಜಾ, ಮೊಬೈಲ್‌ ಫೋನ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ಗಾಂಜಾ ಮಾರಾಟ| ಇಬ್ಬರ ಬಂಧನ Read More »

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆ – ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ದೂರು

ಸಮಗ್ರ ನ್ಯೂಸ್: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆಯಿಂದಾಗಿ ರೋಗಿಗಳಿಗೆ ತೊಂದರೆಗಳಾಗುತ್ತಿದ್ದು ಇದಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಕಾರಣರಾಗಿದ್ದಾರೆ. ಹಾಗಾಗಿ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಗರದ ನಿವಾಸಿಯೋರ್ವರು ದೂರು ನೀಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಸೋಮವಾರ ನಗರದಲ್ಲಿ ನಡೆದ ಅಪಘಾತದಲ್ಲಿ 70 ವಯಸ್ಸಿನ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ವೆನ್ಲಾಕ್ ಕರೆದುಕೊಂಡು ಹೋದಾಗ ಚಿಕಿತ್ಸೆ ಸಿಗಲಿಲ್ಲ. ತುರ್ತು ಚಿಕಿತ್ಸಾ ಸಿಗಲಿಲ್ಲ,

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆ – ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ದೂರು Read More »

ಉಳ್ಳಾಲ: ಹರೇಕಳ ಕೊಲೆಯತ್ನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸಮಗ್ರ ನ್ಯೂಸ್:‌ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹರೇಕಳ ಕಡವಿನ ಬಳಿಯ ಅಂಗಡಿ ಮಾಲೀಕನ ದರೋಡೆ ಮತ್ತು ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದ ಉಳ್ಳಾಲ ಉಳಿಯ ಮರಿಯಕ್ಲಬ್ ನಿವಾಸಿ ರಾಜೇಶ್ ಸುವರ್ಣ (24) ಎಂಬಾತನನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಮಾದಕದ್ರವ್ಯ ವಿರೋಧಿ ಪೊಲೀಸ್ ತಂಡ ಬಂಧಿಸಿದೆ. ಹರೇಕಳ ಕಡವಿನ ಬಳಿ ಬಳಿಯಿರುವ ಎನ್ .ಎಫ್ ಜನರಲ್ ಸ್ಟೋರ್ ಮಾಲೀಕ ಅಬ್ದುಲ್ ರಹಿಮಾನ್ ಎಂಬವರ ಮೇಲೆ 2017ರ ಮೇ.24 ರಂದು ರಿಕ್ಷಾದಲ್ಲಿ ಬಂದಿದ್ದ ಅಶ್ರಫ್ ಮತ್ತು

ಉಳ್ಳಾಲ: ಹರೇಕಳ ಕೊಲೆಯತ್ನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ಪುತ್ತೂರು: ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಆಮ್ಲೇಟ್‌ ಮಾಡಿ ತಿಂದ ದುಷ್ಟರು

ಸಮಗ್ರ ನ್ಯೂಸ್‌ : ಕಳೆದ ಹಲವಾರು ತಿಂಗಳಿಂದ ನೆಲ್ಲಿಕಟ್ಟೆ ಪರಿಸರದ ಶಾಲೆ, ಆರೋಗ್ಯ ಕೇಂದ್ರಗಳಲ್ಲಿ ಚಿಲ್ಲರೆ ಕಳವು, ಸೊತ್ತುಗಳಿಗೆ ಹಾನಿ ಮಾಡುವ ಪ್ರಕರಣ ಸೇರಿ ಸದಾ ಒಂದಲ್ಲೊಂದು ಅವಾಂತರ ನಡೆಯುತ್ತಿದ್ದು, ಇದೀಗ ಅಂಗನವಾಡಿ ಕೇಂದ್ರದ ಬೀಗ ಮುರಿದು ಒಳನುಗ್ಗಿದ ಕಿಡಿಗೇಡಿಗಳು ಪುಟಾಣಿಗಳಿಗೆಂದು ಇಡಲಾಗಿದ್ದ ಕೋಳಿ ಮೊಟ್ಟೆಗಳನ್ನು ಆಮ್ಲೇಟ್‌ ಮಾಡಿ ತಿಂದು ತೆರಳಿರುವ ಘಟನೆ ಮಾ.18ರಂದು ಬೆಳಕಿಗೆ ಬಂದಿದೆ. ನೆಲ್ಲಿಕಟ್ಟೆಯ ಶ್ರೀ ರಾಮಕೃಷ್ಣ ಸಮಾಜ ಸೇವಾ ಸಂಸ್ಥೆಯ ಬಳಿಯ ಅಂಗನವಾಡಿ ಕೇಂದ್ರಕ್ಕೆ ಬೆಳಿಗ್ಗೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಕೇಂದ್ರದ

ಪುತ್ತೂರು: ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಆಮ್ಲೇಟ್‌ ಮಾಡಿ ತಿಂದ ದುಷ್ಟರು Read More »

ಉಡುಪಿಯ ನಂ.1 ಬೀಡಿ ಮಾಲೀಕ ಟಿ.ಕೃಷ್ಣಪ್ಪ ನಿಧನ

ಸಮಗ್ರ ನ್ಯೂಸ್:‌ ನಂ.1 ಬೀಡಿ ಮಾರ್ಕಿನ ಮಾಲೀಕ ತಾಂಗದಗಡಿ ನಿವಾಸಿ ಟಿ.ಕೃಷ್ಣಪ್ಪ ಅವರು ಇಂದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 78 ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಟಿ.ಕೃಷ್ಣಪ್ಪ ಅವರು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರು‌ 51 ವರ್ಷಗಳ ಹಿಂದೆ ನಂ.1 ಬೀಡಿಯನ್ನು ಕರಾವಳಿಗೆ ಪರಿಚಯಿಸಿದ್ದರು. ಅಂದಿನಿಂದ ಇಂದಿನಿಂದವರೆಗೂ ನಂ.1 ಬೀಡಿ ಕರಾವಳಿಯಾದ್ಯಂತ ಪ್ರಖ್ಯಾತಿ ಪಡೆದಿದೆ. ಮೃತರು ಪತ್ನಿ, ಇಬ್ಬರು ಗಂಡು, ಮೂವರು ಹೆಣ್ಣು ಮಕ್ಕಳನ್ನು

ಉಡುಪಿಯ ನಂ.1 ಬೀಡಿ ಮಾಲೀಕ ಟಿ.ಕೃಷ್ಣಪ್ಪ ನಿಧನ Read More »

ಉಡುಪಿ: ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ಸಾವಿರಾರು ರೂ. ವಂಚನೆ

ಸಮಗ್ರ ನ್ಯೂಸ್‌ : ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮಾರ್ ಎಂಬವರು ಮಾರ್ಚ್ 14ರಂದು ತನ್ನ ವ್ಯವಹಾರದ 6000ರೂ. ಹಣವನ್ನು ಗೂಗಲ್ ಪೇನಲ್ಲಿ ಕೈತಪ್ಪಿನಿಂದ ಬೇರೊಂದು ನಂಬರಿಗೆ ಕಳುಹಿಸಿದ್ದು, ಈ ಸಂಬಂಧ ಗೂಗಲ್‌ನಲ್ಲಿ ಸಿಕ್ಕಿದ ಕಸ್ಟಮರ್ ಕೇರ್‌ಗೆ ಕರೆ ಮಾಡಿದ್ದರು. ಹಣವನ್ನು ಹಿಂದಕ್ಕೆ ಪಡೆಯಲು 5 ಡಿಜಿಟ್‌ಗಳ ಸಂಖ್ಯೆಗಳ ಆ್ಯಪ್‌ನಲ್ಲಿ ನಮೂದಿಸುವಂತೆ ತಿಳಿಸಿದ್ದರು. ಅದರಂತೆ ನಂಬರ್ ನಮೂದಿಸಿದ ಬಳಿಕ ಇವರ ಖಾತೆಯಿಂದ

ಉಡುಪಿ: ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ಸಾವಿರಾರು ರೂ. ವಂಚನೆ Read More »