ಕರಾವಳಿ

ಮಂಗಳೂರು: ಪಿಲಿಕುಳ ನಿಸರ್ಗಧಾಮದಿಂದ ತಪ್ಪಿಸಿಕೊಂಡ ದೈತ್ಯ ಕಾಳಿಂಗ ಸರ್ಪ

ಸಮಗ್ರ ನ್ಯೂಸ್‌ : ಪಂಜರದಲ್ಲಿದ್ದ ದೈತ್ಯ ಕಾಳಿಂಗ ಸರ್ಪವೊಂದು ತಪ್ಪಿಸಿಕೊಂಡು ಹೋಗಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಜೈವಿಕ ಉದ್ಯಾನವನದಲ್ಲಿ ಈ ಘಟನೆ ನಡೆದಿದ್ದು ತಪ್ಪಿಸಿಕೊಂಡ ಈ ಹೆಣ್ಣು ಕಾಳಿಂಗ ಸರ್ಪ ರಸ್ತೆ ದಾಟಿ ವಿಜ್ಞಾನ ಸೆಂಟರ್​ನತ್ತ ಸಾಗುತ್ತಿತ್ತು. ಸಾರ್ವಜನಿಕರು ಇದನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ನಿಸರ್ಗಧಾಮದ ಸಿಬ್ಬಂದಿ ಧಾವಿಸಿ ಅದನ್ನು ಸೆರೆ ಹಿಡಿದು ಮರಳಿ ಪಂಜರಕ್ಕೆ ಹಾಕಿದ್ದಾರೆ. ಈ ಗ ಸಂತನೋತ್ತಿಯ ಸಮಯವಾಗಿದ್ದು ಒಂದು

ಮಂಗಳೂರು: ಪಿಲಿಕುಳ ನಿಸರ್ಗಧಾಮದಿಂದ ತಪ್ಪಿಸಿಕೊಂಡ ದೈತ್ಯ ಕಾಳಿಂಗ ಸರ್ಪ Read More »

ಬಂಟ್ವಾಳ: ಖಾಸಗಿ ಬಸ್, ದ್ವಿಚಕ್ರವಾಹನ ನಡುವೆ ಮುಖಾಮುಖಿ| ಸವಾರ ಗಂಭೀರ

ಸಮಗ್ರ ನ್ಯೂಸ್‌ : ಖಾಸಗಿ ಬಸ್ಸೊಂದು ದ್ವಿಚಕ್ರವಾಹನಕ್ಕೆ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಬೆಂಜನಪದವು ಸಮೀಪದ ಶಿವಾಜಿ ನಗರದಲ್ಲಿ ನಿನ್ನೆ ಸಂಜೆ ವೇಳೆ ನಡೆದಿದೆ. ಬೆಂಜನಪದವು ನಿವಾಸಿ ನವೀನ್ ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿ. ಮಲ್ಲೂರು ಕಡೆಯಿಂದ ಬೆಂಜನಪದವು ಕಡಗೆ ಬರುತ್ತಿದ್ದ ರಾಜಲಕ್ಷೀ ಬಸ್ ಹಾಗೂ ಬೆಂಜನಪದವು ಕಡೆಯಿಂದ ಹೋಗುತ್ತಿದ್ದ ಸ್ಕೂಟರ್ ‌ನಡುವೆ ಶಿವಾಜಿನಗರದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಿಂದ ಸ್ಕೂಟರ್ ರಸ್ತೆಯ ಪಕ್ಕ ಪಲ್ಟಿಯಾಗಿದೆ. ಅಪಘಾತದಲ್ಲಿ ಸ್ಕೂಟರ್ ಸವಾರನಿಗೆ ಗಂಭೀರ ಗಾಯವಾಗಿದ್ದು,

ಬಂಟ್ವಾಳ: ಖಾಸಗಿ ಬಸ್, ದ್ವಿಚಕ್ರವಾಹನ ನಡುವೆ ಮುಖಾಮುಖಿ| ಸವಾರ ಗಂಭೀರ Read More »

ಬೆಳ್ತಂಗಡಿ : ಪೈಪ್ ಲೈನ್ ಕೊರೆದು ಡೀಸೆಲ್ ಕಳವು

ಸಮಗ್ರ ನ್ಯೂಸ್‌ : ಪೆಟ್ರೋನೆಟ್ ಕಂಪೆನಿಗೆ ಸೇರಿದ ಡೀಸೆಲ್ ಪೈಪ್ ಲೈನ್ ಕೊರೆದು ಲಕ್ಷಾಂತರ ರೂಪಾಯಿ ಮೌಲ್ಯದ ಡೀಸೆಲ್ ಕಳವು ನಡೆಸಿದ ಘಟನೆ ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿ ನಡೆದಿದೆ. ಈ ಬಗ್ಗೆ ಪೆಟ್ರೋನೆಟ್ ಎಚ್ ಬಿ ಲಿಮಿಟೆಡ್ ಕಂಪೆನಿಯ ನೆರಿಯಾ ಸ್ಟೇಶನ್ ಇನ್ ಚಾರ್ಜ್ ಆಗಿರುವ ರಾಜನ್ ಜಿ ಅವರು ಧಮಸ್ಥಳ ಪೊಲೀಸರಿಗೆ ದೂರು ನೀಡಿದ್ದು, ಮಂಗಳೂರು ಹಾಸನ ಮತ್ತು ಬೆಂಗಳೂರಿಗೆ ಪೆಟ್ರೋನೆಟ್ ಪೈಪ್‌ ಮೂಲಕ ಡಿಸೇಲ್ ಸರಬರಾಜು ಆಗುತ್ತಿದ್ದು, ಮಾ 16 ರಿಂದ 19

ಬೆಳ್ತಂಗಡಿ : ಪೈಪ್ ಲೈನ್ ಕೊರೆದು ಡೀಸೆಲ್ ಕಳವು Read More »

ಮಂಗಳೂರು: ಹಿರಿಯ, ವಿಕಲಚೇತನ ಮತದಾರರು ಹಕ್ಕು ಚಲಾಯಿಸಲು ಮತಗಟ್ಟೆಗಳಲ್ಲಿಯೇ ಅಗತ್ಯ ಸೌಲಭ್ಯ

ಸಮಗ್ರ ನ್ಯೂಸ್:‌ ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಗಳಲ್ಲಿ ಅರ್ಹ ಮತದಾರರೆಲ್ಲರೂ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಪ್ರತಿಬಾರಿ ವಿವಿಧ ರೀತಿಯ ಸೌಕರ್ಯ ಕಲ್ಪಿಸಿಕೊಡುವ ಚುನಾವಣಾ ಆಯೋಗವು ಈ ಬಾರಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ಶೇ.40ಕ್ಕೂ ಹೆಚ್ಚು ಅಂಗವಿಕಲತೆ ಹೊಂದಿರುವ ವಿಕಲಚೇತನರಿಗೆ ಅಂಚೆ ಮತದ ಮೂಲಕ ಮನೆಯಿಂದಲೇ ಮತ ಚಲಾಯಿಸುವ ಅವಕಾಶ ಕಲ್ಪಿಸಿಕೊಟ್ಟಿದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ಮತದಾರರ ಪಟ್ಟಿಯಲ್ಲಿ ಗುರುತಿಸಲಾದ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕ ಮತದಾರರು ಹಾಗೂ ಶೇ.40ಕ್ಕೂ

ಮಂಗಳೂರು: ಹಿರಿಯ, ವಿಕಲಚೇತನ ಮತದಾರರು ಹಕ್ಕು ಚಲಾಯಿಸಲು ಮತಗಟ್ಟೆಗಳಲ್ಲಿಯೇ ಅಗತ್ಯ ಸೌಲಭ್ಯ Read More »

ಮಂಗಳೂರು: ಡಿವೈಡರ್ ಕಾರು ಢಿಕ್ಕಿ| ಬಿಜೆಪಿ ನಾಯಕಿಯ ಮೊಮ್ಮಗ ಸಾವು

ಸಮಗ್ರ ನ್ಯೂಸ್‌ : ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಮೊಮ್ಮಗ ಶಮಿತ್ ಶೆಟ್ಟಿ(29) ಯಾನೆ ಬಂಟಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಮಿತ್ ಶೆಟ್ಟಿಯವರ ಸ್ನೇಹಿತನ ಮನೆಯಲ್ಲಿ ದೈವದ ಕೋಲದಲ್ಲಿ ಭಾಗವಹಿಸಿದ ಬಳಿಕ ತೊಕ್ಕೊಟ್ಟಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆಕಾರು ಢಿಕ್ಕಿಯಾದ ರಭಸಕ್ಕೆ

ಮಂಗಳೂರು: ಡಿವೈಡರ್ ಕಾರು ಢಿಕ್ಕಿ| ಬಿಜೆಪಿ ನಾಯಕಿಯ ಮೊಮ್ಮಗ ಸಾವು Read More »

ಪಿಲಿಕುಳ ಜೈವಿಕ ಉದ್ಯಾನವನದಿಂದ ತಪ್ಪಿಸಿಕೊಂಡ ಬೃಹತ್ ಕಾಳಿಂಗ‌ ಸರ್ಪ

ಸಮಗ್ರ ನ್ಯೂಸ್: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಿಂದ ಬೃಹತ್ ಕಾಳಿಂಗ‌ ಸರ್ಪ ತಪ್ಪಿಸಿಕೊಂಡ ಘಟನೆ ನಡೆದಿದೆ. ಕಾಳಿಂಗ ಸರ್ಪ ತಪ್ಪಿಸಿಕೊಂಡು ಜೈವಿಕ ಉದ್ಯಾನವನದ ಟಿಕೆಟ್​ ಕೌಂಟರ್ ಬಳಿ ಬಂದಿತ್ತು. ಕಾಳಿಂಗ‌ ಸರ್ಪ ಕಂಡು ಜನರು ಹೆದರಿದ್ದಾರೆ. ಬಳಿಕ ರಸ್ತೆ ದಾಟಿ ವಿಜ್ಞಾನ ಕೇಂದ್ರದತ್ತ ಸಾಗಿದ್ದು, ಸದ್ಯ ಕಾಳಿಂಗ‌ ಸರ್ಪ ಹಿಡಿಯಲು ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ. ಇನ್ನು ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಕಾಳಿಂಗ ಸರ್ಪ ತಪ್ಪಿಸಿಕೊಂಡಿದೆ ಎಂದು ಜನರು ಆರೋಪಿಸಿದ್ದಾರೆ.

ಪಿಲಿಕುಳ ಜೈವಿಕ ಉದ್ಯಾನವನದಿಂದ ತಪ್ಪಿಸಿಕೊಂಡ ಬೃಹತ್ ಕಾಳಿಂಗ‌ ಸರ್ಪ Read More »

ಬಂಟ್ವಾಳ : ಅಕ್ರಮ ಮರಳು ಸಾಗಾಟ|ನಾಲ್ವರ ಅರೆಸ್ಟ್‌

ಸಮಗ್ರ ನ್ಯೂಸ್‌ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೊಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಇತ್ತೀಚೆಗೆ ನಡೆದಿದೆ. ಕನ್ಯಾನ ನಿವಾಸಿ ಅಬ್ದುಲ್ ರಹಮಾನ್‌ (೨೧),ಅಡ್ಯಾರು ನಿವಾಸಿ ಮಹಮ್ಮದ್ ಸಾದಿಕ್ , ಕಂಬಳಬೆಟ್ಟು ನಿವಾಸಿ ಗೌತಮ್(೨೧), ಕೆಲಿಂಜ ನಿವಾಸಿ ಗುಡ್ಡಪ್ಪ ಗೌಡ ಎಂಬವರು ಆರೋಪಿಗಳಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನರಿಕೊಂಬು

ಬಂಟ್ವಾಳ : ಅಕ್ರಮ ಮರಳು ಸಾಗಾಟ|ನಾಲ್ವರ ಅರೆಸ್ಟ್‌ Read More »

ಮಂಗಳೂರು: ಹುಡುಗಿಯ ವಿಚಾರ- ಯುವಕನಿಗೆ ಹಿಗ್ಗಾ ಮುಗ್ಗಾ ಥಳಿತ

ಸಮಗ್ರ ನ್ಯೂಸ್‌: ನಗರದ ಪ್ರತಿಷ್ಠಿತ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳಾಗಿರುವ ಯುವಕರು ಹುಡುಗಿ ವಿಚಾರದಲ್ಲಿ ಹೊಡೆದಾಡಿದ್ದು, ಒಬ್ಬ ಯುವಕನಿಗೆ ಮುಖದಲ್ಲಿ ರಕ್ತ ಹರಿಯುವಂತೆ ಹಿಗ್ಗಾಮುಗ್ಗಾ ಹೊಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ನೀರುಮಾರ್ಗದಲ್ಲಿ ಈ ಘಟನೆ ನಡೆದಿದ್ದು ವಿಡಿಯೋದಲ್ಲಿ ಯುವಕರ ಹೊಡೆದಾಟದ ದೃಶ್ಯ ಇದೆ. ಬಟ್ಟೋಡಿ ನಿವಾಸಿ ಯುವಕ ತಾನು ಪ್ರೀತಿಸುತ್ತಿದ್ದ ಹುಡುಗಿಯಲ್ಲಿ ಪದೇ ಪದೇ ಹಣ ಕೇಳಿ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಯುವತಿ ತನ್ನ ನೀರುಮಾರ್ಗದ ಗೆಳೆಯನಿಗೆ ವಿಷಯ ತಿಳಿಸಿದ್ದಳು. ವಿಷಯ ತಿಳಿದ ಲವರ್ ಯುವಕ

ಮಂಗಳೂರು: ಹುಡುಗಿಯ ವಿಚಾರ- ಯುವಕನಿಗೆ ಹಿಗ್ಗಾ ಮುಗ್ಗಾ ಥಳಿತ Read More »

ಉಡುಪಿ:ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ ಮೀನುಗಾರರ ರಕ್ಷಣೆ

ಸಮಗ್ರ ನ್ಯೂಸ್‌ : ಬೋಟ್​​ನಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ 8 ಮಂದಿ ಮೀನುಗಾರರನ್ನು ಉಡುಪಿ ಜಿಲ್ಲೆಯ ಕುಂದಾಪುರದ ಅರಬ್ಬಿ ಸಮುದ್ರದಲ್ಲಿ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ 8 ಮಂದಿ ಬೋಟ್​ ಹಾನಿಗೀಡಾಗಿ ಅಪಾಯಕ್ಕೆ ಸಿಲುಕಿದ್ದರು. ಕಲ್ಮಾಡಿಯ ಪ್ಯಾರು ಎಸ್. ಎಂಬವರ ಒಡೆತನದ ಬೋಟ್​ ಅಪಾಯಕ್ಕೆ ಸಿಲುಕಿತ್ತು. ಬೋಟ್​​ನ ತಳಭಾಗ ಒಡೆದು ನೀರು ಒಳನುಗ್ಗಲಾರಂಭಿಸಿತ್ತು. ಅಪಾಯದ ಅರಿವಾಗುತ್ತಿದ್ದಂತೆಯೇ ಬೋಟ್​ನಲ್ಲಿದ್ದ ಮೀನುಗಾರರು ಪೊಲೀಸರಿಗೆ ವಿಷಯ ತಿಳಿಸಿದ್ದರು. ತಕ್ಷಣವೇ ಪೊಲೀಸರು ಕರಾವಳಿ ಕಾವಲು ಪಡೆಗೆ

ಉಡುಪಿ:ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ ಮೀನುಗಾರರ ರಕ್ಷಣೆ Read More »

ಮಂಗಳೂರು: ಮಾದಕ ವಸ್ತು ಮಾರಾಟ- ಆರೋಪಿ ಬಂಧನ

ಸಮಗ್ರ ನ್ಯೂಸ್‌ :: ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಇದೀಗ ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 46 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಲೊರೊಟೊ ಬರೆಕಾಡು ನಿವಾಸಿ ಅಬ್ದುಲ್ ಸಮದ್ ಯಾನೆ ಚಮ್ಮು (36) ಎಂದು ಗುರುತಿಸಲಾಗಿದೆ. ಈತನಿಂದ 2,30,000 ರೂ. ಮೌಲ್ಯದ 46 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು: ಮಾದಕ ವಸ್ತು ಮಾರಾಟ- ಆರೋಪಿ ಬಂಧನ Read More »