ಕರಾವಳಿ

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ|ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ

ಸಮಗ್ರ ನ್ಯೂಸ್:ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರ ನೀಡಲಿದೆ. ಈ ಪುರಸ್ಕಾರಕ್ಕೆ ಸುಳ್ಯದ ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆ ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಗೆ ಆಯ್ಕೆ. ಶೈಕ್ಷಣಿಕ ಕಾರ್ಯ ಚಟುವಟಿಕೆಯ ಜೊತೆಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಬಿಡುವಿನ ವೇಳೆ ಇದುವರೆಗೆ ಸುಮಾರು 2100 ಕ್ಕೂ ಅಧಿಕ ತರಬೇತಿಯನ್ನು ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರ […]

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ|ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ Read More »

ಕೂಜಿಮಲೆಗೆ ಭೇಟಿ ನೀಡಿದ ಶಂಕಿತರು ನಿಷೇಧಿತ ನಕ್ಸಲ್ ಸಂಘಟನೆಯ ಸದಸ್ಯರು|ಕೊಡಗು ಎಸ್.ಪಿ. ಮಾಹಿತಿ

ಸಮಗ್ರ ನ್ಯೂಸ್: ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಅಂಗಡಿಗೆ ಬಂದು ದಿನಸಿ ಪದಾರ್ಥ ತೆಗೆದುಕೊಂಡು ಹೋಗಿರುವ ಶಂಕಿತ ವ್ಯಕ್ತಿಗಳು ನಿಷೇಧಿತ ನಕ್ಸಲ್ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಎಸ್.ಪಿ., ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಶಸ್ತ್ರ ಸಜ್ಜಿತರಾಗಿ ಮಾ.17ರ ಸಂಜೆ ವೇಳೆ ಕೂಜಿಮಲೆ ರಬ್ಬರ್ ಎಸ್ಟೇಟ್‌ನ ಅಂಗಡಿಗೆ ಆಗಮಿಸಿ 25 ಕೆ.ಜಿ ಅಕ್ಕಿ ಸಹಿತ ಇತರ ವಸ್ತುಗಳನ್ನು ಖರೀದಿ

ಕೂಜಿಮಲೆಗೆ ಭೇಟಿ ನೀಡಿದ ಶಂಕಿತರು ನಿಷೇಧಿತ ನಕ್ಸಲ್ ಸಂಘಟನೆಯ ಸದಸ್ಯರು|ಕೊಡಗು ಎಸ್.ಪಿ. ಮಾಹಿತಿ Read More »

ಪುತ್ತೂರು: ಏರಿಕೆ ಕಂಡ ಅಡಿಕೆ, ಕೊಕ್ಕೊ ಧಾರಣೆ

ಸಮಗ್ರ ನ್ಯೂಸ್: ಮಂಗಳೂರು ಚಾಲಿ ಅಡಿಕೆ ಧಾರಣೆ ಹಾಗೂ ಕೊಕ್ಕೊ ಧಾರಣೆ ಏರಿಕೆಯತ್ತ ಮುಖಮಾಡಿದ್ದು, ಕರಾವಳಿಯ ವಾಣಿಜ್ಯ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಕ್ಯಾಂಪ್ಕೋ, ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಸ್ಥಿರವಾಗಿದ್ದರೆ, ಸಿಂಗಲ್ ಚೋಲ್, ಡಬ್ಬಲ್ ಚೋಲ್ ಧಾರಣೆ ಹೆಚ್ಚಳವಾಗಿದೆ. ಕಳೆದ ಒಂದು ತಿಂಗಳಲ್ಲಿ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಕೆ.ಜಿ.ಗೆ 5 ರೂ., ಸಿಂಗಲ್‌ ಚೋಲ್‌ ಕೆ.ಜಿ.ಗೆ 20 ರೂ., ಡಬ್ಬಲ್‌ ಚೋಲ್‌ ಕೆ.ಜಿ.ಗೆ 20 ರೂ., ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ

ಪುತ್ತೂರು: ಏರಿಕೆ ಕಂಡ ಅಡಿಕೆ, ಕೊಕ್ಕೊ ಧಾರಣೆ Read More »

ಬಂಟ್ವಾಳ : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ

ಸಮಗ್ರ ನ್ಯೂಸ್ : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಮೂರು ಮಂದಿ ಸವಾರರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸಜಿಪಮೂಡ ಗ್ರಾಮದ ಬೇಂಕ್ಯ ಎಂಬಲ್ಲಿ ಇತೀಚೆಗೆ ನಡೆದಿದೆ. ಗಾಯಾಳುಗಳನ್ನು ಬೈಕ್ ಸವಾರ ಜಲಾಲುದ್ದೀನ್, ಸಹಸವಾರ ಅಬ್ದುಲ್ ಸಲಾಂ ಹಾಗೂ ಇನ್ನೊಂದು ಬೈಕ್ ಸವಾರ ಸತ್ತಿವೇಲು ಎಂದು ಗುರುತಿಸಲಾಗಿದೆ. ನರಿಂಗಾನ ನಿವಾಸಿ ಅಬ್ದುಲ್ ಸಲಾಂ ಹಾಗೂ ಜಲಾಲುದ್ದೀನ್ ಅವರು ತಮ್ಮ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಸಜಿಪಮೂಡ ಗ್ರಾಮದ ಬೇಂಕ್ಯ ಎಂಬಲ್ಲಿ ಸತ್ತಿವೇಲುರವರು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು

ಬಂಟ್ವಾಳ : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ Read More »

ಧರ್ಮಸ್ಥಳ: ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿ ರಸ್ತೆಗೆ ಬಿದ್ದು ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್: ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿಯೊಬ್ಬರು ರಸ್ತೆಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಮಾ 17 ರಂದು ಬಸ್ಸಿನಲ್ಲಿ ಬಂದಿದ್ದ ಸುಮಾರು 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಎನ್ನಲಾಗಿದೆ. ಧರ್ಮಸ್ಥಳ ಬಸ್ ತಂಗುದಾಣದಲ್ಲಿ ಜನ ಹೆಚ್ಚಿದ್ದರಿಂದಾಗಿ ಕಿಟಕಿಯ ಮೂಲಕ ಇಳಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆಯ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯದಾಗ ಮೃತ ಪಟ್ಟಿದ್ದಾರೆ

ಧರ್ಮಸ್ಥಳ: ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿ ರಸ್ತೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಬಂಟ್ವಾಳ‌ : ವೈನ್‌ಶಾಪ್‌ ಹಿಂಬದಿ ನಿಲ್ಲಿಸಿ ಹೋಗಿದ್ದ ದ್ವಿಚಕ್ರ ವಾಹನ ಕಳವು

ಸಮಗ್ರ ನ್ಯೂಸ್ : ಬಂಟ್ವಾಳ‌ದ ಕಾರ್ತಿಕ್ ವೈನ್‌ ಶಾಪ್‌ ಹಿಂಬದಿಯಲ್ಲಿ ನಿಲ್ಲಿಸಿ ಹೋಗಿದ್ದ ದ್ವಿಚಕ್ರ ವಾಹನ ಕಳವಾಗಿರುವ ಘಟನೆ ನಡೆದಿದೆ. ನರಿಕೊಂಬು ಗ್ರಾಮ ನಿವಾಸಿ ರಮೇಶ್ ಎಂಬವರು ತನ್ನ ದ್ವಿಚಕ್ರ ವಾಹನವನ್ನು (KA 19 EV 0620) ದಿನಾಂಕ: 18-03-2024 ರಂದು ಮದ್ಯಾಹ್ನ, ಬಂಟ್ವಾಳ ಕಾರ್ತಿಕ್ ವೈನ್‌ ಶಾಪ್‌ ಹಿಂಬದಿಯಲ್ಲಿ ನಿಲ್ಲಿಸಿ ಹೋಗಿದ್ದು, ಹಿಂತಿರುಗಿ ಸಂಜೆ ಬಂದು ದ್ವಿಚಕ್ರ ವಾಹನವನ್ನು ನಿಲ್ಲಿಸಿದ ಸ್ಥಳದಲ್ಲಿ ಕಾಣಿಸದೇ ಇದ್ದು, ಯಾರೋ ಕಳ್ಳರು ಅಂದಾಜು ರೂ. 30,000/- ಮೌಲ್ಯದ ದ್ವಿಚಕ್ರ ವಾಹನವನ್ಬುಕಳವು

ಬಂಟ್ವಾಳ‌ : ವೈನ್‌ಶಾಪ್‌ ಹಿಂಬದಿ ನಿಲ್ಲಿಸಿ ಹೋಗಿದ್ದ ದ್ವಿಚಕ್ರ ವಾಹನ ಕಳವು Read More »

ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪದ್ಮರಾಜ್ ಆಯ್ಕೆ

ಸಮಗ್ರ ನ್ಯೂಸ್; ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿರುವ ಪದ್ಮರಾಜ್ ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಳು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್‌ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ. ಇತ್ತೀಚೆಗೆ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೂ ಇವರು ಕಣಕ್ಕಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ

ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪದ್ಮರಾಜ್ ಆಯ್ಕೆ Read More »

ಬಂಟ್ವಾಳ: ಈಜಲು ಬಂದ ವ್ಯಕ್ತಿ ನದಿ ನೀರಿನಲ್ಲಿ ಮುಳುಗಿ ಮೃತ್ಯು

ಸಮಗ್ರ ನ್ಯೂಸ್‌ : ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ಐವರ ಪೈಕಿ ವ್ಯಕ್ತಿಯೋರ್ವನು ನೇತ್ರಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಂಭೂರು ಗ್ರಾಮದ ದೇವಸ್ಥಾನವೊಂದರ ಸಮೀಪ ನದಿಯಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ. ಬೆಳ್ತಂಗಡಿ ನಿವಾಸಿ ಲೋಹಿತಾಕ್ಷ ಮೃತಪಟ್ಟ ವ್ಯಕ್ತಿ. ಬೆಳ್ತಂಗಡಿ ನಿವಾಸಿಗಳಾದ ವಿನ್ಸಿ, ಮ್ಯಾಕ್ಸಿ, ಪ್ರಮೋದ್, ದಯಾನಂದ ಎಂಬವರ ಜೊತೆಗೆ ನೇತ್ರಾವತಿ ನದಿಗೆ ಈಜಾಡಲು ಬಂದಿದ್ದ ವೇಳೆ ಘಟನೆ ನಡೆದಿದೆ. ವಿನ್ಸಿ ಎಂಬವರ ಪತ್ನಿಯ ಮನೆ ಶಂಭೂರಿನಲ್ಲಿದ್ದು, ಇಲ್ಲಿಗೆ ಆಗ್ಗಾಗ್ಗೆ ಬಂದು ನೇತ್ರಾವತಿ ನದಿಯಲ್ಲಿ ಸ್ನಾನ

ಬಂಟ್ವಾಳ: ಈಜಲು ಬಂದ ವ್ಯಕ್ತಿ ನದಿ ನೀರಿನಲ್ಲಿ ಮುಳುಗಿ ಮೃತ್ಯು Read More »

ಮಂಗಳೂರು: ಗಾಂಜಾ ಮಾರಾಟ| ಇಬ್ಬರ ಬಂಧನ

ಸಮಗ್ರ ನ್ಯೂಸ್‌ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ತಿರುವೈಲ್‌ ಗ್ರಾಮದ ವಾಮಾಂಜೂರು ಗ್ರಾಮದಲ್ಲಿ ನಡೆದಿದೆ. ಆರೋಪಿಗಳನ್ನು ದೇರಳಕಟ್ಟೆ ಬೆಳ್ಮ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್‌ ಯಾನೆ ಪೊಂಗ ಅಶ್ರಫ್‌ (30), ಅದೇ ಗ್ರಾಮದ ತಿಲಕನಗರ ನಿವಾಸಿ ಮೊಹಮ್ಮದ್‌ ಅಲ್ಫಾಜ್‌ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 115 ಗ್ರಾಂ ಮೌಲ್ಯದ ಗಾಂಜಾ, ಮೊಬೈಲ್‌ ಫೋನ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ಗಾಂಜಾ ಮಾರಾಟ| ಇಬ್ಬರ ಬಂಧನ Read More »

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆ – ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ದೂರು

ಸಮಗ್ರ ನ್ಯೂಸ್: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆಯಿಂದಾಗಿ ರೋಗಿಗಳಿಗೆ ತೊಂದರೆಗಳಾಗುತ್ತಿದ್ದು ಇದಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಕಾರಣರಾಗಿದ್ದಾರೆ. ಹಾಗಾಗಿ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಗರದ ನಿವಾಸಿಯೋರ್ವರು ದೂರು ನೀಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಸೋಮವಾರ ನಗರದಲ್ಲಿ ನಡೆದ ಅಪಘಾತದಲ್ಲಿ 70 ವಯಸ್ಸಿನ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ವೆನ್ಲಾಕ್ ಕರೆದುಕೊಂಡು ಹೋದಾಗ ಚಿಕಿತ್ಸೆ ಸಿಗಲಿಲ್ಲ. ತುರ್ತು ಚಿಕಿತ್ಸಾ ಸಿಗಲಿಲ್ಲ,

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆ – ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ದೂರು Read More »